Author: kannadanewsnow09

ನವದೆಹಲಿ : ಇಂಡಿಯಾ ಮೊಬೈಲ್ ಕಾಂಗ್ರೆಸ್- 2025 ಬಹಳ ಮುಖ್ಯವಾದ ಸಮಾವೇಶ ಆಗಿದೆ. ಇದರಲ್ಲಿ ಜಿಯೋದಿಂದ ಹೊಸದಾದ ಸುರಕ್ಷತೆ- ಮೊದಲು ಸಾಮರ್ಥ್ಯವನ್ನು ಅದರ ಜಿಯೋಭಾರತ್ ಫೋನ್ ಗಳಲ್ಲಿ ಅನಾವರಣ ಮಾಡಲಾಯಿತು. ತುಂಬ ಪ್ರಮುಖ ಎನಿಸುವ ಬೆಳವಣಿಗೆ ಇದಾಗಿದ್ದು, ಇದು ಹೇಗೆ ರೂಪುಗೊಂಡಿದೆ ಅಂದರೆ, ಪ್ರತಿ ಭಾರತೀಯ ಕುಟುಂಬ ಇದರಿಂದಾಗಿ ಬೆಸೆದುಕೊಳ್ಳುತ್ತದೆ, ಸುರಕ್ಷಿತವಾಗಿ ಇರುತ್ತದೆ ಮತ್ತು ಚಿಂತೆಮುಕ್ತವಾಗುತ್ತದೆ. ಈ ನಾವೀನ್ಯತೆ ಮೂಲಕವಾಗಿ ಜಿಯೋ ಸ್ಮಾರ್ಟ್ ಕನೆಕ್ಟಿವಿಟಿ ಹಾಗೂ ಡಿಜಿಟಲ್ ಕೇರ್ ಅನ್ನು ದೇಶದ ಬಹಳ ವಿಶ್ವಾಸಾರ್ಹ, ಕೈಗೆಟುಕುವ ಬೆಲೆಯ ಫೋನ್ ಗೆ ತಂದಿದೆ. ಈ ಸುರಕ್ಷತೆ ಮೊದಲು ಎಂಬ ಸಲ್ಯೂಷನ್ ನಿಂದಾಗಿ ಕುಟುಂಬಗಳು ಮನೆಯಲ್ಲಿನ ಮಕ್ಕಳು, ಹಿರಿಯ ಪೋಷಕರಿಗೆ ಮತ್ತು ಅವಲಂಬಿತರ ಜೊತೆಗೆ ನಿಕಟವಾಗಿ ಇರುವುದು ಸಾಧ್ಯವಾಗುತ್ತದೆ. ಅವರು ಎಲ್ಲೇ ಇದ್ದರೂ ಸರಳ, ಸುರಕ್ಷಿತವಾಗಿ ಮತ್ತು ಸದಾ ಜೊತೆಯಲ್ಲಿ ಇರುವ ಅನುಭವದೊಂದಿಗೆ ಇರಬಹುದು. ಅದರ ಮುಖ್ಯ ಸಾಮರ್ಥ್ಯ ಏನೆಂದರೆ, “ಸ್ಥಳದ ನಿಗಾ”. ಅಂದರೆ, ಯಾವಾಗ ಪ್ರೀತಿಪಾತ್ರರು- ಆಪ್ತರು ದೂರದ ಸ್ಥಳಗಳಿಗೆ ತೆರಳಿದಾಗ ಅವರು…

Read More

ಬೆಂಗಳೂರು: ಬೆಂಗಳೂರು ದಂಡು ನಿಲ್ದಾಣದಲ್ಲಿ ಹಳಿ ನಿರ್ವಹಣಾ ಕಾಮಗಾರಿಯ ನಡೆಯುವುದರಿಂದ ಕೆಳಗಿನ ರೈಲು ಸೇವೆಯನ್ನು ಒಂದು ದಿನ 11ನೇ ಅಕ್ಟೋಬರ್ 2025 ರಂದು ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 06243 ಮೈಸೂರು – ಕಾರೈಕುಡಿ ಎಕ್ಸ್ಪ್ರೆಸ್, 11.10.2025 ರಂದು ಮೈಸೂರಿನಿಂದ ಹೊರಡುವ ಈ ರೈಲು ಕೆಎಸ್ಆರ್ ಬೆಂಗಳೂರು – ಯಶವಂತಪುರ – ಲೊಟ್ಟೆಗೊಲ್ಲಹಳ್ಳಿ – ಬಾನಸವಾಡಿ – ಎಸ್ಎಂವಿಟಿ ಬೆಂಗಳೂರು – ಬೈಯ್ಯಪನಹಳ್ಳಿ – ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಬೆಂಗಳೂರು ದಂಡು ನಿಲ್ದಾಣದಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ರೈಲು ಸೇವೆಯ ಮಾರ್ಗ ಬದಲಾವಣೆ ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್, 11.10.2025 ರಂದು ಕರ್ಜಟ್ (ಮುಂಬೈ ವಿಭಾಗ) ನಿಲ್ದಾಣ ಹಾಗೂ ಯಾರ್ಡ್ ಪುನರ್‌ವ್ಯವಸ್ಥೆ ಕಾಮಗಾರಿಯಿಂದಾಗಿ ಮೀರಜ್ ಜಂ, ಪಂಢರಾಪುರ, ಕುರ್ಡುವಾಡಿ ಜಂ, ದೌಂಡ್ ಜಂ, ಅಹಮದ್‌ನಗರ ಜಂ, ಮನ್ಮಡ್ ಜಂ, ಜಲಗಾಂ ಜಂ, ನಂದರ್ಬರ್ ಹಾಗೂ ಸೂರತ್ ನಿಲ್ದಾಣಗಳ ಮೂಲಕ ಓಡಿಸಲಾಗುತ್ತದೆ ಎಂದು ಮಧ್ಯ ರೈಲ್ವೆ ತಿಳಿಸಿದೆ.…

Read More

ಮಂಗಳೂರು: ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕುರಿತು ವಿರೋಧ ಪಕ್ಷದ ನಾಯಕರಿಂದ ವ್ಯಕ್ತವಾಗುತ್ತಿರುವ ಟೀಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ತೀವ್ರವಾಗಿ ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಬುಧವಾರ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ. ನಿನ್ನೆ (ಮಂಗಳವಾರ) ರಾತ್ರಿ 8.30ರ ವೇಳೆಗೆ ರಾಜ್ಯದಾದ್ಯಂತ ಸರಾಸರಿ 81% ಸಮೀಕ್ಷೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ 38%, ದಕ್ಷಿಣ ಕನ್ನಡದಲ್ಲಿ 68% ಹಾಗೂ ಉಡುಪಿಯಲ್ಲಿ 62% ಪ್ರಗತಿ ದಾಖಲಾಗಿದೆ. ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳ ಕಾರಣದಿಂದ ವಿಳಂಬವಾಗಿದೆ ಎಂದು ಅವರು ತಿಳಿಸಿದರು. ಸಮೀಕ್ಷೆ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ರಜಾ ಸೌಲಭ್ಯವನ್ನು ಹೊಂದಾಣಿಕೆ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. “ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ 220 ಬೋಧನಾ ದಿನಗಳು ಅಗತ್ಯವಿದ್ದು, ಸದ್ಯಕ್ಕೆ…

Read More

ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಠಿಣ ಕಾನೂನುಕ್ರಮ ಜರುಗಿಸಲು ಒತ್ತಾಯಿಸಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು. ಸುಪ್ರೀಂ ಕೋರ್ಟ್ನಲ್ಲಿ ಕಲಾಪ ನಡೆಯುತ್ತಿರುವಾಗ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವೃವಾಗಿ ಖಂಡಿಸುತ್ತದೆ. ಇದು ಮುಖ್ಯ ನ್ಯಾಯಮೂರ್ತಿಗಳ ಮೇಲೆ ನಡೆದ ದಾಳಿಯಲ್ಲ, ಬದಲಾಗಿ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸನಾತನವಾದಿಗಳು ಸಂವಿಧಾನವನ್ನು ವಿರೋಧಿಸಿ ಕೊಂಡು ಬಂದವರು. ದಲಿತರೊಬ್ಬರು ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ಕುಳಿತಿರುವುದನ್ನು ಸನಾತನವಾದಿಗಳು ಯಾವತ್ತೂ ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ. ಇತ್ತೀಚೆಗೆ ಆರ್.ಎಸ್.ಎಸ್. ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ ಬಿ.ಆರ್.ಗವಾಯಿ ನಾನು ಅಂಬೇಡ್ಕರ್ ವಾದಿ. ಆರ್.ಎಸ್.ಎಸ್.ನಂತಹ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ವಕೀಲರೊಬ್ಬರು ಚಪ್ಪಲಿ ಎಸೆಯುವ ಪ್ರಯತ್ನ ನಡೆಸಿರುವುದು…

Read More

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿ ಶೀಟರ್ ಬರ್ತಡೇ ಆಚರಿಸಿಕೊಂಡಿದ್ದು ಬಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣ ಇಬ್ಬರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್ ಆದೇಶಿಸಿದ್ದಾರೆ. ಕಳೆದ ಸೆಪ್ಟೆಂಬರ್.9ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಬರ್ತಡೇ ಆಚರಿಸಿಕೊಂಡಿದ್ದರು. ಇದು ಜೈಲು ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿದಂತಿತ್ತು. ಈ ಹಿನ್ನಲೆಯಲ್ಲಿ ಜೈಲು ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಭೀತಾಗಿತ್ತು. ಹೀಗಾಗಿ ಇಬ್ಬರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್ ಆದೇಶಿಸಿದ್ದಾರೆ. https://kannadanewsnow.com/kannada/re-examine-the-recruitment-of-trainee-engineers-at-bel-bilimale-urges-the-union-defence-minister/ https://kannadanewsnow.com/kannada/cm-dcm-to-launch-project-tomorrow-if-525-gram-panchayats-in-the-state-have-water-minister-n-s-bhosaraju/

Read More

ಬೆಂಗಳೂರು: ಸ್ಥಳೀಯ ಕನ್ನಡಿಗರ ಹಕ್ಕುಗಳನ್ನು ಪೂರ್ಣವಾಗಿ ಅಲಕ್ಷಿಸಿರುವ ಬಿಇಎಲ್ ಸಂಸ್ಥೆಯ ಟ್ರೈನಿ ಇಂಜಿನಿಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರು ಪರಿಶೀಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಬಿಳಿಮಲೆ, ಬಿಇಎಲ್ ಸಂಸ್ಥೆಯು ಇತ್ತಿಚೆಗೆ ತನ್ನ ಬೆಂಗಳೂರು ಕೇಂದ್ರಕ್ಕೆ ಟ್ರೈನಿ ಇಂಜಿನಿಯರುಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಿದ್ದು, ಈ ನೇಮಕಾತಿ ಅಧಿಸೂಚನೆ ಕೇವಲ ಆಂಗ್ಲ ಮತ್ತು ಹಿಂದಿ ಭಾಷೆಗಳಲ್ಲಿರುತ್ತದೆ. ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಯಾವ ಅವಕಾಶವೂ ದೊರೆಯದ ರೀತಿಯಲ್ಲಿ ಈ ಅಧಿಸೂಚನೆ ಸಿದ್ಧಗೊಂಡಿರುತ್ತದೆ ಎಂದು ಹೇಳಿದ್ದಾರೆ. ಸಂವಿಧಾನದ ಒಕ್ಕೂಟ ತತ್ತ್ವವನ್ನು ಈ ಅಧಿಸೂಚನೆ ಗಾಳಿಗೆ ತೂರಿದೆ ಎಂದು ಅಪಾದಿಸಿರುವ ಬಿಳಿಮಲೆ, ಬಿಇಎಲ್ ಸಂಸ್ಥೆಗೆ ಬೆಂಗಳೂರು ಮುಂಚಿನಿಂದಲೂ ಪ್ರಮುಖ ಚಟುವಟಿಕೆಯ ಕೇಂದ್ರವಾಗಿದ್ದು, ಸ್ಥಳೀಯ ಕನ್ನಡಿಗರು ಸಂಸ್ಥೆಯು ಈ ಮಟ್ಟಕ್ಕೆ ಬೆಳೆಯಲು ಪ್ರಮುಖ ಕಾರಣಕರ್ತರಾಗಿದ್ದಾರೆ ಎನ್ನುವುದನ್ನು ಗಮನಿಸಬೇಕಾಗುತ್ತದೆ ಎಂದಿದ್ದಾರೆ. ಹಾಗಾಗಿ ಸಮತೋಲಿತ…

Read More

ಬೆಂಗಳೂರು : ಸರ್ಕಾರಿ ಶಾಲೆಗಳಿಗೆ ಗಣತಿ ಕಾರ್ಯದ ನಿಮಿತ್ತ ರಜೆ ನೀಡಿರುವ ಕುರಿತು ಬಿಜೆಪಿ ನಾಯಕರು ವ್ಯಕ್ತಪಡಿಸಿರುವ ಅಸಮಾಧಾನಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಸಚಿವ ಬೋಸರಾಜು ಅವರು, ಬಿಜೆಪಿ ನಾಯಕರ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ವಿಫಲತೆ ಮತ್ತು ಮಲತಾಯಿ ಧೋರಣೆಯನ್ನು ಮರೆಮಾಚಲು ಕೇವಲ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗಣತಿ ಸಹಕಾರ: ಬಿಜೆಪಿಯಿಂದ ರಾಜಕೀಯ ಆರೋಪ ರಾಜ್ಯ ಸರ್ಕಾರದ ಗಣತಿ ಕಾರ್ಯವು ಯಶಸ್ವಿಯಾಗಿ ನಡೆಯುತ್ತಿದ್ದು, ಗ್ರಾಮೀಣ ಭಾಗದಲ್ಲಿ ಈಗಾಗಲೇ ಶೇ. 92 ರಿಂದ 93 ರಷ್ಟು ಕೆಲಸ ಪೂರ್ಣಗೊಂಡಿದೆ. ರಾಜ್ಯದ ಜನತೆ ಸಂಪೂರ್ಣ ಸಹಕಾರ ನೀಡುತ್ತಿರುವಾಗ, ಈ ಕಾರ್ಯಕ್ಕೆ ಸಹಕಾರ ನೀಡದೆ ಕೇವಲ ರಾಜಕೀಯ ಮಾಡುತ್ತಿರುವವರು ಬಿಜೆಪಿ ನಾಯಕರು ಮಾತ್ರ. “ಬಿಜೆಪಿ ಆರೋಪ ಮಾಡಿದರೆ ಯಾರೂ ಚರ್ಚೆ ಮಾಡಲ್ಲ, ಅವರಲ್ಲಿ ಇರುವುದು ಕೇವಲ ನಾಲ್ಕು ಜನ ಲೀಡರ್ ಗಳು. ಅವರು ತಮ್ಮಷ್ಟಕ್ಕೆ…

Read More

ಬೆಂಗಳೂರು : ರಾಜ್ಯದ 15 ಜಿಲ್ಲೆಗಳ, 27 ತಾಲ್ಲೂಕಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 525 ಗ್ರಾಮ ಪಂಚಾಯ್ತಿಗಳಲ್ಲಿ “ನೀರಿದ್ದರೆ ನಾಳೆ” ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ. “ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ…

Read More

ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು…

Read More

ಶಿವಮೊಗ್ಗ : ಸ್ಥಳೀಯರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ರಾಯಲ್ ಬಿಲ್ಡರ್ಸ್ ನಿಂದ ಸಾಗರದಲ್ಲಿ ರಾಯಲ್ ಎನ್ ಫೀಲ್ಡ್ ಬೈಕ್ ಮಾರಾಟ ಮಳಿಗೆಯನ್ನು ಆರಂಭಿಸಲಾಗುತ್ತಿದೆ. ಅಕ್ಟೋಬರ್.10ರಂದು ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶೋ ರೂಂ ಉದ್ಘಾಟಿಸಲಿದ್ದಾರೆ ಎಂಬುದಾಗಿ ರಾಯಲ್ ಬಿಲ್ಡರ್ಸ್ ನ ಆರ್ ಬಿ ಡಿ ಮಹೇಶ್ ತಿಳಿಸಿದರು. ಇಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎನ್ನುವ ಉದ್ದೇಶಕ್ಕೆ ಸ್ಥಾಪಿಸಿದ್ದು ರಾಯಲ್ ಬಿಲ್ಡರ್ಸ್ ಸಂಸ್ಥೆಯಾಗಿದೆ. ಇದು ದಶಮಾನೋತ್ಸವ ಪೂರೈಸಿದ್ದು, ಈತನಕ ಸಾಗರ, ಬೆಂಗಳೂರು ಭಾಗದಲ್ಲಿ 200ಕ್ಕೂ ಹೆಚ್ಚು ಯುವಜನರಿಗೆ ನಮ್ಮ ಸಂಸ್ಥೆ ಉದ್ಯೋಗ ನೀಡಿದೆ. ರಾಯಲ್ ಬಿಲ್ಡರ್ಸ್ ಗ್ರೂಪ್ ರಾಜ್ಯದಾದ್ಯಂತ ತನ್ನ ಚಟುವಟಿಕೆ ವಿಸ್ತರಿಸಿಕೊಂಡಿದೆ ಎಂದು ಹೇಳಿದರು. ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ನೀಡಬೇಕು ಎನ್ನುವ ಉದ್ದೇಶದಿಂದ ನಮ್ಮ RBD ಸಂಸ್ಥೆ ಹತ್ತು ವರ್ಷದ ಹಿಂದೆ ಪ್ರಾರಂಭಿಸಲಾಯಿತು. ಈ ಸಂಸ್ಥೆ ವತಿಯಿಂದ ಕಾನೂನುಬದ್ದವಾಗಿ ಭೂಪರಿವರ್ತನೆ ಮಾಡಿ ನಿವೇಶನಗಳನ್ನು ಜನಸಾಮಾನ್ಯರಿಗೂ ಕೈಗೆಟುಕುವ…

Read More