Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರ್ಗಿ: ಜಿಲ್ಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತಗೊಂಡಿದೆ. ಈ ವೇಳೆ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರಿಂದಾಗಿ ಮೂವರು ಗಾಯಗೊಂಡಿದ್ದಾರೆ. ಶಾಲಾ ಮೇಲ್ಛಾವಣಿ ಕುಸಿತಗೊಂಡ ಪರಿಣಾಮ ಶ್ರೀನಿವಾಸ್, ಕಾವೇರಿ, ಅಕ್ಷತಾ ಎಂಬಂತ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವಂತ ಇಬ್ಬರು ವಿದ್ಯಾರ್ಥಿಗಳನ್ನು ಗುರುಮಠಕಲ್ ತಾಲ್ಲೂಕು ಆಸ್ಪತ್ರೆಗೆ, ಮತ್ತೋರ್ವ ವಿದ್ಯಾರ್ಥಿಯನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/cabinet-approves-illegal-mining-report-do-you-know-whats-in-the-report/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ ಬಗ್ಗೆ ಸರ್ಕಾರದ ಹೇಳಿಕೆ. ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011 ರವರೆಗೆ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದವು. ಈ ಅಕ್ರಮದಲ್ಲಿ ಅಧಿಕಾರಸ್ಥ ರಾಜಕಾರಣಿಗಳು, ವ್ಯಾಪಾರಸ್ಥರು, ಅಧಿಕಾರಿಗಳು ಹಾಗೂ ಇನ್ನಿತರರು ಶಾಮೀಲಾಗಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ್ದರು ಎಂಬುದು ದೇಶದ ಮುಂದೆ ಜಗಜ್ಜಾಹೀರಾಗಿರುವ ಸಂಗತಿ. ಈ ಅಕ್ರಮಗಳನ್ನು ಲೋಕಾಯುಕ್ತ ಸಂಸ್ಥೆಯು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿ ವರದಿ ನೀಡಿತ್ತು. 2013 ರಿಂದ 2018ರ ನಮ್ಮ ಸರ್ಕಾರದ ಅವಧಿಯಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿತ್ತು. ಉಪ ಸಮಿತಿಯು ಗಣಿ ಅಕ್ರಮಗಳಿಂದ ರಾಜ್ಯದ ಬೊಕ್ಕಸಕ್ಕೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಿ ದಿನಾಂಕ: 16.10.2015 ರಂದು ನಡೆದ ಉಪ ಸಮಿತಿ ಸಭೆಯಲ್ಲಿ ಕೆಲವು ಶಿಫಾರಸ್ಸುಗಳನ್ನು ಮಾಡಿರುತ್ತದೆ. ಆ ಸಂದರ್ಭದಲ್ಲಿ, ಅಕ್ರಮ ಗಣಿಗಾರಿಕೆ ಕುರಿತು ನಮ್ಮ ಸರ್ಕಾರವು…
ಬೆಂಗಳೂರು: ಈಗಾಗಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸಿ, ಅನುಭವಿಸುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧದ 3ನೇ ಕೇಸಲ್ಲಿ ದೋಷಾರೋಪವನ್ನು ಕೋರ್ಟ್ ನಿಗದಿ ಪಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಕೇಸಲ್ಲಿ 3ನೇ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ದೋಷಾರೋಪ ನಿಗದಿ ಪಡಿಸಿದೆ. ದೋಷಾರೋಪ ಹೊರಿಸಲು ಇಂಗ್ಲಿಷ್ ಆಯ್ಕೆಯನ್ನು ಪ್ರಜ್ವಲ್ ರೇವಣ್ಣ ಮಾಡಿದ್ದರು. ನ್ಯಾಯಾಧೀಶರು ಓದಿದ ಎಲ್ಲಾ ದೋಷಾರೋಪಗಳನ್ನು ಪ್ರಜ್ವಲ್ ರೇವಣ್ಣ ನಿರಾಕರಿಸಿದ್ದಾರೆ. ಸಾಕ್ಷ್ಯ ವಿಚಾರಣೆ ದಿನಾಂಕವನ್ನು ಸೆಪ್ಟೆಂಬರ್.11ರಂದು ಕೋರ್ಟ್ ನಿಗದಿ ಪಡಿಸಿದೆ. https://kannadanewsnow.com/kannada/kea-has-announced-the-final-round-results-of-dcet/
ಬೆಂಗಳೂರು: ಪ್ರಸಕ್ತ ಸಾಲಿನ ಡಿಸಿಇಟಿ ಮೂರು ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. ಆ.25ರಿಂದ 27ರವರೆಗೆ ಚಲನ್ ಡೌನ್ಲೋಡ್ ಮಾಡಿಕೊಂಡು, ಆ.28ರೊಳಗೆ ಶುಲ್ಕ ಪಾವತಿಸುವುದು. ಕಾಷನ್ ಡೆಪಾಸಿಟ್ ಕಟ್ಟಿದವರ ಹಣವನ್ನು ಶುಲ್ಕದ ಜತೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೀಟು ಖಾತರಿ ಚೀಟಿಯನ್ನು ಆ.29ರೊಳಗೆ ಡೌನ್ಲೋಡ್ ಮಾಡಿಕೊಂಡು ಆ.30ರೊಳಗೆ ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. ಕೊನೆ ಸುತ್ತಿನಲ್ಲಿ ಒಟ್ಟು 860 ಮಂದಿಗೆ ವಿವಿಧ ವಿಭಾಗಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ. https://kannadanewsnow.com/kannada/power-outage-in-these-areas-of-bangalore-city-tomorrow/ https://kannadanewsnow.com/kannada/invitation-to-apply-for-agniveer-recruitment/
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆ.ವಿ ಹೂಡಿ ಸ್ಟೇಷನ್ ವ್ಯಾಪ್ತಿಯಲ್ಲಿ ದಿನಾಂಕ 23.08.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹುಡಿ ವಿಲೇಜ್, ತಿಗಲಾರಪಾಳ್ಯ, ಸೀತಾರಾಮಪಾಳ್ಯ, ಬಸವನಗರ, ಸೊನ್ನೆಹಳ್ಳಿ, ಟ್ರಂಕ್ ಕೇಬಲ್ ದೋಷ, ಎನ್ಜಿಇಎಫ್ ಕೈಗಾರಿಕಾ ಪ್ರದೇಶ, ಶಿವರಾಜ್ ಫ್ಯಾಕ್ಟರಿ, ಇಎಸ್ಐ ರಸ್ತೆ, ವಿಎಸ್ಎನ್ಎಲ್ ಡೇಟಾ ಸೆಂಟರ್, ಪುರವ ಪಾರ್ಕ್ ವಿಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಲೇಔಟ್, ಚಿನ್ನಪ್ಪ ಲೇಔಟ್, ಔಟರ್ ರಿಂಗ್ ರಸ್ತೆ, ರಾಮಕೃಷ್ಣ ರೆಡ್ಡಿ ಲೇಔಟ್, ಗರುಡಾಚಾರ್ ಪಾಳ್ಯ, ಆರ್ಎಚ್ಬಿ ಕಾಲೋನಿ, ಲಕ್ಷ್ಮೀ ಸಾಗರ, ಮಹೇಶ್ವರಮ್ಮ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. https://kannadanewsnow.com/kannada/good-news-from-ksrtc-for-those-who-wish-to-see-the-singhadurga-bridge-bus-service-from-bangalore/ https://kannadanewsnow.com/kannada/invitation-to-apply-for-agniveer-recruitment/
ಬೆಂಗಳೂರು: ರಾಜ್ಯಕ್ಕೆ ಒಂದೇ ಕಾನೂನು ಇರಬೇಕು. ಗಣೇಶೋತ್ಸವವನ್ನು ವಿಜೃಂಭಣೆಯಿಂದ ಹಿಂದೂಗಳು ಕೊಂಡಾಡುವಂತೆ ಆಚರಿಸಲು ಸರಕಾರ ಅವಕಾಶ ಮಾಡಿಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೇರೆ ಬೇರೆಯವರಿಗೆ ಬೇರೆ ಬೇರೆ ರೀತಿ ಮಣೆ ಹಾಕುವುದು, ಹಿಂದೂಗಳನ್ನು ದಮನಿಸುವ ನೀತಿಯನ್ನು ಮಾಡಿದ್ದೇ ಆದರೆ, ಇದರ ಪ್ರತಿಫಲವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಲ್ಲ ಕಡೆ ಹಿಂದೂಗಳು ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲು ಅನುವು ಮಾಡಿಕೊಡಬೇಕೆಂದು ಅವರು ಒತ್ತಾಯಿಸಿದರು. ಗಣಪತಿ ಹಬ್ಬವನ್ನು ಬಹುಕಾಲದಿಂದ, ತಲೆತಲಾಂತರದಿಂದ ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಗುಲ್ಬರ್ಗದಲ್ಲಿ ರಿಪಬ್ಲಿಕ್ ಆಫ್ ಗುಲ್ಬರ್ಗ ಎಂದು ಕರೆಯುತ್ತಾರೆ. ರಾಜ್ಯದ ಕಾನೂನು, ದೇಶದ ಕಾನೂನು ಅಲ್ಲಿ ನಡೆಯುವುದಿಲ್ಲ. ರಾಜ್ಯಕ್ಕೆ ಒಂದೇ ಕಾನೂನು, ನೀತಿ ಇರಬೇಕು ಎಂದು ಶಾಸಕರು ಪ್ರಸ್ತಾಪಿಸಿದ್ದರು. ಗುಲ್ಬರ್ಗದಲ್ಲಿ ಸದ್ದೇ ಮಾಡದೇ ಗಣಪತಿ ಉತ್ಸವ ಮಾಡಬೇಕೇ? ಕಾಂಗ್ರೆಸ್ಸಿನವರಿಗೆ ಮಾತ್ರ ಮೌನ ಗಣಪತಿ ಬೇಕು ಎಂದು ಟೀಕಿಸಿದರು. ದಕ್ಷಿಣ ಕನ್ನಡದಲ್ಲೂ ಹಿಂದೂಗಳನ್ನು ತುಳಿಯುವ ಕೆಲಸ…
ಬೆಂಗಳೂರು: ಸಿಂಗದೂರು ಕೇಬಲ್ ಬ್ರಿಡ್ಜ್ ಉದ್ಘಾಟನೆಯ ಬಳಿಕ ನೋಡೋದಕ್ಕೆ ತೆರಳೋರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಿಂದ ಸಿಗಂದೂರು ಸೇತುವೆ ನೋಡೋ ಪ್ಲಾನ್ ಮಾಡಿದ್ದರೇ, ಕೆ ಎಸ್ ಆರ್ ಟಿಸಿ ನೇರವಾಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಸಿಗಂದೂರು ವಯಾ ಚಿತ್ರದುರ್ಗ, ಹೊಳಲ್ಕೆರೆ, ಚನ್ನಗಿರಿ, ಶಿವಮೊಗ್ಗ ಮಾರ್ಗದಲ್ಲಿ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ದಿನಾಂಕ 22-08-2025 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದಿದೆ. ಹೀಗಿದೆ ವೇಳಾಪಟ್ಟಿ ಮತ್ತು ಪ್ರಯಾಣದರ ಬೆಂಗಳೂರಿನಿಂದ ಸಿಗಂದೂರಿಗೆ ರೂ.950 ದರವನ್ನು ನಾನ್ ಎಸಿ ಸ್ಲೀಪರ್ ಬಸ್ಸಿಗೆ ನಿಗದಿ ಪಡಿಸಲಾಗಿದೆ. ಈ ಬಸ್ಸು ರಾತ್ರಿ 9.40ಕ್ಕೆ ಹೊರಟು ಮರುದಿನ ಬೆಳಗ್ಗೆ 6 ಗಂಟೆಗೆ ಸಿಗಂದೂರು ತಲುಪಲಿದೆ. ಸಿಗಂದೂರನ್ನು ರಾತ್ರಿ…
ಬೆಂಗಳೂರು: ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ಕ್ಕೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಬಾನು ಮುಷ್ತಕ್ ಹೇಳಿದ್ದೇನು ಅಂತ ಮುಂದೆ ಓದಿ. ಲಂಡನ್ ನಿಂದಲೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ನಾಡಹಬ್ಬ ಆಚರಣೆ ನಮಗೂ ಖುಷಿ ತರುವ ವಿಚಾರವಾಗಿದೆ. ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರೋದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ನನ್ನ ಜೊತೆ ಮಾತನಾಡಿದ್ದಾರೆ ಎಂದರು. ದಸರಾ ಸಂದರ್ಭದಲ್ಲಿ ಸಮಯ ಕಾಯ್ದಿರಿಸಿಕೊಳ್ಳಿ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ದಸರಾ ಉದ್ಘಾಟನೆಗೆ ಒಪ್ಪಿಗೆ ನೀಡಿರುವ ಬಗ್ಗೆ ಖುಷಿಯನ್ನು ಬಾನು ಮುಷ್ತಕ್ ಹಂಚಿಕೊಂಡಿದ್ದಾರೆ. https://kannadanewsnow.com/kannada/invitation-to-apply-for-agniveer-recruitment/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/
ನವದೆಹಲಿ: ಗೋವಿಂದ ಅವರೊಂದಿಗಿನ ವಿಚ್ಛೇದನದ ವದಂತಿಗಳನ್ನು ಉಲ್ಲೇಖಿಸುವಾಗ ಸುನೀತಾ ಅಹುಜಾ ಇತ್ತೀಚೆಗೆ ತಮ್ಮ ಯೂಟ್ಯೂಬ್ ವ್ಲಾಗ್ನಲ್ಲಿ ಬೇಸರಗೊಂಡು ಸುದ್ದಿಯಲ್ಲಿದ್ದರು. ಇದೀಗ ನಟ ಗೋವಿಂದ ಅವರಿಂದ ವಿಚ್ಛೇದನ ಕೋರಿ ಪತ್ನಿ ಸುನೀತಾ ಅಹುಜಾ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ದಂಪತಿಗಳು 37 ವರ್ಷಗಳಿಂದ ಒಟ್ಟಿಗೆ ಇದ್ದರೂ, ದಾಂಪತ್ಯದಲ್ಲಿನ ತೊಂದರೆಗಳ ಬಗ್ಗೆ ಊಹಾಪೋಹಗಳು ತೀವ್ರಗೊಂಡವು. ಹೌಟರ್ಫ್ಲೈ ವರದಿಯ ಪ್ರಕಾರ, ಅಹುಜಾ ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವ್ಯಭಿಚಾರ, ಕ್ರೌರ್ಯ ಮತ್ತು ತೊರೆದು ಹೋಗುವಿಕೆಯ ಆಧಾರದ ಮೇಲೆ ಅವರು ಬೇರ್ಪಡುವಿಕೆಯನ್ನು ಕೋರಿದ್ದಾರೆ ಎಂದು ವರದಿ ಹೇಳುತ್ತದೆ. ಸುನೀತಾ ಅಹುಜಾ ಡಿಸೆಂಬರ್ 5, 2024 ರಂದು ಹಿಂದೂ ವಿವಾಹ ಕಾಯ್ದೆ, 1955 ರ ಸೆಕ್ಷನ್ 13 (1) (i), (ia), ಮತ್ತು (ib) ಅಡಿಯಲ್ಲಿ ವಿಚ್ಛೇದನ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಮೇ 25 ರಂದು ನ್ಯಾಯಾಲಯವು ಗೋವಿಂದ ಅವರಿಗೆ ಸಮನ್ಸ್ ಜಾರಿ ಮಾಡಿತ್ತು ಮತ್ತು ಜೂನ್ನಿಂದ ದಂಪತಿಗಳು ವಿಷಯಗಳನ್ನು…
ಬೆಂಗಳೂರು: ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಹೆಚ್ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್ ನೇಮಕಾತಿ ನಡೆಯಲಿದೆ. 17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್(ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್(ಟ್ರೇಡ್ಸ್ಮನ್ 8ನೇ ಮತ್ತು 10 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮೆನ್(ಓಪೆನ್ ಕೆಟಗರಿ) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮದ್ರಾಸ್ ಗ್ರೂಪ್ ಇಂಜಿನಿಯರಿಂಗ್ ಮತ್ತು ಸೆಂಟರ್, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರ) ಇವರು ಪ್ರಕಟಣೆಯಲ್ಲಿ ತಿಳಿದ್ದಾರೆ. https://kannadanewsnow.com/kannada/district-administration-invites-banu-mushtaq-to-the-dussehra-inauguration-cm-siddaramaiah/ https://kannadanewsnow.com/kannada/rcp-timeline-case-here-are-the-highlights-of-the-answer-given-by-cm-siddaramaiah-in-the-legislative-assembly/














