Author: kannadanewsnow09

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್ ಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಪ್ರಮುಖ ಕಲ್ಯಾಣಿಗಳಲ್ಲಿ ಅಗತ್ಯ ವ್ಯವಸ್ಥೆ: ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ,…

Read More

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಂತ ಜಗದೀಶ್ ನನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗೆ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದಂತ 1ನೇ ಎಸಿಜೆಎಂ ಕೋರ್ಟ್ ಈ ತೀರ್ಪು ನೀಡಿದೆ. ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಂತ ಜಗದೀಶ್ ನನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ವಶಕ್ಕೆ ಪಡೆದಿತ್ತು. ಆತನ ವಿರುದ್ಧ ಕೊಲೆ ಕೇಸ್, ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಎ.1 ಆರೋಪಿಯನ್ನು ಬೆಂಗಳೂರಿನ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ 1ನೇ ಎಸಿಜೆಎಂ ಕೋರ್ಟ್ ಸಿಐಡಿ ಮನವಿಯ ಮೇರೆಗೆ ಹೆಚ್ಚಿನ ವಿಚಾರಣೆ ನಡೆಸಲು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಅಂದಹಾಗೇ ಕಳೆದ ಜುಲೈ.15ರಂದು ಬೆಂಗಳೂರಿನ ಭಾರತಿನಗರದಲ್ಲಿ ಬಿಕ್ಲು ಶಿವ ಕೊಲೆಯಾಗಿತ್ತು. ಈ ಕೊಲೆಯಲ್ಲಿ ಜಗದೀಶ್ ಎ.1 ಆರೋಪಿಯಾಗಿದ್ದರು. ಕೊಲೆಯ…

Read More

ಹಾಸನ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಹಲವರು ಅವರ ಆಯ್ಕೆಯನ್ನು ವಿರೋಧಿಸಿದ್ದರು. ಇಂತಹವರಿಗೆ ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು ಎಂಬುದಾಗಿ ಹೇಳುವ ಮೂಲಕ ತಿರುಗೇಟನ್ನು ಬಾನು ಮುಷ್ತಾಕ್ ನೀಡಿದ್ದಾರೆ. ಇಂದು ಹಾಸನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದಂತ ಅವರು, ಕನ್ನಡವನ್ನು ಕೇವಲ ಭಾಷೆಯನ್ನಾಗಿ ಪರಿಗಣಿಸಿದಾಗ ಮಾತ್ರವೇ ಅದನ್ನು ಎಲ್ಲರೂ ಓದಲು ಸಾಧ್ಯವಾಗುತ್ತದೆ ಎಂಬುದಾಗಿ ತಿಳಿಸಿದರು. ಗೋಕಾಕ್ ಸಮಿತಿ ವರದಿ ಜಾರಿಗೆ ಬಂದಾಗ ಹಾಸನದಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಆಹ್ವಾನ ಪಡೆಯುವ ಅರ್ಹತೆ ನನಗೆ ಇರಲಿಲ್ಲ. ಅನೇಕ ಗಣ್ಯರು ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದರು. ಅಂದು ವೇದಿಕೆಯಲ್ಲಿ ಮಾತನಾಡುವವರಿಗೆ ಒಂದು ನಿಬಂಧನೆ ವಿಧಿಸಲಾಗಿತ್ತು. ಅದೇ ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿಸುತ್ತಿರುವವರು ಮಾತ್ರವೇ ಮಾತನಾಡಲು ಅರ್ಹರು ಎಂಬುದಾಗಿತ್ತು. ಆ ದಿನ ಅಲ್ಲಿ ಮಾತನಾಡಿದ್ದು ತಾನು…

Read More

ಬೆಂಗಳೂರು : “ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ‌ನಾಯಕರ ವಿರೋಧದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದರು. “ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು” ಎಂದರು. ಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ? “ಎಷ್ಟೋ ಜನ ಹಿಂದೂಗಳು ಮುಸ್ಲಿಮರಾಗಿ, ಕ್ರಿಶ್ಚಿಯನ್ನರಾಗಿ ಹಾಗೂ ಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ? ಮುಸ್ಲಿಮರು ಹಿಂದೂ ಧರ್ಮದ ಆಚರಣೆಗಳನ್ನು ಮಾಡುತ್ತಿಲ್ಲವೇ? ಅಯೋಧ್ಯೆ ರಾಮನಿಗೆ ಹಿಂದುಗಳು ಮಾತ್ರ ಬರಬೇಕು ಎಂದು ಏಕೆ ಬೋರ್ಡ್ ಹಾಕಿಲ್ಲ? ಬಿಜೆಪಿ ಸರ್ಕಾರ ಇದ್ದ ವೇಳೆ ಹಾಗೂ ಈಗ ಇಡೀ ದೇಶದಲ್ಲಿ…

Read More

ಬೆಂಗಳೂರು: ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು, ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಲು ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 04) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2020 ರ ಹಾಗೂ ವರ್ಗಾವಣೆ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022 ಪುಕಾರ 2024-25 ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಉಲ್ಲೇಖ-1 ರ ವರ್ಗಾವಣಾ ವರ್ಗಾವಣಾ ವೇಳಾಪಟ್ಟಿಯಂತೆ ಹೆಚ್ಚುವರಿ ಶಿಕ್ಷಕರ ಆಕ್ಷೇಪಣೆಗಳನ್ನು ವಿಭಾಗೀಯ ಸಹ ನಿರ್ದೇಶಕರಿಗೆ ಸಲ್ಲಿಸಲು ದಿನಾಂಕ : 25-08-2025 ಹಾಗೂ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಆಕ್ಷೇಪಣೆಗಳನ್ನು ಸಲ್ಲಿಸಲು ವಿಭಾಗೀಯ ಸಹ ನಿರ್ದೇಶಕರಿಗೆ ಸಲ್ಲಿಸಲು…

Read More

ಭಾದ್ರಪದ ಶುಕ್ಲ ಮಾಸದ ಕ್ಷೀಣ ಚಂದ್ರನ ದಿನವನ್ನು ಗಣೇಶನ ಅವತಾರ ದಿನವೆಂದು ಆಚರಿಸಲಾಗುತ್ತದೆ. ಆ ದಿನ ಎಲ್ಲರೂ ತಮ್ಮ ಮನೆಗಳಲ್ಲಿ ಗಣೇಶ ಚತುರ್ಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ನಾವು ಮನೆಯಲ್ಲಿ ಗಣೇಶನ ಮೂರ್ತಿಯನ್ನು ಖರೀದಿಸುತ್ತೇವೆ, ಅವನಿಗೆ ಇಷ್ಟವಾದ ವಸ್ತುಗಳನ್ನು ನೈವೇದ್ಯವಾಗಿ ಇಡುತ್ತೇವೆ ಮತ್ತು ಅವನಿಗೆ ವಿಶೇಷ ಪೂಜೆ ಮತ್ತು ಅರ್ಚನೆಗಳನ್ನು ಮಾಡುತ್ತೇವೆ. ಹಾಗೆ ಮಾಡುವುದರಿಂದ ನಾವು ಗಣೇಶನ ಕೃಪೆಯನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅಂತಹ ವಿಶೇಷ ದಿನದಂದು ನಾವು ಸಲ್ಲಿಸಬಹುದಾದ ಪ್ರಾರ್ಥನೆಗಳನ್ನು ಪೂರೈಸಲು ನಾವು ಮಾಡಬೇಕಾದ ಪೂಜೆಯನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಪ್ರಾರ್ಥನೆಗಳನ್ನು ಈಡೇರಿಸುವ ಪೂಜೆ ಗಣೇಶನು ಸರ್ವೋಚ್ಚ ದೇವರು ಮತ್ತು ಕೆಲಸದಲ್ಲಿ ಯಶಸ್ಸನ್ನು ನೀಡಬಲ್ಲವನು.…

Read More

ಜಮ್ಮು-ಕಾಶ್ಮೀರ: ಮಂಗಳವಾರ ಮಧ್ಯಾಹ್ನ ತ್ರಿಕೂಟ ಬೆಟ್ಟದ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದ ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಧ್ಕ್ವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಭೂಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಹಾಯವಾಣಿ ಸಂಖ್ಯೆ ಆರಂಭ ಪೀಡಿತ ಜಿಲ್ಲೆಗಳಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ ಮತ್ತು ಸ್ಥಳೀಯ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆಯನ್ನು ವಹಿಸಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ಜಮ್ಮು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿವಿಧ ಜಿಲ್ಲೆಗಳ ಜನರ ತುರ್ತು ಸಂಪರ್ಕ ಸಂಖ್ಯೆಗಳು: ಜಮ್ಮು – 0191-2571616 ಸಾಂಬಾ – 01923-241004, 01923-246915 ಕಥುವಾ – 01922-238796 ಪೂಂಚ್ – 01965-2200888 ರಾಜೌರಿ – 01962-295895 ಉಧಂಪುರ – 01992-272727, 01992-272728 ರಿಯಾಸಿ – 9419839557 ರಾಂಬನ್ – 01998-29550, 01998-266790 ದೋಡಾ –…

Read More

ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚನೆ ಮಾಡಿ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 26-08-2025ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಎಂ.ಮಹೇಶ್ವರ ರಾವ್, ಬಿಬಿಎಂಪಿ ಮುಖ್ಯ ಆಯುಕ್ತರು ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಅಧಿಕ ಪ್ರಭಾರದ ಮೇಲೆ ನೇಮಿಸಿ ಆದೇಶಿಸಿದ್ದಾರೆ. https://kannadanewsnow.com/kannada/scan-qr-code-get-property-information-registration-and-rental-agreement-new-scheme-of-the-government/ https://kannadanewsnow.com/kannada/union-minister-kiren-rijiju-saves-two-people-who-fell-into-a-river-receives-huge-praise-from-netizens/

Read More

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ದೋಡಾ ಜಿಲ್ಲೆಯಲ್ಲಿ ನಿರಂತರ ಮಳೆ, ಮೇಘಸ್ಫೋಟ ಮತ್ತು ಭೂಕುಸಿತದಿಂದ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವಾರು ಮನೆಗಳು ಮತ್ತು ರಸ್ತೆಗಳು ನಾಶವಾಗಿವೆ. ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿರುವುದರಿಂದ ನದಿ ದಂಡೆಗಳಿಂದ ದೂರವಿರುವಂತೆ ಅಧಿಕಾರಿಗಳು ನಿವಾಸಿಗಳನ್ನು ಒತ್ತಾಯಿಸಿದ್ದರಿಂದ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. https://twitter.com/ANI/status/1960293176066953599 ರೈಲುಗಳು ಮತ್ತು ಹೆದ್ದಾರಿಗಳು ಮುಚ್ಚಲ್ಪಟ್ಟಿವೆ ದೋಡಾ ಮತ್ತು ಕಿಶ್ತ್ವಾರ್ ನಡುವಿನ ಪ್ರಮುಖ ಕೊಂಡಿಯಾದ NH-244 ನಲ್ಲಿ ಭಾರೀ ಮಳೆಯಿಂದಾಗಿ ರಸ್ತೆಯ ಒಂದು ಭಾಗ ಕೊಚ್ಚಿಹೋಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ರಾಂಬನ್ ಜಿಲ್ಲೆಯ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತಗಳು ಮತ್ತು ಗುಂಡಿನ ಕಲ್ಲುಗಳು ಬಿದ್ದಿವೆ. ಕಾಶ್ಮೀರ ಕಣಿವೆಯನ್ನು ಕಿಶ್ತ್ವಾರ್‌ನೊಂದಿಗೆ ಸಂಪರ್ಕಿಸುವ ಸಿಂಥನ್ ಟಾಪ್ ಪಾಸ್ ಅನ್ನು ಮುಚ್ಚಲಾಗಿದೆ ಮತ್ತು ಜೊಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತವು ಶ್ರೀನಗರ-ಲೇಹ್ ಹೆದ್ದಾರಿಯನ್ನು ನಿರ್ಬಂಧಿಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್, ಶ್ರೀ ಶಕ್ತಿ ಎಕ್ಸ್‌ಪ್ರೆಸ್ ಮತ್ತು ಹೇಮಕುಂಟ್ ಎಕ್ಸ್‌ಪ್ರೆಸ್ ಸೇರಿದಂತೆ ಕತ್ರಾಗೆ ಮತ್ತು ಅಲ್ಲಿಂದ ಬರುವ ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ.…

Read More

ಶಿವಮೊಗ್ಗ: ಜಿಲ್ಲೆಯ ವಾರ್ತಾಧಿಕಾರಿಯಾಗಿದ್ದಂತ ಮಾರುತಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ಶಿವಮೊಗ್ಗ ಜಿಲ್ಲೆಯ ನೂತನ ವಾರ್ತಾಧಿಕಾರಿಯಾಗಿ ಧನಂಜಯ ಅಧಿಕಾರ ಸ್ವೀಕಾರಿಸಿದ್ದಾರೆ. ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾಗಿ ಧನಂಜಯ ಇವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಇವರಿಗೆ ಸಂಬಂಧಿಸಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಪತ್ರ ವ್ಯವಹಾರವನ್ನು ಇವರ ಹೆಸರಿನಲ್ಲಿ ಹಾಗೂ ಪದನಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್.ಎಂ.ವಿ ರಸ್ತೆ ಶಿವಮೊಗ್ಗ ಈ ವಿಳಾಸದಲ್ಲಿ ಪತ್ರ ವ್ಯವಹರಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/formation-of-greater-bengaluru-authority-siddaramaiah-appointed-as-chairman-d-k-shivakumar-appointed-as-vice-chairman/ https://kannadanewsnow.com/kannada/scan-qr-code-get-property-information-registration-and-rental-agreement-new-scheme-of-the-government/

Read More