Subscribe to Updates
Get the latest creative news from FooBar about art, design and business.
Author: kannadanewsnow09
ಮಂಗಳೂರು: ಇದೇ ನವೆಂಬರ್ ಒಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕುಂಜಾಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇವರಾಜ ಅರಸು ಅವರು ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಇಂತಹ ದೇವರಾಜ ಅರಸು ದಾಖಲೆಯನ್ನು ಮುರಿದು ತಾನು ಕುರ್ಚಿ ಬಿಟ್ಟುಕೊಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಮುಂದೆ ಸಿದ್ಧರಾಮಯ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದರು. ತಾವು, ಡಿಕೆ ಶಿವಕುಮಾರ್ 50:50ರ ಅನುಪಾತದಂತೆ ಅಧಿಕಾರ ಹಂಚಿಕೆ ಮಾಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಒಪ್ಪಂದ ಮಾಡಿಕೊಂಡಿದ್ದಾರೆ. ಇದೇ ಮಾತನ್ನು ಸಂಡೂರು ಉಪ ಚುನಾವಣೆ ಸಂದರ್ಭದಲ್ಲೂ ಸಿಎಂ ಸಿದ್ಧರಾಮಯ್ಯ ಹೇಳಿದ್ದರು. ಅದರ ಮುಂದಿನ ಭಾಗವಾಗಿ ಡಿ.ಕೆ ಶಿವಕುಮಾರ್ ಈಗಿನಿಂದಲೇ ಬುನಾದಿ ಹಾಕಲು ಆರಂಭಿಸಿದ್ದಾರೆ ಎಂದರು. ನನಗೆ ಬಂದ ಮಾಹಿತಿ ಪ್ರಕಾರ ದೇವರಾಜ ಅರಸು ಅವರಿಗಿಂತ ಒಂದು ದಿನ ಹೆಚ್ಚು ಕಾಲ ಕರ್ನಾಟಕದ…
ನವದೆಹಲಿ: ಕೇಂದ್ರ ಸರ್ಕಾರವು ಕೃಷ್ಣಾ ನದಿ ನ್ಯಾಯಮಂಡಳಿಯ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಮತ್ತೆ ಜುಲೈ.31, 2026ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರ ಆದೇಶಿಸಿದ್ದು, ಕೃಷ್ಣ ನದಿ ನ್ಯಾಯಮಂಡಳಿಯನ್ನು ಜುಲೈ.31, 2026ರವರೆಗೆ ವಿಸ್ತರಿಸಿ ಜಲಶಕ್ತಿ ಸಚಿವಾಲಯ ಆದೇಶಿಸಿದೆ. ಕೃಷ್ಣಾ ನದಿ ಅಂತಾರಾಜ್ಯ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಮತ್ತು ನಿರ್ಧಾರವನ್ನು ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ನ್ಯಾಯಮಂಡಳಿಯು ಹೆಚ್ಚಿನ ಸಮಯ ಕೋರಿದ್ದರ ಹಿನ್ನಲೆಯಲ್ಲಿ ಜುಲೈ.31, 2026ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿಂದೆ 2024ರ ಮಾರ್ಚ್ ನಲ್ಲಿ ಅವಧಿ ವಿಸ್ತರಿಸಲಾಗಿತ್ತು. 2004ರ ಏಪ್ರಿಲ್ ನಲ್ಲಿ ಕೃಷ್ಣಾ ನದಿ ನ್ಯಾಯಮಂಡಳಿಯನ್ನು ರಚಿಸಲಾಗಿತ್ತು. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತ ನ್ಯಾಯಮಂಡಳಿ ಸ್ಥಾಪಿಸಲಾಗಿತ್ತು. https://kannadanewsnow.com/kannada/do-you-know-what-the-pdo-of-ulluru-sagar-said-about-the-allegations-against-him/ https://kannadanewsnow.com/kannada/love-on-instagram-shocked-young-man-who-came-searching-for-his-beloved/
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರ್ಷವರ್ಧನ್ ವಿರುದ್ಧ ನಿನ್ನೆ ಇಒಗೆ ದೂರು ನೀಡಲಾಗಿತ್ತು. ಸರಿಯಾಗಿ ಕರ್ತವ್ಯ ನಿರ್ವಹಿಸದ ಪಿಡಿಒ ವರ್ಗಾವಣೆ ಮಾಡುವಂತೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ತಾಲ್ಲೂಕು ಅಧ್ಯಕ್ಷ ವಸೀಮ್ ದೂರು ನೀಡಿದ್ದರು. ಈ ದೂರಿನ ಬಗ್ಗೆ ಪಿಡಿಒ ಹರ್ಷವರ್ಧನ್ ಹೇಳಿದ್ದೇನು ಅಂತ ಮುಂದೆ ಓದಿ. ಇಂದು ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಪಿಡಿಒ ಅವರನ್ನು ದೂರಿನ ಸಂಬಂಧ ಕನ್ನಡ ನ್ಯೂಸ್ ನೌ ದೂರವಾಣಿ ಮೂಲಕ ಸಂಪರ್ಕಿಸಿತು. ಪಿಡಿಒ ಹರ್ಷವರ್ಧನ್ ಅವರು ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ತಾಲ್ಲೂಕು ಅಧ್ಯಕ್ಷ ವಸೀಮ್ ಮಾಡಿದಂತ ಆರೋಪಗಳನ್ನು ತಳ್ಳಿ ಹಾಕಿದರು. ಮಳೆಗಾಲ ಆಗಿರುವ ಕಾರಣ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಅಡೆತಡೆ ಉಂಟಾಗಿದೆ. ಮಳೆ ಕಡಿಮೆಯಾದ ನಂತ್ರ ಮುಚ್ಚುವುದಾಗಿ ತಿಳಿಸಿದರು. ಇ-ಸ್ವತ್ತು ಖಾತಾ ವಿಳಂಬ ಧೋರಣೆಯ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ಸೂಕ್ತ ದಾಖಲೆ ನೀಡಿದಂತ ಯಾರಿಗೂ ನೀಡಲು ವಿಳಂಬ ಮಾಡಿಲ್ಲ. ಕೆಲವೊಮ್ಮೆ ತಾಂತ್ರಿಕ ಕಾರಣದಿಂದಾಗಿ ಇ-ಸ್ವತ್ತು…
ಕೋಲಾರ: ಆ ಯುವಕನಿಗೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಆಕೆಯ ಮೇಲೆ ಪ್ರೀತಿ ಬೆಳೆದಿತ್ತು. ಇನ್ಸ್ ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ ತಿರುಗಿದಂತ ಪ್ರಿಯತಮೆಯನ್ನು ಹುಡುಕಿಕೊಂಡು ಬಂದ ಆ ಹುಡುಗನಿಗೆ ಆಗಿದ್ದು ಮಾತ್ರ ಶಾಕ್. ಹೌದು.. ನವನೀತ್ ಹಾಗೂ ಅಪೂರ್ವ ನಡುವೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಲವ್ ಆಗಿತ್ತು. ಆಕೆಯನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ನವನೀತ್ ತೆರಳಿದ್ದನು. ಅಲ್ಲಿ ಹೋಗಿ ನೋಡಿದ್ರೆ ಪ್ರೇಯಸಿ 3 ಮಕ್ಕಳ ತಾಯಿ ಎಂಬುದಾಗಿ ಗೊತ್ತಾಗಿ ದಿಗಿಲು ಬಡಿದಂತೆ ಆಗಿದೆ. ಕೋಲಾರ ಜಿಲ್ಲೆಯ ನವನೀತ್ ಗೆ ಚಿಕ್ಕಮಗಳೂರು ಜಿಲ್ಲೆಯ ಅಪೂರ್ವ ಇನ್ಸ್ ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದರು. 35 ವರ್ಷದ ಲೇಡಿ ಮೇಲೆ 24 ವರ್ಷದ ಯುವಕನಿಗೆ ಪ್ಯಾರ್ ಆಗಿ ಬಿಟ್ಟಿತ್ತು. ಮದುವೆ ಆಗೋಣ ಬಾ ಎಂದಿದ್ದಕ್ಕೆ ನಂಬರ್ ಬ್ಲಾಕ್ ಮಾಡಲಾಗಿತ್ತು. ಈ ಕಾರಣದಿಂದ ಪ್ರಿಯಕರ ನವನೀತ್ ಮೂಡಿಗೆರೆಯ ಹೊಸಕೆರೆ ಗ್ರಾಮಕ್ಕೆ ಅಪೂರ್ವ ಹುಡುಕಿಕೊಂಡು ಬಂದಿದ್ದನು. ಅಲ್ಲಿಗೆ ಬಂದು ನೋಡಿದರೇ ಅಪೂರ್ವ ಮೂರು ಮಕ್ಕಳ ತಾಯಿ ಎಂಬುದಾಗಿ ತಿಳಿದು ಶಾಕ್…
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10 ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಸಚಿವರು ಜೈವಿಕ ಇಂಧನ ನೀತಿಯ ಬಗ್ಗೆ ಮಾಹಿತಿ ನೀಡಿ, ಈ ಸಂಬಂಧ ಈಗಾಗಲೇ ಕೆಲವು ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗಿದೆ, ರಾಜ್ಯದಲ್ಲಿ ಹಾಗೂ ಇತರ ರಾಜ್ಯಗಳಿಗೆ ಭೇಟಿ ನೀಡಿ ಜೈವಿಕ ಇಂಧನ ಕಾರ್ಯಯೋಜನೆಗಳ ಅನುಷ್ಟಾನ ಪ್ರಕ್ರಿಯೆ ಹಾಗೂ ವಸ್ತುಸ್ಥಿತಿ ಅಧ್ಯಯನ ಮಾಡಲಾಗಿದೆ, ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೈವಿಕ ಇಂಧನ ನೀತಿಗಳ ವಿಶ್ಲೇಷಣೆ ಮಾಡಲಾಗಿದೆ ಎಂದು ಹೇಳಿದರು. ಜೈವಿಕ ಇಂಧನ ಸಂಪನ್ಮೂಲಗಳ ಲಭ್ಯತೆ, ಕ್ರೋಢಿಕರಣ ಕುರಿತು ಪರಿಶೀಲನೆ ಮಾಡಲಾಗಿದ್ದು, ನೂತನ ಕರ್ನಾಟಕ ರಾಜ್ಯ ಜೈವಿಕ ಇಂಧನ ರಚನೆ ಕುರಿತು…
ಬೆಂಗಳೂರು: ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮೊದಲ ಸಭೆಯ ಬೆಂಗಳೂರು ಘೋಷಣೆ ಓದಿದ ಮುಖ್ಯಮಂತ್ರಿ ಸಿದ್ದರಾಮಯ್ಯ… ಸಮಾಜದ ನಿರ್ಲಕ್ಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ತೋರಿರುವ ಧೈರ್ಯ ಹಾಗೂ ವಿಶೇಷವಾಗಿ ಹಿಂದುಳಿದ ವರ್ಗಗಳ ಬಗ್ಗೆ ತೋರಿರುವ ಕಾಳಜಿಗೆ ಎಐಸಿಸಿ ಒಬಿಸಿ ವಿಭಾಗದ ಸಲಹಾ ಸಮಿತಿಯು, ನ್ಯಾಯ ಯೋಧರಾದ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳನ್ನು ಅರ್ಪಿಸುತ್ತದೆ. ರಾಹುಲ್ ಗಾಂಧಿಯವರ ದೃಢನಿಶ್ಚಯದಿಂದಾಗಿ ಮನುವಾದಿ ಮೋದಿ ಸರ್ಕಾರವನ್ನು ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಯಾಗಿದ್ದ ಜಾತಿ ಗಣತಿಯನ್ನು ಭಾರತದಲ್ಲಿ ಕೈಗೊಳ್ಳುವಂತೆ ಮಾಡಿತು. ಈ ಐತಿಹಾಸಿಕ ಸಾಧನೆಗಾಗಿ ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಹೃತ್ಪೂರ್ವಕವಾಗಿ ರಾಹುಲ್ ಗಾಂಧಿಯವರನ್ನು ಶ್ಲಾಘಿಸುತ್ತದೆ. ಇದೊಂದು…
ಉತ್ತರ ಕನ್ನಡ: ಜಿಲ್ಲೆಯ ಶಿರಸಿ ನಗರಸಭೆಯ ಹಾಲಿ ಸದಸ್ಯ, ಮಾಜಿ ಅಧ್ಯಕ್ಷ ಗಣಪತಿ ನಾಯಕ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿ ಆರ್.ಎಂ ವೆರ್ಣೇಕರ್ ಎಂಬುವರು 3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಗದ ವಿಷಯಕ್ಕೆ ಸಂಬಂದಪಟ್ಟಂತೆ ರಮೇಶ ಹೆಗಡೆ ಎಂಬುವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರಮೇಶ್ ಹೆಗಡೆ ಅವರು ಲೋಕಾಯುಕ್ತ ಪೊಲೀಸರಿಗೆ ಶಿರಸಿ ನಗರಸಭೆ ಸದಸ್ಯ ಗಣಪತಿ ನಾಯಕ್ ಹಾಗೂ ಕಂದಾಯ ಅಧಿಕಾರಿ ಆರ್.ಎಂ ವೆರ್ಣೇಕರ್ ವಿರುದ್ಧ ದೂರು ನೀಡಿದ್ದರು. ಇಂದು ಶಿರಸಿಯ ಟಿ ಎಸ್ ಎಸ್ ಹತ್ತಿರ ಇರುವಂತ ಜಿಯೋ ಕಚೇರಿ ಬಳಿಯಲ್ಲಿ ಮೂರು ಲಕ್ಷ ರೂ ಲಂಚ ಪಡೆಯುತ್ತಿರುವ ಸಂದರ್ಭದಲ್ಲಿ ನಗರಸಭೆಯ ಪೈಪ್ ಕಳ್ಳತನ ಆರೋಪ ಎದುರಿಸುತ್ತಿರುವ ಹಾಲಿ ಸದಸ್ಯ ಹಾಗೂ ಮಾಜಿ ಅದ್ಯಕ್ಷ ಗಣಪತಿ ನಾಯ್ಕ ಹಾಗೂ ಕಂದಾಯ ಅಧಿಕಾರಿ ಆರ್ ಎಂ ವೆರ್ಣೇಕರ್ ಅವರನ್ನು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಇದೀಗ ಅವರನ್ನು ವಶಕ್ಕೆ ಪಡೆದಿರುವಂತ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತಹಶೀಲ್ದಾರ್ ಆಗಿದ್ದಂತ ಚಂದ್ರಶೇಖರ ನಾಯಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ನೂತನ ತಹಶೀಲ್ದಾರ್ ಆಗಿ ಹೊಸನಗರ ತಹಶೀಲ್ದಾರ್ ರಶ್ಮಿ.ಹೆಚ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸನಗರ ತಹಶೀಲ್ದಾರ್ ಆಗಿದ್ದಂತ ರಶ್ಮೀ.ಹೆಚ್.ಜೆ ಅವರನ್ನು ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಇನ್ನೂ ಚಿದ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ಆಗಿದ್ದಂತ ಸಿದ್ದೇಶ್.ಎಂ ಅವರನ್ನು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಸಿ.ರಾಜೇಶ ಕುಮಾರ್ ಅವರನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ಕೆ.ಎಲ್ ನರೇಂದ್ರ ಬಾಬು ಅವರನ್ನು ಚಿಕ್ಕಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಆಗಿ, ಕೆ.ಅಶ್ವಥನಾರಾಯಣ ಅವರನ್ನು ಮಾಲೂರು ತಾಲ್ಲೂಕು ತಹಶೀಲ್ದಾರ್ ಆಗಿ, ಪಿ.ಪರಶುರಾಮ್ ಅವರನ್ನು ರಾಯಚೂರು ತಾಲ್ಲೂತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 59 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸನಗರ ತಹಶೀಲ್ದಾರ್ ಆಗಿದ್ದಂತ ರಶ್ಮೀ.ಹೆಚ್ ಅವರನ್ನು ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಇನ್ನೂ ಚಿದ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ಆಗಿದ್ದಂತ ಸಿದ್ದೇಶ್.ಎಂ ಅವರನ್ನು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಸಿ.ರಾಜೇಶ ಕುಮಾರ್ ಅವರನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ಕೆ.ಎಲ್ ನರೇಂದ್ರ ಬಾಬು ಅವರನ್ನು ಚಿಕ್ಕಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಆಗಿ, ಕೆ.ಅಶ್ವಥನಾರಾಯಣ ಅವರನ್ನು ಮಾಲೂರು ತಾಲ್ಲೂಕು ತಹಶೀಲ್ದಾರ್ ಆಗಿ, ಪಿ.ಪರಶುರಾಮ್ ಅವರನ್ನು ರಾಯಚೂರು ತಾಲ್ಲೂತು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಡಿ.ಪಾಂಡುರಂಗ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ…
ಬೆಂಗಳೂರು: ನಗರದಲ್ಲಿ ರೌಡಿಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ನಿನ್ನೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ್ನು ಕಿರಣ್, ವಿಮಲ್, ಪ್ರದೀಪ್, ಮದನ್, ಸ್ಯಾಮ್ಯುಯೆಲ್ ಪ್ಯಾಟ್ರಿಕ್ ಎಂಬುದಾಗಿ ಗುರುತಿಸಲಾಗಿದೆ. ನಿನ್ನೆ ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದರು. ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಇಂದು ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/a-8th-grade-student-wrote-a-letter-to-prime-minister-modi-requesting-to-repair-the-roads-in-our-village/ https://kannadanewsnow.com/kannada/important-information-for-those-who-have-applied-for-the-dield-diped-dpse-course/














