Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶುಪಾಲನಾ ವಿಭಾಗದ ವತಿಯಿಂದ ಸಮುದಾಯ (ಬೀದಿ) ನಾಯಿಗಳಿಗೆ ಆಹಾರ ನೀಡುವ ಸಲುವಾಗಿ ಟೆಂಡರ್ ಆಹ್ವಾನಿಸಲಾಗಿದ್ದು, ಇದರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ನಂತರ ಅಂತಿಮ ನಿರ್ಣಯಕ್ಕೊಳಪಟ್ಟಿರುತ್ತದೆ. ಇದರ ವಿಚಾರವಾಗಿ ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸದರಿ ವಿಷಯವು ಹಲವು ರೂಪದಲ್ಲಿ ವರದಿ ಹಾಗೂ ವಿಶ್ಲೇಷಣಾತ್ಮಕವಾಗಿದ್ದು, ಈ ಸಂಬಂಧ ಕೆಳಕಂಡಂತೆ ಸ್ಪಷ್ಟೀಕರಣ ಮಾಹಿತಿಯನ್ನು ಒದಗಿಸಿದೆ. * ಬಿಬಿಎಂಪಿ ಯು ಬೀದಿ ನಾಯಿಗಳಿಗೆ ಆಹಾರ ನೀಡುವುದನ್ನು ಕೋವಿಡ್ ಸಮಯದಲ್ಲಿಯೇ ಕೈಗೆತ್ತಿಕೊಂಡಿತ್ತು. ಆ ಚಟುವಟಿಕೆಯ ಮುಂದುವರಿಕೆಯಾಗಿ, ಕಳೆದ ವರ್ಷವೂ ನಿಗದಿತ ಸಂಖ್ಯೆಯಲ್ಲಿ ನಾಯಿಗಳಿಗೆ ಆಹಾರ ನೀಡಲಾಗಿತ್ತು. ಕಳೆದ ವರ್ಷದ ಕಾರ್ಯಕ್ರಮದಿಂದ ಕಲಿತ ಪಾಠಗಳ ಆಧಾರದ ಮೇಲೆ, ಈ ಯೋಜನೆಯು ಒಂದು ಸುಧಾರಣೆಯಾಗಿದೆ ಮತ್ತು ಕೇಂದ್ರ ಸರ್ಕಾರವು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮೂಲಕ ವ್ಯಾಖ್ಯಾನಿಸಿದ ಪ್ರಾಣಿ ಜನನ ನಿಯಂತ್ರಣ ನಿಯಮಗಳು, 2023ರ ಪ್ರಕಾರ ಕಾನೂನಾತ್ಮಕ ಅವಶ್ಯಕತೆಯಾಗಿದೆ. ಬಿಬಿಎಂಪಿ ಈಗ ಪ್ರತಿ ವಲಯದಲ್ಲಿ ಆಹಾರ ತಯಾರಕರನ್ನು ಆಯಾ…
ಶಿವಮೊಗ್ಗ: ನಾಳೆ ಸಿಗಂದೂರು ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಹೊತ್ತಿನಲ್ಲೇ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಈ ಕಳಸವಳ್ಳಿ-ಅಂಬಾರಗೋಡ್ಲು ಸೇತುವೆ ನಿರ್ಮಾಣಕ್ಕಾಗಿ ಬರೆದಿದ್ದಂತ ಪತ್ರ ವೈರಲ್ ಆಗಿದೆ. ಕಳಸವಳ್ಳಿ-ಅಬಾರಗೊಡ್ಲು ಸೇತುವೆಯ ಕಾಮಗಾರಿ ಮುಕ್ತಾಯಗೊಂಡು ನಾಳೆ ಉದ್ಘಾಟನೆಯ ಹಂತಕ್ಕೆ ಬಂದು ನಿಂತಿದೆ. ಈ ಸೇತುವೆಯ ರೂವಾರಿಗಳು ಹಲವರಿದ್ದರೂ, ಈಗ ಶಾಸಕ ಗೋಪಾಲಕೃಷ್ಣ ಬೇಳೂರು ಅವರು 2008ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದಂತ ಯಡಿಯೂರಪ್ಪಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಆ ಪತ್ರ ವೈರಲ್ ಆಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಬರೆದಿದ್ದ ಪತ್ರದಲ್ಲಿ ಏನಿದೆ.? ಲಿಂಗನಮಕ್ಕಿ ಅಣೆಕಟ್ಟೆಯ ಶರಾವತಿ ನದಿ ಹಿನ್ನೀರಿನಿಂದಾಗಿ ಸಾಗರ ತಾಲ್ಲೂಕಿನ ತುಮರಿ, ಕುದೂರು, ಶಂಕಣ್ಣ ಶ್ಯಾನುಬೋಗ್, ಜೆನ್ನಗೊಂಡ ಹಾಗೂ ಬಾನಕುಳಿ ಹೀಗೆ ಒಟ್ಟು 5 ಗ್ರಾಮ ಪಂಚಾಯ್ತಿಗಳ ಸುಮಾರು 20 ಸಾವಿರ ಜನರು ತಾಲ್ಲೂಕು ಕೇಂದ್ರದಿಂದ ಸಂಪರ್ಕ ಕಳೆದುಕೊಂಡು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿರುವುದು ತಮಗೆ ತಿಳಿದ ವಿಷಯವಾಗಿರುತ್ತದೆ. ಇದೇ ಭಾಗದಲ್ಲಿ ಬರುವ ಶ್ರೀ ಸಿಗಂದೂರು…
ದಿಸ್ಪುರ್: ಪತ್ನಿಯಿಂದ ವಿಚ್ಛೇದ ಸಿಕ್ಕಿದ್ದಕ್ಕೆ ಖುಷಿಯಿಂದ 40 ಲೀಟರ್ ಹಾಲಿನಿಂದ ಸ್ನಾನವನ್ನು ಮಾಡಿ ಪತಿಯೊಬ್ಬ ಸಂಭ್ರಮಿಸಿದಂತ ಘಟನೆ ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ನಡೆದಿದೆ. ಅಸ್ಸಾಂ ರಾಜ್ಯದ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ ನಲ್ಲಿ ಮಾಣಿಕ್ ಅಲಿ ಎಂಬಾತನೇ ಹೀಗೆ ಸ್ನಾನ ಮಾಡಿದಂತ ಪತಿಯಾಗಿದ್ದಾನೆ. ಹೀಗೆ ಹಾಲಿನಿಂದ ಸ್ನಾನ ಮಾಡಿದಂತ ವೀಡಿಯೋ ವೈರಲ್ ಆಗಿದೆ. ವೀಡಿಯೋದಲ್ಲಿ ನಾನು ಈಗ ಸ್ವತಂತ್ರ ಎಂಬುದಾಗಿ ಹೇಳಿಕೊಂಡಿರುವಂತ ಮಾಣಿಕ್ ಆಲಿ, ಕಾನೂನಿನ ಮೂಲಕ ಪತ್ನಿಯಿಂದ ವಿಚ್ಛೇದನ ಪಡೆದಿದ್ದೇನೆ. ಇಂದಿನಿಂದ ನಾನು ಸ್ವತಂತ್ರ ಎಂದಿದ್ದಾನೆ. ಪತ್ನಿಯಿಂದ ವಿಚ್ಛೇದನ ಪಡೆದ ನಾನು ಶುದ್ಧೀಕರಣಕ್ಕಾಗಿ 40 ಲೀಟರ್ ಹಾಲು ತಂದು ಸ್ನಾನ ಮಾಡುತ್ತಿದ್ದೇನೆ ಎಂಬುದಾಗಿ ಹೇಳಿಕೊಂಡಿದದಾನೆ. ಸ್ಥಳೀಯರ ಪ್ರಕಾರ, ದಂಪತಿಗಳು ಪರಸ್ಪರ ಕಾನೂನುಬದ್ಧವಾಗಿ ತಮ್ಮ ಮದುವೆಯನ್ನು ಕೊನೆಗೊಳಿಸಲು ನಿರ್ಧರಿಸುವ ಮೊದಲು ಅವರ ಪತ್ನಿ ಕನಿಷ್ಠ ಎರಡು ಬಾರಿ ಓಡಿಹೋಗಿದ್ದರು. ವಿಚ್ಛೇದನ ಅಂತಿಮಗೊಂಡಿದೆ ಎಂದು ನನ್ನ ವಕೀಲರು ನಿನ್ನೆ ನನಗೆ ತಿಳಿಸಿದರು. ಆದ್ದರಿಂದ, ಇಂದು ನಾನು ನನ್ನ ಸ್ವಾತಂತ್ರ್ಯವನ್ನು ಆಚರಿಸಲು ಹಾಲಿನಲ್ಲಿ ಸ್ನಾನ ಮಾಡುತ್ತಿದ್ದೇನೆ…
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಎದ್ದಿದೆ. ಈ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ.30ರಂದು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ.30ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ತೆರಳುತ್ತಿರುವುದಾಗಿ ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ದೆಹಲಿಗೆ ತೆರಳಿದ್ದರು. ಕೇಂದ್ರದ ಸಚಿವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದರು. ಅನುಮತಿ, ಅನುಮೋದನೆ, ಅನುದಾನದ ಬಗ್ಗೆಯೂ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಮನವಿ ಮಾಡಿ ವಾಪಾಸ್ ಆಗಿದ್ದರು. https://kannadanewsnow.com/kannada/cm-siddaramaiah-will-not-participate-in-the-inauguration-program-of-the-sigandur-bridge-tomorrow-minister-satish-jarkiholi/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಚಿತ್ರದುರ್ಗ: ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತಡವಾಗಿ ಮಾಹಿತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಅವರು ಭಾಗಿಯಾಗುತ್ತಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ತಡವಾಗಿ ಮಾಹಿತಿ ನೀಡಲಾಗಿದೆ. ಅದೇ ದಿನ ಇಂಡಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಕಾರ್ಯಕ್ರಮ ಫಿಕ್ಸ್ ಆಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದರು. ಸಿಎಂ ಸಿದ್ಧರಾಮಯ್ಯ ಪರವಾಗಿ ನಾನು ಕಾರ್ಯಕ್ರಮಕ್ಕೆ ಹೋಗುತ್ತೇನೆ. ಕರೆದಿದ್ದಾರೋ ಬಿಟ್ಟಿದ್ದಾರೋ ಬೇರೆ ಪ್ರಶ್ನೆ. ರಾಜ್ಯದಲ್ಲಿ ಆಗುತ್ತಿದೆ. ಕೇಂದ್ರ ಸಚಿವರು ಬರುತ್ತಿದ್ದಾರೆ. ಗೌರವಿಸಲು ನಾವು ಭಾಗಿಯಾಗುತ್ತೇವೆ ಎಂದರು. https://kannadanewsnow.com/kannada/follow-these-tips-to-avoid-heart-attack/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.ವೇಗವಾಗಿ ಬೆಳೆಯುತ್ತಿರುವ ಆಧುನಿಕ ಬದುಕಿಗೆ ಹೊಂದಿಕೊಳ್ಳುತ್ತಾ, ಎಲ್ಲರ ಜೀವನಶೈಲಿ ಹಾಗೂ ಆಹಾರ ಪದ್ಧತಿ ಬದಲಾಗಿರುವ ಪರಿಣಾಮ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸದ್ದಿಲ್ಲದೆ ದುಷ್ಪರಿಣಾಮಿಸುತ್ತಿದೆ. ಹೆಚ್ಚುತ್ತಿರುವ ಹೃದಯಘಾತಕ್ಕೆ ಕಾರಣಗಳನ್ನು ಗಮನಿಸಿದಾಗ ಬಹು ಮುಖ್ಯವಾಗಿ ಮಾದಕ ವಸ್ತುಗಳ ಸೇವನೆಯು( ಸಿಗರೇಟ್,ಗುಟಕ ಇತ್ಯಾದಿ) ಎದ್ದು ತೋರುತ್ತಿದ್ದರು,ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿ ತೆರೆಮರೆಯಲ್ಲಿ ಇರುವ ಕಾರಣಗಳು. ಆಹಾರ ಪದ್ಧತಿ : “ಆಹಾರ ಸಂಭವೋ ದೇಹಃ” ಅಂದರೆ ದೇಹವು ಆಹಾರದಿಂದ ರಚನೆಯಾಗಿದೆ. ಹೀಗಿದ್ದಲ್ಲಿ ಪಾಶ್ಚಿಮಾತ್ಯ ಜೀವನಶೈಲಿಯ ಅನುಕರಣೆಯಿಂದ ಅತಿಯಾದ ಜಂಕ್ ಫುಡ್ಗ / ಫಾಸ್ಟಪುಡ್ ಗಳ ಸೇವನೆಯಿಂದ, ಅಪರೂಪವಾಗಿದ್ದಂತಹ ಸಕ್ಕರೆ ಕಾಯಿಲೆ,ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಕೇವಲ ಆಕರ್ಷಣೆ ಮತ್ತು ರುಚಿಕರವಾದಂತಹ ಈ ಪದಾರ್ಥಗಳು ಕಡಿಮೆ ಪೌಷ್ಟಿಕತೆ, ಅತಿಯಾದ ಕ್ಯಾಲೋರಿಗಳಿಂದ ಕೂಡಿವೆ.ಹಲವಾರು ಸಂಶೋಧನೆಗಳ ಪ್ರಕಾರ ಇಂತಹ ಪದಾರ್ಥಗಳ ಸೇವನೆಯಿಂದ ಅತಿಯಾದ…
ಮೈಸೂರು: ಜಿಲ್ಲೆಯಲ್ಲಿ ಜುಲೈ.19ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜುಲೈ.19ರಂದು ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ಜುಲೈ.19ರಂದು ಸಾಧನಾ ಸಮಾವೇಶದ ಮೂಲಕ ಹಳಏ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ. ಮೈಸೂರಿನ ಸಾಧನಾ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 3 ದಿನ ಮೊದಲೇ ಮೈಸೂರಿಗೆ ತೆರಳಲಿದ್ದಾರೆ. ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸರ್ಕಾರದ ಸಾಧನಾ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ. https://kannadanewsnow.com/kannada/mla-doddanagoudas-personal-assistant-died-of-a-heart-attack/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಕೊಪ್ಪಳ: ಜಿಲ್ಲೆಯ ಶಾಸಕ ದೊಡ್ಡನಗೌಡ ಆಪ್ತ ಸಹಾಯಕರಾಗಿದ್ದಂತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಷ್ಟಗಿಯಲ್ಲಿ ಹೃದಯಾಘಾತದಿಂದ ಶಾಸಕ ದೊಡ್ಡನಗೌಡ ಅವರ ಆಪ್ತ ಸಹಾಯಕ ಚಂದ್ರು ವಡಗೇರಿ(46) ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಶಾಸಕ ದೊಡ್ಡನಗೌಡ ಆಪ್ತ ಸಹಾಯಕರಾಗಿ ಚಂದ್ರು ವಡಗೇರಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಪುರಸಭೆಯ ಮಾಜಿ ಸದಸ್ಯರೂ ಕೂಡ ಆಗಿದ್ದರು. ಸಣ್ಣ ಕರುಳಿನ ಆಪರೇಷನ್ ಗೆ ಒಳಗಾಗಿದ್ದಂತ ಅವರು ಕುಷ್ಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಹೃದಯಾಘಾತದಿಂದ ಚಂದ್ರು ಸಾವನ್ನಪ್ಪಿದ್ದಾರೆ. https://kannadanewsnow.com/kannada/food-is-the-answer-in-this-village-villagers-launch-food-is-ours-water-is-yours-campaign-on-festivals/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಹಬ್ಬ ಹರಿದಿನಗಳಲ್ಲಿ ನೀರಿಗಾಗಿ ಪರದಾಟ ತಪ್ಪಿಲ್ಲದಂತಾಗಿದೆ. ಗ್ರಾಮದಲ್ಲಿ ಇದೇ ಜುಲೈ 14ರಂದು ಸೋಮವಾರ ಭೂತಪ್ಪನ ಜಾತ್ರೆ ನಡೆಯಲಿದೆ. ಆದರೆ ಕುಡಿಯುವ ನೀರಿನ ಇಲ್ಲಾದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಬ್ಬಕ್ಕೆ ಬರುವ ನೆಂಟರಿಷ್ಟರು, ಸ್ನೇಹಿತರು ಹಾಗೂ ಬಂಧುಗಳು ಬರುವವರಿಗೆ ಊಟ ನಮ್ದು!ನೀರು ನಿಮ್ಮದು! ಎಂದು ಅಭಿಯಾನ ಆರಂಭಿಸಿದ್ದಾರೆ. ಹಬ್ಬ ಇದ್ದರೂ ಗ್ರಾಮದಲ್ಲಿ ನೀರಿನ ಸಮಸ್ಯೆ ಪೂರೈಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹರಿಬಿಟ್ಟು ಅಸಮಾಧಾನ ಹೊರಹಾಕಿದ್ದಾರೆ. ನೀರಿನ ತೀವ್ರ ಅಭಾವದ ನಡುವೆಯೂ ದಿಂಡಾವರ ಪಂಚಾಯತ್ ಪಿ.ಡಿ. ಓ.ರವರ ಫೋನ್ ಸ್ವಿಚ್ ಆಫ್ ಆಗಿದೆ. ಸೆಕ್ರೆಟರಿ ಅವರನ್ನು ಕೇಳಿದರೂ ಸಹ ಅವರು ನಮಗೆ ನೀರು ಬಿಡಲು ಸ್ಪಂದಿಸುತ್ತಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ಚಂದ್ರಗಿರಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಗ್ರಾಮ ಪಂಚಾಯಿತಿ ಸದಸ್ಯರನ್ನು ಕೇಳಿದರು ಸಹ ಅವರು…
ರಾಯಚೂರು: ಜಿಲ್ಲೆಯ ಕಳೆದ ಮೂರು ತಿಂಗಳಿನಿಂದ ಚಿರತೆಯೊಂದು ಕಾಣಿಸಿಕೊಂಡು ನಾಯಿ, ಪ್ರಾಣಿಗಳನ್ನು ತಿಂದು ಆತಂಕ ಮೂಡಿಸಿತ್ತು. ಹೀಗೆ ಮೂರು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದಂತ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ತಾಲ್ಲೂಕಿನ ಡಿ.ರಾಂಪುರ ಬಳಿಯ ಬೆಟ್ಟದಲ್ಲಿ ಚಿರತೆ ಸೆರೆ ಹಿಡಿಯಲಾಗಿದೆ. ಈ ಚಿರತೆ 20ಕ್ಕೂ ಹೆಚ್ಚು ನಾಯಿಗಳು, ಮೇಕೆಗಳನ್ನು ತಿಂದು ಹಾಕಿತ್ತು. ಈ ಚಿರತೆ ಓಡಾಡುವಂತ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನಲೆಯಲ್ಲಿ ಆತಂಕ ಸೃಷ್ಠಿಸಿದ್ದಂತ ಚಿರತೆಯ ಸೆರೆಗಾಗಿ ಬೆಟ್ಟದಲ್ಲಿ ಎರಡು ಬೋನುಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಇರಿಸಿದ್ದರು. ಹೀಗೆ ಡಿ.ರಾಂಪುರ ಬಳಿ ಬೆಟ್ಟದ ತಪ್ಪಲಿನಲ್ಲಿ ಇರಿಸಿದ್ದಂತ ಬೋನಿಗೆ ಚಿರತೆ ಬಿದ್ದಿದೆ. https://kannadanewsnow.com/kannada/thieves-have-stolen-the-waste-disposal-vehicle-in-raichur/ https://kannadanewsnow.com/kannada/thieves-have-stolen-the-waste-disposal-vehicle-in-raichur/














