Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸುರೇಶ್ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂತಹ ದಿಟ್ಟ ನಿರ್ಧಾರವನ್ನು ಕೈಗೊಂಡಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಪ್ರಥಮ ಎಂದು ಹೇಳಿದರು. ಈ ಹಿಂದೆ ಯಾವುದೇ ಸರ್ಕಾರವಾಗಲೀ, ಮುಖ್ಯಮಂತ್ರಿಗಳಾಗಲೀ ಮಹಾನಗರ ಪಾಲಿಕೆಗಳಿಗೆ ಇಷ್ಟೊಂದು ಪ್ರಮಾಣದ ಅನುದಾನವನ್ನು ನೀಡಿರಲಿಲ್ಲ. ಸರ್ಕಾರದ ಈ ವಿಶೇಷ ಅನುದಾನ ಪ್ರತಿಯೊಂದು ಪಾಲಿಕೆಗಳಿಗೂ ತಲುಪಲಿದ್ದು, ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಲಿದೆ ಎಂದರು. ಇದಕ್ಕೂ ಮುನ್ನ ಸದಸ್ಯ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂಖಾನ್ ಅವರ ಪರವಾಗಿ ಉತ್ತರ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಉತ್ತರ ಕನ್ನಡ ಜಿಲ್ಲೆಯ…
ಬೆಳಗಾವಿ ವಿಧಾನಸಭೆ: ಹುಬ್ಬಳ್ಳಿ-ಧಾರವಾಡ ಮಹಾ ನಗರಪಾಲಿಕೆಯನ್ನು ವಿಭಜನೆ ಮಾಡುವ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ರಾಜ್ಯಪಾಲರು ಅಂಕಿತ ಹಾಕಬೇಕಿದ್ದು, ಸಹಿ ಹಾಕಿದ ನಂತರ ವಿಭಜನೆ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಅಬ್ಬಯ್ಯ ಪ್ರಸಾದ್ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಹುಬ್ಬಳ್ಳಿ –ಧಾರವಾಡ ಮಹಾ ನಗರಪಾಲಿಕೆಯನ್ನು ವಿಭಜನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಏಳು ತಿಂಗಳುಗಳೇ ಕಳೆದಿವೆ. ಈ ಕಡತಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಹೀಗಾಗಿ ಸರ್ಕಾರದ…
ನವದೆಹಲಿ: ಕೇಂದ್ರ ಸಚಿವ ಸಂಪುಟದ ನಿರ್ಧಾರಗಳ ಕುರಿತು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು, “2027 ರ ಜನಗಣತಿಗಾಗಿ 11,718 ಕೋಟಿ ರೂಪಾಯಿಗಳ ಬಜೆಟ್ ಅನ್ನು ಸಂಪುಟ ಅನುಮೋದಿಸಿದೆ ಎಂದು ಹೇಳುತ್ತಾರೆ. https://twitter.com/ANI/status/1999428214977101859 2027 ರಲ್ಲಿ ಜನಗಣತಿ ನಡೆಸಲು ಕೇಂದ್ರ ಸಚಿವ ಸಂಪುಟ ಶುಕ್ರವಾರ 11,718 ಕೋಟಿ ರೂ.ಗಳ ಬಜೆಟ್ ಅನ್ನು ಅನುಮೋದಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, ದಶಕದ ವಾರ್ಷಿಕ ಜನಗಣತಿ ಕಾರ್ಯದ ಮಹತ್ವವನ್ನು ಒತ್ತಿ ಹೇಳಿದರು, ಜನಗಣತಿಯನ್ನು “ಭಾರತಕ್ಕೆ ಒಂದು ಪ್ರಮುಖ ಕಾರ್ಯ” ಎಂದು ಕರೆದರು. ಕೊನೆಯ ರಾಷ್ಟ್ರವ್ಯಾಪಿ ಜನಗಣತಿಯನ್ನು 2011 ರಲ್ಲಿ ನಡೆಸಲಾಯಿತು, 2021 ರ ಸುತ್ತನ್ನು COVID-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಂದೂಡಲಾಯಿತು. ಮುಂದಿನ ಜನಗಣತಿಯನ್ನು 2027 ರಲ್ಲಿ ನಡೆಸಲಾಗುವುದು ಎಂದು ಸರ್ಕಾರ ಈಗ ದೃಢಪಡಿಸಿದೆ, ಉಲ್ಲೇಖ ದಿನಾಂಕವನ್ನು ಮಾರ್ಚ್ 1, 2027 ರಂದು 00:00 ಗಂಟೆಗೆ ನಿಗದಿಪಡಿಸಲಾಗಿದೆ. https://kannadanewsnow.com/kannada/mandya-mla-ganiga-ravikumar-has-issued-this-challenge-to-union-minister-h-d-kumaraswamy/ https://kannadanewsnow.com/kannada/big-news-attention-state-government-employees-just-apply-for-the-arogya-sanjeevini-yojana-like-this/
ಮಂಡ್ಯ: ಕುಮಾರಣ್ಣ ಅತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ ಎಂಬುದಾಗಿ ಕೇಂದ್ರ ಸಚಿವ ಹೆಚ್ಡಿಕೆ ಬಹಿರಂಗ ಸವಾಲ್ ಅನ್ನು ಶಾಸಕ ಗಣಿಗ ರವಿಕುಮಾರ್ ಹಾಕಿದ್ದಾರೆ. ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಮಾತನಾಡಿ, ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ ಪತ್ರ ಬರೆದಿದ್ದಾರೆ, ಸ್ವಾಗತ ಕೋರುತ್ತೇನೆ. ಇದು ಸುಮಲತಾ ಎಂಪಿ ಆಗಿದ್ದಾಗ ಬಂದಂತಹ ಕಾರ್ಯಕ್ರಮವಾಗಿದೆ. ಮಂಡ್ಯದ ಆಸ್ಪತ್ರೆಯ ಪಕ್ಕದಲ್ಲೇ ಜಾಗ ಕೊಡಲು ಸಿದ್ದ ಇದ್ದೇವೆ. ಕೇಂದ್ರ ಸರ್ಕಾರ ಕುಂಟುತ್ತಾ ಇದಕ್ಕೆ ಒಪ್ಪಲಿಲ್ಲ. ನೂರೆಂಟು ಸಬೂಬೂ ಹೇಳಿ ಸ್ಟಾಪ್ ಮಾಡಿದ್ರು. ನಮ್ಮ ಪ್ರಭಾವಿ ಕೇಂದ್ರ ಸಚಿವ ಹೆಚ್ಡಿಕೆ ಅವರು ಜಾಗ ಕೇಳಿದ್ದಾರೆ. ಕಳೆದ ಕೆಡಿಪಿ ಸಭೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಅನ್ನ ಮದ್ದೂರಿಗೆ ಶಾಸಕರು ಕೇಳಿದ್ರು. ಸಚಿವ ಚಲುವರಾಯಸ್ವಾಮಿ ಕೂಡ ಒಪ್ಪಿಗೆ ಸೂಚಿಸಿದ್ರು. ಆದ್ರೇ ಕೇಂದ್ರ ಸಚಿವರು ಮದ್ದೂರಿಗೆ ನಿರಾಕರಿಸಿದ್ರೆ ನಾವು ಜಾಗ ಕೊಡಲು ರೆಡಿ…
ನವದೆಹಲಿ: ಡ್ಯಾನಿಶ್ ಔಷಧ ಕಂಪನಿ ನೊವೊ ನಾರ್ಡಿಸ್ಕ್ ಅಂತಿಮವಾಗಿ ತನ್ನ ಜನಪ್ರಿಯ ಮಧುಮೇಹ ಔಷಧ ಓಜೆಂಪಿಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. 0.25 ಮಿಗ್ರಾಂ ಆರಂಭಿಕ ಡೋಸ್ನ ಬೆಲೆಯನ್ನು ವಾರಕ್ಕೆ ₹2,200 ಕ್ಕೆ ನಿಗದಿಪಡಿಸಿದೆ. ರಾಯಿಟರ್ಸ್ ವರದಿಯ ಪ್ರಕಾರ, ಕಂಪನಿಯು ದೇಶದಲ್ಲಿ ಚುಚ್ಚುಮದ್ದಿನ ಔಷಧವನ್ನು 0.25 ಮಿಗ್ರಾಂ, 0.5 ಮಿಗ್ರಾಂ ಮತ್ತು 1 ಮಿಗ್ರಾಂ ಸಾಮರ್ಥ್ಯದಲ್ಲಿ ಮಾರಾಟ ಮಾಡಲಿದೆ. ಗಮನಾರ್ಹವಾಗಿ, ಓಜೆಂಪಿಕ್ ಟೈಪ್ 2 ಮಧುಮೇಹಕ್ಕೆ ಚುಚ್ಚುಮದ್ದಿನ ಔಷಧವಾಗಿದೆ ಮತ್ತು ವಾರಕ್ಕೊಮ್ಮೆ ತೆಗೆದುಕೊಳ್ಳಬೇಕು. ಭಾರತದಲ್ಲಿ ಓಜೆಂಪಿಕ್ ಬೆಲೆ ಟೈಪ್ 2 ಮಧುಮೇಹ ಹೊಂದಿರುವ ಜನರಿಗೆ 2017 ರಲ್ಲಿ ಯುಎಸ್ ಆಹಾರ ಮತ್ತು ಔಷಧ ಆಡಳಿತವು ಸಾಪ್ತಾಹಿಕ ಇಂಜೆಕ್ಷನ್ ಅನ್ನು ಅನುಮೋದಿಸಿತು. ಅಂದಿನಿಂದ, ಇದು ಜಾಗತಿಕವಾಗಿ ಹೆಚ್ಚು ಮಾರಾಟವಾದ ಔಷಧವಾಗಿದೆ. ಅದರ ಹಸಿವು ಕಡಿಮೆ ಮಾಡುವ ಪರಿಣಾಮಗಳಿಂದಾಗಿ ತೂಕ ನಷ್ಟಕ್ಕೆ ಹೆಚ್ಚಾಗಿ ಲೇಬಲ್ನಿಂದ ಹೊರಗೆ ಬಳಸಲಾಗುತ್ತದೆ. ಔಷಧದ ಕಡಿಮೆ ಡೋಸ್ ಅನ್ನು ವಾರಕ್ಕೆ ₹2,200 ಬೆಲೆಗೆ ಮಾರಾಟ ಮಾಡಲಾಗುವುದು. ರಾಯಿಟರ್ಸ್ ವರದಿಯ ಪ್ರಕಾರ…
ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಸ್ಟೇಷನ್ ಮಹೋತ್ಸವವನ್ನು ಬಾಗೇಶಪುರ ರೈಲು ನಿಲ್ದಾಣದಲ್ಲಿ ಸ್ಥಳೀಯರು ಸೇರಿ ಉತ್ಸಾಹದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ರೈಲ್ವೆ ನೌಕರರಾದ ಗೋವಿಂದ ಗೌಡ ಮತ್ತು ದೂರದರ್ಶಕ ಪ್ರದರ್ಶನಕ್ಕಾಗಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷಿಯನ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿಗಳನ್ನು ಪಡೆದ ಕು. ಗಗನ್ ಬಿ.ಎಲ್. ಅವರನ್ನು ಗೌರವಿಸಲಾಯಿತು. ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ಮೆರಗು ನೀಡಿದವು. 1960ರಲ್ಲಿ ನಿರ್ಮಿಸಲಾದ ಬಾಗೇಶಪುರ ರೈಲು ನಿಲ್ದಾಣವು ವಸಾಹತುಶಾಹಿ ವಾಸ್ತುಶಿಲ್ಪ ಹಾಗೂ ಜನಪದ ವಾಸ್ತುಶೈಲಿಗಳ ವಿಶಿಷ್ಟ ಸಂಯೋಜನೆಯನ್ನು ಪ್ರತಿಬಿಂಬಿಸುತ್ತದೆ. ಹಳೆಯ ಮೈಸೂರು ಪ್ರದೇಶದ ಅನೇಕ ಪಾರಂಪರಿಕ ರೈಲು ನಿಲ್ದಾಣಗಳಿಗೆ ಸೇರಿರುವ ಸಂಯುಕ್ತ ವಾಸ್ತು ವಿನ್ಯಾಸವನ್ನು ಈ ನಿಲ್ದಾಣದ ಕಟ್ಟಡ ಹೊಂದಿದೆ. ಮುಖ್ಯ ಕಟ್ಟಡವು ನಾಲ್ಕು ದಿಕ್ಕುಗಳಿಗೆ ವಿಸ್ತರಿಸಿರುವ ಮಂಗಳೂರು ಟೈಲ್ಸ್ನ ಗೇಬಲ್ ಛಾವಣಿಯನ್ನು ಹೊಂದಿದ್ದು, ಪ್ರತಿಯೊಂದು ಗೇಬಲ್ನಲ್ಲಿ ವೃತ್ತಾಕಾರದ ಗಾಜಿನ ಕಿಟಕಿಯು ಅಲಂಕರಿಸಿದೆ. ಸಣ್ಣ ವರಾಂಡಾ ಮತ್ತು ಕಟ್ಟಡದ ಸುತ್ತಲಿನ ಕಡಪ ಕಲ್ಲಿನ ನೆಲಹಾಸು…
ಬೆಳಗಾವಿ: ಜಿಲ್ಲೆಯಲ್ಲಿ ಸಚಿವ ಮಂಕಾಳು ವೈದ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ರೈತರು ತಮ್ಮ ಆಕ್ರೋಶವನ್ನು ಹೊರ ಹಾಕಿರುವಂತ ಘಟನೆ ನಡೆದಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿಯಲ್ಲಿ ಅಧಿವೇಶನದ 5ನೇ ದಿನವೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರ ಹೋರಾಟ ಮುಂದುವರೆದಿದೆ. ಸುವರ್ಣ ಸೌಧದ ಹೊರಗೆ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಬೆಳಗಾವಿಯ ಆಲಾರವಾಡ್ ಕ್ರಾಸ್ ಬಳಿಯಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಸಚಿವ ಮಂಕಾಳು ವೈದ್ಯ ಕಾರಿಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ರೈತರ ಸಮಸ್ಯೆ ಆಲಿಸಿ ವಾಪಾಸ್ ಆಗುವಾಗ ಸಚಿವ ಮಂಕಾಳು ವೈದ್ಯಗೆ ರೈತರು ಮುತ್ತಿಗೆ ಹಾಕಿದ್ದಾರೆ. ಸುವರ್ಣ ವಿಧಾನಸೌಧದ ಬಳಿಯಲ್ಲಿ ರಾಜ್ಯದ ವಿವಿಧ ಕಡೆಯಿಂದ ಆಗಮಿಸಿರುವಂತ ರೈತರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/steps-to-make-belgaums-mini-zoo-more-attractive-crocodiles-and-snakes-will-be-introduced-minister-ishwar-khandre/ https://kannadanewsnow.com/kannada/big-news-attention-state-government-employees-just-apply-for-the-arogya-sanjeevini-yojana-like-this/
ಬೆಳಗಾವಿ : ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶೀಘ್ರವೇ ಸರೀಸೃಪ (ಹಾವು) ಹಾಗೂ ಮೊಸಳೆಗಳ ಆವರಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡಿ ಮೊಸಳೆ ಮತ್ತು ಸರೀಸೃಪಗಳ ಆವರಣದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಅವರು, 50 ಲಕ್ಷ ರೂ. ವೆಚ್ಚದಲ್ಲಿ ಮೊಸಳೆ ಆವರಣ ಮತ್ತು 40.8ಲಕ್ಷ ವೆಚ್ಚದಲ್ಲಿ ಸರೀಸೃಪಗಳ ಆವರಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಶೀಘ್ರವೇ 2 ಮೊಸಳೆ ಹಾಗೂ ಹೆಬ್ಬಾವು, ಕಾಳಿಂಗ ಸರ್ಪ, ಮಂಡಲ ಸೇರಿದಂತೆ 12 ಹಾವುಗಳನ್ನು ಈ ಆವರಣದಲ್ಲಿ ಬಿಡಲಾಗುವುದು ಎಂದು ವಿವರಿಸಿದರು. ಇದರ ಜೊತೆಗೆ ಮೃಗಾಲಯಕ್ಕೆ ಬರುವ ಸಂದರ್ಶಕರಿಗೆ ವನ್ಯಜೀವಿಗಳ ಬಗ್ಗೆ ಮತ್ತು ಮೃಗಾಲಯದ ಬಗ್ಗೆ ಮಾಹಿತಿ ನೀಡುವ ಸಾಕ್ಷ್ಯಚಿತ್ರಪ್ರದರ್ಶನ ಮಾಡಲು ಆಪ್ತ ಚಿತ್ರಮಂದಿರ ನಿರ್ಮಿಸಲಾಗಿದ್ದು ಶೀಘ್ರವೇ ಇದನ್ನು ಲೋಕಾರ್ಪಣೆ ಮಾಡಲಾಗುವುದು ಎಂದೂ ತಿಳಿಸಿದರು. ಮೃಗಾಲಯದ ಆವರಣದಲ್ಲಿ ಸಂದರ್ಶಕರ ವಾಹನ ನಿಲುಗಡೆಗೆ ವಿಶಾಲ ಸ್ಥಳ, ವೀರವನಿತೆ ಕಿತ್ತೂರು ರಾಣಿ…
ಬೆಳಗಾವಿ ಸುವರ್ಣಸೌಧ : ಕೇಂದ್ರ ಸರ್ಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಲಾಭ ಮಾಡಿವೆ. ಇದರಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮೇಲ್ಮನೆಗಿಂದು ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಉತ್ತರ ಕರ್ನಾಟಕದ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಮಳೆ, ಪ್ರವಾಹದಿಂದ ಬೆಳೆ ಹಾನಿ ಆದಾಗ 3 ದಿನಗಳ ಒಳಗಾಗಿ ವೆಬ್ ಲಿಂಕ್ ಅಥವಾ ದೂರವಾಣಿ ಮುಖಾಂತರ ಮಾಹಿತಿ ನೀಡಬೇಕು ಎಂಬ ಷರತ್ತಿದೆ. ಆದರೆ ಖಾಸಗಿ ಕಂಪನಿಗಳ ಫೋನ್ ಮತ್ತು ವೆಬ್ ಲಿಂಕ್ ಕಾರ್ಯ ನಿರ್ವಹಿಸುವುದಿಲ್ಲ. ಬೆಳೆ ಹಾನಿಯಾದವರು ಮಾಹಿತಿ ನೀಡಿಲ್ಲ ಎಂದು ಪರಿಹಾರ ನೀಡುವುದಿಲ್ಲ. ಇಂತಹ ಸಾಕಷ್ಟು ನ್ಯೂನತೆಗಳಿವೆ ಎಂದರು. ಬೆಳೆ ಕಟಾವು ಪ್ರಯೋಗದಲ್ಲಿ 7 ವರ್ಷದ ಅಂದಾಜಿನಲ್ಲಿ 5 ವರ್ಷದ ಇಳುವರಿಯ ಸರಾಸರಿ ತೆಗೆದುಕೊಳ್ಳುವ ವಿಚಾರದಲ್ಲೂ ವೈಜ್ಞಾನಿಕವಾಗಿ ನಿಗದಿ ಮಾಡುವುದಿಲ್ಲ…
ಮಂಡ್ಯ: ರಾಜ್ಯ ಸರಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆಗೆ ಮಂಡ್ಯ ಜಿಲ್ಲೆಯಲ್ಲಿ 12 ಆಸ್ಪತ್ರೆಗಳು ಸೇರ್ಪಡೆಯಾಗಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಗೆ ಸ್ವಯಂ ಪ್ರೇರಣೆಯಿಂದ ಒಳಪಡಬೇಕೆಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು (ಡಿ.12) ದಿನ ಜಿಲ್ಲಾಧಿಕಾರಿಗಳ ಕಚೇರಿಯ ನಗರದ ಪ್ರಮುಖ ಆಸ್ಪತ್ರೆಗಳ ವೈದ್ಯರ ಹಾಗೂ ಮುಖ್ಯಸ್ಥರ, ಪ್ರತಿನಿಧಿಗಳ ಸಭೆ ಜರುಗಿಸಿ, ಮಾತನಾಡಿದರು. ಜಿಲ್ಲೆಯಲ್ಲಿರುವ 18 ಸಾವಿರ ಸರ್ಕಾರಿ ನೌಕರರಿದ್ದಾರೆ. ಅವರ ಮಾನಸಿಕ, ದೈಹಿಕ ಆರೋಗ್ಯವು ಉತ್ತಮ ಆಡಳಿತ ದೃಷ್ಠಿಯಿಂದ ಮುಖ್ಯವಾಗಿದೆ. ಸರ್ಕಾರವು ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಆರೋಗ್ಯ ಯೋಜನೆಯ ಲಾಭವು ನಮ್ಮ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ತಲುಪಿಸಿ, ಯಶಸ್ವಿಗೊಳಿಸಲು ಖಾಸಗಿ ಆಸ್ಪತ್ರೆಗಳ ಸಹಕಾರವು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಪ್ರತಿನಿತ್ಯ ಜಿಲ್ಲೆಯ…














