Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ: ಕೆಪಿಸಿ ಭೂಮಿಯನ್ನು ಅರಣ್ಯ ಇಲಾಖೆ ಸ್ವಾಧೀನಕ್ಕೆ ಕೊಡಿ ಎಂದು ಪರಿಸರ ಹೋರಾಟಗಾರ ಅನಂತ ಹೆಗಡೆ ಅಶೀಸರ ನೀಡಿರುವ ಹೇಳಿಕೆ ಖಂಡನೀಯವಾದದ್ದು. ಅನಂತ ಹೆಗಡೆ ಅಶೀಸರ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಜೊತೆಗೆ ಅವರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅನಂತ ಹೆಗಡೆ ಅಶೀಸರ ಮಾಹಿತಿ ಇಲ್ಲದೆ ಇಂತಹ ಹೇಳಿಕೆ ಕೊಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದರು. ಲಿಂಗನಮಕ್ಕಿ ಆಣೆಕಟ್ಟು ನಿರ್ಮಾಣ ಸಂದರ್ಭದಲ್ಲಿ ಕೆಪಿಸಿ ಒಂದಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅದು ಮುಳುಗಡೆಯಾಗಿಲ್ಲ. ರೈತರು ಅಕ್ಕಪಕ್ಕದಲ್ಲಿ ಸಾಗುವಳಿ ಮಾಡಿ ಆ ಜಮೀನನ್ನು ತಮ್ಮ ಸ್ವಾಧೀನದಲ್ಲಿ ಇರಿಸಿಕೊಂಡಿದ್ದಾರೆ. ಅನಂತ ಹೆಗಡೆ ಅಶೀಸರ 20ಸಾವಿರ ಎಕರೆ ಕೆಪಿಸಿ ಭೂಮಿ ಇದ್ದು ಅದನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲಿ ಎಂದು ಮನವಿ ನೀಡಿದ್ದರಿಂದ ಸರ್ಕಾರ ಮತ್ತು ಅರಣ್ಯ ಇಲಾಖೆ ಎಚ್ಚರಗೊಂಡಿದ್ದು ರೈತರಿಗೆ ಯಾವುದೇ ಸಂದರ್ಭದಲ್ಲಿ…
ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿ, 24 ಮಂದಿ ಗಾಯಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸಂಜೆ 6:55 ರ ಸುಮಾರಿಗೆ ಸ್ಫೋಟದ ಬಗ್ಗೆ ಮಾಹಿತಿ ಬಂದಿದ್ದು, ಅಗ್ನಿಶಾಮಕ ದಳ ಮತ್ತು ತನಿಖಾ ಸಂಸ್ಥೆಗಳು ಸ್ಥಳಕ್ಕೆ ಧಾವಿಸಿವೆ. ಗುಪ್ತಚರ ಮೂಲಗಳು ಇದು ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣ ಎಂದು ದೃಢಪಡಿಸಿದ ನಂತರ ಭಯೋತ್ಪಾದನಾ ನಿಗ್ರಹ ಸಂಸ್ಥೆ NIA ಯ ತಂಡವು ಘಟನಾ ಸ್ಥಳಕ್ಕೆ ಆಗಮಿಸಿತು. ಪ್ರಧಾನಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಘಟನೆ ಮತ್ತು ನಡೆಯುತ್ತಿರುವ ತನಿಖೆಯ ಬಗ್ಗೆ ವಿವರವಾದ ಮಾಹಿತಿಯನ್ನು ಕೋರಿದ್ದಾರೆ ಎಂದು ಸರ್ಕಾರಿ ಮೂಲಗಳಿಂದ ತಿಳಿದು ಬಂದಿದೆ. ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಯು 24 ಜನರನ್ನು ಗಂಭೀರ ಸ್ಥಿತಿಯಲ್ಲಿ ಕರೆತರಲಾಗಿದ್ದು, ಅವರಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಉಳಿದ…
ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಿದ್ದ ಎರಡು ಕಾರು ನಿಗೂಢವಾಗಿ ಸ್ಪೋಟಗೊಂಡ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ನಂ.1ರ ಬಳಿಯಲ್ಲಿ ನಿಲ್ಲಿಸಿದ್ದಂತ ಕಾರು ಸ್ಪೋಟಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇನ್ನು 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರು ಸ್ಪೋಟ ಘಟನೆಯಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಕಾರು ಸ್ಪೋಟ: ಉಗ್ರರ ಕೃತ್ಯ ಶಂಕೆ ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1ರ ಬಳಿಯಲ್ಲಿ ಕಾರು ಸ್ಪೋಟಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಸ್ಪೋಟದ ಹಿಂದೆ ಉಗ್ರರ ಕೃತ್ಯದ ಶಂಕೆ ವ್ಯಕ್ತವಾಗಿದೆ. ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 10 ಮಂದಿ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿದ್ದಾರೆ. ಈ ಕೃತ್ಯದ ಹಿಂದೆ ಉಗ್ರರ ಕೈವಾಡದ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಇನ್ನೂ ಕಾರು ಸ್ಪೋಟಕಕ್ಕೆ ಅಮೋನಿಯಂ ನೈಟ್ರೇಟ್…
ನವದೆಹಲಿ: ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1ರ ಬಳಿಯಲ್ಲಿ ಕಾರು ಸ್ಪೋಟಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಸ್ಪೋಟದ ಹಿಂದೆ ಉಗ್ರರ ಕೃತ್ಯದ ಶಂಕೆ ವ್ಯಕ್ತವಾಗಿದೆ. ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 10 ಮಂದಿ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿದ್ದಾರೆ. ಈ ಕೃತ್ಯದ ಹಿಂದೆ ಉಗ್ರರ ಕೈವಾಡದ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಇನ್ನೂ ಕಾರು ಸ್ಪೋಟಕಕ್ಕೆ ಅಮೋನಿಯಂ ನೈಟ್ರೇಟ್ ಬಳಸಿ ಸ್ಪೋಟಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆಯನ್ನು ತೀವ್ರತರವಾಗಿ ನಡೆಸುತ್ತಿದ್ದಾರೆ.
ನವದೆಹಲಿ: ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಾಷ್ಟ್ರದ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 10 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ ಮೃತ ದೇಹಗಳನ್ನು ಎಲ್ ಎನ್ ಜೆ ಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳದವರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿ ಸ್ಫೋಟದ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ದೆಹಲಿ ಸ್ಫೋಟದ ನಂತರ ಬಿಹಾರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಿಹಾರದಲ್ಲಿ ತಂಡಗಳು ಕಟ್ಟೆಚ್ಚರದಲ್ಲಿವೆ ಮತ್ತು ಎಲ್ಲರನ್ನೂ ಪರಿಶೀಲಿಸಲಾಗುತ್ತಿದೆ. ದೆಹಲಿಯಲ್ಲಿ ಸ್ಫೋಟದ ನಂತರ ಚಂಡೀಗಢದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಕಟ್ಟೆಚ್ಚರದಲ್ಲಿದ್ದಾರೆ. ಕೇರಳ ಪೊಲೀಸ್ ಮುಖ್ಯಸ್ಥ ರವಾದ ಆಜಾದ್ ಚಂದ್ರಶೇಖರ್ ಅವರು ರಾಜ್ಯಾದ್ಯಂತ ಭದ್ರತೆಯನ್ನು ಬಲಪಡಿಸಲು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಹರಿಯಾಣದಲ್ಲಿಯೂ ಎಚ್ಚರಿಕೆ ನೀಡಲಾಗಿದೆ. ಸರ್ಕಾರವು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ಸೂಚನೆಗಳನ್ನು ನೀಡಿದೆ. ಪೊಲೀಸ್ ಮಹಾನಿರ್ದೇಶಕ ರಾಜೀವ್ ಕೃಷ್ಣ…
ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ(NHM) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸಾವಿರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗಾಗಿ ರಾಜ್ಯ ಸರ್ಕಾರದಿಂದ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ. ಆದರೇ ಇದೊಂದು ಮರಣ ಶಾಸನವಿದ್ದಂತೆ. ಇದನ್ನು ಜಾರಿಗೊಳಿಸಬಾರದು. ತಕ್ಷಣವೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ( KSHCOEA) ಆಗ್ರಹಿಸಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಪತ್ರಕರ್ತೆ ಭಾವನಾ ಬೆಳಗೆರೆ ಅವರು ಎನ್ ಹೆಚ್ ಎಂ ಅಡಿಯಲ್ಲಿ ರಾಜ್ಯದಲ್ಲಿ ಸುಮಾರು 30,000ಕ್ಕೂ ಹೆಚ್ಚು ಮಂದಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕನಿಷ್ಠ ವೇತನವನ್ನು ಪಡೆಯುತ್ತಿದ್ದಾರೆ. ಆದರೇ ಅವರಿಗೆ ನೇಮಕಾತಿ ಮತ್ತು ವರ್ಗಾವಣೆಯನ್ನು ಒಳಗೊಂಡಂತೆ ಹೆಚ್ ಆರ್ ಪಾಲಿಸಿಯನ್ನು ಜಾರಿಗೊಳಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬುದಾಗಿ ಪ್ರಶ್ನಿಸಿದರು. ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಡಿಮೆ ವೇತನಕ್ಕೆ ತಮ್ಮ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಕಾಯಂ ಸಿಬ್ಬಂದಿಯಂತೆ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಪೋಟದಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಜಿಲ್ಲಾ ಕೇಂದ್ರಗಳಲ್ಲಿ ಹೈಅಲರ್ಟ್ ನೀಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ. ಏರ್ ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಬಂದೋಬಸ್ತ್ ಕೈಗೊಳ್ಳಲು ಸೂಚಿಸಿದ್ದಾರೆ. ಜಿಲ್ಲೆಗಳಲ್ಲಿ ನಿಗಾ ವಹಿಸುವಂತೆ ಎಸ್ ಪಿ ಗಳಿಗೆ ಡಿಜಿ ಮತ್ತು ಐಜಿಪಿ ಆದೇಶದಲ್ಲಿ ಸೂಚಿಸಿದ್ದಾರೆ.
ನವದೆಹಲಿ: ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡ ಪರಿಣಾಮ ಹಲವರು ಗಾಯಗೊಂಡು 9 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ರಾಷ್ಟ್ರದ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ ಮೃತ ದೇಹಗಳನ್ನು ಎಲ್ ಎನ್ ಜೆ ಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳದವರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/kuwj-elections-new-office-bearers-take-office/
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿಯಲ್ಲಿನ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರ್ ಬಾಂಬ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಭವಿಸಿದ ಸ್ಫೋಟದ ನಂತರ ಹಲವಾರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಪ್ರದೇಶವನ್ನು ಸುತ್ತುವರೆದಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಈ ಬಾಂಬ್ ಸ್ಪೋಟ ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/kuwj-elections-new-office-bearers-take-office/ https://kannadanewsnow.com/kannada/another-good-news-for-the-states-griha-lakshmi-beneficiaries-government-registers-griha-lakshmi-cooperative-society/
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳು ಸೋಮವಾರ ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಿತು. ಚುನಾವಣಾ ಲಿತಾಂಶವನ್ನು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋದನೆ ಮಾಡಿದರು. ಅಧ್ಯಕ್ಷರಾಗಿ ಶಿವಾನಂದ ತಗಡೂರು, ಉಪಾಧ್ಯಕ್ಷರಾಗಿ ಹೆಚ್.ಬಿ.ಮದನಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿಗಳಾಗಿ ನಿಂಗಪ್ಪ ಚಾವಡಿ, ಪುಂಡಲೀಕ ಭೀ ಬಾಳೋಜಿ, ಸೋಮಶೇಖರ ಕೆರೆಗೋಡು, ಖಜಾಂಚಿಯಾಗಿ ವಾಸುದೇವ ಹೊಳ್ಳ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಚುನಾವಣಾ ಪ್ರಮಾಣ ಧೃಢೀಕರಣ ಪತ್ರ ಮತ್ತು ಹೂ ಬೊಕ್ಕೆ ಮತ್ತು ಪುಸ್ತಕ ನೀಡುವ ಮೂಲಕ ಅಭಿನಂದಿಸಲಾಯಿತು. ಸಂಘದ ಜವಬ್ದಾರಿ ನಿಭಾಯಿಸಿರುವೆ: ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಅವರು, ಸಂಘವು ತನಗೆ ವಹಿಸಿದ್ದ ಜವಬ್ದಾರಿಯನ್ನು…













