Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ನಿಮ್ಹಾನ್ಸ್ನ ಪ್ರಭಾರ ನಿರ್ದೇಶಕರು ಮತ್ತು ಮನೋವೈದ್ಯಶಾಸ್ತ್ರದ ಹಿರಿಯ ಪ್ರಾಧ್ಯಾಪಕರಾದ ಡಾ. ಪ್ರಭಾ ಎಸ್ ಚಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಅಭಿಯಾನವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಹಿಳೆಯರ ಆರೋಗ್ಯ ಹಾಗೂ ಕುಟುಂಬಗಳನ್ನು ಬಲಪಡಿಸುವುದು ಮತ್ತು ರಾಷ್ಟ್ರೀಯ ಯೋಗಕ್ಷೇಮವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಈ ಅಭಿಯಾನದ ಭಾಗವಾಗಿ,…
ನವದೆಹಲಿ: ಗ್ರಾಹಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಪ್ರಮುಖ ಕ್ರಮವಾಗಿ, ಐಕಾನಿಕ್ ಅಮುಲ್ ಬ್ರಾಂಡ್ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (GCMMF), ತನ್ನ 700 ಕ್ಕೂ ಹೆಚ್ಚು ಉತ್ಪನ್ನ ಪ್ಯಾಕ್ಗಳ ಬೆಲೆ ಕಡಿತವನ್ನು ಘೋಷಿಸಿದೆ. ಸರಕು ಮತ್ತು ಸೇವಾ ತೆರಿಗೆ (GST) ದರಗಳಲ್ಲಿನ ಇತ್ತೀಚಿನ ಕಡಿತಕ್ಕೆ ಪ್ರತಿಕ್ರಿಯೆಯಾಗಿ ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರುವ ಈ ಬೆಲೆ ಕಡಿತ ಬಂದಿದೆ. ಬೆಣ್ಣೆ, ತುಪ್ಪ, UHT ಹಾಲು ಮತ್ತು ಐಸ್ ಕ್ರೀಮ್ನಂತಹ ಡೈರಿ ಅಗತ್ಯ ವಸ್ತುಗಳು, ಹಾಗೆಯೇ ಬೇಕರಿ ವಸ್ತುಗಳು ಮತ್ತು ಹೆಪ್ಪುಗಟ್ಟಿದ ತಿಂಡಿಗಳು ಸೇರಿದಂತೆ ಅಮುಲ್ ಉತ್ಪನ್ನಗಳ ವ್ಯಾಪಕ ಶ್ರೇಣಿಯಲ್ಲಿ ಬೆಲೆ ಕಡಿತವು ವ್ಯಾಪಿಸಿದೆ. ಚೀಸ್, ಪನೀರ್, ಚಾಕೊಲೇಟ್ಗಳು, ಮಾಲ್ಟ್ ಆಧಾರಿತ ಪಾನೀಯಗಳು ಮತ್ತು ಕಡಲೆಕಾಯಿ ಸ್ಪ್ರೆಡ್ನಂತಹ ಇತರ ಉತ್ಪನ್ನಗಳು ಸಹ ಬೆಲೆಗಳಲ್ಲಿ ಇಳಿಕೆಯನ್ನು ಕಾಣುತ್ತವೆ. ಈ ಬೆಲೆ ಪರಿಷ್ಕರಣೆಯು ಅಗತ್ಯ ಆಹಾರ ಪದಾರ್ಥಗಳ ಮೇಲಿನ GST ದರಗಳನ್ನು ಕಡಿಮೆ…
ಬೆಂಗಳೂರು: ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ ಸಂಭಾಗಣದಲ್ಲಿ, NABL ಮಾನ್ಯತೆ ಪಡೆದಿರುವ ಪ್ರಯೋಗಾಲಯಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮತನಾಡಿದ ಸಚಿವರು, ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ತಲುಪಬೇಕು, ಇದಕ್ಕಾಗಿ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಹೊರಬರಲಿದೆ ಎಂದು ಸಚಿವರು ತಿಳಿಸಿದರು.. ಕೃಷಿ ಇಲಾಖೆಯ 29, ತೋಟಗಾರಿಕೆ ಇಲಾಖೆಯ 6, ರೇಷ್ಮೆ ಇಲಾಖೆಯ 1, ಕೃಷಿ ವಿಶ್ವವಿದ್ಯಾಲಯಗಳ 3 ಮತ್ತು ಕೃಷಿ ವಿಜ್ಞಾನ ಕೇಂದ್ರಗಳ 5 ಮಣ್ಣು ಪರೀಕ್ಷಾ ಪ್ರಯೋಗಾಲಗಳು ಸೇರಿ ಒಟ್ಟು 44 ಮಣ್ಣು ಪರೀಕ್ಷಾ ಪ್ರಯೋಗಾಲಯಗಳು NABL Recognition ಪಡೆದಿರುವುದಕ್ಕೆ ಸಚಿವರು ಅಭಿನಂದನೆ ತಿಳಿಸಿದರು. ಅಲ್ಲದೆ, ಕೃಷಿ ಇಲಾಖೆಯ 6 ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳು, 2 ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಗಳು ಮತ್ತು ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆಯ 1 ಬೀಜ…
ಬೆಂಗಳೂರು: ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. “ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಿಳಿಸಿದರು. ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ? “ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ, ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ. ಅವರುಗಳು ಮೊದಲು ತಮ್ಮಪಾಲಿನ…
ನವದೆಹಲಿ : ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಗುರುವಾರ ತನ್ನ ಸದಸ್ಯರ ಪೋರ್ಟಲ್ನಲ್ಲಿ ‘ಪಾಸ್ಬುಕ್ ಲೈಟ್’ ಎಂಬ ಹೊಸ ಸೌಲಭ್ಯವನ್ನು ಪರಿಚಯಿಸಿದೆ. ಇದು ಸದಸ್ಯರು ತಮ್ಮ ಪಾಸ್ಬುಕ್ ಮತ್ತು ಕೊಡುಗೆಗಳು, ಹಿಂಪಡೆಯುವಿಕೆಗಳು ಮತ್ತು ಬ್ಯಾಲೆನ್ಸ್’ನ ಸಂಬಂಧಿತ ಸಾರಾಂಶದ ನೋಟವನ್ನು ಸದಸ್ಯರ ಪೋರ್ಟಲ್ ಮೂಲಕ ಸರಳ ಮತ್ತು ಅನುಕೂಲಕರ ಸ್ವರೂಪದಲ್ಲಿ ಸುಲಭವಾಗಿ ಪರಿಶೀಲಿಸಲು ಅನುವು ಮಾಡಿಕೊಡುತ್ತದೆ, ಪಾಸ್ಬುಕ್ ಪೋರ್ಟಲ್’ಗೆ ಹೋಗದೆ. ವರದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ದಕ್ಷ, ಪಾರದರ್ಶಕ ಮತ್ತು ಬಳಕೆದಾರ ಸ್ನೇಹಿ ಸೇವೆಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ಪ್ರಮುಖ ಸುಧಾರಣೆಗಳನ್ನು ಎತ್ತಿ ತೋರಿಸಿದರು. ಪ್ರಸ್ತುತ, ಸದಸ್ಯರು ತಮ್ಮ ಭವಿಷ್ಯ ನಿಧಿ ಕೊಡುಗೆಗಳು ಮತ್ತು ಮುಂಗಡಗಳು ಅಥವಾ ಹಿಂಪಡೆಯುವಿಕೆಗಳನ್ನು ಒಳಗೊಂಡ ವಹಿವಾಟುಗಳನ್ನು ಪರಿಶೀಲಿಸಲು EPFO ನ ಪಾಸ್ಬುಕ್ ಪೋರ್ಟಲ್ಗೆ ಲಾಗಿನ್ ಆಗಬೇಕಾಗುತ್ತದೆ. EPFO ಪಾಸ್ಬುಕ್ ಲೈಟ್.! * EPFO ತನ್ನ ಸದಸ್ಯ ಪೋರ್ಟಲ್ನಲ್ಲಿ (https://unifiedportal-mem.epfindia.gov.in/memberinterface/) ‘ಪಾಸ್ಬುಕ್…
ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿ ಮಿತ್ರ ಯೋಜನೆ ಜಾರಿಗೊಳಿಸಲಾಗಿದೆ. ಆತಿಥ್ಯ ವಲಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 2026ರ ವೇಳೆಗೆ ಆತಿಥ್ಯ ವಲಯದಲ್ಲಿ 50 ಸಾವಿರ ಯುವಕರನ್ನು ಕೌಶಲಪೂರ್ಣಗೊಳಿಸಿ, ಉದ್ಯೋಗ ನೀಡುವ ಗುರಿ ಹೊಂದಿದ್ದೇವೆ. ನಮ್ಮ ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ ನೀಡುತ್ತಿದ್ದೇವೆ ಎಂದಿದ್ದಾರೆ. 54 ಹೊಸ ಹೋಟೆಲ್ಗಳು ಮತ್ತು ರೆಸಾರ್ಟ್ಗಳಿಗೆ ಸಬ್ಸಿಡಿಗಳನ್ನು ಅನುಮೋದಿಸಿದ್ದೇವೆ. ರಸ್ತೆಬದಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಕ್ರೂಸ್ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಅನ್ವೇಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1969347255770452330 https://kannadanewsnow.com/kannada/shivamogga-a-blood-donation-camp-organized-successfully-on-the-occasion-of-eid-milad-in-ulavi/ https://kannadanewsnow.com/kannada/central-government-rushes-to-the-aid-of-karnataka-farmers-orders-to-purchase-these-grains-at-support-prices/
ಬೆಂಗಳೂರು: ನೆರೆಹಾನಿಯಿಂದ ಸಂತ್ರಸ್ತರಾಗಿದ್ದರ ನಡುವೆ ಬಂದಂತ ಅಲ್ಪ ಸ್ವಲ್ಪ ಬೆಳೆಗೂ ಬೆಲೆ ಇರದಂತ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಹೆಸರುಕಾಳು, ಉದ್ದಿನ ಕಾಳು ಸೇರಿದಂತೆ ಐದು ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಹೌದು ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. 2025-26ನೇ ಸಾಲಿನ ಮುಂಗಾರು ಬೆಳೆಗಳಾದಂತ ಹೆಸರುಕಾಳು, ಉದ್ದಿನ ಬೇಳೆ, ಶೇಂಗಾ, ಸೋಯಾಬಿನ್ ಮತ್ತು ಸೂರ್ಯಕಾಂತಿ ಸೇರಿದಂತೆ ಐದು ಧಾನ್ಯಗಳನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆಯಡಿ ಖರೀದಿಸುವುದಾಗಿ ಘೋಷಿಸಿದೆ. ಅದರಂತೆ ರಾಜ್ಯ ಸರ್ಕಾರಕ್ಕೆ ಈ ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ಖರೀದಿಸುವಂತೆ ನಿರ್ದೇಶಿಸಿದೆ. ಈ ಸಂಬಂಧ ಕೇಂದ್ರ ಕೃಷಿ ಸಚಿವರು ಆಹಾರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಖುದ್ದು ಪತ್ರ ಬರೆದು ತಿಳಿಸಿದ್ದಾರೆ. ಕಾರಣ ಅವರು ಪ್ರಧಾನಿ ಮೋದಿ, ಕೃಷಿ ಸಚಿವರಿಗೆ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಬೆಳೆಹಾನಿಯಾಗಿ ಅಲ್ಪಸ್ವಲ್ಪ ಬಂದಿದೆ. ಅದಕ್ಕೆ ಸೂಕ್ತ ಬೆಲೆಯಿಲ್ಲದಂತೆ ಆಗಿದೆ. ಹೀಗಾಗಿ ಬೆಂಬಲ ಬೆಲೆಯಡಿ ಧಾನ್ಯ ಖರೀದಿ ಮಾಡುವಂತೆ…
ಬೆಂಗಳೂರು: ಪಿಡಿಒ ಜೇಷ್ಠಾತಾ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ತಯಾರಿಸುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡ್ವೊಕೇಟ್ ಜನರಲ್ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ರಣ್ದೀಪ್ ಅವರೊಂದಿಗೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಚಾಲಕಿಯರಿಗೆ ವೇತನ ಪಾವತಿ ಮಾಡುವ ಸಂಬಂಧ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಪರಿಶೀಲಿಸಿದರು. ಇ-ಸ್ವತ್ತು ನಿಯಮಾವಳಿಗಳನ್ನು ಆದಷ್ಟು ಶೀಘ್ರದಲ್ಲಿ ಅಂತಿಮಗೊಳಿಸಲೂ ಸಚಿವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು. https://kannadanewsnow.com/kannada/on-the-occasion-of-mysore-dasara-ksrtc-has-arranged-special-bus-services-exceeding-2300/ https://kannadanewsnow.com/kannada/case-filed-against-a-19-year-old-woman-who-married-a-19-year-old-man/
ಶಿವಮೊಗ್ಗ: ಇಂದು ಸೊರಬ ತಾಲ್ಲೂಕಿನ ಉಳವಿಯಲ್ಲಿ ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿದ್ದಂತ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಈ ರಕ್ತದಾದನಲ್ಲಿ ಎಲ್ಲಾ ಸಮುದಾಯದವರು ಪಾಲ್ಗೊಂಡು ರಕ್ತದಾನ ಮಾಡಿ ಗಮನ ಸೆಳೆದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗದಲ್ಲಿರುವಂತ ಹಳ್ಳಿ ಸಂತೆಯಲ್ಲಿ ಉಳವಿಯ ಫಲಾಹುಲ್ ಮುಸ್ಲಿಂ ಕಮಿಟಿ ಆಶ್ರಯದಲ್ಲಿ ದೂಗೂರು, ಉಳವಿ ಗ್ರಾಮಪಂಚಾಯ್ತಿ ಹಾಗೂ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಪ್ರವಾದಿ ಮೊಹಮ್ಮದ್ ಅವರ 1500 ವರ್ಷದ ಜನ್ಮ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಬೃಹತ್ ರಕ್ತದಾನ ಶಿಬಿರವನ್ನು ಸೊರಬ ತಹಶೀಲ್ದಾರ್ ಮಂಜುಳಾ ಬಿ ಹೆಗಡಾಳ ಅವರು ಉದ್ಘಾಟಿಸಿದರು. ಈ ಬಳಿಕ ಮಾತನಾಡಿದಂತ ಅವರು, ರಕ್ತದಾನ ಮಹಾದಾನವಾಗಿದೆ. ಒಮ್ಮೆಯಾದರೂ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಹೀಗೆ ರಕ್ತದಾನ ಮಾಡುವುದರಿಂದ 4 ಜನರ ಪ್ರಾಣ ಉಳಿಸಿದಂತೆ ಆಗಲಿದೆ. ಆ ನಿಟ್ಟಿನಲ್ಲಿ ಇಂದು ಉಳವಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಿ, ಯಶಸ್ವಿಯಾಗಿ ನಡೆಸುತ್ತಿರುವುದು ನಿಜಕ್ಕೂ ಉತ್ತಮ…
ಬೆಂಗಳೂರು: ಕುರುಬರಿಗೆ ಎಸ್ ಟಿ ಮೀಸಲಾತಿ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದಾಖಲಾಗಿದ್ದಂತ ಪ್ರಕರಣದಲ್ಲಿ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ಸೇರಿದಂತೆ ಇತರರು ಜಾಮೀನು ಕೋರಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಂಬಂಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇನ್ನೂ ಪಿಪಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್.23ಕ್ಕೆ ಮುಂದೂಡಿದೆ. https://kannadanewsnow.com/kannada/case-filed-against-a-19-year-old-woman-who-married-a-19-year-old-man/ https://kannadanewsnow.com/kannada/even-if-your-phone-is-on-silent-or-lost-it-will-be-found-within-a-minute-how-do-you-know/








