Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ 247 ಪಿಡಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ. ಅಲ್ಲದೇ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು “ಸಾಮಾನ್ಯ ಅರ್ಹತ- 35 ವರ್ಷಗಳು, ಪವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ ಈ…
ಕಲಬುರ್ಗಿ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ 50 KKRTC ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ ಜನತೆಯ ಸುಖಕರ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಹೌದು ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವೇಗದೂತ ಮಾದರಿಯ ಬಸ್ಸುಗಳನ್ನು ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಇಂದು 50 ಬಸ್ಗಳನ್ನು ಉದ್ಘಾಟನೆ ಮಾಡಲಾಗಿದೆ. ಈ ಬಸ್ಸುಗಳು ಮೇ|| ಅಶೋಕ ಲೈಲಾಂಡ್ ಕಂಪನಿಯಿಂದ ತಯಾರಿಸಲಾಗಿದ್ದು, 109 ಬಸ್ಸುಗಳ ಖರೀದಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ 45.00 ಕೋಟಿಗಳ ಅನುದಾನವನ್ನು ನೀಡಿದೆ. ಈ ಬಸ್ಗಳಲ್ಲಿ 200 HP ಸಾಮರ್ಥ್ಯದ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಸಂಘದಿಂದ ಕಷ್ಟದಲ್ಲಿದ್ದಂತ ಕೆಲ ಸಮುದಾಯದ ಜನರಿಗೆ ಆರ್ಥಿಕವಾಗಿ ನೆರವು ನೀಡಲಾಗಿದೆ. ಹೀಗೆ ಕಷ್ಟದಲ್ಲಿ ಸಹಾಯ ಮಾಡಿದಂತ ಸಂಘಕ್ಕೆ ಅಷ್ಟೇ ವಿನಮ್ರವಾಗಿ ಸಹಾಯ ಪಡೆದವರು ಧನ್ಯವಾದವನ್ನು ಅರ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮೊಗವೀರ ಸಮಾಜದ ಜನತೆ ಕಡಿಮೆ ಇದ್ದರು ಸಹ, ಸಾಗರ ತಾಲೂಕಿನಲ್ಲಿ ತನ್ನದೆ ಆದ ಚಾಪು ಮುಡಿಸಿದೆ. ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುವುದು. ಪ್ರತಿವರ್ಷ ನೋಟ್ ಬುಕ್ ವಿತರಣೆ. ವಿದ್ಯಾರ್ಥಿ ವೇತನ. ಸಮಾಜದವರು ತೀರಿಕೊಂಡಾಗ ಶವ ಸಂಸ್ಕಾರಕ್ಕೆ ಧನ ಸಹಾಯ ಮಾಡುವುದು ಮೊಗವೀರ ಸಮಾಜದ ಗುರಿಯಾಗಿದೆ ಹಾಗೂ ಮಾಡುತ್ತಾ ಬರುತ್ತಿದೆ. ಮತ್ತೆ ಮುಂದೆ ಒಂದು ಹೆಜ್ಜೆ ಇಟ್ಟ ಮೊಗವೀರ ಸಮಾಜ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೆಲವರು ಭೀಕರ ಕಾಯಿಲೆಯಿಂದ ಬಳಲುತ್ತಿರುವುದನ್ನು ಗಮನಿಸಿ, ಸಂಘದ ವತಿಯಿಂದ ಧನ ಸಹಾಯ ಮಾಡಲಾಗುತ್ತಿದೆ. ದೊಡ್ಡ ಪ್ರಮಾಣದ ಖಾಯಿಲೆ ಇದ್ದಾಗ ತುಂಬಾ ಹಣ ಖರ್ಚಾಗಿ, ಆಸ್ಪತ್ರೆ ಬಿಲ್ ನೋಡಿ ಅಲ್ಪ ಪ್ರಮಾಣದ ಸಹಾಯ ಧನ ನೀಡಲಾಗುತ್ತಿದೆ. ಕಡುಬಡತನದಲ್ಲಿ ಇದ್ದವರಿಗೆ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತ ಟೊಂಕವನ್ನೇ ಅಬಕಾರಿ ಇಲಾಖೆ ಕಟ್ಟಿದೆ ಎನ್ನುವಂತೆ, ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರವನ್ನೇ ಇನ್ಸ್ ಪೆಕ್ಟರ್ ಸಾರಿದ್ದಾರೆ. ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ಮುಂದುವರೆಸಿರುವಂತ ಅವರು, ಬರೋಬ್ಬರಿ 50 ಲೀಟರ್ ಅಕ್ರಮ ಮದ್ಯವನ್ನು ಸೀಜ್ ಮಾಡಿದ್ದಾರೆ. ಅಕ್ರಮ ಮದ್ಯ ತಡೆಗೆ ಇನ್ಸ್ ಪೆಕ್ಟರ್ ಸಂದೀಪ್ ಸಮರ ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಇಲಾಖೆಯ ಇನ್ಸ್ ಪೆಕ್ಟರ್ ಸಂದೀಪ್ ಅವರು ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ಸಂಬಂಧ ಸಮರವನ್ನ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಮರಸೆ ಗ್ರಾಮದಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯ ತಿಳಿದು, ದಾಳಿ ನಡೆಸಿ, ಎಣ್ಣೆ ಸೀಜ್ ಮಾಡಿದ್ದರು. ಈಗ ತಾಲ್ಲೂಕಿನಲ್ಲಿ ಮತ್ತೊಂದೆಡೆ ದಾಳಿಯನ್ನು ನಡೆಸಿದ್ದಾರೆ. ಸಾಗರದಲ್ಲಿ ಅಬಕಾರಿ ಇಲಾಖೆಯಿಂದ ಮುಂದುವರೆದ ದಾಳಿ ಸೋಮವಾರದಂದು ಸಾಗರ ತಾಲ್ಲೂಕಿನ ಸೊರಬ ವಿಧಾನಸಭಾ ಕ್ಷೇತ್ರದ ಆಲಹಳ್ಳಿಯ ಮನೆಯೊಂದರಲ್ಲಿ…
ಲೆಬನಾನ್ : ಇಲ್ಲಿನ ಪೇಜರ್ಸ್ ನಲ್ಲಿ ಭೀಕರ ಬಾಂಬ್ ಸ್ಪೋಟಗೊಂಡಿದ್ದು, ದೇಶಾದ್ಯಂತ ನಡೆದಂತ ಸ್ಪೋಟದಲ್ಲಿ ಈವರೆಗೆ 8 ಮಂದಿ ಸಾವನ್ನಪ್ಪಿ, 2750 ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಲೆಬನಾನ್ ಆರೋಗ್ಯ ಸಚಿವರ ಹೇಳಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದ್ದು, ಲೆಬನಾನ್ ದೇಶಾದ್ಯಂತ ನಡೆದ ಸ್ಫೋಟದಲ್ಲಿ 2750 ಜನರು ಗಾಯಗೊಂಡಿದ್ದಾರೆ ಮತ್ತು 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಲೆಬನಾನ್ ಬೈರೋತ್ ನಲ್ಲಿ ಇರುವಂತ ಇಸ್ರೇಲ್ ರಾಯಭಾರ ಕಚೇರಿ ಕೂಡ ಸ್ಪೋಟಿಸಿ ಧ್ವಂಸಗೊಳಿಸಲಾಗಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1836067866489286952 https://kannadanewsnow.com/kannada/kpsc-approves-3-years-relaxation-in-age-limit-for-applying-for-pdo-post/ https://kannadanewsnow.com/kannada/cabinet-approves-setting-up-of-womens-pre-university-colleges-in-15-districts-by-waqf-board-minister-zameer-ahmed/
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆ ಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ. ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. ಪ್ರತಿ ಕಾಲೇಜಿಗೆ 3.18ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. ಸಂಪುಟ ಸಭೆಯ ನಂತರ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಖ್ಫ್ ಬೋರ್ಡ್ ನಲ್ಲಿ ಜಮೆ ಆಗಿರುವ ಬಡ್ಡಿ ಮೊತ್ತ 47.76 ಕೋಟಿ ರೂ. ನಲ್ಲಿ ಬಾಗಲಕೋಟೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಕೊಪ್ಪಳ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯ ನಗರ, ಕಲಬುರಗಿ, ಉಡುಪಿ, ವಿಜಯಪುರ, ಕೋಲಾರ, ದಾವಣಗೆರೆ ಹಾಗೂ ಧಾರವಾಡ ದಲ್ಲಿ ಮಹಿಳಾ ಕಾಲೇಜು…
ಕಲಬುರಗಿ : ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇಂದು ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿತ್ತು. ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಯಿತು. ನಾರಾಯಣಪುರ ಡ್ಯಾಂ ನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ ಅರ್ಧ ಭಾಗದ…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ ಪಿಡಿಓ ಸೇರಿದಂತೆ ವಿವಿಧ ಹುದ್ದೆಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು “ಸಾಮಾನ್ಯ ಅರ್ಹತ- 35 ವರ್ಷಗಳು, ಪವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ. “ರಾಜ್ಯ…
ಕಲಬುರ್ಗಿ: 10 ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಪ್ರಮುಖ ಮುಖ್ಯಾಂಶಗಳನ್ನು ಮುಂದಿದೆ ಓದಿ. ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಯನ್ನಾಗಿ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ಬೀದರ್ ಮತ್ತು ಗುಲಬರ್ಗಾದಲ್ಲಿ ಬರುವಂತ ಎಲ್ಲಾ ಜನವಸತಿಗಳಿಗೆ ಕುಡಿಯುವ ನೀರು ಒದಗಿಸಲು 7200 ಕೋಟಿ ರೂಪಾಯಿಗಳನ್ನು ಅನುದಾನ ನೀಡಲಾಗಿದೆ. ನಾರಾಯಣಪುರದಿಂದ ನೀರು ತಂದು, ಕುಡಿಯುವ ನೀರು ಒದಗಿಸಿ ಕೊಡುವಂತ ಯೋಜನೆಯಾಗಿದೆ. ರಾಜ್ಯ ಸರ್ಕಾರ ಅರ್ಧ, ಕೇಂದ್ರ ಸರ್ಕಾರ ಅರ್ಧ ಹಣವನ್ನು ಭರಿಸಲಿದೆ. 7200 ಕೋಟಿಯಲ್ಲಿ ಬೀದರ್, ಗುಲಬರ್ಗ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವಂತ ಕಾರ್ಯ ಮಾಡಲಾಗುತ್ತದೆ ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಸಚಿವಾಲಯ ಮಾಡಬೇಕು ಎನ್ನುವಂತ ಒತ್ತಾಯವಿತ್ತು. ಇದಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಪ್ರತ್ಯೇಕ ಸಚಿವಾಲಯ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ…
ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು ಪ್ರಜಾ ಸೌಧ ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಇಂದು ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ತಾಲ್ಲೂಕುಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನೂ ಕೆಲವು ಕಡೆ ಮಾಡಲಿದ್ದೇವೆ. ಇವುಗಳ ಹೆಸರನ್ನು ಮಿನಿ ವಿಧಾನಸೌಧ ಎನ್ನುವ ಬದಲಾಗಿ ಪ್ರಜಾ ಸೌಧ ಎಂಬುದಾಗಿ ಮರು ನಾಮಕರಣ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು. https://kannadanewsnow.com/kannada/rs-2-crore-allocated-for-shivpura-memorial-renovation-mla-dinesh-gooligowda-congratulates-cm-for-ordering-his-release/ https://kannadanewsnow.com/kannada/breaking-sc-stays-bulldozer-operation-across-the-country/