Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಳಗಾವಿ ಸುವರ್ಣಸೌಧ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು. ಶುಕ್ರವಾರ ವಿಧಾನ ಪರಿಷತ್ತಿನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಕೃಷ್ಣ ಬೈರೇಗೌಡ ಅವರು, “ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾರು ಹಂಗಾಮಿನಲ್ಲಿ 3,23,219 ಎಕರೆ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. ಎಸ್ಡಿಆರ್ಎಫ್ ನಿಯಮದ ಪ್ರಕಾರ ಬೆಳೆಹಾನಿಗೆ ರೂ.257.90 ಕೋಟಿ ಪರಿಹಾರ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ರೂ. 245.75 ಕೋಟಿ ಪರಿಹಾರ ಹಣ ಸೇರಿ ಒಟ್ಟಾರೆ ರೂ.498.73 ಕೋಟಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು. “ರಾಜ್ಯ ಅಂಕಿಅಂಶವನ್ನೂ ನೀಡಿದ ಅವರು, “ರಾಜ್ಯಾದ್ಯಂತ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 14,21,000 ರೈತರಿಗೆ ಎಸ್ಡಿಆರ್ಎಫ್ ನಿಯಮದ ಪ್ರಕಾರ ರೂ.1,218 ಕೋಟಿ…

Read More

ನವದೆಹಲಿ : ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಸಂಖ್ಯೆಯೂ ಸೇವ್ ಆಗದಿದ್ದರೆ ಮತ್ತು ಅಪರಿಚಿತ ಸಂಖ್ಯೆಯಿಂದ ನಿಮಗೆ ಕರೆ ಬಂದರೆ, ನಿಮ್ಮ ಮನಸ್ಸಿಗೆ ಬರುವ ಮೊದಲ ಪ್ರಶ್ನೆಯೆಂದರೆ ಕರೆ ಮಾಡುವವರು ಯಾರು ಎಂಬುದಾಗಿತ್ತು. ಆದರೇ ಇದಕ್ಕೆ ಗುಡ್ ಬಾಯ್ ಹೇಳಲಾಗಿದೆ. ಈಗ ಕರೆ ಮಾಡಿದವರ ಹೆಸರು ನಿಮ್ಮ ಮೊಬೈಲ್ ನಲ್ಲಿಯೇ ಪ್ರದರ್ಶನವಾಗಲಿದೆ. ಹೌದು. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ದೇಶಾದ್ಯಂತದ ಟೆಲಿಕಾಂ ಕಂಪನಿಗಳಿಗೆ ಕರೆ ಮಾಡುವ ಹೆಸರು ಪ್ರದರ್ಶಿಸುವುದನ್ನು ಜಾರಿಗೊಳಿಸಿದೆ. ಹೀಗಾಗಿ ಈಗ ಅಪರಿಚಿತ ವ್ಯಕ್ತಿಗಳು ನಿಮ್ಮ ಫೋನ್ ಗೆ ಕರೆ ಮಾಡಿದರೆ, ನಿಮ್ಮ ಫೋನಿನ ಪರದೆಯ ಮೇಲೆ ಅವರ ಹೆಸರನ್ನು ಕಾಣಬಹುದಾಗಿದೆ. ಸ್ಮಾರ್ಟ್ಫೋನ್ ಬಳಕೆದಾರರು ತಮ್ಮ ಫೋನ್ಗಳಲ್ಲಿ ಅಪರಿಚಿತ ಕರೆಗಳ ಬಗ್ಗೆ ಮಾಹಿತಿ ಪಡೆಯಲು ಥರ್ಡ್-ಪಾರ್ಟಿ ಅಪ್ಲಿಕೇಶನ್ಗಳನ್ನ ಬಳಸುತ್ತಿದ್ದರು.  ಇದರಲ್ಲಿ ಅನೇಕ ಬಳಕೆದಾರರು ಟ್ರೂ ಕಾಲರ್ ಆಗಿತ್ತು.. ಥರ್ಡ್ ಪಾರ್ಟಿ ಅಪ್ಲಿಕೇಶನ್’ಗಳು ತಮ್ಮ ಸೌಲಭ್ಯಗಳನ್ನ ಒದಗಿಸಲು ಅನುಸ್ಥಾಪನಾ ಸಮಯದಲ್ಲಿ ಸಾಕಷ್ಟು ಅನುಮತಿಗಳನ್ನ ಕೇಳುತ್ತವೆ. ಇದರಲ್ಲಿ ಸಂಪರ್ಕ ವಿವರಗಳು, ಫೋನ್ ಗ್ಯಾಲರಿ,…

Read More

ಮೈಸೂರು: ನೈರುತ್ಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾಯೋಗಿಕ ಆಧಾರದ ಮೇಲೆ ಡಿಸೆಂಬರ್ 15, 2025 ರಿಂದ ಮಾರ್ಚ್ 14, 2026 ರವರೆಗೆ ಮೂರು ತಿಂಗಳ ಅವಧಿಗೆ ದೇವನೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 56519/56520 ಕೆಎಸ್‌ಆರ್ ಬೆಂಗಳೂರು–ಹೊಸಪೇಟೆ–ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್ ರೈಲುಗಳಿಗೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲು ನಿರ್ಧರಿಸಿದೆ. ದೇವನೂರಿನಲ್ಲಿ ಆಗಮನ ಮತ್ತು ನಿರ್ಗಮನ ಸಮಯಗಳು: 1. ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು–ಹೊಸಪೇಟೆ ಪ್ಯಾಸೆಂಜರ್ ರೈಲು ದೇವನೂರು ನಿಲ್ದಾಣಕ್ಕೆ ಬೆಳಿಗ್ಗೆ 08:39 ಗಂಟೆಗೆ ಆಗಮಿಸಿ, 08:40 ಗಂಟೆಗೆ ನಿರ್ಗಮಿಸಲಿದೆ. 2.ರೈಲು ಸಂಖ್ಯೆ 56520 ಹೊಸಪೇಟೆ–ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್ ರೈಲು ದೇವನೂರು ನಿಲ್ದಾಣಕ್ಕೆ ಸಂಜೆ 06:36 ಗಂಟೆಗೆ ಆಗಮಿಸಿ, 18:37 ಗಂಟೆಗೆ ನಿರ್ಗಮಿಸಲಿದೆ.

Read More

ಬೆಂಗಳೂರು : ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಕೆಲಸ ನಿರ್ವಹಿಸಲಿದೆ. ರಾಮನಗರದಲ್ಲೇ ಮೇಕೆದಾಟು ಯೋಜನೆ ಕಚೇರಿ ಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. 18.11.2025 ರಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಒಂದು ಮುಖ್ಯ ಇಂಜಿನಿಯ‌ರ್ ಕಚೇರಿ ಹಾಗೂ ಒಂದು ಅಧೀಕ್ಷಕ ಇಂಜಿನಿಯರ್ ಕಚೇರಿಯನ್ನು ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಹೊಸದಾಗಿ ಕಚೇರಿ ಸ್ಥಾಪನೆ ಹಾಗೂ ಹುದ್ದೆಗಳ ನೇಮಕಕ್ಕೆ ಆರ್ಥಿಕ ಇಲಾಖೆಯ ಅನುಮತಿ ಅಗತ್ಯವಾಗಿದ್ದು, ಇದಕ್ಕೆ ಬಹಳಷ್ಟು ಸಮಯಾವಕಾಶ ಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಈ ಯೋಜನೆ ಜಾರಿಯ ಜವಾಬ್ದಾರಿಯನ್ನು ಕೆಇಆರ್ ಎಸ್…

Read More

ಬೆಳಗಾವಿ: ಆರ್ ಸಿ ಬಿ ಸಂಭ್ರಮಾಚರಣೆ ದುರಂತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವುದಕ್ಕೆ ಸಂಪುಟ ಅಸ್ತು ಎಂದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಗೃಹ ಇಲಾಖೆಗೆ ಜವಾಬ್ದಾರಿ ನೀಡಿ, ಕ್ರಿಕೆಟ್ ಮ್ಯಾಚ್ ಗಳಿಗೆ ಅವಕಾಶ ನೀಡಲಾಗಿದೆ. ನಿವೃತ್ತ ನ್ಯಾಯಮೂರ್ತಿ ಕುನ್ಹಾ ವರದಿ ಶಿಫಾರಸ್ಸು ಅಳವಡಿಸಿಕೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಡಿಸುವುದಕ್ಕೆ ಸಂಪುಟ ಅಸ್ತು ಎಂದಿದೆ. ಕ್ರಿಕೆಟ್ ಪಂದ್ಯ ನಡೆಯುವ ಸಂದರ್ಭದಲ್ಲಿ ಭದ್ರತೆ ಬಗ್ಗೆಯೂ ಚರ್ಚೆ ನಡಸಲಾಗಿದೆ.

Read More

ಬೆಳಗಾವಿ ಸುರ್ಣಸೌಧ : ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಾಲಾ ಕಿಟ್‌ ನೀಡುವ ಬಗ್ಗೆ ಪುನರ್‌ ಪರಿಶೀಲನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಭರವಸೆ ನೀಡಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಲ್ಕನೇ ದಿನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್‌ ಪೂಂಜಾ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಈವರೆಗೆ ೧೩ ಲಕ್ಷಕ್ಕೂ ಹೆಚ್ಚು ಮಕ್ಕಳಿಗೂ ಸ್ಕಾಲರ್‌ ಶಿಪ್‌ ನೀಡಿದ್ದೇವೆ. ಹಾಗಾಗಿ ಶಾಲಾ ಕಿಟ್‌ ಕೊಡುವ ಅಗತ್ಯ ಇಲ್ಲ ಎಂದು ಮಂಡಳಿಯಲ್ಲಿ ತೀರ್ಮಾನ ಆಗಿದೆ. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಶಾಲಾ ಕಿಟ್‌ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಬಗ್ಗೆ ಚರ್ಚಿಸೋಣ ಎಂದು ಹೇಳಿದರು. ಟೂಲ್‌ ಕಿಟ್‌: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಟೂಲ್‌ ಕಿಟ್‌ಗಳನ್ನು ನೀಡಲಾಗುತ್ತಿಲ್ಲ ಎಂಬ ಶಾಸಕ ಹರೀಶ್‌ ಪೂಂಜಾ…

Read More

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್(RIG) ಉಚಿತವಾಗಿ ಒದಗಿಸುವಂತೆ ಪರಿಷ್ಕೃತ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಆಂಟಿ ರೇಬೀಸ್ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಬಗ್ಗೆ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, ಈ ಅಗತ್ಯ ಚಿಕಿತ್ಸೆಗಳ ಲಭ್ಯತೆಯನ್ನು ಸುಗಮಗೊಳಿಸಲು ಈ ಕೆಳಗಿನ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದಿದ್ದಾರೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರೇಬೀಸ್ ವಿರೋಧಿ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಕುರಿತು 30.11.2024 ರಂದು ಹೊರಡಿಸಲಾದ ಅದೇ ಸಮ ಸಂಖ್ಯೆಯ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, 2025 ರ 07.11.2025 ರ ರಿಟ್ ಅರ್ಜಿ (ಸಿವಿಲ್) ಸಂಖ್ಯೆ (ಗಳು) 5 ರಲ್ಲಿ ಭಾರತದ ಗೌರವಾನ್ವಿತ…

Read More

ಬೆಳಗಾವಿ ಸುವರ್ಣಸೌಧ : ಉತ್ತರ ಕರ್ನಾಟಕ ಭಾಗದಲ್ಲಿ ಇಎಸ್‌ಐ ಆಸ್ಪತ್ರೆಗೆ ಬೇಡಿಕೆ ಇದೆ. ಆದರೆ ಐಪಿ ಹೋಲ್ಡರ್‌ (ESI ಯೋಜನೆಯಲ್ಲಿ ನೋಂದಾಯಿಸಿದ ವಿಮೆ ಮಾಡಿದ ವ್ಯಕ್ತಿ (Insured Person) ಕಡಿಮೆ ಇರುವ ಕಾರಣ ಇಎಸ್‌ಐ ಆಸ್ಪತ್ರೆಗೆ ಅನುಮತಿ ಸಿಗುತ್ತಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಲ್ಕನೇ ದಿನ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿ ರಾಣೆಬೆನ್ನೂರಿನ ಶಾಸಕರಾದ ಪ್ರಕಾಶ್‌ ಕೋಳಿವಾಡ ಅವರ ಪ್ರಶ್ನೆಗೆ ಉತ್ತರ ನೀಡಿದರು. ಇಎಸ್‌ಐ ಆಸ್ಪತ್ರೆ ಆಗಲು ೫೦ ಸಾವಿರ ಐಪಿ ಹೋಲ್ಡರ್‌ ಇರಬೇಕು. ಎರಡು ಅಥವಾ ಮೂರು ಜಿಲ್ಲೆಗೆ ಸೇರಿ ಒಂದು ಇಎಸ್‌ಐ ಆಸ್ಪತ್ರೆಗೆ ಅವಕಾಶ ನೀಡಲು ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆದಿದ್ದೇನೆ. ಅನುಮತಿ ಸಿಕ್ಕರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇಎಸ್‌ಐ ಆಸ್ಪತ್ರೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಇದೆ.…

Read More

ಬೆಳಗಾವಿ: ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ನರ್ಸ್ ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ವೈದ್ಯಾಧಿಕಾರಿಗಳನ್ನು ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 1 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ…

Read More

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು. ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ ಸಭಾಂಗಣದಲ್ಲಿ ಡಿಸೆಂಬರ್ 10 ಮತ್ತು 11, 2025 ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಯಿತು. ಕವಿಪ್ರನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನೇತೃತ್ವದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಂಡು, 448 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ನಿಗಮದ ಉನ್ನತಾಧಿಕಾರಿಗಳು ವಿತರಿಸಿದರು. ಎರಡು ದಿನಗಳ ಕಾಲ ನಡೆದ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಂತ್ರಾಂಶವನ್ನು ನಿಗಮದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಅಧಿಕಾರಿಗಳು ಅಭಿವೃದ್ದಿ ಪಡಿಸಿದ್ದರು. ಕೆಪಿಟಿಸಿಎಲ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವಂತೆ ಒಟ್ಟು 491 ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಯ್ಕೆಗೊಂಡಿದ್ದು, ಈ ಪೈಕಿ 448 ಅಭ್ಯರ್ಥಿಗಳಿಗೆ ಈಗ ನೇಮಕಾತಿ ಆದೇಶಗಳನ್ನು ವಿತರಿಸಲಾಗಿದೆ. ಉಳಿದ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅವರ ಮೀಸಲಾತಿ ನೈಜತೆ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರಗಳು ಸ್ವೀಕೃತಗೊಂಡ ನಂತರ ನೇಮಕಾತಿ ಆದೇಶಗಳನ್ನು…

Read More