Author: kannadanewsnow09

ಬೆಂಗಳೂರು:  ಕೋವಿಡ್ ಬಳಿಕ ಶೇ 4 ರಿಂದ 5 ರಷ್ಟು ಹೃದಯಾಘಾತಗಳ ಸಂಖ್ಯೆ ಹೆಚ್ಚಾಗಿವೆ ಎಂದರು. ಆದರೆ ಇದಕ್ಕೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ ಸ್ಪಷ್ಟಪಡಿಸಿದರು.‌ ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಹೃದಯಾಘಾತಗಳು ಹೆಚ್ಚಾಗಲು ಶೇ 50 ರಷ್ಟು ಪ್ರಕರಣಗಳಲ್ಲಿ ತಂಬಾಕು ಸೇವನೆಯೇ ಪ್ರಮುಖ ಕಾರಣ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ. ಇದರ ಹೊರತಾಗಿ ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್ ಎ ಲಸಿಕೆಯಿಂದ ಕೊಂಚ ಸಮಸ್ಯೆ ಎದುರಾಗಿದೆ.…

Read More

ಬೆಂಗಳೂರು: ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯು 2005ರ ಜುಲೈ, 02 ರಿಂದ 2009ರ ಜನವರಿ, 02 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ 550 ರೂ.ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://agnipathvayu.cdac.in ನೋಡಬಹುದು. ವೆಬ್‍ಸೈಟ್‍ನಲ್ಲಿ 2025 ರ ಜುಲೈ, 11 ರಿಂದ…

Read More

ಬೆಂಗಳೂರು: 130 ಕಿ.ಮೀ. ಮೇಲ್ಸೇತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್‌ ಡೆಕ್ಕರ್‌ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ. ಡಬಲ್‌ ಡೆಕ್ಕರ್‌ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ. ಡಬಲ್‌ ಡೆಕ್ಕರ್‌ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಇದಕ್ಕೂ ಟೆಂಡರ್‌ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1942182748275589412 “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಚುನಾವಣೆ ನಡೆಸಬೇಕಿದೆ” ಎಂದು ತಿಳಿಸಿದರು.…

Read More

ನವದೆಹಲಿ: ದೇಶದ ಬೃಹತ್ ಬ್ಯಾಂಕುಗಳಲ್ಲಿ ಒಂದಾಗಿರುವಂತ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು, ಈ ವರ್ಷ ತನ್ನ ಬ್ಯಾಂಕಿನಲ್ಲಿ ಖಾರಿ ಇರುವಂತ 50,000 ಹುದ್ದೆಗಳನ್ನು ಈ ವರ್ಷ ಭರ್ತಿ ಮಾಡಿಕೊಳ್ಳಲಿದೆ. ಹೌದು ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 50,000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಂತ ನಿರ್ಧಾರವನ್ನು ಎಸ್ ಬಿ ಐ ಬಂದಿದೆ. ಈ ನೇಮಕಾತಿಯಲ್ಲಿ 21,000 ಅಧಿಕಾರಿಗಳ ಹುದ್ದೆಯಾಗಿದ್ದರೇ, ಇನ್ನುಳಿದಂತೆ ಕ್ಲರ್ಕ್ ಸೇರಿ ಇತರೆ ಹುದ್ದೆಗಳನ್ನು ಭರ್ತಿ ಮಾಡಲಿದೆ. ಎಸ್ ಬಿ ಐ ಈ ವರ್ಷ ವಿಶೇಷ ಅಧಿಕಾರಿಗಳು ಸೇರಿದಂತೆ 20,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಈಗಾಗಲೇ ಈ ಪ್ರಕ್ರಿಯೆ ಶುರುವಾಗಿದ್ದು, ತನ್ನ ಗ್ರಾಹಕರ ಅನುಭವ ಉತ್ತಮ ಪಡಿಸಲು 505 ಪ್ರೊಬೇಷನರಿ ಅಧಿಕಾರಿ, 13,455 ಕಿರಿಯ ಸಹಾಯಕರನ್ನು ನೇಮಕ ಮಾಡಿಕೊಂಡಿದೆ. ಇನ್ನೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಈ ವರ್ಷ 5,500ಕ್ಕಿಂತ ಹೆಚ್ಚು ಹುದ್ದೆ ಭರ್ತಿ ಮಾಡಿಕೊಳ್ಳುತ್ತಿದ್ದರೇ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4000 ಸಿಬ್ಬಂದಿಗಳನ್ನು ಈ ವರ್ಷ ನೇಮಕ ಮಾಡಿಕೊಳ್ಳುವುದಾಗಿ ತಿಳಿದು ಬಂದಿದೆ.…

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸೆವಿಲ್ಲಾ ಮತ್ತು ಬಾರ್ಸಿಲೋನಾ ಜೊತೆಗಿನ ತಮ್ಮ ಅದ್ಭುತ ಆಟಗಳಿಗೆ ಹೆಸರುವಾಸಿಯಾದ ಕ್ರೊಯೇಷಿಯಾದ ಮಾಜಿ ಅಂತರರಾಷ್ಟ್ರೀಯ ಆಟಗಾರ ಇವಾನ್ ರಾಕಿಟಿಕ್, ಸೋಮವಾರ ತಮ್ಮ 37 ನೇ ವಯಸ್ಸಿನಲ್ಲಿ ಫುಟ್ಬಾಲ್ ನಿಂದ ಅಧಿಕೃತವಾಗಿ ನಿವೃತ್ತಿ ಘೋಷಿಸಿದರು. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, “ಫುಟ್ಬಾಲ್, ನಾನು ಕನಸು ಕಂಡಿದ್ದಕ್ಕಿಂತ ಹೆಚ್ಚಿನದನ್ನು ನೀವು ನನಗೆ ಕೊಟ್ಟಿದ್ದೀರಿ. ನೀವು ನನಗೆ ಸ್ನೇಹಿತರು, ಭಾವನೆಗಳು, ಸಂತೋಷ ಮತ್ತು ಕಣ್ಣೀರನ್ನು ಕೊಟ್ಟಿದ್ದೀರಿ” ಎಂದು ಅವರು ಬರೆದಿದ್ದಾರೆ. ಈಗ ವಿದಾಯ ಹೇಳುವ ಸಮಯ. ಏಕೆಂದರೆ ನಾನು ನಿಮ್ಮಿಂದ ದೂರ ಹೋದರೂ, ನೀವು ನನ್ನಿಂದ ಎಂದಿಗೂ ದೂರವಾಗುವುದಿಲ್ಲ ಎಂದು ನನಗೆ ತಿಳಿದಿದೆ. ಧನ್ಯವಾದಗಳು, ಫುಟ್ಬಾಲ್. ಎಲ್ಲದಕ್ಕೂ. ಸೆವಿಲ್ಲಾ ಮತ್ತು ಬಾರ್ಸಿಲೋನಾ ಗೌರವ ಸಲ್ಲಿಸುತ್ತವೆ ಎಂದಿದ್ದಾರೆ. https://twitter.com/ivanrakitic/status/1942182217372848633 ರಾಕಿಟಿಕ್ ಅವರ ಹಿಂದಿನ ಕ್ಲಬ್‌ಗಳು ಅವರ ವೃತ್ತಿಜೀವನವನ್ನು ಗೌರವಿಸಲು ಬೇಗನೆ ಬಂದವು. ಸೆವಿಲ್ಲಾ, ಅಲ್ಲಿ ಅವರು 323 ಪಂದ್ಯಗಳಲ್ಲಿ ಕಾಣಿಸಿಕೊಂಡರು, 53 ಗೋಲುಗಳನ್ನು ಗಳಿಸಿದರು ಮತ್ತು 63 ಅಸಿಸ್ಟ್‌ಗಳನ್ನು ನೀಡಿದರು, ರಾಮನ್ ಸ್ಯಾಂಚೆಜ್…

Read More

ಬೆಂಗಳೂರು: ಖರ್ಗೆಯವರಿಗೆ ಖೆಡ್ಡಾ ತೋಡಿದ್ದ ಕಾಂಗ್ರೆಸ್ ಹೈಕಮಾಂಡ್ (ಎಐಸಿಸಿ) ಈಗ ಸಿದ್ದರಾಮಯ್ಯನವರಿಗೆ ಖೆಡ್ಡಾ ತೋಡುತ್ತಿದೆ ಎಂಬುದಾಗಿ ಜನರು ಮಾತನಾಡುತ್ತಿದ್ದಾರೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ತಂತ್ರ- ಮಂತ್ರಗಳನ್ನು ಮಾಡುತ್ತಿದೆ ಎಂದು ಜನರೂ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ ಎಂದು ನುಡಿದರು. ಮೊದಲು ಖೆಡ್ಡಾ ತೋಡಿ ದೆಹಲಿಗೆ ಕರೆದುಕೊಂಡು ಖರ್ಗೆಯವರನ್ನು ಈಗಾಗಲೇ ಮುಗಿಸಿದ್ದಾರೆ. ಅವರನ್ನು ನಾಮಕಾವಾಸ್ತೆ ಅಧ್ಯಕ್ಷರನ್ನಾಗಿ ಮಾಡಿ ಕೂರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಅವರೇ ಹೈಕಮಾಂಡ್ ಆಗಿದ್ದರೂ ಮಾತೆತ್ತಿದರೆ ಇನ್ನೊಂದು ಹೈಕಮಾಂಡ್ ಬಗ್ಗೆ ಮಾತನಾಡುತ್ತಾರೆ. ಈಗ ಸಿದ್ದರಾಮಯ್ಯನವರಿಗೆ ಖೆಡ್ಡಾ ತೋಡಿದ್ದಾರೆ ಎಂದು ವಿವರಿಸಿದರು. ಎಐಸಿಸಿ ಖೆಡ್ಡಾ ತೋಡಿದ್ದು, ಸಿದ್ದರಾಮಯ್ಯನವರಿಗೆ ಅರ್ಥ ಆದಂತಿದೆ ಎಂದರು. ರಾಜ್ಯದ ಕಾಂಗ್ರೆಸ್ ಸರಕಾರವು ದಲಿತ ವಿರೋಧಿಯಾಗಿದ್ದು, ದಲಿತರನ್ನು ಸರ್ವನಾಶ ಮಾಡುತ್ತಿದೆ ಎಂದು ನಾವು ಹೇಳಿದ್ದೆವು.…

Read More

ಹೈದರಾಬಾದ್: ಡೆಕ್ಕನ್ ಕ್ರಾನಿಕಲ್ ಪ್ರಕಾರ, ಜಾರಿ ನಿರ್ದೇಶನಾಲಯ (ED) ಏಪ್ರಿಲ್‌ನಲ್ಲಿ ನಡೆಸಿದ್ದ ತನಿಖೆಯ ನಂತರ ರಂಗಾರೆಡ್ಡಿ ಜಿಲ್ಲಾ ಗ್ರಾಹಕ ವೇದಿಕೆ ನಟ ಮಹೇಶ್ ಬಾಬು ಅವರಿಗೆ ನೋಟಿಸ್ ಜಾರಿ ಮಾಡಿದೆ. ಹೈದರಾಬಾದ್ ಮೂಲದ ವೈದ್ಯೆಯೊಬ್ಬರು ದೂರು ದಾಖಲಿಸಿದ್ದು, ಹೈದರಾಬಾದ್ ಮೂಲದ ಎರಡು ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಅನಧಿಕೃತ ರಿಯಲ್ ಎಸ್ಟೇಟ್ ಯೋಜನೆಗಳ ಜಾಹೀರಾತು ನೀಡಿದ್ದಕ್ಕಾಗಿ ತನ್ನನ್ನು ಮತ್ತು ಇತರರನ್ನು ವಂಚಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಸಾಯಿ ಸೂರ್ಯ ಡೆವಲಪರ್ಸ್ ಅಡಿಯಲ್ಲಿ ‘ಗ್ರೀನ್ ಮೆಡೋಸ್’ ಎಂಬ ಯೋಜನೆಗೆ ಬಾಬು ಬ್ರಾಂಡ್ ರಾಯಭಾರಿ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು 5.9 ಕೋಟಿ ರೂ.ಗಳನ್ನು ಪಾವತಿಯಾಗಿ ಪಡೆದಿದ್ದಾರೆ ಎಂದು ವರದಿಯಾಗಿದೆ – ಚೆಕ್ ಮೂಲಕ 3.4 ಕೋಟಿ ರೂ.ಗಳು ಮತ್ತು 2.5 ಕೋಟಿ ರೂ.ಗಳು. ಖರೀದಿದಾರರನ್ನು ದಾರಿತಪ್ಪಿಸಿದ್ದಕ್ಕಾಗಿ ನಟನನ್ನು ಮೂರನೇ ಪ್ರತಿವಾದಿಯನ್ನಾಗಿ ಹೆಸರಿಸಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ದೂರುದಾರರು ಜಾಹೀರಾತುಗಳಿಂದ ದಾರಿತಪ್ಪಿಸಿದರು ಮತ್ತು ಕಾನೂನುಬದ್ಧ ವಿನ್ಯಾಸ ಅಸ್ತಿತ್ವದಲ್ಲಿದೆ ಎಂಬ…

Read More

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, ಆಸಕ್ತ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿಸಲ್ಲಿಸಲು ಕೊನೆಯ ಜುಲೈ 25.  ಆಸಕ್ತ ಅಭ್ಯರ್ಥಿಗಳು ಅಕಾಡೆಮಿಯ ವೆಬ್‌ಸೈಟ್  https://sahithyaacademy.karnataka.gov.in   ಯಿಂದ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/kabul-may-become-worlds-first-capital-to-run-out-of-water-by-2030-reports/ https://kannadanewsnow.com/kannada/the-train-services-of-the-south-western-railway-hubli-division-have-been-canceled-and-a-new-schedule-has-been-issued/

Read More

ಹುಬ್ಬಳ್ಳಿ: ಸೋಮಲಾಪುರಂ ಮತ್ತು ರಾಯದುರ್ಗ ನಿಲ್ದಾಣಗಳ ನಡುವಿನ ಬದ್ನಹಳ್ಳುವಿನಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣದ ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು ವೇಳಾಪಟ್ಟಿ ಹೊಂದಿಸಲಾಗಿದೆ: ಅವುಗಳ ಮಾಹಿತಿ ಈ ಕೆಳಗಿನಂತಿದೆ. I. ರೈಲುಗಳ ರದ್ದತಿ: 1. ಜುಲೈ 11, 2025 ರಂದು ಗುಂತಕಲ್ – ಚಿಕ್ಕಜಾಜೂರು ದೈನಂದಿನ ಪ್ಯಾಸೆಂಜರ್ (ಸಂಖ್ಯೆ 57415) ಮತ್ತು ಚಿಕ್ಕಜಾಜೂರು – ಗುಂತಕಲ್ ದೈನಂದಿನ ಪ್ಯಾಸೆಂಜರ್ (57416) ರೈಲುಗಳು ರದ್ದುಗೊಳ್ಳಲಿವೆ. II. ರೈಲುಗಳ ಭಾಗಶಃ ರದ್ದತಿ: 1. ಜುಲೈ 10 ರಂದು ತಿರುಪತಿಯಿಂದ ಹೊರಡುವ ರೈಲು ಸಂಖ್ಯೆ 57405 ಗುಂತಕಲ್ – ಕದಿರಿದದೇವರಪಲ್ಲಿ ದೈನಂದಿನ ಪ್ಯಾಸೆಂಜರ್ ರೈಲು ಗುಂತಕಲ್ ಮತ್ತು ಕದಿರಿದದೇವರಪಲ್ಲಿ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಗುಂತಕಲ್ನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ. 2. ಜುಲೈ 11 ರಂದು ರೈಲು ಸಂಖ್ಯೆ 57406 ಕದಿರಿದೆವರಪಲ್ಲಿ – ತಿರುಪತಿ ದೈನಂದಿನ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಕದಿರಿದೇವರಪಲ್ಲಿ ನಿಲ್ದಾಣದ…

Read More