Author: kannadanewsnow09

ಬೆಂಗಳೂರು: ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಅಗತ್ಯ ಉಪಕರಣಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.  https://twitter.com/KarnatakaVarthe/status/1934949609551405520 ರಾಜ್ಯ ಸರ್ಕಾರದಿಂದ ರಕ್ತ ಸಂಗ್ರಹಣೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ರಕ್ತ ಸಂಗ್ರಹಣೆಯ ವ್ಯವಸ್ಥೆ ಇರಲಿಲ್ಲ. ಇದೀಗ ಎಲ್ಲ 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ರಕ್ತ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಅಗತ್ಯ ಉಪಕರಣಗಳ ಖರೀದಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಖಡ 1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದ್ದು ಅದಕ್ಕೆ ಅನುಗುಣವಾಗಿ 2024-25ರಲ್ಲಿ 8,15,402 ರಕ್ತದ ಯುನಿಟ್ ಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಸದರಿ ಸಾಲಿನಲ್ಲಿ 10,11,073 ರಕ್ತದ ಯುನಿಟ್‌ಗಳನ್ನು ಸಂಗ್ರಹಿಸುವ ಮೂಲಕ ಶೇ.124%ರಷ್ಟು ಪ್ರಗತಿ ಸಾಧಿಸಲಾಗಿದೆ. ರಕ್ತದಾನಿಯಗಳ…

Read More

ಬೆಂಗಳೂರು: ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬಾರದಂತ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿದೆ. ಫಿಲ್ಮ್ ಚೇಂಬರ್ ಗೆ ತೆರಳಿದಂತ ಸಂಜು ವೆಡ್ಸ್ ಗೀತಾ-2 ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿಯವರು ನಟಿ ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಸಂಚು ವೆಡ್ಸ್ ಗೀತಾ-2 ಚಿತ್ರದ ಪ್ರಚಾರ ಕಾರ್ಯವನ್ನು ಮಾಡಲಾಗುತ್ತಿದೆ. ಆದರೇ ನಟಿ ರಚಿತಾ ರಾಮ್ ಮಾತ್ರ ಪ್ರಚಾರಕ್ಕೆ ಬರುತ್ತಿಲ್ಲ. ಹೀಗಾಗಿ ನಾವು ಇಂಥ ಕಲಾವಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದಂತ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಕರ್ನಾಟಕ ಲೋಕಸೇವಾ ಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಡಾ. ವಿಶಾಲ್ ಆರ್, ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದಂತ ಸತ್ಯಭಾಮ ಸಿ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಅವರನ್ನು ರಾಜ್ಯ ಯೋಜನಾ ನಿರ್ದೇಶಕಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಡಾ. ತ್ರಿಲೋಕ್ ಚಂದ್ರ ಕೆ ವಿ., ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲತಾ ಕುಮಾರಿ ಕೆ…

Read More

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಲು ಹಣ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 20 ಅತಿವೃಷ್ಟಿ / ಪುವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ಥಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗ್ರಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಪರಿಹಾರದಂತೆ, 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗ್ರಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಪರಿಹಾರವನ್ನು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ವಿಧಿಸಿರುವ ಷರತ್ತುಗಳ ಪಾಲನೆಗೆ ಒಳಪಟ್ಟು, ಜಿಲ್ಲಾಧಿಕಾರಿರವರ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರವು ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಜೂನ್.30ರವರೆಗೆ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,  2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 12.05.2025 ರಿಂದ 14.06.2025 ರವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರಯೋಚಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಆವಶ್ಯಕವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿರುವುದಾಗಿ ತಿಳಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 12.05.2025ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2025-26ನೇ ಸಾಲಿನಲ್ಲಿ ಸಾರ್ವತ್ರಿಕ…

Read More

ಚಿತ್ರದುರ್ಗ: ಸುದ್ದಿಬ್ರೇಕ್ ಮಾಡುವ ಅವಸರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾದ್ಯಮಗಳು ಅವಾಂತರ ಸೃಷ್ಟಿಸಬಾರದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ‌ಎಸ್.ಸಿದ್ದರಾಜು ಹೇಳಿದರು. ಚಿತ್ರದುರ್ಗದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ‌ ವಿದ್ಯಾರ್ಥಿಗಳು ಆರಂಭಿಸಿರುವ ಶೈಕ್ಷಣಿಕ ಆಧಾರಿತ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ಮಾತನಾಡಿದ ಅವರು,ಪತ್ರಿಕೋದ್ಯಮ ಹಾಗು ಸಮಾಜ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಮಾದ್ಯಮ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ಮತ್ತು ಮುದ್ರಣಮಾದ್ಯಮ‌ಎಂಬ ಎರಡು ಹಂತಗಳಿವೆ. ಅವುಗಳಲ್ಲಿ ಎಲೆಕ್ಟ್ರಾನಿಕ್ ಮಾದ್ಯಮ ಕುರಿತು ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಇಂದಿನ ಆಧುನಿಕ ಭರಾಟೆಯಲ್ಲಿ ಪತ್ರಿಕೋದ್ಯಮ ಅನ್ನೋದು ಇಂದು ದೊಡ್ಡ ಉದ್ಯಮವಾಗಿ ಬೆಳೆದಿದೆ. ಈ ಹಿಂದೆ ಸಾಮಾಜಿಕ ಕಳಕಳಿ ಹಾಗು ಸಮಾಜವನ್ನು ಸರಿದಾರಿಯನ್ನು ಕೊಂಡೊಯ್ಯುವ ಕೆಲಸವನ್ನು ಮಾಡುತಿದ್ದವು. ಆದರೆ ಇಂದಿನ ಸ್ಪರ್ಧಾಯುಗದಲ್ಲಿ ಕೆಲ ಮಾದ್ಯಮಗಳು ಟಿಆರ್ ಪಿ ಹಾಗೂ ಹಣದಾಸೆಗೆ ಸುದ್ದಿಯ ಸಾರವನ್ನು ತಿರುಚುತ್ತಿವೆ. ಇದು ಸಮಾಜದ ಮೇಲೆ ಬಾರಿ ದುಷ್ಪರಿಣಾಮ ಬೀರುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಇನ್ನು ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ಬ್ರೇಕಿಂಗ್‌ ನ್ಯೂಸ್ ಅನ್ನೋದು ತುಂಬಾ…

Read More

ಬೆಂಗಳೂರು : ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಯೋಜನೆ ಕುರಿತು ಮಂಗಳವಾರ ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಹೊರತುಪಡಿಸಿ ಎಲ್ಲಾ ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಸರ್ಕಾರ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಿದ್ದರೂ ಅದಕ್ಕೆ ಪೂರಕವಾಗಿ ಕಾರ್ಯಯೋಜನೆ ಸಿದ್ಧಪಡಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ, ರಸ್ತೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಎರಡನೇ ಹಂತದಲ್ಲಿ ಎಲ್ಲಾ 11 ಮಹಾನಗರ ಪಾಲಿಕೆಗಳಿಗೆ ಒಟ್ಟು 1730 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು. ಮೈಸೂರು, ವಿಜಯಪುರ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಮಂಗಳೂರು ಮತ್ತು ರಾಯಚೂರು ಮಹಾ ನಗರಪಾಲಿಕೆಗಳು ತಮಗೆ…

Read More

ಬೆಂಗಳೂರು: ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ ‘ಯೋಗ ಸಂಗಮ’ ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ರಾಜ್ಯಾದಾದ್ಯಂತ 5 ಲಕ್ಷ ಜನರು ಯೋಗಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ ಎಂದರು. ‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಗುವುದು. ಜೂನ್ 21 ರ ಮುಂಜಾನೆ 6 ಗಂಟೆಯಿಂದ 8 ಗಂಟೆಯವರೆಗೆ 5000 ಜನರು ವಿಧಾನ ಸೌಧದ ಮೆಟ್ಟಿಲುಗಳ ಎದುರು ಯೋಗಾಭ್ಯಾಸ ನಡೆಸಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಶಾಸಕರು, ಸಂಸದರು, ಕ್ರೀಡಾಪಟುಗಳು, ತಾರೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಮೈಸೂರನ್ನು ‘ಯೋಗ ಜಿಲ್ಲೆಯನ್ನಾಗಿ’ ನಿರ್ಮಿಸಲು…

Read More

ದೇವರಿಗೆ ನಿತ್ಯ ದೀಪ ಹಚ್ಚುವಾಗ ಹೇಳುವ ಶ್ಲೋಕ: “ಭೂದೇವಿಯರು ಪ್ರಣತಿಯೊಳಗೆ ಲಕ್ಷ್ಮೀದೇವಿಯರು ಎಣ್ಣೆಯೊಳಗೆ ಶೇಷ ದೇವರು ಬತ್ತಿಯೊಳಗೆ ವಾಯುದೇವರು ಪ್ರಕಾಶದೊಳಗೆ ರುದ್ರದೇವರು ಕಪ್ಪಿನೊಳಗೆ ಸಚಿಪತಿ ಇಂದ್ರದೇವರು ದೀಪಕ್ಕೆ ಅಭಿಮಾನಿ ಇದು ಅನಂತ ಗುಣ ಪರಿಪೂರ್ಣನಾದಂತಹ ಅನಂತೋತ್ತಮನು ಬ್ರಹ್ಮಾಂಡೋತ್ಪತ್ತನಾದಂತಹ ಲಕ್ಷ್ಮೀನಾರಾಯಣ ದೀಪ ಇಂತಹ ದೀಪ ಹಚ್ಚಿದರೆ ಬೆಳಕು ಹಚ್ಚದಿದ್ದರೆ ಕತ್ತಲು ಎಂತೆಂಬೋದಿಲ್ಲ ಲಕ್ಷ್ಮೀನಾರಾಯಣ ನೀನು ನಮ್ಮನ್ನು ನಿಮಿತ್ತಮಾತ್ರದಿ ಇಟ್ಟಿದ್ದೀ ನಿನ್ನ ಬೆಳಕೇ ಬೆಳಕು ನಿನ್ನ ಪ್ರಕಾಶವೇ ಕೋಟಿ ಸೂರ್ಯ ಪ್ರಕಾಶ ಎನ್ನ ಮನದಲ್ಲಿ ಅಜ್ಞಾನ ಅಂಧಕಾರಗಳನ್ನು ಕಳೆದು ಜ್ಞಾನ ಭಕ್ತಿ ವೈರಾಗ್ಯವನ್ನು ಒಟ್ಟು ರಕ್ಷಿಸಬೇಕೆಂದು ಹಚ್ಚುವಂತಹ ದೀಪ ಅಗ್ನಿಂತರ್ಗತ ಭಾರತೀರಮಣಮುಖ್ಯಪ್ರಾಣಾಂತರ್ಗತ ಪರಶುರಾಮಾಯ ನಮಃ ಪತ್ಯಂತರ್ಗತ ಗುರ್ವಂತರ್ಗತ ಮಧ್ವಾಂತರ್ಗತ ಶ್ರೀ ಕೃಷ್ಣಾರ್ಪಣಮಸ್ತು.’ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ…

Read More

ಮಂಗಳೂರು: ಜಿಲ್ಲೆಯಲ್ಲಿ ತಂದೆ ಎಸೆದಿದ್ದಾರೆ ಎನ್ನಲಾದ ಬೀಡಿ ತುಂಡನ್ನು ನುಂಗಿ 10 ತಿಂಗಳ ಮಗುವೊಂದು ಸಾವನ್ನಪ್ಪಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮಗುವಿನ ತಾಯಿ ಲಕ್ಷ್ಮಿದೇವಿ ತನ್ನ ಪತಿ ಬಿಟ್ಟು ಕುಮಾರ್ ವಿರುದ್ಧ ನಿರ್ಲಕ್ಷ್ಯದ ದೂರು ದಾಖಲಿಸಿದ್ದಾರೆ. ಈ ಘಟನೆ ಜೂನ್ 14 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಡ್ಯಾರ್‌ನಲ್ಲಿ ನಡೆದಿದ್ದು, ಅಲ್ಲಿ ಮೂಲತಃ ಬಿಹಾರದ ಕುಟುಂಬ ವಾಸಿಸುತ್ತಿದೆ. ಶಿಶು ಅನೀಶ್ ಕುಮಾರ್ ತಂಬಾಕು ಉತ್ಪನ್ನದ ತುಂಡನ್ನು ಸೇವಿಸಿ ಮಧ್ಯಾಹ್ನ 3:30 ರ ಸುಮಾರಿಗೆ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತೀವ್ರ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದರೂ, ಜೂನ್ 15 ರಂದು ಬೆಳಿಗ್ಗೆ 10:25 ಕ್ಕೆ ಮಗು ಸಾವನ್ನಪ್ಪಿತು. ಮಂಗಳೂರು ಗ್ರಾಮಾಂತರ ಪೊಲೀಸರಿಗೆ ನೀಡಿದ ದೂರಿನಲ್ಲಿ, ಮಗುವಿನ ತಾಯಿ, ಮಗು ತಲುಪಬಹುದಾದ ಸ್ಥಳಗಳಲ್ಲಿ ಬೀಡಿ ತುಂಡುಗಳನ್ನು ಎಸೆಯಬೇಡಿ ಎಂದು ತನ್ನ ಪತಿಗೆ ಪದೇ ಪದೇ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. ಆದರೂ ಎಸೆದಿದ್ದಾರೆ. ಇದನ್ನು ನುಂಗಿದಂತ ಮಗು ಸಾವನ್ನಪ್ಪಿದೆ ಎಂಬುದಾಗಿ ಆರೋಪಿಸಿದ್ದಾರೆ. ಅಂದಹಾಗೇ 10…

Read More