Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಅನಧಿಕೃತವಾಗಿ ಹಾಜರಾಗದ ಸಮೀಕ್ಷೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ, ರಾಜ್ಯದಾದ್ಯಂತ — ಬೆಂಗಳೂರು ನಗರವನ್ನು ಒಳಗೊಂಡಂತೆ — ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(Socio-Educational Survey) ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಸುಮಾರು 46 ಲಕ್ಷ ಮನೆಮನೆಗಳಿಗೆ ಸಮೀಕ್ಷೆ ನಡೆಸಬೇಕಿದ್ದು, ಇದಕ್ಕಾಗಿ ಸುಮಾರು 21,000 ಸಮೀಕ್ಷಾದಾರ(Enumerators)ರನ್ನು ನಿಯೋಜಿಸಲಾಗಿದೆ. ಈ ಸಮೀಕ್ಷಾದಾರಲ್ಲಿ 18,000 ಕ್ಕೂ ಹೆಚ್ಚು ಮಂದಿ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ಅವರು ಪ್ರಶಂಸೆಗೆ ಅರ್ಹರಾಗಿದ್ದಾರೆ. ಗರ್ಭಿಣಿಯರು, ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವುಳ್ಳ ತಾಯಂದಿರು ಹಾಗೂ ಗಂಭೀರ ಆರೋಗ್ಯ ಸಮಸ್ಯೆಯುಳ್ಳ ಸಮೀಕ್ಷಾದಾರರನ್ನು ಸಮೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದರೆ, ಪ್ರತಿದಿನ ಪದೇ ಪದೇ ನೋಟೀಸ್ ಗಳು ಹಾಗೂ SMS ಮೂಲಕ ಸಂದೇಶಗಳನ್ನು ನೀಡುತ್ತಿದ್ದರೂ ಕೂಡಾ ಸುಮಾರು 2,300 ಸಮೀಕ್ಷದಾರರು ಯಾವುದೇ ಕಾರಣವಿಲ್ಲದೆ ಹಾಗೂ ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇಂತಹವರ…
ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿಯಿಂದ ಬೆಂಗಳೂರಿನಿಂದ ಶಿರಹಟ್ಟಿಗೆ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 17-10-2025ರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಗದಗ ವಯಾ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಗುತ್ತಲ ಹಾಗೂ ಶಿರಹಟ್ಟಿಗೆ ಹೊಸದಾಗಿ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ ಎಂದಿದೆ. ಹೀಗಿದೆ ವೇಳಾಪಟ್ಟಿ ಮತ್ತು ಟಿಕೆಟ್ ದರ ಬೆಂಗಳೂರು ಟು ಗದಗಕ್ಕೆ ರೂ.890 ಟಿಕೆಟ್ ದರ ನಿಗದಿ ಪಡಿಸಲಾಗಿದೆ. ಬೆಂಗಳೂರಿನಿಂದ ರಾತ್ರಿ 11 ಗಂಟೆಗೆ ಹೊರಡಲಿದ್ದು, ಮರು ದಿನ ಬೆಳಗ್ಗೆ ಗದಗಕ್ಕೆ 6 ಗಂಟೆಗೆ ತಲುಪಲಿದೆ. ಗದಗದಿಂದ ರಾತ್ರಿ 11 ಗಂಟೆಗೆ ಹೊರಟು ಬೆಂಗಳೂರಲ್ಲಿ ಬೆಳಗ್ಗೆ 6 ಗಂಟೆಗೆ ಬಸ್ ತಲುಪಲಿದೆ. ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/suicide-guaranteed-under-the-rule-of-the-states-congress-government-dr-c-n-ashwathnarayan/ https://kannadanewsnow.com/kannada/good-news-e%e2%82%b9-unveiled-by-rbi-now-no-need-for-internet-payment-in-one-click/
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ, ಸೂಕ್ಷ್ಮತೆ, ನೈತಿಕತೆ ಮತ್ತು ಮೌಲ್ಯಗಳ ಕಾಳಜಿ ಇಟ್ಟುಕೊಂಡಿರುವ ಪ್ರಾಮಾಣಿಕ ಅಧಿಕಾರಿಗಳು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಯುವ ಸ್ಥಿತಿ ಬಂದಿದೆ ಎಂದು ತಿಳಿಸಿದರು. ಕಲಬುರ್ಗಿ ಜಿಲ್ಲೆಯ ಗ್ರಂಥಾಲಯದ ಗ್ರಂಥಪಾಲಕಿ ಭಾಗ್ಯವತಿ ಅವರು 15 ತಿಂಗಳಿಂದ ಗ್ರಂಥಾಲಯದ ದಿನಪತ್ರಿಕೆ ಬಿಲ್ಲನ್ನು ಪಾವತಿಸಿಲ್ಲ, ಕರೆಂಟ್ ಬಿಲ್ಲನ್ನು ಪಾವತಿಸಿಲ್ಲ, ಗ್ರಂಥಾಲಯದಲ್ಲಿ ಕಾರ್ಯವನ್ನು ಮಾಡುವುದಕ್ಕೆ ಯಾವುದೇ ರೀತಿಯ ಸಹಕಾರ ಇಲ್ಲ. ಗ್ರಂಥಪಾಲಕಿ ಪ್ರತಿನಿತ್ಯ ಅನುಭವಿಸುತ್ತಿದ್ದ ಅವಮಾನ ಮತ್ತು ಅಸಹಾÀಯಕತೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡು ಸರ್ಕಾರಕ್ಕೆ ಬಹಳ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ ಎಂದು ವಿವರಿಸಿದರು. ಲಜ್ಜೆಗೆಟ್ಟ ಈ ಸರ್ಕಾರ ಯಾವ ಜವಾಬ್ದಾರಿ ಇಲ್ಲದೆ ಮನಬಂದಂತೆ ಏನು ಬೇಕಾದರೂ…
ಶಿವಮೊಗ್ಗ: ಜಿಲ್ಲೆಯ ಸೊರಬದ ಉಳವಿಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಟ್ರಿಲ್ಲರ ಹೊಡೆಯುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಪತ್ರೆಸಾಲಿನ ಯುವಕ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ. ಡೆಡ್ ಲೈನ್ ಎಂದು ಮೆಸ್ಕಾಂ ಇಲಾಖೆ ನಿರ್ಲಕ್ಷ್ಯ, ಯುವಕನಿಗೆ ವಿದ್ಯುತ್ ಶಾಕ್ ಉಳವಿಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ, ಪಕ್ಕದಲ್ಲಿ ಡೆಡ್ ಲೈನ್ ಎಂಬುದಾಗಿ ವಿದ್ಯುತ್ ವಯರ್ ಸಹಿತ ಕಂಬಗಳನ್ನು ಹಾಗೆ ಬಿಡಲಾಗಿದೆ. ಇದೇ ಇಂದಿನ ಘಟನೆಗೆ ಕಾರಣ ಎಂಬುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೆಡ್ ಲೈನ್ ಎಂದು ಮೇನ್ ಲೈನ್, ನಾಲ್ಕು ಲೈನ್ ಪಕ್ಕದಲ್ಲೇ ಗೈಯಿರುವ ಕಂಬವನ್ನು ಬಿಡಲಾಗಿದೆ. ಇದಕ್ಕೆ ಬಳ್ಳಿ ಸುತ್ತಿಕೊಂಡು ಹೋಗಿ ಮೇನ್ ಲೈನ್ ಗೆ ತಾಗಿದೆ. ಇಂದು ಅದೇ ಕಾರಣಕ್ಕಾಗಿ ಟ್ರ್ಯಾಕ್ಟರ್ ಗೆ ಗೈ ತಾಗಿದ್ದೇ ತಡ ವಿದ್ಯುತ್ ಶಾಕ್ ಹೊಡೆದಿದೆ. ಇದರಿಂದ ಅರುಣ್ ಕುಮಾರ್ ಕೈ, ಕಾಲು ಸುಟ್ಟು ಹೋಗಿವೆ. ಜೊತೆಗೆ ಟ್ರ್ಯಾಕ್ಟ್ ಸಹ ಸುಟ್ಟಿದೆ ಎಂಬುದು ಜನರ ಆರೋಪವಾಗಿದೆ. ಮೆಸ್ಕಾಂ ಕಚೇರಿ ಮುಂದೆ ಇದ್ದರೂ ಕಣ್ ಮುಚ್ಚಿ ಕುಳಿತ…
ಯಾದಗಿರಿ: ಜಿಲ್ಲೆಯಲ್ಲಿ ರೌಡಿ ಶೀಟರ್ ಜೊತೆ ಕೇಕ್ ಕಟ್ ಮಾಡಿದಂತ ಪಿಎಸ್ಐ ಒಪ್ಪರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಠಾಣೆಯ ಪಿಎಸ್ಐ ರಾಜಶೇಖರ್ ರಾಠೋಡ್ ಅವರು ರೌಡಿ ಶೀಟರ್ ಜೊತೆಗೆ ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕತ್ತರಿಸಿದ್ದರು. ರೌಡಿ ಶೀಟರ್ ಶೀಟರ್ ನಾಗರಾಜ್ ಜೊತೆಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ್ದ ಪೋಟೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದವು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅವರು ನಾರಾಯಣಪುರ ಠಾಣೆಯ ಪಿಎಸ್ಐ ರಾಜಶೇಖರ ರಾಠೋಡ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. https://kannadanewsnow.com/kannada/rs-300-spent-on-meals-300-crore-cm-siddaramaiah-collection-r-ashok/ https://kannadanewsnow.com/kannada/770606-2breaking-bjp-releases-first-list-for-bihar-elections-names-of-71-candidates-announced/
ಬೆಂಗಳೂರು: ಕಲಬುರ್ಗಿಯ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆಯದು ಆತ್ಮಹತ್ಯೆಯಲ್ಲ; ಅದು ಸರಕಾರಿ ಪ್ರಾಯೋಜಿತ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಈ ಅತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನೌಕರರು ನ್ಯಾಯಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಘಟನೆಯನ್ನು ಮುಚ್ಚಿ ಹಾಕುವ ಎಸ್ಐಟಿ, ಆಯೋಗ ರಚಿಸುವ ಸಾಧ್ಯತೆ ಇದೆ. ಕರೂರಿನಲ್ಲಿ ಸುಮಾರು 50 ಜನ ಸತ್ತಿದ್ದರು. ಅಲ್ಲಿ ಎಸ್.ಐ.ಟಿ. ಮಾಡಿ ಆ ಸರಕಾರ ಮುಚ್ಚಿ ಹಾಕುವ ಪ್ರಯತ್ನ ಮಾಡಿತ್ತು. ಆದರೆ, ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ನೀಡಿದೆ. ಈ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದರು. ವೇತನ ಸಿಗದೇ ಗ್ರಂಥಪಾಲಕರ ಆತ್ಮಹತ್ಯೆ, ಬಿಲ್ ಪಾವತಿ ಆಗದೇ ಗುತ್ತಿಗೆದಾರರ ಆತ್ಮಹತ್ಯೆ, ವರ್ಗಾವಣೆ ಕಮಿಷನ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ, ನಿಗಮಗಳಲ್ಲಿ ಸರಕಾರಿ ಸಾಲ ಸಿಗದೇ ಮೈಕ್ರೋ ಫೈನಾನ್ಸ್ ಕಿರುಕುಳದಲ್ಲಿ ಬಡವರ ಆತ್ಮಹತ್ಯೆ, ಬರ ಮತ್ತು…
ಬೆಂಗಳೂರು: ಸಿದ್ದರಾಮಯ್ಯ ಟಾರ್ಗೆಟ್ ಫಿಕ್ಸ್ ಆಗಿದೆ; ಕರ್ನಾಟಕದ ಬೊಕ್ಕಸ ಬರಿದಾಗಿದೆ. ಇದು ಡಿನ್ನರ್ ರಾಜಕೀಯದ ಕಾರ್ಯಸೂಚಿ ಎಂದು ಆರ್. ಅಶೋಕ್ ಅವರು ಆರೋಪಿಸಿದರು. ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ. ಇಲಾಖೆ ಭಾರದನ್ವಯ ಕೋಟಿ ಕೋಟಿ ಕೊಟ್ಟರೆ ನೀವು ಡಿಸೆಂಬರ್ನಲ್ಲಿ ಸಚಿವರಾಗಿ ಇರುತ್ತೀರಿ; ಇಲ್ಲವಾದರೆ, ಜನವರಿಯಲ್ಲಿ ನೀವು ಇರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು. 300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ್ದಾರೆ ಎಂದರು. ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಕಿರಣ್ ಮಜುಂದಾರ್ ಅವರು ಟ್ವೀಟ್ ಮಾಡಿದ್ದಾರೆ. ಚೀನಾದ ಕಂಪೆನಿಯು ರಸ್ತೆಯ ಪರಿಸ್ಥಿತಿ ಕೆಟ್ಟದಾಗಿ ಇರುವ ಕುರಿತು ಕಸದ ರಾಶಿ ಬಗ್ಗೆ ತಿಳಿಸಿ, ಹೂಡಿಕೆ ಬೇಡವೇ ಎಂದು ಕೇಳಿದೆ ಎಂದು ಪ್ರಸ್ತಾಪಿಸಿದ್ದಾರೆ ಎಂದು ಗಮನಕ್ಕೆ ತಂದರು. ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಎಂದು ಕೇಳಿದರು. ಮೋಹನ್ದಾಸ್ ಪೈ ಅವರು…
ಬೆಂಗಳೂರು: ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಇಂದು ಪ್ರಕಟಿಸಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಇಂದು ಮತ್ತು ನಾಳೆ (14 ಮತ್ತು 15 ಅಕ್ಟೋಬರ್, 2025) ನಡೆಯುತ್ತಿರುವ ಪ್ರವಾಸೋದ್ಯಮದ ಹೊಸ ಉಪಕ್ರಮಗಳ ಬಗ್ಗೆ ರಾಜ್ಯ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಸಚಿವರು ಇಂದು ಮಾತನಾಡುತ್ತಿದ್ದರು. ಜಾಗತಿಕ ಸ್ಪರ್ಧಾತ್ಮಕ ಪ್ರವಾಸೋದ್ಯಮ 50 ತಾಣಗಳನ್ನು ಅಭಿವೃದ್ಧಿಪಡಿಸುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಮಿಷನ್ನ ಅಡಿಯಲ್ಲಿ ಕರ್ನಾಟಕ ಸರ್ಕಾರವು ಗದಗ, ಹಂಪಿ, ಮೈಸೂರು ಮತ್ತು ಉಡುಪಿಗಳನ್ನು ಭವಿಷ್ಯೋತ್ತರ ಜಾಗತಿಕ ತಾಣಗಳೆಂದು ಪರಿಗಣಿಸಬೇಕೆಂದು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿದೆ. ಪಾರಂಪರಿಕ ಜಾಗತಿಕ ತಾಣದ ಎಲೆಮರೆಯ ಕಾಯಿಯಂತೆ ಅನರ್ಘ್ಯ ರತ್ನದಂತಹ ತಾಣವಾಗಿರುವ ಗದಗ ಪರಂಪರೆ, ನಿಸರ್ಗ ಮತ್ತು ಸಂಸ್ಕೃತಿಗಳ ಸಮ್ಮೀಲನವಾಗಿ ಪರಿಪಕ್ವವಾದ ಸೌಹಾರ್ದತೆಯನ್ನು…
ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಮವಸ್ತ್ರ ಧರಿಸಿದ, ಧರಿಸದ ಪೊಲೀಸ್ ಸಿಬ್ಬಂದಿ ವರ್ಗದವರು ಗುರುತಿನ ಚೀಟಿ ತೋರಿಸಿ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚಿಸಲಾಗಿದೆ. ಅದರಲ್ಲಿ ದಿನಾಂಕ:05-04-2017 ರಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳಲ್ಲಿ ಸಮವಸ್ತ್ರ ಧಲಿಸಿ ಪ್ರಯಾಣಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಮವಸ್ತ್ರ ಧರಿಸದೆ ಇಲಾಖೆಯ ಗುರುತಿನ ಚೀಟಿ ತೋಲಿಸಿ ಪ್ರಯಾಣ ಮಾಡುವ ಅಧಿಕಾರಿ/ಸಿಬ್ಬಂದಿಗಳಿಗೆ ಉಚಿತವಾಗಿ ಪ್ರಯಾಣಿಸಲು ತಮ್ಮ ಸಂಸ್ಥೆಯ ಎಲ್ಲಾ ನಿರ್ವಾಹಕರುಗಳಿಗೆ ಸೂಚನೆ ನೀಡುವಂತೆ ಕೋರಲಾಗಿತ್ತು ಎಂದಿದ್ದಾರೆ. ಆದರೆ ಉಲ್ಲೇಖಿತ ತಮ್ಮ ಪತ್ರದಲ್ಲಿ ಸಮವಸ್ತ್ರ ಧರಿಸಿದ ಪೊಲೀಸ್ ಸಿಬ್ಬಂದಿ ವರ್ಗದವರು ಮಾತ್ರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾ ಪ್ರಯಾಣಿಸಲು ಅವಕಾಶ ನೀಡುವಂತೆ ತಮ್ಮ ಇಲಾಖೆಯ ಎಲ್ಲಾ ಚಾಲನಾ ಸಿಬ್ಬಂದಿಗಳಗೂ ಮಾಹಿತಿ ಒದಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿರುತ್ತದೆ. ಈಗಾಗಲೇ ಬೆಂಗಳೂರು ಮಹಾನಗರ ಸಾಲಿಗೆ ಸಂಸ್ಥೆಯ ವತಿಯಿಂದ…
ಬೆಂಗಳೂರು: ಉನ್ನತ ವ್ಯಾಸಂಗ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್ ಗಳಿಗೆ ವೈದ್ಯಾಧಿಕಾರಿಗಳನ್ನು ಸೇವಾನಿರತ ಕೋಟಾದಡಿ ಅನುಮೋದಿಸಲು ಅಥವಾ ನಿಯೋಜನೆ ಮುಖಾಂತರ ಪ್ರಾಯೋಜಿಸಲು ಈ ಮಾರ್ಗಸೂಚಿಗಳನ್ನು ಹಾಗೂ ಅರ್ಹತಾ ಮಾನದಂಡಗಳನ್ನು ಪಾಲಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಬಿಎಸ್ ಅವರು ನಡವಳಿಯನ್ನು ಹೊರಡಿಸಿದ್ದು, ವೈದ್ಯಾಧಿಕಾರಿಗಳನ್ನು ಸ್ನಾತಕೋತ್ತರ ವ್ಯಾಸಂಗ ಮತ್ತು ಸೂಪರ್-ಸ್ಪೆಷಾಲಿಟಿ ಉನ್ನತ ವ್ಯಾಸಂಗಕ್ಕೆ ಸೇವಾನಿರತವಾಗಿ ನಿಯೋಜಿಸುವ ಸಂದರ್ಭದಲ್ಲಿ ಪ್ರಸ್ತುತ ‘ಕರ್ನಾಟಕ ನಾಗರಿಕ ಸೇವಾ ನಿಯಮಗಳು’, ‘ಕರ್ನಾಟಕ ಸರ್ಕಾರಿ ಸೇವಾ (ಸಮೂಹ-ಎ ಅಧಿಕಾರಿಗಳ ಉನ್ನತ ಅಧ್ಯಯನಕ್ಕೆ ಪ್ರತಿನಿಯೋಜನೆ ಮತ್ತು ತರಬೇತಿ ರಜೆ) ನಿಯಮಗಳು, 2008’ ಮತ್ತು ‘ಕರ್ನಾಟಕ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಮತ್ತು ಡಿಪ್ಲೊಮಾ ಕೋರ್ಸ್ಗಳ ಆಯ್ಕೆ ಮತ್ತು ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯ ನಡವಳಿಕೆ ನಿಯಮಗಳು 2006’ರ ನಿಯಮ ಮತ್ತು ನಿಬಂಧನೆಗಳೊಂದಿಗೆ ನಡೆಸಲಾಗುತ್ತಿದ ಎಂಬುದನ್ನು ಗಮನಿಸಲಾಗಿದೆ. ಆದಾಗ್ಯೂ, ಈ ನಿಯಮಗಳ ನಡುವೆ ಸ್ಥಿರತೆ ಮತ್ತು…














