Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಮೈಸೂರು: ಅರಸೀಕೆರೆ ರೈಲು ನಿಲ್ದಾಣದ ಯಾರ್ಡ್ನಲ್ಲಿ ನಡೆಯಲಿರುವ ಪ್ಲಾಟ್ಫಾರ್ಮ್ ಶೆಲ್ಟರ್ ಕಾಮಗಾರಿಯ ಸಲುವಾಗಿ, ಕೆಲವು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂಬುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನವೆಂಬರ್ 9 ರಿಂದ ಡಿಸೆಂಬರ್ 13 ರವರೆಗೆ ರೈಲು ಸಂಖ್ಯೆ 16214 ಎಸ್.ಎಸ್.ಎಸ್. ಹುಬ್ಬಳ್ಳಿ – ಅರಸೀಕೆರೆ ಎಕ್ಸ್ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿವೆ. ಅದೇ ರೀತಿ, ನವೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಸಂಚರಿಸುವ ರೈಲು ಸಂಖ್ಯೆ 16213 ಅರಸೀಕೆರೆ – ಎಸ್.ಎಸ್.ಎಸ್. ಹುಬ್ಬಳ್ಳಿ ಎಕ್ಸ್ಪ್ರೆಸ್ ಸೇವೆಯು ಅರಸೀಕೆರೆ ಮತ್ತು ಬೀರೂರು ನಡುವೆ ರದ್ದಾಗಲಿದೆ; ಈ ರೈಲು ಅರಸೀಕೆರೆಗೆ ಬದಲು ಬೀರೂರು ನಿಲ್ದಾಣದಿಂದಲೇ ತನ್ನ ನಿಗದಿತ ಸಮಯದಲ್ಲಿ ಹೊರಡಲಿವೆ. ಇದರ ಜೊತೆಗೆ, ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಕೂಡ ನವೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ…
ಕೂಡ್ಲಿಗಿ : 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು. ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ ಕ್ಷೇತ್ರಕ್ಕೆ 1750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ…
ಬೆಂಗಳೂರು: ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಂಧ್ಯಾ ಎನ್ನುವವರ ಜೊತೆಗೆ ಉಗ್ರಂ ಮಂಜು ನಿಶ್ಚಿತಾರ್ಥ ಸದ್ದಿಲ್ಲದೇ ನೆರವೇರಿದೆ. ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಹಾಗೂ ನಟ ಉಗ್ರಂ ಮಂಜು ನಿಶ್ಚಿತಾರ್ಥ ಸದ್ದಿಲ್ಲದೇ ನೆರವೇರಿದೆ. ಸಂಧ್ಯಾ ಎಂಬುವರ ಕೈಯನ್ನು ಉಗ್ರಂ ಮಂಜು ಇಂದು ಸರಳವಾಗಿ ಹೂ ಮುಡಿಸುವ ಮೂಲಕ ಶಾಸ್ತ್ರದ ಜೊತೆಗೆ ನಿಶ್ಚಿತಾರ್ಥವನ್ನು ನೆರವೇರಿಸಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿ ಕುಟುಂಬಸ್ಥರು ಹಾಗೂ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಟ ಉಗ್ರಂ ಮಂಜು ಹಾಗೂ ಸಂಧ್ಯಾ ನಿಶ್ಚಿತಾರ್ಥ ನೆರವೇರಿದೆ. 2026ರ ಜನವರಿಯಲ್ಲಿ ಉಗ್ರಂ ಮಂಜು ಹಾಗೂ ಸಂಧ್ಯಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಇದೀಗ ಇವರಿಬ್ಬರ ನಿಶ್ಚಿತಾರ್ಥದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. https://kannadanewsnow.com/kannada/a-tusk-cut-during-the-wild-boar-capture-operation-elephant-moaning/ https://kannadanewsnow.com/kannada/centers-ban-on-sharavati-pumped-storage-project-victory-for-environmentalists-fight/
ಹಾಸನ: ಜಿಲ್ಲೆಯಲ್ಲಿ ಭೀಮ ಆನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಒಂದು ದಂತ ಕಟ್ ಆಗಿ, ರಕ್ತ ಸ್ತ್ರಾವದೊಂದಿಗೆ ಭಾರೀ ನರಳಾಟವನ್ನು ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಹಾಸನದಲ್ಲಿ ಉಪಟಳ ನೀಡ್ತಿದ್ದ ಭೀಮ ಆನೆಯು ಒಂದು ದಂತ ಕಟ್ ಆಗಿರೋದರಿಂದ ನರಳಾಡುತ್ತಿದೆ. ದಂತ ಮುರಿದುಕೊಂಡು ಕಾಡಾನೆ ಭೀಮ ಘೀಳಿಡುತ್ತಾ ಓಡಾಡುತ್ತಿದೆ. ಹಾಸನ ಜಿಲ್ಲೆಯ ಜಗಬೋರನಹಳ್ಳಿಯಲ್ಲಿ ಭೀಮ ಒದ್ದಾಟ ನಡೆಸುತ್ತಿದೆ. ಸಾಕಾನೆ, ಕಾಡಾನೆ ಭೀಮನ ನಡುವೆ ಕಾಳಗ ನಡೆದಾಗ ಒಂದು ದಂತ ಕಟ್ ಆಗಿದೆ. https://kannadanewsnow.com/kannada/central-governments-ban-on-sharavati-pumped-storage-is-a-first-stage-victory-farmer-leader-dinesh-shirwala/ https://kannadanewsnow.com/kannada/centers-ban-on-sharavati-pumped-storage-project-victory-for-environmentalists-fight/
ಶಿವಮೊಗ್ಗ: ಕೇಂದ್ರ ಸರ್ಕಾರವು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಡೆ ನೀಡಿರುವುದಾಗಿ ತಿಳಿದು ಬಂದಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವು ಆಗಿದೆ. ಆದರೇ ನಮ್ಮ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಯೋಜನೆಯನ್ನು ರದ್ದುಗೊಳಿಸುವವರೆಗೂ ಮುಂದುವರೆಯಲಿದೆ ಎಂಬುದಾಗಿ ರೈತ ಮುಖಂಡ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಇಂದು ಕೇಂದ್ರ ಸರ್ಕಾರ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಡೆ ನೀಡಿರುವುದು ಒಂದು ಹಂತದ ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವು ಆಗಿದೆ. ನಮ್ಮ ಹೋರಾಟ ಇಲ್ಲಿಗೆ ಕೈ ಬಿಡುವುದಿಲ್ಲ. ಯೋಜನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಆಗ ಮಾತ್ರವೇ ನಮ್ಮ ಹೋರಾಟವು ಅಂತ್ಯವಾಗಲಿದೆ ಎಂದರು. ಇದೇ ನವೆಂಬರ್.11ರಂದು ಶಿವಮೊಗ್ಗದಲ್ಲಿ ದುಂಡುಮೇಜಿನ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗೆಡೆ, ಎಟಿ ರಾಮಸ್ವಾಮಿ, ಗೋಪಾಲಕಗೌಡ, ಚೂನಪ್ಪ ಪೂಜಾರಿ, ಬಂಗಾರಮಕ್ಕಿ ಶ್ರೀ, ಮೂಲೆಗದ್ದೆ ಶ್ರೀಗಳು, ಮೌಲ್ವಿಗಳು, ಫಾದರ್ ಗಳು ಭಾಗಿಯಾಗಲಿದ್ದಾರೆ.…
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರ ಸೇರಿದಂತೆ ಇತರರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಟೆಲೆಕ್ಸ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು, ಉಪಾಧ್ಯಕ್ಷರಾಗಿ ಹೆಚ್ ಬಿ ಮದನ ಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ. ಇನ್ನೂ ಕೆಯುಡಬ್ಲ್ಯೂಜೆಯ ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಜಿ ಸಿ, ಕಾರ್ಯದರ್ಶಿಯಾಗಿ ನಿಂಗಪ್ಪ ಚಾವಡಿ, ಪುಂಡಲೀಕ ಬಾಲೋಜಿ, ಸೋಮಶೇಖರ ಕೆರೆಗೋಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ವಾಸುದೇವ ಹೊಳ್ಳ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಕೆಯುಡಬ್ಲ್ಯೂಜೆ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ಟೆಲೆಕ್ಸ್ ಘೋಷಿಸಿದ್ದಾರೆ. ಶಿವಾನಂದ ತಗಡೂರ ಯಾರು? ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ…
ಮೈಸೂರು: ಅರಸೀಕೆರೆ ರೈಲು ನಿಲ್ದಾಣದ ಯಾರ್ಡ್ನಲ್ಲಿ ನಡೆಯಲಿರುವ ಪ್ಲಾಟ್ಫಾರ್ಮ್ ಶೆಲ್ಟರ್ ಕಾಮಗಾರಿಯ ಸಲುವಾಗಿ, ಕೆಲವು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ. ನವೆಂಬರ್ 9 ರಿಂದ ಡಿಸೆಂಬರ್ 13 ರವರೆಗೆ ರೈಲು ಸಂಖ್ಯೆ 16214 ಎಸ್.ಎಸ್.ಎಸ್. ಹುಬ್ಬಳ್ಳಿ – ಅರಸೀಕೆರೆ ಎಕ್ಸ್ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿವೆ. ಅದೇ ರೀತಿ, ನವೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಸಂಚರಿಸುವ ರೈಲು ಸಂಖ್ಯೆ 16213 ಅರಸೀಕೆರೆ – ಎಸ್.ಎಸ್.ಎಸ್. ಹುಬ್ಬಳ್ಳಿ ಎಕ್ಸ್ಪ್ರೆಸ್ ಸೇವೆಯು ಅರಸೀಕೆರೆ ಮತ್ತು ಬೀರೂರು ನಡುವೆ ರದ್ದಾಗಲಿದೆ; ಈ ರೈಲು ಅರಸೀಕೆರೆಗೆ ಬದಲು ಬೀರೂರು ನಿಲ್ದಾಣದಿಂದಲೇ ತನ್ನ ನಿಗದಿತ ಸಮಯದಲ್ಲಿ ಹೊರಡಲಿವೆ. ಇದರ ಜೊತೆಗೆ, ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಕೂಡ ನವೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಅರಸೀಕೆರೆ ಮತ್ತು ಹಾಸನ ನಡುವೆ ರದ್ದಾಗಲಿದೆ, ಮತ್ತು ಈ ಪ್ಯಾಸೆಂಜರ್ ರೈಲು…
ಬೆಂಗಳೂರು: ಬಳ್ಳೂರು ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಅತ್ತಿಬೆಲೆ ಸಮೀಪದ ಬಳ್ಳೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕರನ್ನು ಅನಿಕೇತ್ ಕುಮಾರ್(12) ಹಾಗೂ ರೆಹಮಾತ್(11) ಎಂಬುದಾಗಿ ಗುರುತಿಸಲಾಗಿದೆ. ಕೂಲಿ ಕೆಲಸವನ್ನು ಮೃತ ಬಾಲಕರ ಪೋಷಕರು ಮಾಡಿಕೊಂಡಿದ್ದರು. ನಿನ್ನೆ ಸಂಜೆ ಮನೆ ಬಳಿ ಆಟವಾಡುತ್ತಾ ಕೆರೆ ಬಳಿ ತೆರಳಿದ್ದಾಗ ಕೆರೆಗೆ ಇಳಿದಿದ್ದಾಗ ಮಕ್ಕಳು ನೀರಿನಲ್ಲಿ ಮುಳುಗಿ ಈ ದುರಂತ ಸಂಭವಿಸಿದೆ. https://kannadanewsnow.com/kannada/6-7-magnitude-earthquake-hits-japan-tsunami-warning-issued/ https://kannadanewsnow.com/kannada/centers-ban-on-sharavati-pumped-storage-project-victory-for-environmentalists-fight/
ಜಪಾನ್: ಭಾನುವಾರ ಸಂಜೆ ಕರಾವಳಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಇವಾಟೆ ಪ್ರಾಂತ್ಯಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್ ಟೈಮ್ಸ್ ವರದಿ ಮಾಡಿದೆ. ಇವಾಟೆ ಕರಾವಳಿಯ ಕೆಲವು ಭಾಗಗಳಲ್ಲಿ 1 ಮೀಟರ್ವರೆಗಿನ ಅಲೆಗಳು ಎದ್ದಿರಬಹುದು ಎಂದು ದೇಶದ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಸಂಜೆ 5.03 ಕ್ಕೆ ದಾಖಲಾದ ಭೂಕಂಪವು ಮೊರಿಯೊಕಾ ನಗರ ಮತ್ತು ಯಹಾಬಾ ಪಟ್ಟಣದಲ್ಲಿ ಶಿಂಡೋ 4 (ಜಪಾನಿನ ಭೂಕಂಪನ ಮಾಪಕ) ಕ್ಕೆ ಸಮಾನವಾದ ಕಂಪನವನ್ನು ಉಂಟುಮಾಡಿತು. ರಾಯಿಟರ್ಸ್ ವರದಿಯ ಪ್ರಕಾರ, ಜಪಾನ್ನ ಸಾರ್ವಜನಿಕ ಪ್ರಸಾರಕ NHK ನಿವಾಸಿಗಳು ಕರಾವಳಿ ಪ್ರದೇಶಗಳಿಂದ ದೂರವಿರಲು ಕೇಳಿಕೊಂಡಿದೆ. ಇವಾಟೆ ಪ್ರಾಂತ್ಯದ ಕರಾವಳಿಯಿಂದ 70 ಕಿಮೀ (45 ಮೈಲುಗಳು) ದೂರದಲ್ಲಿ ಸಂಜೆ 5.12 ಕ್ಕೆ (ಭಾರತೀಯ ಸಮಯ ಮಧ್ಯಾಹ್ನ 1.42) ಸುನಾಮಿ ಕಾಣಿಸಿಕೊಂಡಿದ್ದು, ಶೀಘ್ರದಲ್ಲೇ ಪೆಸಿಫಿಕ್ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು NHK ತಿಳಿಸಿದೆ. https://kannadanewsnow.com/kannada/earthquake-of-magnitude-6-07-strikes-andaman-islands/ https://kannadanewsnow.com/kannada/centers-ban-on-sharavati-pumped-storage-project-victory-for-environmentalists-fight/
ನವದೆಹಲಿ: ಭಾರತದ ಅಂಡಮಾನ್ ದ್ವೀಪಗಳಲ್ಲಿ ಭಾನುವಾರ ಪ್ರಬಲ ಭೂಕಂಪ ಸಂಭವಿಸಿದೆ. ಅಂಡಮಾನ್ ದ್ವೀಪಗಳಲ್ಲಿ 6.07 ತೀವ್ರತೆಯ ಭೂಕಂಪ ಸಂಭವಿಸಿದೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) X ತೀವ್ರತೆಯನ್ನು ಪಡೆದುಕೊಂಡು 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಮತ್ತು 90 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಹೇಳಿದೆ. ಆರಂಭದಲ್ಲಿ, ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ, GFZ, ಭಾನುವಾರ ಅಂಡಮಾನ್ ದ್ವೀಪಗಳಲ್ಲಿ 6.07 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಿದೆ, ಇದು 10 ಕಿ.ಮೀ (6 ಮೈಲುಗಳು) ಆಳದಲ್ಲಿದೆ. https://twitter.com/NCS_Earthquake/status/1987412758338674874 ಏತನ್ಮಧ್ಯೆ, ಸೋಮವಾರ, ವಿದೇಶಾಂಗ ಸಚಿವಾಲಯ (MEA) ಭಾರತವು ಅಫ್ಘಾನಿಸ್ತಾನದಲ್ಲಿ ಭೂಕಂಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಒದಗಿಸಿದೆ ಎಂದು ಹೇಳಿದೆ. ಭಾರತ ಕಳುಹಿಸಿದ ಸಹಾಯದ ಚಿತ್ರಗಳನ್ನು MEA ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಹಂಚಿಕೊಂಡಿದ್ದಾರೆ. “ಆಫ್ಘಾನ್ ಜನರಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸುತ್ತಾ, ಭೂಕಂಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಭಾರತ ಆಹಾರ ಸಾಮಗ್ರಿಗಳನ್ನು ತಲುಪಿಸುತ್ತದೆ. ಭಾರತ ಮೊದಲು ಪ್ರತಿಕ್ರಿಯಿಸುತ್ತದೆ” ಎಂದು ಜೈಸ್ವಾಲ್ X ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. https://twitter.com/DrSJaishankar/status/1985310475325001759…













