Subscribe to Updates
Get the latest creative news from FooBar about art, design and business.
Author: kannadanewsnow09
ತುಮಕೂರು: ಇಂದು ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಮತ್ತೆ ಕೆ.ಎನ್ ರಾಜಣ್ಣ ಟೀಂ ಭರ್ಜರಿ ಗೆಲುವು ಸಾಧಿಸಿದೆ. ಇಂದು ನಡೆದಂತ 6 ತಾಲ್ಲೂಕಿನ ಚುನಾವಣೆಯಲ್ಲೂ ಕೆ.ಎನ್ ರಾಜಣ್ಣ ಬೆಂಬಲಿಗರೇ ಗೆಲುವು ಸಾಧಿಸಿದ್ದಾರೆ. ಇಂದು ನಡೆದಂತ ತುಮಕೂರು ಡಿಸಿಸಿ ಬ್ಯಾಂಕಿನ 6 ತಾಲ್ಲೂಕುಗಳ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಎಲ್ಲಾ ಆರು ಕಡೆಯಲ್ಲಿ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು ವಿಜಯ ಸಾಧಿಸಿದ್ದಾರೆ. ಹೀಗಾಗಿ ಬರೋಬ್ಬರಿ ಐದು ಬಾರಿಗೆ ಕೆ.ಎನ್ ರಾಜಣ್ಣ ಅವರು ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಪಟ್ಟಕ್ಕೇರಲಿದ್ದಾರೆ. ಅಂದಹಾಗೇ ಈಗಾಗಲೇ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಐದು ಬಾರಿ ಸತತ 25 ವರ್ಷಗಳ ಕಾಲ ಹಿಡಿತ ಹೊಂದಿದ್ದರು. ಇದೀಗ 6 ತಾಲ್ಲೂಕಿನ ಚುನಾವಣೆಯಲ್ಲಿ ಎಲ್ಲಾ ಕಡೆಯಲ್ಲೂ ಕೆ.ಎನ್ ರಾಜಣ್ಣ ಬೆಂಬಲಿಗರೇ ಗೆಲುವು ಸಾಧಿಸಿದ್ದರಿಂದ, ಆರನೇ ಬಾರಿಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎನ್ ರಾಜಣ್ಣ ಗದ್ದುಗೆ ಏರಲಿದ್ದಾರೆ. ಅಂದಹಾಗೇ ಎ ವರ್ಗದಿಂದ ತುಮಕೂರು ತಾಲ್ಲೂಕು ಚುನಾವಣೆಗೆ ಕೆ.ಎನ್…
ಧರ್ಮಸ್ಥಳ: ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಅವರನ್ನು ಸತತ ಐದು ಗಂಟೆಗಳ ಕಾಲ ವಿಚಾರಣೆಯನ್ನು ಪೊಲೀಸರು ನಡೆಸಿದರು. ಇಂದಿನ ವಿಚಾರಣೆ ಅಂತ್ಯಗೊಂಡಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಇಂದು ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರನ್ನು ವಿಚಾರಣೆ ನಡೆಸಲಾಯಿತು. ಬೆಳ್ತಂಗಡಿ ಪಿಎಸ್ಐ ಸುಬ್ಬಾಪುರ್ ಮಠ್ ಅವರಿಂದ ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಬಳಿಕ, ಬೆನಕ ಆಸ್ಪತ್ರೆಯಲ್ಲಿ ಗಲಾಟೆ ಕೇಸ್ ಸಂಬಂಧ ವಿಚಾರಣೆ ನಡೆಸಿದ್ದಾಗಿ ತಿಳಿದು ಬಂದಿದೆ. ಅಲ್ಲದೇ ಖಾಸಗಿ ವಾಹಿನಿ ವರದಿಗಾರರ ಮೇಲೆ ಹಲ್ಲೆ ಕೇಸ್ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ. ಇದಕ್ಕೆ ಕಾರಣ ದೂರಿನಲ್ಲಿ ಸಮೀರ್ ಆಸ್ಪತ್ರೆಗೆ ಬಂದಿದ್ದ ಬಗ್ಗೆ ಉಲ್ಲೇಖಿಸಲಾಗಿದೆ. ಇಂದು ಎಐ ವೀಡಿಯೋ ಕೇಸ್, ವರದಿಗಾರನ ಮೇಲಿನ ಹಲ್ಲೆ ಕೇಸ್,…
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷಾ ಪೂರ್ವ ವಸತಿಯುತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Sub-Inspector ಪರೀಕ್ಷಾ ಪೂರ್ವ ವಸತಿಯುತ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12.09.2025 ಸಂಜೆ 6:00 ಆಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಸಮುದಾಯದ ಅಭ್ಯರ್ಥಿಗಳು https://swdservices.karnataka.gov.in/petccoaching/PSIHome.aspx ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸುವಂತೆ ಮನವಿ ಮಾಡಿದೆ. https://twitter.com/SWDGoK/status/1959521979440255418 https://kannadanewsnow.com/kannada/drdo-successfully-tests-home-grown-air-defence-system/ https://kannadanewsnow.com/kannada/big-news-when-the-time-comes-deputy-chief-minister-dk-shivakumar-will-become-cm-minister-chaluvarayaswamys-statement/
ರಕ್ಷಣಾ ಸಚಿವಾಲಯ (MoD) ಭಾನುವಾರ (ಆಗಸ್ಟ್ 24) ರಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಮ್ (IADWS) ನ ಮೊದಲ ಹಾರಾಟ-ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ತಿಳಿಸಿದೆ. ಒಡಿಶಾದ ಕರಾವಳಿಯಲ್ಲಿ ಈ ಪರೀಕ್ಷೆಯನ್ನು ನಡೆಸಲಾಯಿತು, ಇದರಲ್ಲಿ ಮೂರು ವಿಭಿನ್ನ ಗುರಿಗಳನ್ನು ಏಕಕಾಲದಲ್ಲಿ ವಿಭಿನ್ನ ಶ್ರೇಣಿಗಳು ಮತ್ತು ಎತ್ತರಗಳಲ್ಲಿ ನಾಶಪಡಿಸಲಾಯಿತು. ಸ್ಥಳೀಯ IADWS ನ ಪರೀಕ್ಷೆ ಏನು ಮತ್ತು ಘಟಕಗಳು ಯಾವುವು? IADWS ಎಂದರೇನು? IADWS ಬಹು-ಪದರದ ವಾಯು ರಕ್ಷಣಾ ವ್ಯವಸ್ಥೆಯಾಗಿದ್ದು, ಇದು ಮೂರು ಘಟಕಗಳನ್ನು ಒಳಗೊಂಡಿದೆ – ಕ್ವಿಕ್ ರಿಯಾಕ್ಷನ್ ಸರ್ಫೇಸ್ ಟು ಏರ್ ಕ್ಷಿಪಣಿಗಳು (QRSAM), ಸುಧಾರಿತ ವೆರಿ ಶಾರ್ಟ್ ರೇಂಜ್ ಏರ್ ಡಿಫೆನ್ಸ್ ಸಿಸ್ಟಮ್ (VSHORADS) ಕ್ಷಿಪಣಿಗಳು ಮತ್ತು ಹೈ-ಪವರ್ ಲೇಸರ್-ಆಧಾರಿತ ಡೈರೆಕ್ಟೆಡ್ ಎನರ್ಜಿ ವೆಪನ್ (DEW). ಹಾರಾಟ-ಪರೀಕ್ಷೆಗಳ ಸಮಯದಲ್ಲಿ, ಎಲ್ಲಾ ಶಸ್ತ್ರಾಸ್ತ್ರ ವ್ಯವಸ್ಥೆಯ ಘಟಕಗಳು “ದೋಷರಹಿತವಾಗಿ ಕಾರ್ಯನಿರ್ವಹಿಸಿದವು, ಇದು ಹಾರಾಟದ ಡೇಟಾವನ್ನು ಸೆರೆಹಿಡಿಯಲು ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್…
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಘಟಕ ವೆಚ್ಚ ಶೇ.75ರಷ್ಟು ಅಥವಾ ಗರಿಷ್ಟ 4 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್ಬಿ) ಯ ಅಡಿಯಲ್ಲಿ ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದಿದೆ. ಪರಿಶಿಷ್ಟ ಜಾತಿಯ ಯುವಜನತೆಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಘಟಕ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಟ ರೂ. 4.00 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುವುದು. ಕೊನೆಯ ದಿನಾಂಕ: 10.09.2025 ಎಂದು ತಿಳಿಸಿದೆ. ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: http://sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಎಂದು ಹೇಳಿದೆ. https://twitter.com/SWDGoK/status/1959572056510701785 https://kannadanewsnow.com/kannada/a-car-overturned-in-the-hemavati-river-resulting-in-the-death-of-two-people-two-others-were-swept-away/ https://kannadanewsnow.com/kannada/big-news-when-the-time-comes-deputy-chief-minister-dk-shivakumar-will-become-cm-minister-chaluvarayaswamys-statement/
ಹಾಸನ: ಜಿಲ್ಲೆಯ ಹೇಮಾವತಿ ನದಿ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಕೊಚ್ಚಿ ಹೋಗಿರುವಂತ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಳೆನರಸೀಪುರ ಬಳಿಯ ಹರಳಹಳ್ಳಿ ಗ್ರಾಮದಲ್ಲಿ ಹೇಮಾವತಿಯ ಎಡದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ನಾಲ್ವರಲ್ಲಿ ಇಬ್ಬರು ಸಾವನ್ನಪ್ಪಿದದರೇ, ಮತ್ತಿಬ್ಬರು ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ. ನದಿ ನಾಲೆಯಲ್ಲಿ ಕಾರೊಂದು ಕಂಡಂತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಪರಿಶೀಲಿಸಿದ್ದಾರೆ. ಕಾರು ಪತ್ತೆಯಾದ ಸಮೀಪದ ದೊಡ್ಡಕುಂಚೇವು ಗ್ರಾಮದ ಕೆರೆಯಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಇನ್ನಿಬ್ಬರು ಕೊಚ್ಚಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಅವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/student-dies-after-taking-pills-to-stop-the-menstrual-cycle/ http://kannadanewsnow.com/kannada/big-news-when-the-time-comes-deputy-chief-minister-dk-shivakumar-will-become-cm-minister-chaluvarayaswamys-statement/
ಕೆಎನ್ಎನ್ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಒಬ್ಬ ವೈದ್ಯರು ಹೃದಯ ವಿದ್ರಾವಕ ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದು ನಮಗೆಲ್ಲರಿಗೂ ಒಂದು ದೊಡ್ಡ ಎಚ್ಚರಿಕೆ. ನಾಳೀಯ ಶಸ್ತ್ರಚಿಕಿತ್ಸಕ ಡಾ. ವಿವೇಕಾನಂದರು 18 ವರ್ಷದ ಯುವತಿಯೊಬ್ಬಳು ಪೂಜೆಗೆ ಋತುಚಕ್ರ ನಿಲ್ಲಿಸಲು ಔಷಧಿ ತೆಗೆದುಕೊಂಡ ಕಾರಣಕ್ಕೆ ಹೇಗೆ ಸಾವನ್ನಪ್ಪಿದಳು ಎಂದು ವಿವರಿಸಿದ್ದಾರೆ. ಸಣ್ಣ ನಿರ್ಲಕ್ಷ್ಯ ಮತ್ತು ವೈದ್ಯರ ಸಲಹೆಯನ್ನು ನಿರ್ಲಕ್ಷಿಸುವುದು ಮಾರಕವಾಗಬಹುದು. ಡಾ. ವಿವೇಕಾನಂದರು ಈ ದುಃಖದ ಕಥೆಯನ್ನು ಪಾಡ್ಕ್ಯಾಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. 18 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ತನ್ನ ಸ್ನೇಹಿತರೊಂದಿಗೆ ತಮ್ಮ ಚಿಕಿತ್ಸಾಲಯಕ್ಕೆ ಬಂದಿದ್ದಾಳೆ ಎಂದು ಅವರು ಹೇಳಿದರು. ಆಕೆಗೆ ಕಾಲು ಮತ್ತು ತೊಡೆಯಲ್ಲಿ ತೀವ್ರ ನೋವು ಮತ್ತು ಊತವಿತ್ತು. ಅದು ಯಾವಾಗ ಪ್ರಾರಂಭವಾಯಿತು ಎಂದು ಕೇಳಿದಾಗ, ಅವಳು ಹೀಗೆ ಹೇಳಿದಳು: “ಮನೆಯಲ್ಲಿ ಪೂಜೆ ಇತ್ತು, ಆದ್ದರಿಂದ ನಾನು ಋತುಚಕ್ರ ನಿಲ್ಲಿಸಲು ಕೆಲವು ಹಾರ್ಮೋನ್ ಮಾತ್ರೆಗಳನ್ನು ತೆಗೆದುಕೊಂಡೆ.” ಅವಳು ಈ ಮಾತ್ರೆಗಳನ್ನು ಕೇವಲ 3 ದಿನಗಳವರೆಗೆ ತೆಗೆದುಕೊಂಡಿದ್ದಳು. ತನಿಖೆಯಲ್ಲಿ, ಅವಳಿಗೆ ‘ಡೀಪ್ ವೇನ್ ಥ್ರಂಬೋಸಿಸ್’ (DVT)…
ತುಮಕೂರು: ಕುಂಕುಮ ಇಡುವ ವೇಳೆಯಲ್ಲಿ ಅನುಚಿತವಾಗಿ ವರ್ತನೆ ತೋರಿದಂತ ಆರೋಪದಡಿ ಅರ್ಚಕರೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿದಂತ ಘಟನೆ ತುಮಕೂರಿನ ದೇವರಾಯನ ದುರ್ಗದಲ್ಲಿ ನಡೆದಿದೆ. ತುಮಕೂರು ಹೊರವಲಯದ ದೇವರಾಯನದುರ್ಗದಲ್ಲಿ ಕುಂಕುಮ ಇಡುವಂತ ವೇಳೆಯಲ್ಲಿ ಅನುಚಿತವಾಗಿ ವರ್ತನೆ ಮಾಡಿದಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಕುಟುಂಬಸ್ಥರು ದೇವಸ್ಥಾನದ ಆವರಣದಲ್ಲೇ ಅರ್ಚಕ ನಾಗಭೂಷಣ ಆಚಾರ್ಯಗೆ ನಾಲ್ವರಿಂದ ಹಲ್ಲೆ ಮಾಡಲಾಗಿದೆ. ದೇವಸ್ಥಾನಕ್ಕೆ ಬಂದಿದ್ದಂತ ಮಹಿಳೆಯರು, ಯುವಕರಿಂದ ಅರ್ಚಕ ನಾಗಭೂಷಣ ಆಚಾರ್ಯ ಅವರನ್ನು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಅರ್ಚಕ ಕೈ ಮುಗಿದ್ರು, ಬೇಡಿದ್ರು ಕೋಲು, ಕೈಯಿಂದ ಥಳಿಸಲಾಗಿದೆ. ಮೂರು ನಾಲ್ಕು ದಿಗಳ ಹಿಂದೆ ನಡೆದಿರುವಂತ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರ್ಚಕ ನಾಗಭೂಷಣ್ ಆಚಾರ್ಯ ಅವರನ್ನು ಥಳಿಸುವಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. https://kannadanewsnow.com/kannada/expose-the-facade-of-the-misinformation-about-dharmasthala-through-sit-investigation-bring-the-truth-to-light-minister-ramalinga-reddy/ https://kannadanewsnow.com/kannada/big-news-when-the-time-comes-deputy-chief-minister-dk-shivakumar-will-become-cm-minister-chaluvarayaswamys-statement/
ಬೆಂಗಳೂರು: SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಲಿದೆ. ಸತ್ಯ ಬಯಲಿಗೆ ಬರಲಿದೆ ಎಂಬುದಾಗಿ ಮುಜರಾಯಿ ಮತ್ತು ಸಾರಿಗೆ ಸಚಿವ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಧರ್ಮಸ್ಥಳ ಕ್ಷೇತ್ರದ ಮತ್ತು ಧರ್ಮಾಧಿಕಾರಿಗಳ ಪರ ವಿರೋಧ ಹಾಗೂ ಅಪಪ್ರಚಾರ ನನಗೆ ತಿಳಿದಿರುವಂತೆ ಸುಮಾರು ಏಳೆಂಟು ವರುಷಗಳಿಂದ ನಡೆಯುತ್ತಾ ಬಂದಿದೆ. ಬಿ.ಜೆ.ಪಿ ಅಧಿಕಾರದಲ್ಲಿದ್ದ ಅವಧಿಯಿಂದಲೂ ನಡೆಯುತ್ತಲೇ ಬಂದಿದೆ ಎಂದಿದ್ದಾರೆ. ಬಿ.ಜೆ.ಪಿ.ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರರವರು ಈಗ ಧರ್ಮ ರಕ್ಷಣೆಗೆ ಕರೆ ನೀಡಿದ್ದಾರೆ. ಇವರ ತಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದರು, ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದರು, ವಿಪಕ್ಷ ನಾಯಕರಾದ ಅಶೋಕ್ ಅವರು ಹಿರಿಯ ಮಂತ್ರಿಗಳಾಗಿದ್ದರು, ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದರು ಆಗ ಇವರಾರು ಒಂದೇ ಒಂದು ಮಾತು ಆಡಲಿಲ್ಲ. ಅಪಪ್ರಚಾರ ಹೋಗಲಾಡಿಸಿ ಷಡ್ಯಂತ್ರ ಬಯಲಿಗೆಳೆಯಲು ಯಾವುದೇ ಕ್ರಮ ಇವರಿಂದ ಆಗಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಗೃಹ ಸಚಿವ ಪರಮೇಶ್ಚರ್ ಅವರು SIT ರಚಿಸಿರುವ ಉದ್ದೇಶ, ಸತ್ಯ ಹೊರ…
ಸೆಪ್ಟೆಂಬರ್ ತಿಂಗಳು ಖಗೋಳ ದೃಷ್ಟಿಕೋನದಿಂದ ಬಹಳ ವಿಶೇಷವಾಗಿರಲಿದೆ. ಏಕೆಂದರೆ ಈ ಬಾರಿ ಎರಡು ದೊಡ್ಡ ಗ್ರಹಣಗಳು ಒಂದೇ ತಿಂಗಳಿನಲ್ಲಿ ಸಂಭವಿಸಲಿದೆ. ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಮತ್ತು ಸೂರ್ಯಗ್ರಹಣ ಸೆಪ್ಟೆಂಬರ್ 21 ರಂದು. ಮತ್ತೊಂದು ವಿಶೇಷವೆನೆಂದರೆ ಎರಡೂ ಗ್ರಹಣಗಳೂ ಭಾರತದಲ್ಲಿ ಗೋಚರಿಸುತ್ತವೆ, ಆದ್ದರಿಂದ ಧಾರ್ಮಿಕ ಮತ್ತು ಜ್ಯೋತಿಷ್ಯ ದೃಷ್ಟಿಕೋನದಿಂದ ಅವುಗಳ ಪ್ರಾಮುಖ್ಯತೆ ಇನ್ನಷ್ಟು ಹೆಚ್ಚಾಗಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ,…














