Author: kannadanewsnow09

ಲಕ್ನೋ: ಸಾಲದ ಬಾಧೆಯಿಂದ ಬೇಸತ್ತಂತ ದಂಪತಿಗಳು ತಮ್ಮ ನಾಲ್ಕು ತಿಂಗಳ ಮಗುವಿಗೆ ವಿಶವಿಟ್ಟು, ತಾವು ಆತ್ಮಹತ್ಯೆಗೆ ಮಾಡಿಕೊಂಡಿರುವಂತ ಧಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್(30) ಮತ್ತು ಪತ್ನಿ ಶಿವಾನಿ(28) ಸಾಲದ ಸುಳಿಗೆ ಸಿಲುಕಿದ್ದರು. ಸಾಲದ ಬಾಧೆಯಿಂದ ಬೇಸತ್ತಂತ ದಂಪತಿಗಳು ಬುಧವಾರ ಬೆಳಗ್ಗೆ ತಮ್ಮ ನಾಲ್ಕು ತಿಂಗಳ ಗಂಡು ಮಗು ಫತೇಹ್ ಗೆ ವಿಷ ವಿಟ್ಟು, ತಾವೂ ಮನೆಯಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಉದ್ಯಮಿ ಸಚಿನ್ ತಾನು ಸಾಲದ ಹೊರೆಯಿಂದ ಬಳಲುತ್ತಿದ್ದೇನೆ. ಆದಾಯದ ಕೊರತೆಯಿಂದಾಗಿ ನೊಂದು ಹೋಗಿದ್ದೇನೆ. ದಯವಿಟ್ಟು ನಮ್ಮ ಕಾರು, ಮನೆ ಮಾರಾಟ ಮಾಡಿ ಸಾಲ ತೀರಿಸಿಬಿಡಿ. ಸಾಲ ಕೊಟ್ಟವರು ನೊಂದುಕೊಳ್ಳಬಾರದು ಎಂಬುದಾಗಿ ಹೇಳಿದ್ದಾರೆ. ಅಂದಹಾಗೇ ದಂಪತಿಗಳು ಮಂಗಳವಾರ ರಾತ್ರಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದರೇ, ಮಗುವಿನ ಶವವು ಮತ್ತೊಂದು ಕೋಣೆಯಲ್ಲಿ ಪತ್ತೆಯಾಗಿದೆ. ಸಚಿನ್-ಶಿವಾನಿ…

Read More

ದಕ್ಷಿಣ ಕನ್ನಡ: ನಾನು ಹೇಳಿದ್ದು ಎಲ್ಲವೂ ಸುಳ್ಳು. ತಪ್ಪಾಯ್ತು. ನನ್ನನ್ನು ಬಿಟ್ಟು ಬಿಡಿ. ಕೇಸ್ ಹಿಂಪಡೆಯುತ್ತೇನೆ ಎಂಬುದಾಗಿ ಸುಜಾತಾ ಭಟ್ ಕಣ್ಣೀರಿಟ್ಟಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿನ ಎಸ್ಐಟಿ ಪೊಲೀಸರ ವಿಚಾರಣೆಗೆ ಹಾಜರಾದಂತ ಅವರು, ನಾನು ಹೇಳಿದ್ದು ಎಲ್ಲವೂ ಸುಳ್ಳು, ತಪ್ಪಾಯ್ತು. ನನ್ನ ಕೇಸ್ ಹಿಂಪಡೆಯುತ್ತೇನೆ. ಬಿಟ್ಟು ಬಿಡಿ ಎಂಬುದಾಗಿ ಗೋಗರೆದಿರುವುದಾಗಿ ಹೇಳಲಾಗುತ್ತಿದೆ. ವಿಚಾರಣೆಯ ವೇಳೆಯಲ್ಲಿ ದೂರು ಹಿಂಪಡೆಯುವುದಾಗಿ ಸುಜಾತಾ ಭಟ್ ಹೇಳಿದ್ದಾರೆ. ಆದರೇ ಸುಜಾತಾ ಭಟ್ ಹೇಳಿಕೆಗೆ ಎಸ್ಐಟಿ ಅಧಿಕಾರಿಗಳು ಸಮ್ಮತಿಸಿಲ್ಲ. ಬದಲಾಗಿ ವಿಚಾರಣೆಯನ್ನು ಎಸ್ಐಟಿ ಅಧಿಕಾರಿಗಳು ಮುಂದುವರೆಸಿದ್ದಾರೆ. ಸುಜಾತ ಭಟ್ ಗೆ ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಇಂದಿನ ಎಸ್ಐಟಿ ವಿಚಾರಣೆ ವೇಳೆಯಲ್ಲಿ ಎಲ್ಲಾ ಸತ್ಯವನ್ನು ಸುಜಾತಾ ಭಟ್ ಹೇಳಿದ್ದಾರೆ ಎನ್ನಲಾಗುತ್ತಿದೆ. ನಾನು ಹೇಳಿದ್ದೆಲ್ಲ ಸುಳ್ಳು. ತಪ್ಪಾಯ್ತು ಬಿಟ್ಟುಬಿಡಿ ಎಂಬುದಾಗಿ ಕಣ್ಣೀರನ್ನು ಎಸ್ಐಟಿ ಅಧಿಕಾರಿಗಳ ಮುಂದೆ ಸುಜಾತಾ ಭಟ್ ಹಾಕಿದ್ದಾರೆ. ಅಲ್ಲದೇ ಸುಳ್ಳು ಹೇಳಿದ್ದರ ಹಿಂದಿರುವವರ ಹೆಸರನ್ನು ಕೂಡ ಸುಜಾತಾ ಭಟ್ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಸುಜಾತಾ ಭಟ್…

Read More

ಬೆಂಗಳೂರು: ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (Karnataka Milk Federation -KMF) ತನ್ನ ಮಾರುಕಟ್ಟೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿದ್ದು, ಲ್ಯಾಕ್ಟೋಸ್ ಅಸಹಿಷ್ಣುತೆ ಇರುವವರಲ್ಲಿ ಲ್ಯಾಕ್ಟೋಸ್ ಮುಕ್ತ ಹಾಲನ್ನು ಪರಿಚಯಿಸಲು ಯೋಜಿಸುತ್ತಿದೆ. ಇದಲ್ಲದೆ, ಕೆಎಂಎಫ್ ಪ್ರೋಟೀನ್ ಭರಿತ ಹಾಲು ಮತ್ತು ಎಮ್ಮೆ ಹಾಲಿಗೆ ಮಾರುಕಟ್ಟೆಯನ್ನು ಅನ್ವೇಷಿಸಲು ಯೋಜಿಸುತ್ತಿದೆ. ಈ ವಲಯದಲ್ಲಿ ಸಾಕಷ್ಟು ಸ್ಪರ್ಧೆ ಇದೆ ಮತ್ತು ನಮ್ಮ ಸ್ಪರ್ಧಿಗಳು ಅಂತಹ ಹೊಸ ಬಗೆಯ ಹಾಲನ್ನು ಪರಿಚಯಿಸುತ್ತಿದ್ದಾರೆ. ಅದಕ್ಕೆ ಬೇಡಿಕೆಯೂ ಇದೆ. ಆದ್ದರಿಂದ, ನಾವು ಅಂತಹ ಹೊಸ ಉತ್ಪನ್ನಗಳನ್ನು ಪ್ರಯತ್ನಿಸುತ್ತಿದ್ದೇವೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಬಿ ಹೇಳಿದರು. ಎಮ್ಮೆ ಹಾಲು ಕೂಡ ದೊಡ್ಡ ಮಾರುಕಟ್ಟೆಯನ್ನು ಹೊಂದಿದೆ, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಮತ್ತು ಆದ್ದರಿಂದ, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಅಧಿಕಾರಿಗಳು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಲು ಯೋಜಿಸುತ್ತಿದ್ದಾರೆ. “ಪ್ರೋಟೀನ್ ಭರಿತ ಆಹಾರಗಳು ಈಗ ಜನರಲ್ಲಿ, ವಿಶೇಷವಾಗಿ ಯುವಕರಲ್ಲಿ ಬಹಳ ಜನಪ್ರಿಯವಾಗಿವೆ. ಆದ್ದರಿಂದ, ಈ ವರ್ಗದ ಗ್ರಾಹಕರನ್ನು ಪೂರೈಸಲು ಪ್ರೋಟೀನ್ ಭರಿತ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಸಂಬಳ ಪ್ಯಾಕೇಜ್ ಎಂದು ತಮ್ಮ ಬ್ಯಾಂಕ್ ಖಾತೆಯನ್ನು ನೋಂದಾಯಿಸಿಕೊಳ್ಳಲು ಹಾಗೂ ಪಿಎಂಇಬಿವೈ ಮತ್ತು ಪಿಎಂಜೆಜೆಬಿವೈ ವಿಮಾ ಯೋಜನೆ ಪಡೆಯಲು ಸೂಚಿಸಲಾಗಿದೆ. ಅದರಂತೆ ಎ ಗುಂಪಿನ ಅಧಿಕಾರಿಗಳಇಗೆ ಹೆಚ್ ಆರ್ ಎಂಎಸ್ ನಲ್ಲಿ ನೋಂದಾಯಿಸಲು ದಿನಾಂಕ 31-08-2025ರವರೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ಈ ಕೊನೆಯ ದಿನಾಂಕದೊಳಗೆ ನೋಂದಾಯಿಸಿಕೊಳ್ಳದಿದ್ದರೇ ವೇತನವನ್ನು ಹೆಚ್ ಆರ್ ಎಂ ಎಸ್ ನಲ್ಲಿ ತಡೆಹಿಡಿಯಲಾಗುವುದು ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿರುವಂತ ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರು,  ಸರ್ಕಾರದ ಇಲಾಖೆಗಳಲ್ಲಿ ನೇರವಾಗಿ/ಪರೋಕ್ಷವಾಗಿ ಇರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ಜಾಲವನ್ನು ಜಾರಿಗೆ ತರಲು ಅಥವಾ ಹೆಚ್ಚಿಸಲು ಉದ್ದೇಶಿಸಿರುವ ಸರ್ಕಾರಿ ಆದೇಶ ಸಂಖ್ಯೆ ಎಫ್‌ಡಿ-ಸಿಎಎಂ/1/2025, ದಿನಾಂಕ: 21.02.2025 ರ ಬಗ್ಗೆ ತಮ್ಮ ಗಮನವನ್ನು ಸೆಳೆಯಲಾಗಿದೆ. ಮೇಲಿನ ಸರ್ಕಾರಿ ಆದೇಶದ ಉದ್ದೇಶವೆಂದರೆ ವಿವಿಧ ಬ್ಯಾಂಕುಗಳು ತಮ್ಮ ಸಂಬಳ ಪ್ಯಾಕೇಜುಗಳಲ್ಲಿ ಉಚಿತವಾಗಿ ಅಥವಾ…

Read More

ಬೆಂಗಳೂರು: ಬುರುಡೆ ಚಿನ್ನಯ್ಯ ಆರೋಪ ಸತ್ಯ. ನೂರಾರು ಹೆಣಗಳನ್ನು ಹೂತಿಟ್ಟಿರುವುದು ನಿಜ ಎಂಬುದಾಗಿ ಸೌಜನ್ಯ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವೀಡಿಯೋ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿರುವಂತ ಅವರು, ದೂರುದಾರ ಭಯದಿಂದ ತಪ್ಪು ಸ್ಥಳ ತೋರಿಸಿದ್ದಾನೆ. ಭಯದಿಂದ ಸ್ಥಳಗಳನ್ನು ಗುರುತಿಸುವಲ್ಲಿ ಎಡವಿದ್ದಾನೆ. ಎಸ್ಐಟಿ ವಿಚಾರಣೆಗೆ ಕರೆದ್ರೆ ಸಂಭ್ರಮದಿಂದ ಹೋಗುತ್ತೇನೆ ಎಂದರು. ದೂರುದಾರನಿಗೆ ರಕ್ಷಣೆ ಕೊಟ್ಟಿದ್ದು ನಾವೇ. ಇಷ್ಟು ದೊಡ್ಡ ಸಾಕ್ಷಿಗೆ ಯಾರೂ ಬೆಂಬಲಿಸಲ್ಲ. ನಾವು ಧೈರ್ಯವಾಗಿ ಮುಂದೆ ನಿಂತೆವು. ತಿಮರೋಡಿ ನ್ಯಾಯದ ಪರವಾಗಿ ಇರೋರು ಎಂದರು. https://kannadanewsnow.com/kannada/mysugar-factory-in-mandya-halted-due-to-technical-fault/ https://kannadanewsnow.com/kannada/good-news-for-farmers-of-the-state-special-campaign-for-record-amendment-starts-from-september-1/

Read More

ಮಂಡ್ಯ: ತಾಂತ್ರಿಕ ದೋಷಕ್ಕೆ ಮಂಡ್ಯದ ಮೈಶುಗರ್ ಕಾರ್ಖಾನೆ ಸ್ಥಗಿತಗೊಂಡಿದೆ. ಹೀಗಾಗಿ ಕಾರ್ಖಾನೆಗೆ ರೈತ ಮುಖಂಡರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೈಶುಗರ್ ಕಾರ್ಖಾನೆಯ ಆವರಣದಲ್ಲಿ ಕಬ್ಬು ತಂದು ಕಾಯುತ್ತಿದ್ದ ರೈತರ ಸಮಸ್ಯೆಗಳ ಬಗ್ಗೆ ಎಂಡಿಗೆ ಮಾಹಿತಿಯನ್ನು ರೈತ ಮುಂಖಂಡರು ನೀಡಿದ್ದಾರೆ. ಎರಡೆರಡು ದಿನಕ್ಕೂ ಕೆಟ್ಟು ನಿಲ್ಲುತ್ತಿರುವ ಮೈಶುಗರ್ ಕಾರ್ಖಾನೆ ವಿರುದ್ದ ರೈತರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬು ಅರೆಯುವಿಕೆ ಸರಿಯಾಗಿ ನಡೆಯದೆ ರೈತರು ಹೈರಾಣಾಗಿದ್ದಾರೆ. ಬೆಳೆದ ಕಬ್ಬು ತಂದು ಕಾರ್ಖಾನೆಯಲ್ಲಿ ದಿನಗಟ್ಟಲೆ ರೈತರು ಕಾಯುತ್ತಿದ್ದಾರೆ. ಕುಡಿಯುವ ನೀರು, ಮೂಲಭೂತ ವ್ಯವಸ್ಥೆ ಆಗ್ರಹಿಸಿದ್ದಾರೆ. ಮೈಶುಗರ್ ಎಂಡಿ ಜೊತೆಯಲ್ಲಿ ಕಾರ್ಖಾನೆ ಪರಿಶೀಲನೆಯನ್ನು ರೈತ ಮುಂಖಂಡರು ನಡೆಸಿದರು. ಆ ಬಳಿಕ ಮೈಶುಗರ್ ಅಧ್ಯಕ್ಷ ಹಾಗೂ ಎಂಡಿ ಜೊತೆ ಸಭೆ ನಡೆಸಲಾಯಿತು. ರೈತರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕಾರ್ಖಾನೆ ಸ್ಥಗಿತ, ಕಬ್ಬು ಅರೆಯುವಿಕೆ ತಾಂತ್ರಿಕ ದೋಷ, ಕಬ್ಬಿನ ಹಾಲು ಲಿಕೇಜ್, ಕಬ್ಬು ಒಣಗುತ್ತಿರುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮೂಲ ಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಲಾಗಿದೆ. ಸರಿಯಾದ…

Read More

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್ ಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಪ್ರಮುಖ ಕಲ್ಯಾಣಿಗಳಲ್ಲಿ ಅಗತ್ಯ ವ್ಯವಸ್ಥೆ: ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ…

Read More

ಬೆಂಗಳೂರು: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ಗೀತೆಯನ್ನು ಹೇಳಬಾರದಿತ್ತು ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದಕ್ಕೆ ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಅಲ್ಲಿಗೆ ಎಲ್ಲ ಮುಗೀತು ಎಂದರು. ಪದೇ ಪದೇ ಡಿ.ಕೆ ಶಿವಕುಮಾರ್ ಸದನದಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದನ್ನು ಎತ್ತಿಹಿಡಿಯುವುದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡುವುದಕ್ಕೆ ನಾನು ಹೋಗೋದಿಲ್ಲ. ಇನ್ಮುಂದೆ ಯಾರೂ ಹೀಗೆ ಮಾಡಬಾರದು ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು. https://kannadanewsnow.com/kannada/chamundeshwari-is-the-presiding-deity-of-our-land-and-everyone-has-the-right-to-her-vision-dk-shivakumars-clarification/ https://kannadanewsnow.com/kannada/good-news-for-farmers-of-the-state-special-campaign-for-record-amendment-starts-from-september-1/

Read More

ಬೆಂಗಳೂರು : “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ” ಎಂದರು. ಎಲ್ಲಿದೆ ನಿಯಮ ತೋರಿಸಿ?: “ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ,…

Read More

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಆಗಸ್ಟ್.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು, ಆಗಸ್ಟ್.30ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೆ ಗುಡುಗು, ಗಾಳಿ ಸಹಿತ ಸಾಧಾರಣ ಮಳೆಯು ಅಲ್ಲಲ್ಲಿ ಆಗಲಿದೆ ಎಂಬುದಾಗಿ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದಾನೆ. ಇದರ ನಡುವೆ ಬೀದರ್ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಭಾಲ್ಕಿ, ಔರಾದ್, ಬಸವಕಲ್ಯಾಣ, ಹುಮ್ನಾಬಾದ್ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ವಿವಿಧೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಬೆಳೆ ನಾಶವಾಗುವಂತ ಭೀತಿಯಲ್ಲಿ ಅನ್ನದಾತರಿದ್ದಾರೆ. https://kannadanewsnow.com/kannada/lets-go-to-the-bjps-pilgrimage-site-its-about-politics-not-about-religion-dk-shivakumar/ https://kannadanewsnow.com/kannada/good-news-for-farmers-of-the-state-special-campaign-for-record-amendment-starts-from-september-1/

Read More