Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಪರಿತ್ಯಕ್ತ ಸೇರಿದಂತೆ ಯಾವುದೇ ಮಕ್ಕಳು ಆಧಾರ್ ಇಲ್ಲದೇ ಸರ್ಕಾರಿ ಸೌಲಭ್ಯ ಪಡೆಯುವುದರಿಂದ ವಂಚಿತರಾಗದಂತೆ ನೋಡಿಕೊಳ್ಳಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗಿದ್ದು, ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು. ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರ್ಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರ್ಯಾಕಿಂಗ್ಗಾಗಿ ‘ಸಾಥಿ’ ಅಭಿಯಾನದ ಅಂಗವಾಗಿ ಸಮಿತಿ ಸದಸ್ಯರುಗಳಿಗೆ ಶುಕ್ರವಾರ ಕೋರ್ಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿರುವನ್ವಯ ತಂದೆ-ತಾಯಿ ಇಲ್ಲದಿರುವ ಪರಿತ್ಯಕ್ತ ಮಕ್ಕಳು, ವಲಸೆ ಇನ್ನಾವುದೇ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ‘ಸಾಥಿ’ (ಸರ್ವೇ ಆಫ್ ಆಧಾರ್ ಆಂಡ್ ಆಕ್ಸಸ್ ಟು ಟ್ರ್ಯಾಕಿಂಗ್ & ಹೊಲಿಸ್ಟಿಕ್ ಇನ್ಕು÷್ಲಷನ್) ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಪರಿತ್ಯಕ್ತ ಮಕ್ಕಳಿಗೆ ಕಾನೂನು…
ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡಿಗರ ಸೇವೆ ಮಾಡಬೇಕಾದ ಈ ಎಲ್ಲ ನೌಕರರು ಅನ್ಯ ಭಾಷಿಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಅನವಶ್ಯಕ ಭಾಷಾ ಸಂಘರ್ಷವನ್ನು ತಡೆಯುವಲ್ಲಿ ಕೂಡಲೇ ಈ ನೇಮಕಾತಿಯನ್ನು ತಡೆ ಹಿಡಿದು ಸ್ಥಳೀಯರಿಗೆ ಪ್ರಾತಿನಿಧ್ಯವನ್ನು ಕಲ್ಪಿಸುವ ನೇಮಕಾತಿಗೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಈ ರೀತಿಯ ಕೇಂದ್ರದ ತೀರ್ಮಾನಗಳು ಸ್ಥಳೀಯರಲ್ಲಿ ಅನಾವಶ್ಯಕ ಆಕ್ರೋಶವನ್ನು ಉಂಟು ಮಾಡುತ್ತವೆ. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಾದೇಶಿಕ ಭಾವನೆಗಳನ್ನು ಗೌರವಿಸುವುದು ಯಾವುದೇ ಸರ್ಕಾರದ ಕರ್ತವ್ಯವಾಗಿದ್ದು, ಸಾಂವಿಧಾನಿಕ ಆಶಯಗಳು ಸಾಕಾರಗೊಳ್ಳಬೇಕಾದರೆ ಕೇಂದ್ರ ಸರ್ಕಾರವು ಇಂತಹ ಕ್ರಮಗಳನ್ನು ಪ್ರೋತ್ಸಾಹಿಸಬಾರದೆಂದು ಹೇಳಿದ್ದಾರೆ. ವಿತ್ತ ಸಚಿವರ ಸ್ಥಳೀಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕೆಂಬ ಈ ಹಿಂದಿನ ಕರೆಯನ್ನು ಸ್ಮರಿಸಿರುವ ಬಿಳಿಮಲೆ, ತಮ್ಮ ಉದ್ದೇಶವು ಈ…
ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಕೋರಮಂಗಲ ವಿಭಾಗದ 66/11 ಕೆವಿ ಜಯದೇವ ಉಪಕೇಂದ್ರ, 220/66/11ಕೆವಿ ನಿಮ್ಹಾನ್ಸ್ ಉಪಕೇಂದ್ರ, 66/11ಕೆವಿ ಬಾಗೆಮನೆ ಉಪಕೇಂದ್ರ ಮತ್ತು 66/11 ಅಮರಜ್ಯೋತಿ ಉಪಕೇಂದ್ರ ಮತ್ತು ಹೆಚ್ ಎಸ್ ಆರ್ ವಿಭಾಗದ 66/11ಕವ ಜಯದೇವ ವಿವಿ ಕೇಂದ್ರ, 66/11ಕೆವಿ ಎಲ್ಕೆಟ್ರಾನಿಕ್ ಸಿಟಿ ಫೇಸ್-2 ವಿವಕೇಂದ್ರ, 66/11ಕೆವಿ ಎಲ್ಕೆಟ್ರಾನಿಕ್ ಸಿಟಿ, 66/11ಕೆವಿ ಅಂಜನಾಪುರ, 66/11ಕೆವಿ ಸೌದೇಲಾ ವಿ.ವಿ.ಕೇಂದ್ರ, ಮತ್ತು ಜಯನಗರ ವಿಭಾಗದ 66/11 ಕೆವಿ ನಿಮಾನ್ಸ್, 66/11ಕೆವಿ ಜಯದೇವ, 66/11ಕೆವಿ ಪದ್ಮನಾಭನಗರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.06.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕೋರಮಂಗಲ ವಿಭಾಗದ ಐ.ಬಿ.ಎಂ, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ಮೆಂಟ್, ಬಿ.ಜಿ.ರಸ್ತೆ, ಬಿ.ಟಿ.ಎಂ ೧ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಭಿಸ್ಮಿಲ್ಲಾ ನಗರ, ಸೋಭಾ ಡೆವೆಲರ್ಸ್, ಜೈಭೀಮ ನಗರ, ಐಬಿಮಮ್, ಅಸ್ಸೆಂಚರ್, ಐಬಿಎಮ್’ಡಿ’…
ಬೆಂಗಳೂರು : ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಈ ಬೆಳವಣಿಗೆಯೊಂದಿಗೆ ಪರಿಸರ ಸವಾಲುಗಳೂ ಹೆಚ್ಚಾಗಿವೆ ಹಾಗಾಗಿ ನಗರವನ್ನು ಸುಸ್ಥಿರ ಮತ್ತು ಹಸಿರು ನಗರವನ್ನಾಗಿ ರೂಪಿಸಲು ಎಲ್ಲರೂ ಕೈಜೋಡಿಸೋಣ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ನಗರದ ರಾಡಿಸನ್ ಬ್ಲೂ ಏಟ್ರಿಯಾ ಹೋಟೆಲ್ ನಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (MNRE) ಮತ್ತು ಇಂಧನ ಮತ್ತು ಸಂಪನ್ಮೂಲ ಸಂಸ್ಥೆ (TERI) ಸಹಯೋಗದೊಂದಿಗೆ “ಹವಾಮಾನ ಸ್ಥಿತಿಸ್ಥಾಪಕ ಪ್ರಪಂಚಕ್ಕಾಗಿ ಕಾರ್ಯನಿರ್ವಹಿಸಲು ನಾವೀನ್ಯತೆ” ಎಂಬ ಘೋಷ ವಾಕ್ಯದೊಂದಿಗೆ ನಡೆದ 7ನೇ ಗ್ರಿಹ ಪ್ರಾದೇಶಿಕ ಸಮಾವೇಶದಲ್ಲಿ(Green Rating for Integrated Habitat Assessment) ಭಾಗವಹಿಸಿ ಮಾತನಾಡಿದ ಅವರು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದ್ದು ಇದು ಹಸಿರು ಕಟ್ಟಡಗಳ ನಿರ್ಮಾಣ ಮತ್ತು ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈ ಸಮಾವೇಶವು ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ನಾವೀನ್ಯಪೂರ್ಣ ಪರಿಹಾರಗಳನ್ನು ಕಂಡುಕೊಳ್ಳಲು ಒಂದು ಪ್ರಮುಖ…
ಕೆಎನ್ಎನ್ ಸಿನಿಮಾ ಡೆಸ್ಕ್: ಸ್ಯಾಂಡಲ್ ವುಡ್ ನಿರ್ದೇಶಕ ಧೀರಜ್ ಎಂ.ವಿ ನಿರ್ದೇಶನದ, ಅಭಿರಾಮ ಅರ್ಜುನ ಬ್ಯುಸಿನೆಸ್ ಹೆಡ್ ಆಗಿ ಕಾರ್ಯನಿರ್ವಹಿಸಿರುವ ಕಪಟ ನಾಟಕ ಸೂತ್ರಧಾರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರವು ಜುಲೈ.4ರಂದು ತೆರೆಗೆ ಬರಲಿದೆ. ಜುಲೈ.4ರಂದು ತೆರೆಗಾಣಲಿರುವ ಈ ಸಿನಿಮಾದ ಪ್ರಧಾನ ಕಥಾ ಸುಳಿವೊಂದು ಹೊರಬಿದ್ದಿದೆ. ಭಾರತದ ಪ್ರಥಮ ನ್ಯೂ ಏಜ್ ಪೊಲಿಟಿಕಲ್ ಸಟೈರ್ ಸಿನಿಮಾ ಎಂಬುದೂ ಸೇರಿದಂತೆ ಒಂದಷ್ಟು ವಿಶೇಷತೆಗಳ ಮೂಲಕ ಗಮನ ಸೆಳೆದುಕೊಂಡಿದ್ದ ಚಿತ್ರ ಇದಾಗಿದೆ. ಬಿಡುಗಡೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಚಿತ್ರತಂಡ ಟ್ರೈಲರ್ ಯೂಟ್ಯೂಬ್ ನಲ್ಲಿ ಸದ್ದು ಮಾಡಿದೆ. ನಮ್ಮ ಸಮಾಜದಲ್ಲಿನ ಪ್ರಸ್ತುತ ಸ್ಥಿತಿಗತಿಗತಿಗಳನ್ನು ಕಣ್ಣೆದುರು ತರುವಂಥಾ ದೃಶ್ಯಗಳ ಮೂಲಕ ಈ ಟ್ರೈಲರ್ ಒಂದಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಈ ನೆಲದ ಜನಸಾಮಾನ್ಯರಲ್ಲಿ ಸಹಜವಾಗಿ ನೆಲೆಗೊಂಡಿರುವ ಧಾರ್ಮಿಕ ಭಾವನೆಗಳು ರಾಜಕಾರಣದ ಕಪಿಮುಷ್ಠಿಗೆ ಸಿಲುಕಿಕೊಂಡಿರುವ ಕಾಲಮಾನವಿದು. ಒಂದು ಸಮುದಾಯದ ನಂಬಿಕೆಯ ತಾಣಕ್ಕೆ ಮತ್ತೊಂದು ಸಮುದಾಯದ ಯುವಕ ಸಹಜ ಕುತೂಹಲದಿಂದ ಭೇಟಿ ನೀಡಿದಾಗ ಘಟಿಸುವ ಕಥನದ ಬಿಂದುವಿನಿಂದ ರೋಚಕ…
ಬೆಂಗಳೂರು: ರಾಜ್ಯದ ಆರ್ಯ ವೈಶ್ಯ ಸಮುದಾಯದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ 2025-26ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನೈನ್ ವಿಳಾಸ: http//kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿ: 31.07.2025. 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವ ಯೋಜನೆಗಳು:- 1. ಸ್ವಯಂ-ಉದ್ಯೋಗ ನೇರಸಾಲ ಯೋಜನೆ. 2. ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ. 3. ವಾಸವಿ ಜಲಶಕ್ತಿ ಯೋಜನೆ. 4. ಅರಿವು ಶೈಕ್ಷಣಿಕ ಸಾಲ ಯೋಜನೆ CET ಹಾಗೂ NEET ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಎಲ್ಲಾ ಯೋಜನೆಗಳ ಸಾಮಾನ್ಯ ಮಾರ್ಗ-ಸೂಚಿಗಳು:- 1. ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು “ನಮೂನೆ-ಜಿ”ಯಲ್ಲಿ…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್ಸಿಎಲ್), ನೇರಳೆ ಮಾರ್ಗದ ಹಾಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಜು 22, 2025ರಂದು ಭಾನುವಾರ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಬೆಳಿಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಮೆಟ್ರೋ ಸೇವೆಗಳನ್ನು, ಎಂ.ಜಿ. ರಸ್ತೆ – ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗು ತ್ತಿದೆ. ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂ.ಜಿ. ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ (ಕಾಡುಗೋಡಿ) ಹಾಗೂ ಹಸಿರು ಮಾರ್ಗದ ರೆಸ್ಮ್ ಸಂಸ್ಥೆ ಮತ್ತು ಮಾದಾವರ ನಡುವೆ ಮೆಟ್ರೋ ಸೇವೆಗಳು ಬೆಳಿಗ್ಗೆ 7:00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ. ಬಿಎಂಆರ್ಸಿಎಲ್ ಈ ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತಿದ್ದು, ಪ್ರಯಾಣಿಕರು ತಮ್ಮ ಪ್ರಯಾಣವನ್ನು ಪೂರ್ವತಯಾರಿಗೆ ಯೋಜಿಸಿಕೊಳ್ಳುವಂತೆ ವಿನಂತಿಸಿಕೊಳ್ಳುತ್ತದೆ. ಸಾರ್ವಜನಿಕರ ತಿಳುವಳಿಕೆ ಮತ್ತು ಸಹಕಾರವನ್ನು ಬಿಎಂಆರ್ಸಿಎಲ್ ಪ್ರಾಮಾಣಿಕವಾಗಿ ಗೌರವಿಸುತ್ತದೆ. ಸಾರ್ವಜನಿಕ ಮತ್ತು ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ನಿಮ್ಮ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲು ಪತ್ರಿಕಾ ಮತ್ತು ಮಾಧ್ಯಮವನ್ನು ವಿನಂತಿಸಲಾಗಿದೆ.…
ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ನಗರೂರಿನ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಆದಿಚುಚನಗಿರಿ ವಿಶ್ವವಿದ್ಯಾಲಯ, ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳೂ ಆಗಿರುವ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ವಿವಿ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 26 ವರ್ಷಗಳ ಹಿಂದೆ ಬಡವರಿಗೆ ಆರೋಗ್ಯ ಚಿಕಿತ್ಸಾ ವೆಚ್ಚ ಭರಿಸುವುದು ಬಹುದೊಡ್ಡ ಸವಾಲು ಎಂದು ಚಿಂತಿತರಾಗಿದ್ದರು. ಆ ಸವಾಲನ್ನು ಇದೀಗ ಕೇಂದ್ರ ಸರ್ಕಾರ ಸಾಕಾರಗೊಳಿಸಿದೆ. 60 ಕೋಟಿ ಜನರಿಗೆ ಪ್ರಧಾನಮಂತ್ರಿ ಆಯುಷ್ಮಾನ್ ಆರೋಗ್ಯ…
ಬೆಂಗಳೂರು: “ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. “ಕುಮಾರಸ್ವಾಮಿ ಅವರು ಏನು ಹೇಳಿದ್ದರು? ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ” ಎಂದು ವ್ಯಂಗ್ಯವಾಡಿದರು. ಯಾರ ಅವಕಾಶವನ್ನು ನಾವು ಕಿತ್ತುಕೊಂಡಿಲ್ಲ “ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ” ಎಂದು ಡಿಸಿಎಂ ಸ್ಪಷ್ಟನೆ ನೀಡಿದರು. “ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ 10 ರಷ್ಟು…














