Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಇಡೀ ವಿಶ್ವವೇ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರನ್ನಾಗಿ ಒಪ್ಪಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 134 ನೇ ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಬೋದಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಉನ್ನತ ವ್ಯಕ್ತಿಯಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಭಾರತೀಯ ಸಂವಿಧಾನವನ್ನು ಡಾ: ಬಿ. ಆರ್.ಅಂಬೇಡ್ಕರ್ ಅವರು ರಚಿಸಿದ್ದಾರೆ, ಭಾರತೀಯ ಸಂವಿಧಾನ ಯಾವುದೇ ವರ್ಗ ಮತ್ತು ಸಮಾಜಕ್ಕೆ ಸಿಮಿತವಾಗಿಲ್ಲ ಎಂದು ಹೇಳಿದರು. ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತೀಯ ಸಂವಿಧಾನವನ್ನು ಅತ್ಯಂತ ಶ್ರೇಷ್ಠ ಸಂವಿಧಾನವೆಂದು ವಿಶ್ವವೇ ಹೇಳಿತು, ಸೂರ್ಯ ಚಂದ್ರ ಇರುವವರೆಗೂ ಅವರು ನೀಡಿರುವ ಕೊಡುಗೆಗಳು ಮತ್ತು ಸಾಧನೆ ಅಜರಾಮರ, ತುಳಿತಕ್ಕೊಳಗಾದವರಿಗೆ ಶಕ್ತಿ ತುಂಬುವ ಕೆಲಸವನ್ನು ಬಾಬಾ ಸಾಹೇಬ್ ಮಾಡಿದ್ದಾರೆ ಎಂದು ತಿಳಿಸಿದರು. ಸಂವಿಧಾನ…
ಬೆಂಗಳೂರು: ಹಸಿದ ಮನೆಯಲ್ಲಿರುವವರಿಗೆ ಶಕ್ತಿ ನೀಡಿದ್ದು ಸಂವಿಧಾನ. ನಾವ್ಯಾರೂ ಇದೇ ಜಾತಿಯಲ್ಲಿ ಅರ್ಜಿ ಹಾಕಿಕೊಂಡು ಹುಟ್ಟಬೇಕೆಂದು ಹುಟ್ಟಿಲ್ಲ. ಸತ್ತರೆ ಇತಿಹಾಸ, ಜಯಿಸಿದರೆ ಶಕ್ತಿ ಎಂದು ಅಂಬೇಡ್ಕರರು ನಂಬಿದ್ದರು. ನಾನು ಪ್ರತಿದಿನ ಅಂಬೇಡ್ಕರರನ್ನ ಸ್ಮರಿಸಿಯೇ ನನ್ನ ಕಾರ್ಯಗಳನ್ನ ಆರಂಭಿಸುತ್ತೇನೆ, ಅವರು ನನ್ನ ಜೀವನದ ಆದರ್ಶ ಎಂಬುದಾಗಿಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತೀಯರ ಬದುಕಿಗೆ ರೂಪ ಕೊಟ್ಟಿದ್ದು ಅಂಬೇಡ್ಕರ್. ವಿಶ್ವದ ಎಲ್ಲೆಡೆ ನಮ್ಮ ಭಾರತದ ಸಂವಿಧಾನವನ್ನ ಮೆಚ್ಚಿಕೊಳ್ಳುತ್ತಾರೆ ಎಂದರೆ ಅದಕ್ಕೆ ಅಂಬೇಡ್ಕರರು ಕಾರಣ. ಎಲ್ಲ ಧರ್ಮ ಗ್ರಂಥಗಳೂ ಎಲ್ಲರ ರಕ್ಷಣೆಯೇ ಮುಖ್ಯವೆಂದಿದೆ, ಅದನ್ನೇ ಸಂವಿಧಾನವೂ ಹೇಳಿದೆ ಎಂದರು. ಅಂಬೇಡ್ಕರ್ ಕೇವಲ ದಲಿತರಿಗಷ್ಟೇ ಅಲ್ಲ, ಭಾರತದ ಪ್ರತಿ ಪ್ರಜೆಗೂ ದೇವರ ಸ್ವರೂಪ. ಭಾರತದ ಸಂವಿಧಾನವನ್ನು ಅರ್ಪಿಸಿಕೊಂಡ ಸಂಸತ್ ನಲ್ಲಿ ಅಂಬೇಡ್ಕರ್ ಅವರಿಗೆ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಅವಮಾನವಾಗಿದೆ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ…
ಚಿತ್ರದುರ್ಗ: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ವಿವಿಧೆಡೆ ದಿನಾಂಕ: 15.04.2025 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪೌರಯುಕ್ತರು ನಗರಸಭೆ ಹಿರಿಯೂರು ರವರ ಕೋರಿಕೆಯಂತೆ ಹಿರಿಯೂರು ಪಟ್ಟಣದಲ್ಲಿ ಟಿ.ಬಿ.ಸರ್ಕಲ್ ನಿಂದ ತಾಲ್ಲೂಕುಕಛೇರಿ ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಾಗು ಹಿರಿಯೂರು ನಗರ ವ್ಯಾಪ್ತಿಯ ಬೈಪಾಸ್ ಬಳಿ ತುರ್ತುನಿರ್ವಾಹ ಕಾಮಗಾರಿ ಇರುವ ಪ್ರಯುಕ್ತ ದಿನಾಂಕ: 15.04,2025 ರಂದು ಬೆಳಿಗ್ಗೆ:10.00 ರಿಂದ ಸಂಜೆ :05.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ಹಿರಿಯೂರು ಪಟ್ಟಣದ ಪ್ರದೇಶಗಳಲ್ಲಿ ಹಾಗು ತಾಲ್ಲೂಕಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಹಿರಿಯೂರು ಪಟ್ಟಣದ ಅವಧಾನಿನಗರ ತಾಲ್ಲೂಕು ಕಛೇರಿ ಹಾಗು ತಾಲ್ಲೂಕು ಕಛೇರಿ ಸುತ್ತಮುತ್ತ ಹಿರಿಯೂರು ಬೈಪಾಸ್ ಆಜಾದ್ನಗರ ಚಿಕ್ಕಪೇಟೆ ಸೇರುದಟ್ಟೆಶ್ವರ ದೇವಸ್ಥಾನದ ಸುತ್ತಮುತ್ತ ಗಾಂಧಿವೃತ್ತ ಹುಳಿಯೂರುರಸ್ತೆಯ ಜಯಣ್ಣ ಪೆಟ್ರೋಲ್ ಬಂಕ್ ಸುತ್ತಮುತ್ತ ಹಾಗು ಸುತ್ತ ಲಕ್ಕವ್ವನಹಳ್ಳಿ, ದೊಡ್ಡಘಟ್ಟ, ಸೀಗೇಹಟ್ಟಿ, ಆದಿವಾಲ ಆದಿದಲಪಾರಂ ಪಟ್ನಹಳ್ಳಿ, ಆದಿವಾಲ…
ಬೆಂಗಳೂರು: 2023-24 ನೇ ಸಾಲಿಗಿಂತ 2024-25ನೇ ಸಾಲಿನಲ್ಲಿ ರೂ.1,000 ಕೋಟಿಗಳಿಗಿಂತ ಹೆಚ್ಚಿನ ಮೊತ್ತದ ಆಸ್ತಿ ತೆರಿಗೆ ಸಂಗ್ರಹಣೆಯಾಗಿದೆ. 2023-24 ನೇ ಸಾಲಿನಲ್ಲಿ ರೂ. 3,918 ಕೋಟಿ ಆಸ್ತಿ ತೆರಿಗೆ ಸಂಗ್ರಹಣೆಯಾಗಿತ್ತು. ಪ್ರಸಕ್ತ 2025-26ನೇ ಹಣಕಾಸು ವರ್ಷದಲ್ಲಿ ಪಾಲಿಕೆಯು ರೂ.6,000 ಕೋಟಿ ಮೊತ್ತದ ಆಸ್ತಿ ತೆರಿಗೆ ಸಂಗ್ರಹಣೆಯನ್ನು ಮೀರಲಿದೆ. 2016 ರಂತೆಯೇ ಮುಂದುವರಿದ ಆಸ್ತಿ ತೆರಿಗೆ ದರಗಳನ್ನು ಹೆಚ್ಚಿಸದೆ ಇರುವುದರಿಂದ ಇದೆಲ್ಲವೂ ಸಾಧ್ಯವಾಯಿತು. 2024-25 ರಲ್ಲಿ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳ ಸಾಧಿಸಿದ್ದು ಈ ಕೆಳಕಂಡ ಅಂಶಗಳಿಂದ: 1. ಒಂದು ಬಾರಿ ಪರಿಹಾರ ಯೋಜನೆ (OTS) 2. ಬಾಕಿ ಮತ್ತು ಪ್ರಸ್ತುತ ತೆರಿಗೆ ಬಾಕಿಗಳ ಮೇಲೆ ಬಹಳ ವ್ಯವಸ್ಥಿತ ಕೆಲಸ ನಿರ್ವಹಣೆ ಮತ್ತು ತಂತ್ರಜ್ಞಾನ ಆಧಾರಿತ ಅನುಸರಣೆ. 3. ಬಾಕಿ ಆಸ್ತಿ ತೆರಿಗೆಗಳನ್ನು ವಸೂಲಿ ಮಾಡಲು ಸಂಪೂರ್ಣವಾಗಿ ಪರಿಣಾಮಕಾರಿ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳು ಮತ್ತು ನಿಯಮಗಳನ್ನು ಹೊರಡಿಸಲಾಗಿತ್ತು. 4. ಬಾಕಿ ಹಾಗೂ ಪ್ರಸ್ತುತ ಸಾಲಿನ ಆಸ್ತಿ ತೆರಿಗೆಯ ವಸೂಲಾತಿಗೆ ಮನೆ- ಮನೆಗಳಿಗೆ ನಿರಂತರವಾಗಿ ಭೇಟಿ…
ಕೋಲಾರ: ಮುಸ್ಲೀಂಮರು ಭಾರತದ ಪ್ರಜೆಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜಾ ಪ್ರಭುತ್ವದಲ್ಲಿ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಹಕ್ಕಿದೆ. ಜನಸಂಖ್ಯೆ ಆಧಾರದ ಮೇಲೆ ಹಕ್ಕುಗಳು ಸಿಗುತ್ತವೆ ಎಂದರು. ಎಲ್ಲಾ ವರ್ಗದವರಿಗೂ ಅವರ ಹುಕ್ಕು ಸಿಗಬೇಕು. ಮುಸ್ಲೀಂಮರು ಭಾರತೀಯ ಪ್ರಜೆಗಳು ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಪ್ರಧಾನಿ ಮೋದಿಯ ಟೀಕೆಗೆ ತಿರುಗೇಟು ನೀಡಿದ್ದಾರೆ. https://kannadanewsnow.com/kannada/muda-case-against-cm-siddaramaiah-court-to-pronounce-verdict-on-acceptance-of-b-report-tomorrow/ https://kannadanewsnow.com/kannada/attention-our-metro-passengers-4-additional-trains-will-run-in-these-areas-of-bengaluru-today/
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್ ನಾಳೆ ಬಿ-ರಿಪೋರ್ಟ್ ತಿರಸ್ಕಾರ, ಅಂಗೀಕಾರದ ಬಗ್ಗೆ ತೀರ್ಪು ಪ್ರಕಟಿಸಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ 14 ಮುಡಾ ಸೈಟ್ ಹಗರಣ ಸಂಬಂಧ ನಾಳೆ ಮಹತ್ವದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಹೀಗಾಗಿ ಎಲ್ಲರ ಚಿತ್ತ ಜನಪ್ರತಿನಿಧಿಗಳ ತೀರ್ಪಿನತ್ತ ನೆಟ್ಟಿದೆ. ಮುಡಾ ಹಗರಣದಲ್ಲಿ ಬಿ-ರಿಪೋರ್ಟ್ ಸಲ್ಲಿಸಿದ್ದಂತ ಲೋಕಾಯುಕ್ತದ ನಿರ್ಧಾರವನ್ನು ದೂರುದಾರ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನಾಳೆಗೆ ತನ್ನ ತೀರ್ಪು ಕಾಯ್ದಿರಿಸಿತ್ತು. ನಾಳೆ ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಲ್ಲಿಸಿರುವಂತ ಬಿ-ರಿಪೋರ್ಟ್ ಅನ್ನು ಅಂಗೀಕರಿಸುವ, ತಿರಸ್ಕರಿಸುವಂತ ನಿರ್ಧಾರವನ್ನು ಆದೇಶದ ಮೂಲಕ ಪ್ರಕಟಿಸಲಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಮುಡಾ ಹಗರಣದ ಆರೋಪಿಗಳಿಗೆ…
ಬೆಂಗಳೂರು : ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ…
ಶಿವಮೊಗ್ಗ : ಜಾತ್ಯಾತೀತವಾಗಿ, ಪಕ್ಷಾತೀತವಾಗಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳಂತೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ತೋರಿಸಿರುವ ಹಾದಿಯಲ್ಲಿ ಒಟ್ಟಾಗಿ ನಡೆಯೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ರವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಘಟನೆಯಿAದ ಮಾತ್ರ ಶಕ್ತಿ ಎಂದು ಅಂಬೇಡ್ಕರ್ರವರು ತೋರಿಸಿದ್ದಾರೆ. ಸಂಘಟನೆ ರೂಪ ಬೇರೆ ಬೇರೆಯಾಗಿದ್ದರೂ ಉದ್ದೇಶ ಒಂದೇ ಇರುತ್ತದೆ. ಅಂದು ಬ್ರಿಟಿಷರಿಗೆ ಹೆಚ್ಚಿನ ಶಕ್ತಿ ಇರಲಿಲ್ಲ. ಬದಲಾಗಿ ಅವರು ನಮ್ಮನ್ನು ಒಡೆದು ಆಳುವ ನೀತಿಯನ್ನು ಅನುಸರಿಸಿದ್ದರಿಂದ ಹಾಗೆ ಕಂಡರು. ಎಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಅಂಬೇಡ್ಕರ್ರAತಹ ಮಹನೀಯರು ಮಾಡಿದರು. ವೈವಿಧ್ಯತೆಯಿಂದ ಕೂಡಿರುವ ನಮ್ಮ ದೇಶಕ್ಕೆ ಅದ್ಭುತವಾದ ಸಂವಿಧಾನ ನೀಡುವಲ್ಲಿ ಬಹು…
ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯುತ್ತದೆ. ಬಂಧೂಗಳೇ ಪ್ರತಿಯೊಬ್ಬ ಮನುಷ್ಯನೂ ಮುಂದುವರೆಯ ಬೇಕು ಎಂದರೆ ಮಹಾ ಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ ಆಗುತ್ತದೆ ಯಾವುದೇ ಒಂದು ಕ್ಷೇತ್ರದಲ್ಲಿ ನೋಡಿದರೂ ಹಣ ಬೇಕೆ ಬೇಕು ಎಂತಹ ಕ್ಷೇತ್ರದಲ್ಲಿ ಅಂತಿಮವಾಗಿ ಹಣವೇ ಒಂದು ಅಂತಿಮವಾಗಿ ಗೋಚರಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ…
ಬೆಂಗಳೂರು: ನಗರದಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಪರಾರಿಯಾಗಿದ್ದಂತ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಂತೋಷ್ ಎಂಬುದಾಗಿ ಗುರುತಿಸಲಾಗಿದೆ. ಏಪ್ರಿಲ್.3ರಂದು ಬೆಂಗಳೂರಿನ ಎಸ್ ಜಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾನೆ ಯುವತಿಯ ಮೇಲೆ ಎರಗಿದ್ದಂತ ಕಾಮುಕ ಆರೋಪಿ ಸಂತೋಷ್, ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು. ಕಳೆದ 10 ದಿನಗಳಿಂದ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಇಂದು ಕೇರಳದಲ್ಲಿ ಆರೋಪಿ ಸಂತೋಷ್ ನನ್ನು ಬಂಧಿಸಿರುವಂತ ಎಸ್ ಜಿ ಪಾಳ್ಯ ಪೊಲೀಸರು, ಬೆಂಗಳೂರಿಗೆ ಕರೆತರುತ್ತಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಏಪ್ರಿಲ್.3ರಂದು ತನ್ನ ಸ್ನೇಹಿತೆ ಜೊತೆಗೆ ಯುವತಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ಲೈಂಗಿಕ ದೌರ್ಜನ್ಯವನ್ನು ಎಸಗಿ ಆರೋಪಿ ಪರಾರಿಯಾಗಿದ್ದನು. ಸಂತ್ರಸ್ತೆ ಹಾಗೂ ಆರೋಪಿಗೂ ಯಾವುದೇ ಪರಿಚಯ ಇರಲಿಲ್ಲ. ಘಟನೆಯ ಬಳಿಕ ಬೆಂಗಳೂರು ನಗರ ತೊರೆದು ಪರಾರಿಯಾಗಿದ್ದನು. ಈ ಘಟನೆಯ ಸಂಬಂಧ ಸ್ಥಳೀಯ ನಿವಾಸಿಯೊಬ್ಬರು ಎಸ್ ಜಿ ಪಾಳ್ಯ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆದರಿಸಿ ಡಿಸಿಪಿ ಸಾರಾ…











