Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿಯ ಸಂಬಂಧಿಸಿದ ಅನ್ಯಾಯವನ್ನು ಸರಿಪಡಿಸಲು ಸರಕಾರಕ್ಕೆ ಒಂದು ವಾರದ ಗಡುವು ನೀಡಲಾಗಿದೆ ಎಂದು ಮಾಜಿ ಶಾಸಕರಾದ ಪಿ. ರಾಜೀವ್ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರವ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ಫ್ರೀಡಂ ಪಾರ್ಕ್ ನಲ್ಲಿ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾತ್ರಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಿ. ರಾಜೀವ್ ಅವರು ಸರಕಾರಕ್ಕೆ ನಮ್ಮ ಬೇಡಿಕೆಗಳನ್ನು ಸಲ್ಲಿಸಲಾಗಿದೆ. ‘ಇಂದಿನದು ಕೇವಲ ಟ್ರೈಲರ್ ಮಾತ್ರ; ಪಿಕ್ಚರ್ ಅಭಿ ಬಾಕಿ ಹೈ’ ಎಂದು ಎಚ್ಚರಿಕೆ ನೀಡಿದರು. ಅಧಿಕಾರಿಗಳು ತಮಗೆ ಮನವಿ ಕೊಡುವಂತೆ ಹೇಳಿದ್ದು ನಾವು ಅದಕ್ಕೆ ಒಪ್ಪಲಿಲ್ಲ; ಬಳಿಕ ಹಿರಿಯ ಅಧಿಕಾರಿಗಳನ್ನು ಕಳಿಸುವುದಾಗಿ ಹೇಳಿದ್ದರು. ಅದಕ್ಕೂ ಒಪ್ಪಲಿಲ್ಲ; ಹೋರಾಟವು ಉಗ್ರ ಸ್ವರೂಪ ಪಡೆದಾಗ ಮಾನ್ಯ ಸಚಿವರು ಬಂದು ನಮ್ಮ ಮನವಿ ಸ್ವೀಕರಿಸಿದ್ದಾರೆ ಎಂದು ವಿವರಿಸಿದರು. ಈ ಸರಕಾರಕ್ಕೆ ಒಂದು ವಾರದ ಗಡುವು ಕೊಟ್ಟಿದ್ದೇವೆ. ಒಂದು…
ಹಾಲಿನ ಡೈರಿಗಳ ಅಭಿವೃದ್ಧಿಗೆ ಉತ್ಪಾಕರು, ಸಿಬ್ಬಂದಿಗಳ ಪರಿಶ್ರಮ ಕಾರಣ: ಹೊಸದುರ್ಗ ಶಿಮೂಲ್ ನಿರ್ದೇಶಕ ಬಿಆರ್ ರವಿಕುಮಾರ್
ಚಿತ್ರದುರ್ಗ: ಹಾಲು ಉತ್ಪಾದಕರ ಪರಿಶ್ರಮ ಹಾಗೂ ಸಿಬ್ಬಂದಿಯ ಪ್ರಾಮಾಣಿಕತೆಯಿಂದಲೇ ಇಂದು ಹಾಲಿನ ಡೈರಿಗಳು ಅಭಿವೃದ್ಧಿಯತ್ತ ಸಾಗಲಿಕ್ಕೆ ಅನುಕೂಲವಾಗುತ್ತಿದೆ ಎಂದು ಹೊಸದುರ್ಗದ ಶಿಮೂಲ್ ನಿರ್ದೇಶಕ ಬಿಆರ್ ರವಿಕುಮಾರ್ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಆಲಘಟ್ಟ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಹಮ್ಮಿಕೊಂಡಿದ್ದ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒಕ್ಕೂಟದಿಂದ ದೊರೆಯುವ ಸೌಲಭ್ಯಗಳನ್ನು ಹಾಲು ಉತ್ಪಾದಕರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಜೊತೆಗೆ ಹಾಲು ಉತ್ಪಾದನೆ ಕಡಿಮೆಯಾಗದಂತೆ ಉತ್ಪಾದಕರು ಗಮನಹರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಲಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್, ಚಿತ್ರದುರ್ಗ ಶಿಮೂಲ್ ಉಪವಿಭಾಗಾಧಿಕಾರಿ ಡಾ. ಮುಕುಂದ್ ನಾಯ್ಕ್ , ವಿಸ್ತರಣಾಧಿಕಾರಿ ಜಿ. ರವಿಚಂದ್ರನ್, ಸಿಡಿಒ ರಾಮು, ಆಲಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. https://kannadanewsnow.com/kannada/high-court-recommends-to-the-central-government-to-increase-the-limit-of-maintenance-to-be-paid-by-children-to-their-parents/ https://kannadanewsnow.com/kannada/women-should-be-careful-now-if-they-sleep-wearing-a-bra-at-night/
ಬೆಂಗಳೂರು: ತಂದೆ-ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶದ ಮಿತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು ಮಾಡಿದೆ. 2007ರ ಪೋಷಕರ ಕಲ್ಯಾಣ ಕಾಯ್ದೆಯ ಸೆಕ್ಷನ್ 9ರ ಪರಿಶೀಲನೆ ಅಗತ್ಯವಿದೆ. ಮಕ್ಕಳು ನೀಡಬೇಕಾದ ಗರಿಷ್ಠ ಜೀವನಾಂಶದ ಮಿತಿ 10,000 ಇದೆ. 2007ರ ಜೀವನಾಂಶ ನಿರ್ವಹಣಾ ವೆಚ್ಚಕ್ಕೂ 2025ಕ್ಕೂ ವ್ಯತ್ಯಾಸವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. ಈ ಹಿನ್ನಲೆಯಲ್ಲಿ ಹಣದುಬ್ಬರವನ್ನು ಪರಿಗಣಿಸಿ ಜೀವನಾಂಶದ ಗರಿಷ್ಠ ಮಿತಿ ಹೆಚ್ಚಿಸಬೇಕು ಎಂಬುದಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಅಭಿಪ್ರಾಯ ಪಟ್ಟಿದೆ. ಜೀವನಾಂಶ ವಿಧಿಸಲು 2007ರ ಪೋಷಕರ ಕಲ್ಯಾಣ ಕಾಯ್ದೆಯಲ್ಲಿ ಅವಕಾಶವಿದೆ. ತಂದೆ-ತಾಯಿ ಯೋಗಕ್ಷೇಮ ನಿರ್ಲಕ್ಷಿಸುವ ಮಕ್ಕಳಿಗೆ ವಿಧಿಸುವ ಜೀವನಾಂಶ ಇದಾಗಿದೆ ಎಂದಿದೆ. https://kannadanewsnow.com/kannada/opposition-to-the-selection-of-writer-banu-mustaq-for-the-dussehra-inauguration-three-pils-filed-in-the-high-court/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ದಾಖಲಾಗಿದ್ದಾವೆ. ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಪ್ರತ್ಯೇಕ ಪಿಐಎಲ್ ಗಳು ದಾಖಲಾಗಿದ್ದಾವೆ. ಬೆಂಗಳೂರಿನ ಟಿ.ಗಿರೀಶ್ ಕುಮಾರ್, ಹೆಚ್.ಎಸ್ ಗೌರವ್, ಆರ್ ಸೌಮ್ಯ ಅವರಿಂದ ಪ್ರತ್ಯೇಕ ಪಿಐಎಲ್ ದಾಖಲಾಗಿದ್ದಾವೆ. ಪಿಐಎಲ್ ನಲ್ಲಿ ದಸರಾ ಉದ್ಘಾಟನೆ ಹಿಂದೂ ಸಂಪ್ರದಾಯದಂತೆ ನಡೀಬೇಕು. ಸರ್ಕಾರ ನೀಡಿರುವ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ಕೋರಲಾಗಿದೆ. ಈಗಾಗಲೇ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಪಿಐಎಲ್ ದಾಖಲಿಸಿದ್ದಾರೆ. https://kannadanewsnow.com/kannada/commercial-tax-officer-caught-by-lokayukta-while-accepting-bribe-of-rs-25000-in-bengaluru/ https://kannadanewsnow.com/kannada/a-huge-scandal-in-the-state-the-dead-and-the-names-of-those-suffering-from-illness-have-received-nrega-funds/
ಬೆಂಗಳೂರು: ವಾಣಿಜ್ಯ ತೆರಿಗೆಗೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಮೇಲ್ಮನವಿ ಆದೇಶ ನೀಡಲು 25,000 ಲಂಚ ಸ್ವೀಕರಿಸುತ್ತಿದ್ದಾಗಲೇ ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರದ ವಕೀಲ ಡಿ.ಹೆಚ್ ಗುರುಪ್ರಸಾದ್ ಎಂಬುವರು ವಾಣಿಜ್ಯ ತೆರಿಗೆ ಇಲಾಖೆಗೆ ಸಂಬಂಧಿಸಿದಂತ ಮೇಲ್ಮನವಿ ಆದೇಶ ತಮ್ಮ ಪರವಾಗಿ ನೀಡಲು ಕೋರಿದ್ದರು. ಇದಕ್ಕೆ ಬೆಂಗಳೂರಿನ ಶಾಂತಿನಗರದ ಎಜಿಒ ಜೆಸಿಸಿಟಿ ಅಪೀಲ್-6 ರಾಮಾನುಜ ಎಂಬುವರಿಗೆ ತಿಳಿಸಿದ್ದರು. ದೂರುದಾರರು ಪರವಾಗಿ ಮೇಲ್ಮನವಿ ಆದೇಶ ನೀಡಲು ಎಜಿಒ ರಾಮಾನುಜ ಅವರು 75,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರುದಾರ ಗುರುಪ್ರಸಾದ್ ದೂರಿದ್ದರು. ಈ ದೂರು ಆಧರಿಸಿ ಬೆಂಗಳೂರಿನ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಮೇಲ್ವಿಚಾರಣೆಯಲ್ಲಿ ಪಿಐ ಮಂಜುನಾಥ್, ಆದಿವೇಶ್ ಗುಡಿಗೊಪ್ಪ, ಕೇಶವಮೂರ್ತಿ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. 75,000 ರೂಪಾಯಿಯಲ್ಲಿ ಮುಂಗಡವಾಗಿ 25,000 ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಈ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆಯ ಎಜಿಒ ರಾಮಾನುಜ…
ಬೆಂಗಳೂರು: ಕೋಗಿಲು ಲೇಔಟ್ ನ ಸರ್ವೇ ನಂ-18,22,99 ಮತ್ತು 100ರ ಸರ್ಕಾರಿ ಜಾಗ ಹಾಗೂ ಸ್ಮಶಾನದ ಒತ್ತುವರಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಇಂದು ಯಲಹಂಕದ ತಹಸೀಲ್ದಾರ್ ಕಚೇರಿ ಬಳಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬ್ಯಾಟರಾಯನಪುರ ನಗರ ಮಂಡಲ ಅಧ್ಯಕ್ಷರಾದ ಕೃಷ್ಣಮೂರ್ತಿ, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಅಧ್ಯಕ್ಷ ಹನುಮಂತೇಗೌಡ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಕಂದಾಯ ಸಚಿವರ ಸ್ವಕ್ಷೇತ್ರದಲ್ಲೇ ಸರ್ಕಾರಿ ಭೂಮಿ ಒತ್ತುವರಿ ನಡೆದಿದೆ ಎಂದು ಪ್ರಮುಖರು ಆಕ್ಷೇಪಿಸಿದರು. ಸರ್ಕಾರಿ ಸ್ಮಶಾನ ಸೇರಿದಂತೆ ಜಮೀನು ಒತ್ತುವರಿ ನಡೆದಿದೆ ಎಂದು ದೂರಿದರು. ಒತ್ತುವರಿ ವಿರುದ್ಧ ದೂರು ನೀಡಿದರೂ ಅಧಿಕಾರಿಗಳು ತೆರವು ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಪ್ರತಿಭಟನೆ ಎಂದು ವಿವರಿಸಿದರು. ತಾಲೂಕು ಕಛೇರಿಗೆ ಮುತ್ತಿಗೆ ಹಾಕಿ ಸಚಿವರ ವಿರುದ್ದ ಆಕ್ರೋಶ ಹೊರ ಹಾಕಲು ಬಿಜೆಪಿ ಕಾರ್ಯಕರ್ತರು ಬಂದಿದ್ದರು. ಒತ್ತುವರಿ ತೆರವುಗೊಳಿಸದಿದ್ದಲ್ಲಿ ಸಚಿವರ ಮನೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಲಾಯಿತು. ಪ್ರತಿಭಟನೆ…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳಿಗೆ (ವಿಶೇಷಚೇತನರು, ಗಂಭೀರ ಅನಾರೋಗ್ಯ ಹಾಗೂ ಪತಿ-ಪತ್ನಿ ಪ್ರಕರಣಗಳು) ಸಂಬಂಧಿಸಿದಂತೆ ಕಳೆದ ಒಂದು ವಾರದಿಂದ ನಡೆಸಿದ ಕೌನ್ಸೆಲಿಂಗ್ ವರ್ಗಾವಣೆ ಸಂಪನ್ನಗೊಂಡಿದ್ದು, 561 ಮಂದಿಗೆ ಸ್ಥಳದಲ್ಲೇ ವರ್ಗಾವಣೆ ಆದೇಶ ನೀಡಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಎ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾನದಂಡಗಳಂತೆ ಅಂಗವಿಕಲ ಸೌಲಭ್ಯಕ್ಕೆ ಅರ್ಹರಾದ 61 ಮಂದಿ ಕೌನ್ಸೆಲಿಂಗ್ ವರ್ಗಾವಣೆ ಲಾಭ ಪಡೆದಿದ್ದು, ಗಂಭೀರ ಕಾಯಿಲೆ ಎದುರಿಸುತ್ತಿರುವ 29 ಮಂದಿ ವರ್ಗಾವಣೆಗೊಂಡಿದ್ದಾರೆ, ಹಾಗೆಯೆ 56 ಒಂಟಿ ಮಹಿಳೆಯರು ಸ್ಥಾನ ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಪತಿ-ಪತ್ನಿ ಪ್ರಕರಣಗಳಲ್ಲಿ 213 ಮಂದಿಗೆ ವರ್ಗಾವಣೆ ಸೌಲಭ್ಯ ನೀಡಲಾಗಿದೆ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ಮೂರು ಮಂದಿ ವರ್ಗಾವಣೆಗೆ ಅರ್ಹರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಸೇವೆ ಸಲ್ಲಿಸುತ್ತಿದ್ದ…
ಕನಕಪುರ: “ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ ವಿಚಾರದಲ್ಲಿ ವಿಪಕ್ಷ ನಾಯಕ ಅಶೋಕ್ ಅವರ ಟೀಕೆಗಳ ಬಗ್ಗೆ ಕೇಳಿದಾಗ, “ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಉದ್ಯೋಗವಿಲ್ಲ. ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವೂ ಶೀಘ್ರ ಆಚೆ ಬರಲಿದೆ” ಎಂದು ಹೇಳಿದರು. https://kannadanewsnow.com/kannada/implementation-meeting-of-krishna-upper-canal-project-under-the-leadership-of-cm-siddaramaiah-here-are-the-highlights/ https://kannadanewsnow.com/kannada/women-should-be-careful-now-if-they-sleep-wearing-a-bra-at-night/
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ. • ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ. • ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕ್ರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕ್ರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566ಎಕ್ರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕ್ರೆ ಜಮೀನು…
ಪಂಚಾಂಗ ರೀತ್ಯಾ ಪಿತೃಪಕ್ಷ ಎಂದೇ ಪರಿಗಣಿತವಾಗಿರುವ ಎರಡು ವಾರಗಳ ಅವಧಿ ಭಾದ್ರಪದ ಮಾಸದ ಎರಡನೆಯ ಭಾಗದಲ್ಲಿ ಬಂದು ಮಹಾಲಯ ಅಮಾವಾಸ್ಯೆಗೆ ಪೂರ್ಣಗೊಳ್ಳುತ್ತದೆ. ಈ ಸಮಯದಲ್ಲಿ ಮಕ್ಕಳು ಗತಿಸಿಹೋದ ತಮ್ಮ ಪೂರ್ಜರಿಗೆ ನಡೆಸುವ ಪಿತೃತರ್ಪಣಕ್ಕೆ ನಮ್ಮಲ್ಲಿ ಬಹಳ ಹೆಚ್ಚಿನ ಮಹತ್ವ ಇದೆ. ಈ ತರ್ಪಣವೇ ಶ್ರದ್ಧಾಪೂರ್ವಕವಾಗಿ ತಿಲೋದಕದ ಮೂಲಕ ನಡೆಸುವ ಶ್ರಾದ್ಧವಿಧಿ. ದಕ್ಷಿಣಾಯಣದ ಕನ್ಯಾಮಾಸದಲ್ಲಿ ಸೂರ್ಯನು ಭೂಮಿಗೆ ಅತಿ ಸಮೀಪದಲ್ಲಿರುವುದರಿಂದ ಪಿತೃಪಕ್ಷದಲ್ಲಿ ತರ್ಪಣ ಶ್ರಾದ್ಧಕ್ಕೆ ಹೆಚ್ಚಿನ ಮಹತ್ವವಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ,…










