Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸರ್ವರ್ ನಲ್ಲಿ ಕಾಣಿಸಿಕೊಂಡಿದ್ದ ಸಮಸ್ಯೆಯು ಸಹಜ ಸ್ಥಿತಿಗೆ ಮರಳುತ್ತಿದ್ದರೂ ಯುಜಿಸಿಇಟಿ-25 ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಪ್ಷನ್ ಎಂಟ್ರಿ ದಿನಾಂಕವನ್ನು ಜುಲೈ 15ರಿಂದ ಜುಲೈ 18ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ವರ್ ಸಮಸ್ಯೆ ಕಾರಣಕ್ಕೆ ಲಾಗಿನ್ ಆಗಿ ಆಪ್ಷನ್ಸ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿದ್ದುದನ್ನು ಪರಿಗಣಿಸಿ ಈ ವಿಸ್ತರಣೆ ಮಾಡಲಾಗಿದೆ. ಎಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ. ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಈ ಪ್ರಕ್ರಿಯೆ ಪೂರೈಸಲು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಅಭ್ಯರ್ಥಿಗಳು ಕಾಲೇಜುಗಳು ಮತ್ತು ಕೋರ್ಸುಗಳ ಪಟ್ಟಿಯನ್ನು ಆದ್ಯತೆಯ ಕ್ರಮದಲ್ಲಿ (ಕಾಲೇಜ್ ಕೋಡ್ ಮತ್ತು ಕೋರ್ಸ್ ಕೋಡ್) ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ದಪಡಿಸಿಕೊಂಡು ನಂತರ ಪೋರ್ಟಲ್ ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು. ಹೀಗೆ ಮಾಡುವುದರಿಂದ ಒಮ್ಮೆಗೇ ಅಧಿಕ ಸಂಖ್ಯೆಯ ಅಭ್ಯರ್ಥಿಗಳು…
ಶಿವಮೊಗ್ಗ : ಸಾಗರ-ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅಪ್ರಬುದ್ದರಾಗಿ ಮಾತನಾಡುವುದನ್ನು ಬಿಡಬೇಕು. ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬವಾಗಲೂ ನಾನಾಗಲೀ, ಸಂಸದ ಬಿ.ವೈ.ರಾಘವೇಂದ್ರ ಆಗಲಿ ಕಾರಣವಲ್ಲ. ಆ ಯೋಜನೆ ರೂಪಿಸುವಾಗ ನೀರಿನ ಆಳ ಅಂದಾಜಿಸದೆ ಹೋಗಿರುವುದೇ ಕಾಮಗಾರಿ ವಿಳಂಬವಾಗಲು ಕಾರಣ ಎಂಬುದಾಗಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸ್ಪಷ್ಟ ಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು ಹಸಿರುಮಕ್ಕಿ ಸೇತುವೆ ವೀಕ್ಷಣೆಗೆ ಹೋದಾಗ ಅನಗತ್ಯ ಪ್ರಲಾಪ ಮಾಡಿ ವಿಳಂಬಕ್ಕೆ ನಾವೇ ಕಾರಣ ಎಂದು ಹೇಳಿರುವುದು ಅವಿವೇಕನತಕ್ಕೆ ಸಾಕ್ಷಿಯಾಗಿದೆ ಎಂದರು. 2018ರಲ್ಲಿ ಕಾಗೋಡು ತಿಮ್ಮಪ್ಪ ಅವರು ಹಸಿರುಮಕ್ಕಿ ಸೇತುವೆಗೆ 115 ಕೋಟಿ ಬಿಡುಗಡೆ ಮಾಡಿಸಿದ್ದರು. ಯೋಜನೆ ರೂಪಿಸುವಾಗ 22 ಅಡಿ ನೀರು ನಿಲ್ಲುತ್ತದೆ ಎಂದು ತೋರಿಸಲಾಗಿತ್ತು. ಆದರೆ ಹಸಿರುಮಕ್ಕಿಯಲ್ಲಿ 62ರಿಂದ 72 ಅಡಿ ನೀರು ನಿಲ್ಲುತ್ತದೆ. ಕೆ.ಆರ್.ಐ.ಡಿ.ಎಲ್. ಯೋಜನೆ ಉಸ್ತುವಾರಿ…
ಶಿವಮೊಗ್ಗ : ಗ್ರಾಮ ಪಂಚಾಯ್ತಿ ಒಂದು ಮಿನಿ ವಿಧಾನಸೌಧವಿದ್ದಂತೆ. ವಿಧಾನಸೌಧದಲ್ಲಿ ಏನೆಲ್ಲಾ ನಿರ್ಧಾರ ಆಗುತ್ತೋ ಗ್ರಾಮ ಪಂಚಾಯ್ತಿಗಳಲ್ಲೂ ಹಾಗೆಯೇ ಆಗುತ್ತವೆ. ಗ್ರಾಮ ಪಂಚಾಯ್ತಿ ಅಭಿವೃದ್ದಿಯಾದರೆ, ದೇಶ ಅಭಿವೃದ್ದಿಯಾದಂತೆಯೇ ಸರಿ. ಪಂಚಾಯ್ತಿ ಸದಸ್ಯರು ಒಟ್ಟಾಗಿ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪಡವಗೋಡು ಗ್ರಾಮದಲ್ಲಿ ಎಂಜಿಎನ್ಆರ್ಇಜಿಎ ಯೋಜನೆಯಡಿ ಶೆಡ್ ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅನುದಾನದಲ್ಲಿ ನವೀಕೃತ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದಂತ ಅವರು, ಗ್ರಾಮಸ್ಥರು ಗ್ರಾಮಸಭೆಗೆ ಹಾಜರಾಗಿ ಸರ್ಕಾರದಿಂದ ಬಂದ ಅನುದಾನದ ಮಾಹಿತಿಯನ್ನು ಪಡೆಯುತ್ತಿರುಬೇಕು. ಗ್ರಾಮ ಸಭೆಗೆ ಹಾಜರಾಗದೆ ತಮಗೆ ಸೌಲಭ್ಯವೆ ಸಿಗುತ್ತಿಲ್ಲ ಎಂದು ನನ್ನ ಬಳಿ ದೂರು ತೆಗೆದುಕೊಂಡು ಬರಬೇಡಿ ಎಂದು ತಿಳಿಸಿದರು. ಗ್ರಾಮ ಸಭೆಗಳಿಗೆ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಹಾಜರಾಗಬೇಕು. ಸರ್ಕಾರದ ಅನುದಾನ ತಳಮಟ್ಟದಿಂದ ಸದ್ವಿನಿಯೋಗವಾಗಬೇಕಾದರೆ ಗ್ರಾಮ ಪಂಚಾಯ್ತಿಗಳು ಸಶಕ್ತವಾಗಬೇಕು. ರಾಜ್ಯ ಸರ್ಕಾರ ಮಹಿಳಾ ಗ್ರಾಮ ಸಭೆಯನ್ನು…
ಮಂಡ್ಯ : ಜುಲೈ 28 ರಂದು ಮದ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು, ಹೀಗಾಗಿ ತಾಲೂಕಿನ ಜನತೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಮಾವೇಶದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ತಾಲೂಕು ಮಟ್ಟದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ 1300 ಕೋಟಿ ರೂ ಗಳಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ. ಅದಕ್ಕಾಗಿ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಇದು ನಮ್ಮ ತಾಲೂಕಿನ ಹೆಮ್ಮೆ ಎಂದರು. ಅಷ್ಟೇ ಅಲ್ಲದೇ ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ, ಸಾರ್ವಜನಿಕ ಆಸ್ಪತ್ರೆಯ ಉನ್ನತೀಕರಣ ಕಾಮಗಾರಿ ಸೇರಿದಂತೆ ಹಲವಾರು ಇನ್ನಿತರೆ ಕಾಮಗಾರಿಗಳು ಮುಂದಿನ ದಿನಗಳಲ್ಲಿ ನಡೆಯಲಿದ್ದು, ಇಂತಹ ಅಭೂತಪೂರ್ವ ಕಾರ್ಯಕ್ರಮವು ನಮ್ಮ ತಾಲೂಕಿನಲ್ಲಿ ನಡೆಯುತ್ತಿರುವುದು ನಮ್ಮ ಹೆಮ್ಮಯೆಂದು ಮನಗಂಡು ತಾಲೂಕಿನ ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾವೇಶಕ್ಕೆ…
ನವದೆಹಲಿ: ದೆಹಲಿ-ಎನ್ಸಿಆರ್ ಭೂಕಂಪನಲ್ಲಿ ಎರಡು ದಿನಗಳಲ್ಲಿ ಎರಡನೇ ಭೂಕಂಪ ಸಂಭವಿಸಿದೆ. ಅದರ ಹತ್ತಿರದ ನಗರಗಳಲ್ಲಿ ಮತ್ತೆ ಕಂಪನದ ಅನುಭವವಾಗಿದೆ. ಗುರುವಾರದಂದು ಹರಿಯಾಣದ ಜಜ್ಜರ್ ಬಳಿ 4.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್ಸಿಆರ್ ಪ್ರದೇಶದಾದ್ಯಂತ ಕಂಪನ ಉಂಟಾಗಿದೆ. ಕೇಂದ್ರಬಿಂದು ಜಜ್ಜರ್ನಿಂದ ಈಶಾನ್ಯಕ್ಕೆ 3 ಕಿ.ಮೀ ಮತ್ತು ದೆಹಲಿಯಿಂದ ಪಶ್ಚಿಮಕ್ಕೆ 51 ಕಿ.ಮೀ ದೂರದಲ್ಲಿದೆ. ಬೆಳಿಗ್ಗೆ 9.04 ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/it-is-more-important-to-give-a-voice-power-to-speak-than-what-the-party-has-given-deputy-chief-minister-dk-shivakumar/ https://kannadanewsnow.com/kannada/good-news-for-state-workers-smart-cards-to-be-distributed-tomorrow/
ಕಲಬುರಗಿ: ಹಣ ನೀಡುವಂತೆ ಬೇಡಿಕೆ ಇಟ್ಟಿರುವ ಪರಿಣಾಮ ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಯಾದಗಿರಿ ಡಿವೈಎಸ್ಪಿ ಹುದ್ದೆಗೆ ವರದಿ ಮಾಡಿಕೊಳ್ಳದಂತೆ ಅಡ್ಡಿಪಡಿಸಿರುವ ವಿರುದ್ಧ ಮಾಜಿ ಶಾಸಕ, ಬಿಜೆಪಿ ವಿಭಾಗೀಯ ಪ್ರಭಾರಿ ರಾಜಕುಮಾರ ಪಾಟೀಲ್ ತೇಲ್ಕೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿವೈಎಸ್ಪಿ ಹುದ್ದೆಯ ತರಬೇತಿ ಪೂರ್ಣಗೊಳಿಸಿ ಯಾದಗಿರಿಯಲ್ಲಿ ಡಿವೈಎಸ್ಪಿ ಹುದ್ದೆಯ ಕಾರ್ಯಭಾರದ ಕರ್ತವ್ಯದ ವರದಿ ಮಾಡಿಕೊಳ್ಳದಿರುವಂತೆ ಒತ್ತಡ ಹಾಕಿರುವುದನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡು ಮತ್ತೊಂದು ದುರಂತಕ್ಕೆ ಅವಕಾಶ ಮಾಡಿಕೊಡದೇ ತಕ್ಷಣವೇ ಕರ್ತವ್ಯ ಹಾಜರಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ ಮೋಹನ್ ಅವರಿಗೆ ಪತ್ರ ಬರೆದಿರುವ ತೇಲ್ಕೂರ, ಜೇವರ್ಗಿ ತಾಲೂಕಿನ ವಿಜಯಕ್ರಾಂತಿ ಪ್ರತಿಭಾನ್ವಿತೆ. ಸ್ಪರ್ಧಾತ್ಮಕಾ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ನೇರವಾಗಿ ಡಿವೈಎಸ್ಪಿಯಾಗಿದ್ದಾರೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರಿಂದ ತೆರವು ಇದ್ದ ಯಾದಗಿರಿ ಡಿವೈಎಸ್ಪಿ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಮಹಾನಿರ್ದೇಶಕರು…
ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!! ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ…
ಬೆಂಗಳೂರು: “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು. ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲ ಅವರ…
ನವದೆಹಲಿ: ಒಂದು ವೇಳೆ ನಿಮ್ಮ ಖಾಸಗಿ ಪೋಟೋ ಮತ್ತು ವೀಡಿಯೋ ಬಹಿರಂಗವಾದರೇ ಏನು ಮಾಡಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ.. ಮದ್ರಾಸ್ ಹೈಕೋರ್ಟ್ನಲ್ಲಿ, ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಮಹಿಳಾ ವಕೀಲರೊಬ್ಬರು ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಖಾಸಗಿ ವೀಡಿಯೊಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಲಾಗುತ್ತಿದೆ ಎಂಬ ಅರ್ಜಿಯನ್ನು ಆಲಿಸಿದರು. ಕಾಲೇಜಿನಲ್ಲಿದ್ದಾಗ ಮಾಜಿ ಸಂಗಾತಿಯೊಬ್ಬರು ರಹಸ್ಯವಾಗಿ ರೆಕಾರ್ಡ್ ಮಾಡಿದ ಈ ದೃಶ್ಯಗಳು ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡವು ಮತ್ತು ಸಾಮಾಜಿಕ ಮಾಧ್ಯಮ ಮತ್ತು ಸಂದೇಶ ಅಪ್ಲಿಕೇಶನ್ಗಳಲ್ಲಿ ಪ್ರಸಾರವಾದವು. “ಮಹಿಳೆ ತೀವ್ರ ಮಾನಸಿಕ ಯಾತನೆಯನ್ನು ಅನುಭವಿಸುತ್ತಿದ್ದಾಳೆ” ಎಂದು ನ್ಯಾಯಾಧೀಶರು ಹೇಳಿದರು. ನ್ಯಾಯಮೂರ್ತಿಗಳು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ 48 ಗಂಟೆಗಳ ಒಳಗೆ ವಿಷಯವನ್ನು ಪತ್ತೆಹಚ್ಚಿ ತೆಗೆದುಹಾಕುವಂತೆ ಆದೇಶಿಸಿದರು. ಜುಲೈ 14 ರೊಳಗೆ ಅನುಸರಣಾ ವರದಿಯನ್ನು ಕೋರಿದರು. ಅವರು ತಮಿಳುನಾಡು ಪೊಲೀಸ್ ಮುಖ್ಯಸ್ಥರನ್ನು ಸಹ ಕರೆಸಿ, ಅಂತಹ ಡಿಜಿಟಲ್ ನಿಂದನೆಯ ವಿರುದ್ಧ ವ್ಯವಸ್ಥಿತ ಸುರಕ್ಷತೆಗಳ ತುರ್ತು ಅಗತ್ಯವನ್ನು ಒತ್ತಿ ಹೇಳಿದರು.…
ಬೆಂಗಳೂರು:“ವಕೀಲರ ಸಂಘಕ್ಕೆ ಪ್ರತಿ ವರ್ಷ ರೂ.5 ಲಕ್ಷವನ್ನು ಕೆಂಪೇಗೌಡ ಜಯಂತಿ ಆಚರಣೆಗೆ ನೀಡಲಾಗುವುದು. ಸಂಘದ ಉಪಯೋಗಕ್ಕಾಗಿ ರೂ.5 ಕೋಟಿಯನ್ನು ಜಿಬಿಎಯಿಂದ ನೀಡಲಾಗುವುದು. ಕೆಂಪೇಗೌಡ ಪ್ರಶಸ್ತಿಯನ್ನು ಕಡ್ಡಾಯವಾಗಿ ಇಬ್ಬರು ವಕೀಲರಿಗೆ ಪ್ರತಿವರ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ವಕೀಲರ ಸಂಘದಿಂದ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು. “ಒಂದು ವಾರದೊಳಗೆ ಸಂಘದ ಕಟ್ಟಡಕ್ಕೆ ಸೋಲರ್ ಗ್ರಿಡ್ ವ್ಯವಸ್ಥೆಗೆ ಪರಿಶೀಲನೆ ನಡೆಸಲಾಗುವುದು. ಇದರ ಬಗ್ಗೆ ಹಿಂದೆಯೇ ಮಾತುಕಥೆಯಾಗಿತ್ತು. ನೀವು ಅಧಿಕಾರಿಗಳ ಹಿಂದೆ ಬಿದ್ದು ಕೆಲಸ ಮಾಡಿಸಿಕೊಳ್ಳಬೇಕು. ಜೊತೆಗೆ ಈ ಸಂಸ್ಥೆಗೆ ಭೂಮಿ ಬೇಕು ಎಂದು ಹೇಳಿದ್ದೀರಿ. ಆದ ಕಾರಣಕ್ಕೆ 10 ಎಕರೆ ಕಂದಾಯ ಭೂಮಿಯನ್ನು ಲಭ್ಯತೆ ನೋಡಿಕೊಂಡು ನೀಡಲಾಗುವುದು. ನಗರದ 20 ಕಿಮೀ ವ್ಯಾಪ್ತಿಯಲ್ಲಿ ಭೂಮಿ ಇದ್ದರೆ ನೀವೆ ಹುಡುಕಿ. ನಾವು ನೀಡುವ ಹಣವನ್ನು ನಿಮಗೆ ಉಪಯೋಗವಾಗುವ ಉತ್ತಮ ಕೆಲಸಗಳಿಗೆ ವಿನಿಯೋಗಿಸಿ” ಎಂದರು. ಖುರ್ಚಿ ಸಿಗುವುದೇ ಕಷ್ಟ. ಖುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು…













