Author: kannadanewsnow09

ಬೆಂಗಳೂರು: ಕೇರಳದ ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ ತರಲು ನಿರ್ಧರಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ಹೇಳಿದ್ದಾರೆ. https://twitter.com/KarnatakaVarthe/status/1822223370655605163 https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/wayanad-tragedy-minister-m-b-patil-urges-businessmen-to-lend-a-helping-hand/ https://kannadanewsnow.com/kannada/tungabhadra-dam-crest-gate-washed-away-deputy-cm-dk-shivakumar-to-meet-today/

Read More

ಬೆಂಗಳೂರು: ಕಂಡುಕೇಳರಿಯದ ಭೂಕುಸಿತದಿಂದ ನಲುಗಿರುವ ಕೇರಳದ ವಯನಾಡ್ ಜನತೆಯ ನೆರವಿಗೆ ರಾಜ್ಯದ ಕೈಗಾರಿಕೋದ್ಯಮಿಗಳು ಧಾವಿಸಿ, ಸಹಾಯಹಸ್ತ ಚಾಚಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮನವಿ ಮಾಡಿದ್ದಾರೆ. ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಸಂಬಂಧ ಯಾವುದೇ ಮಾಹಿತಿ/ಮಾರ್ಗದರ್ಶನ ಬೇಕಾದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರನ್ನು ದೂರವಾಣಿ ಸಂಖ್ಯೆ 080-22386796 ಅಥವಾ ಮಿಂಚಂಚೆ officeofdicommissioner@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ. ನೆರೆಯ ರಾಜ್ಯವು ಈಗ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ತತ್ತರಿಸಿದೆ. ಆ…

Read More

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಕಾಫಿ ಔಟ್ ಲೆಟ್ ನ ಕಸದ ಬುಟ್ಟಿಯೊಳಗೆ ಸುಮಾರು ಎರಡು ಗಂಟೆಗಳ ಕಾಲ ವೀಡಿಯೊ ರೆಕಾರ್ಡಿಂಗ್ ಮಾಡಿದಂತ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಸಂಬಂಧ ಕೆಫೆ ಸಿಬ್ಬಂದಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾನಗರದ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಔಟ್ ಲೆಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶೌಚಾಲಯದಲ್ಲಿ ಫೋನ್ ಅಡಗಿಸಿಟ್ಟಿದ್ದಾರೆ ಎಂದು ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ ಇನ್ಸ್ಟಾಗ್ರಾಮ್ ಹ್ಯಾಂಡಲ್ ಈ ಆಘಾತಕಾರಿ ಘಟನೆಯನ್ನು ವಿವರಿಸಿದ ಕಥೆಯನ್ನು ಪೋಸ್ಟ್ ಮಾಡಿದೆ. “ನಾನು ಬೆಂಗಳೂರಿನ ಥರ್ಡ್ ವೇವ್ ಕಾಫಿ ಔಟ್ ಲೆಟ್ ನಲ್ಲಿದ್ದೆ. ಶೌಚಾಲಯದ ಸೀಟಿಗೆ ಎದುರಾಗಿ ಸುಮಾರು 2 ಗಂಟೆಗಳ ಕಾಲ ವೀಡಿಯೊ ರೆಕಾರ್ಡಿಂಗ್ ಮಾಡುತ್ತಿರುವ ಫೋನ್ ಅನ್ನು ಮಹಿಳೆಯೊಬ್ಬರು ಕಸದ ಬುಟ್ಟಿಯಲ್ಲಿ ಅಡಗಿಸಿಟ್ಟಿರುವುದನ್ನು ಕಂಡುಕೊಂಡಿದ್ದಾರೆ. ಇದು ಫ್ಲೈಟ್ ಮೋಡ್ನಲ್ಲಿತ್ತು, ಆದ್ದರಿಂದ ಅದು ಯಾವುದೇ ಶಬ್ದವನ್ನು ಮಾಡುವುದಿಲ್ಲ” ಎಂದು ಕಥೆಯಲ್ಲಿ ತಿಳಿಸಲಾಗಿದೆ. ಕ್ಯಾಮೆರಾವನ್ನು ಮಾತ್ರ ಬಹಿರಂಗಪಡಿಸಲು ಫೋನ್ ಅನ್ನು…

Read More

ರಾಯಚೂರು: ಕರ್ನಾಟಕದಲ್ಲಿ ವಾಸಿಸುತ್ತಿದ್ದಂತ ಐವರು ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ. ಕರ್ನಾಟಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಪ್ ಗಳಲ್ಲಿ ಐವರು ಬಾಂಗ್ಲಾ ನಿರಾಶ್ರಿತರು ವಾಸಿಸುತ್ತಿದ್ದರು. ಅವರಿಗೆ ಸಿಎಎ ಅಡಿಯಲ್ಲಿ ಈಗ ಭಾರತೀಯ ಪೌರತ್ವ ದೊರೆತಿದೆ. ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಗ್ ನ ನಿವಾಸಿಗಳಾದಂತ ರಾಮಕೃಷ್ಣನ್ ಅಭಿಕರಿ, ಸುಕುಮಾರ, ಮೊಂಡಲ್, ಬಿ.ಪ್ರಸಾದ ಗೋಲ್ಡರ್, ಜಯಂತ್ ಮೊಂಡಲ್ ಹಾಗೂ ಅದ್ವಿತ ಎಂಬುವರಿಗೆ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ನೀಡಿದಂತ ಸೂಚನ ಪತ್ರವನ್ನು ನೀಡಲಾಗಿದೆ. ಅಂದಹಾಗೇ 1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರು ಭಾರತಕ್ಕೆ ಆಗಮಿಸಿದ್ದರು. ಅವರು ಅಲ್ಲಿಂದ ಇಲ್ಲಿಯೇ ಆಶ್ರಯ ಪಡೆದುಕೊಂಡಿದ್ದರು. ಹೀಗೆ ಬಂದಂತ ಬಾಂಗ್ಲಾ ವಲಸಿಗರಲ್ಲಿ ಸಿಂಧನೂರು ತಾಲ್ಲೂಕಿನಲ್ಲೇ ಸುಮಾರು 932 ಕುಟುಂಬಗಳಿವೆ. ಅವರಿಗೆ 5 ಎಕರೆ ಜಮೀನು ನೀಡಲಾಗಿತ್ತು. ಈ ಕುಟುಂಬಗಳಿಗೆ ಯಾವುದೇ ಸೌಲಭ್ಯ ನೀಡಲಾಗಿರಲಿಲ್ಲ. ಕಳೆದ 40 ವರ್ಷಗಳಿಂದ ಅರ್ಜಿ ಹಾಕುತ್ತಲೇ ಬಂದಿದ್ದರು.…

Read More

ನೀವು ಟ್ವಿಟರ್ ಅನ್ನು ಬಳಸಿದ್ದರೆ (ಅದು X ಗೆ ಬದಲಾಗುವ ಮೊದಲು), ನೀವು ಬ್ಲೂ ಟಿಕ್ ಬಗ್ಗೆ ತಿಳಿದಿರಬೇಕು. ಇದನ್ನು ಗಮನಾರ್ಹ ಖಾತೆಗಳಿಗೆ ಮಾತ್ರ ನೀಡಲಾಗುತ್ತಿತ್ತು ಮತ್ತು ಪರಿಶೀಲಿಸಿದ ಖಾತೆ ಮಾಲೀಕರಿಗೆ ಖ್ಯಾತಿಯನ್ನು ಆಕರ್ಷಿಸಿತು. ಆದಾಗ್ಯೂ, ಎಲೋನ್ ಮಸ್ಕ್ ಅಧಿಕಾರ ವಹಿಸಿಕೊಂಡ ನಂತರ ಟ್ವಿಟರ್ ಎಕ್ಸ್ ಆಗಿ ಮಾರ್ಪಟ್ಟಾಗ, ಪರಿಶೀಲನೆ ಮತ್ತು ಆದ್ದರಿಂದ ಬ್ಲೂ ಟಿಕ್ ಪಾವತಿ ವೈಶಿಷ್ಟ್ಯವಾಯಿತು. ಮೆಟಾ ತನ್ನ ಸೇವೆಗಳಾದ್ಯಂತ ಪಾವತಿಸಿದ ಪರಿಶೀಲನೆಯನ್ನು ನೀಡಲು ಇದನ್ನು ಅನುಸರಿಸಿತು. ಅಂದರೆ ನಿಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್ ಪಕ್ಕದಲ್ಲಿ ನೀವು ಸುಲಭವಾಗಿ ಬ್ಲೂ ಟಿಕ್ ಪಡೆಯಬಹುದು. ನೀವು ನಿಜವಾದ ಬಳಕೆದಾರರು ಎಂದು ಇದು ಖಚಿತಪಡಿಸುತ್ತದೆಯಾದರೂ, ಹೊಸ ಬ್ಲೂ ಟಿಕ್ ಹಲವಾರು ವೈಶಿಷ್ಟ್ಯಗಳನ್ನು ಸಹ ತರುತ್ತದೆ – ಎಲ್ಲವೂ ಮೆಟಾ ವೆರಿಫೈಡ್ ಪ್ರೋಗ್ರಾಂ ಅಡಿಯಲ್ಲಿ ಲಭ್ಯವಿದೆ. ಮೆಟಾ ವೆರಿಫೈಡ್ ಬಳಸಿ ನಿಮ್ಮ ಇನ್ಸ್ಟಾಗ್ರಾಮ್ ಖಾತೆಗೆ ಬ್ಲೂ ಟಿಕ್ ಪಡೆಯುವುದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಪರಿಶೀಲನೆಯ ಮಹತ್ವ ಇನ್ಸ್ಟಾಗ್ರಾಮ್ನಲ್ಲಿ ಪರಿಶೀಲನೆಯು ವ್ಯಕ್ತಿಗಳು ಮತ್ತು…

Read More

ಬೆಂಗಳೂರು: ವಿಜಯನಗರ ಜಿಲ್ಲೆಯ ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಹಿನ್ನಲೆಯಲ್ಲಿ, ಡ್ಯಾಂಗೆ ತೆರಳಿ ಪರಿಶೀಲನೆ ನಡೆಸಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಟಿಬಿ ಡ್ಯಾಂಗೆ ತೆರಳುತ್ತಿದ್ದಾರೆ. ಈ ಕುರಿತಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕ್ರೆಸ್ಟ್ ಗೇಟ್ ಮುರಿದಿರುವ ವಿಜಯನಗರದ ತುಂಗಭದ್ರಾ ಜಲಾಶಯಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ 12.30 ಭೇಟಿ ನೀಡಲಿದ್ದಾರೆ ಎಂದು ತಿಳಿಸಿದೆ. ಬೆಂಗಳೂರಿಂದ ಹೆಲಿಕಾಪ್ಟಾರ್ ನಲ್ಲಿ ವಿಜಯನಗರದ ಹೊಸಪೇಟೆಗೆ ತೆರಳಲಿರುವ ಡಿಸಿಎಂ ಅವರು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ ಎಂದು ಹೇಳಿದೆ. https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/ladies-and-gentlemen-are-you-going-to-a-coffee-shop-in-bangalore-read-this-news/

Read More

ಬೆಂಗಳೂರು: ನಗರದಲ್ಲಿನ ಕೆಫೆಗಳಿಗೆ ಕಾಫಿ ಕುಡಿಯೋದಕ್ಕೆ ಅನೇಕ ಯುವತಿಯರು, ಮಹಿಳೆಯರು ಹೋಗ್ತಾ ಇರುತ್ತೀರಿ. ನೀವು ಹೀಗೆ ಹೋಗ್ತಾ ಇದ್ದರೇ ಎಚ್ಚರ ಎನ್ನುವಂತೆ ಅದಕ್ಕೂ ಮುನ್ನಾ ಮುಂದೆ ಸುದ್ದಿ ಓದಿ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕೆಫೆಯೊಂದಕ್ಕೆ ಕಾಫಿಗಾಗಿ ಮಹಿಳೆಯೊಬ್ಬರು ತೆರಳಿದ್ದಾರೆ. ಕಾಫಿಗೂ ಮುನ್ನ ವಾಶ್ ರೂಂಗೆ ತೆರಳಿದಾಗ, ಅಲ್ಲಿ ಮೊಬೈಲ್ ಒಂದನ್ನು ರೆಕಾರ್ಡಿಂಗ್ ಮೂಡ್ ನಲ್ಲಿ ಇರಿಸಿದ್ದು ಗಮನಕ್ಕೆ ಬಂದಿದೆ. ಕೂಡಲೇ ಮಹಿಳೆ ಮೊಬೈಲ್ ಸಹಿತ ಹೊರಗೆ ಬಂದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಂತ ಸದಾಶಿವನಗರ ಠಾಣೆಯ ಪೊಲೀಸರು ಕೆಫೆಯಲ್ಲಿ ಕಾಫಿ ಮೇಕರ್ ಆಗಿ ಕೆಲಸ ಮಾಡುತ್ತಿದ್ದಂತ ಶಿವಮೊಗ್ಗ ಮೂಲಕ ಮನೋಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೇ ಘಟನೆ ಸಂಬಂಧ ಕ್ಷಮೆಯಾಚಿಸಿದ್ದಾರೆ. ಈ ಘಟನೆಯ ಬೆನ್ನಲ್ಲೇ ಆರೋಪಿತ ಕೆಲಸಗಾರನನ್ನು ಕೆಫೆಯ ಕೆಲಸದಿಂದ ವಜಾಗೊಳಿಸಲಾಗಿದೆ. ಅಂದಹಾಗೇ ಕೆಫೆಯ ವಾಶ್ ರೂಮ್ ನಲ್ಲಿ ಆರೋಪಿ ಮನೋಜ್ ಫ್ಲೈಟ್ ಮೂಡ್ ಆನ್ ನಲ್ಲಿ ಮೊಬೈಲ್ ಇರಿಸಿ, ರೆಕಾರ್ಡಿಂಗ್ ಆನ್…

Read More

ಬೆಂಗಳೂರು: ತುಂಗಭದ್ರಾ ಡ್ಯಾಂ ಕ್ರಸ್ಟರ್ ಗೇಟ್ ಕೊಚ್ಚಿ ಹೋದ ಹಿನ್ನಲೆಯಲ್ಲಿ ಆಗಸ್ಟ್.13ರಂದು ನಿಗದಿಯಾಗಿದ್ದಂತ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಮುಂಜಾಗ್ರತಾ ಕ್ರಮವಹಿಸಿದ್ದು, ಗೇಟ್ ರಿಪೇರಿ ಕೆಲಸ ಮಾಡಲಾಗುತ್ತಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ತುಂಗಭದ್ರಾ ಡ್ಯಾಂ ಕ್ರಸ್ಟರ್ ಗೇಟ್ ಕೊಚ್ಚಿ ಹೋದ ಕಾರಣ, ಆಗಸ್ಟ್.13ರಂದು ನಡೆಯಬೇಕಿದ್ದಂತ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತಿಳಿಸಿದೆ. ತುಂಗಭದ್ರಾ ಡ್ಯಾಂ ಗೇಟ್ ಚೈನ್ ಕಟ್ ಪ್ರಕರಣ: ನದಿ ಪಾತ್ರದ ಜನರಿಗೆ ಕಟ್ಟೆಚ್ಚರಕ್ಕೆ ಡಿಸಿಎಂ ಸೂಚನ ಬೆಂಗಳೂರು: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಕಟ್ ಆಗಿತ್ತು. ಹೀಗಾಗಿ ಡ್ಯಾಂ ಸುತ್ತಮುತ್ತಲಿನ ಜನರಲ್ಲಿ ಆತಂಕಕ್ಕೂ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ನದಿ ಪಾತ್ರದ ಜನರು ಕಟ್ಟೆಚ್ಚರ ವಹಿಸೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ತುಂಗಭದ್ರಾ ಡ್ಯಾಂ 19ನೇ ಗೇಟ್ ಚೈನ್ ಕಟ್ ಆದಂತ ಬಗ್ಗೆ ಮಾತನಾಡಿದಂತ ಅವರು, ಟಿಬಿ ಡ್ಯಾಂ ಚೈನ್ ಕಟ್ ಆಗಿರುವುದು ಗಮನಕ್ಕೆ…

Read More

ಬೆಂಗಳೂರು: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಕಟ್ ಆಗಿತ್ತು. ಹೀಗಾಗಿ ಡ್ಯಾಂ ಸುತ್ತಮುತ್ತಲಿನ ಜನರಲ್ಲಿ ಆತಂಕಕ್ಕೂ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ನದಿ ಪಾತ್ರದ ಜನರು ಕಟ್ಟೆಚ್ಚರ ವಹಿಸೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ತುಂಗಭದ್ರಾ ಡ್ಯಾಂ 19ನೇ ಗೇಟ್ ಚೈನ್ ಕಟ್ ಆದಂತ ಬಗ್ಗೆ ಮಾತನಾಡಿದಂತ ಅವರು, ಟಿಬಿ ಡ್ಯಾಂ ಚೈನ್ ಕಟ್ ಆಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಹಿತಿ ಪಡೆದಿದ್ದೇನೆ ಎಂದರು. ತುಂಗಭದ್ರಾ ಡ್ಯಾಂ ಕ್ರಸ್ಟ್ ಚೈನ್ ಕಡಿತಗೊಂಡು ಈ ರೀತಿ ಅವಘಡ ಉಂಟಾಗಿದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆಯೂ ಸೂಚಿಸಲಾಗಿದೆ. ಅಧಿಕಾರಿಗಳ ಜೊತೆಗೆ ಮಾಹಿತಿ ಪಡೆದು ದುರಸ್ತಿ ಕಾರ್ಯ ನಡೆಸಲಾಗುತ್ತದೆ ಎಂದರು. https://kannadanewsnow.com/kannada/mandya-rowdy-sheeter-shot-in-the-leg-after-police-gun-rang-in-the-wee-hours/ https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/

Read More

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ನಟೋರಿಯಸ್ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕ ಎಂಬಾತನ ಮೇಲೆ ಹಲಗೂರು ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಕೊಲೆ, ಕೊಲೆಯತ್ನ ಹಾಗೂ ರೌಡಿ ಚಟುವಟಿಕೆಗಳು ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮುತ್ತುರಾಜ್ ಅಲಿಯಾಸ್ ಡಕ್ಕನನ್ನು ಖಚಿತ ಮಾಹಿತಿ ಮೇರೆಗೆ ಭಾನುವಾರ ಬೆಳ್ಳಂಬೆಳಿಗ್ಗೆ ಅರೆಸ್ಟ್​ ಮಾಡಲು ಹೋದಾಗ ಸಿಬ್ಬಂದಿ ಸಿದ್ದರಾಜು ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ. ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಪೊಲೀಸರು ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ವಾರ್ನಿಂಗ್ ಮಾಡಿದ್ದಾರೆ. ಆದರೂ ಸಹ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದದಾಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಹಲಗೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ : ಗಿರೀಶ್ ರಾಜ್, ಮಂಡ್ಯ…

Read More