Author: kannadanewsnow09

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಕುಡಿಯಲು ಹಣ ಕೊಡಲಿಲ್ಲ ಎಂಬುದಾಗಿ ತನ್ನ ಸ್ನೇಹಿತ ಮೇಲೆಯೇ ಸ್ನೇಹಿತ ಲಾಂಗ್ ನಿಂದ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಅರಸು ಕಾಲೋನಿಯ ಮಾರಮ್ಮ ದೇಗುಲದ ಬಳಿಯಲ್ಲಿ ಈ ಘಟನೆ ನಡೆದಿದೆ. ಡೆಲಿವರಿ ಬಾಯ್ ಮುನಿಯಪ್ಪ ಮೇಲೆ ಗೌತಮ್, ಸೂರ್ಯ ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಅಕ್ಟೋಬರ್.21ರಂದು ರಾತ್ರಿ 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಈಸ್ಟ್ ಎಂಡ್ ಬಾರ್ ಒಂದರಲ್ಲಿ ಮದ್ಯವನ್ನು ಮುನಿಯಪ್ಪ ಸೇವಿಸುತ್ತಿದ್ದರು. ಅಲ್ಲಿಗೆ ಬಂದು ಎಣ್ಣೆ ಕೊಡಿಸು ಎಂಬುದಾಗಿ ಆರೋಪಿಗಳಾದಂತ ಗೌತಮ್, ಸೂರ್ಯ ಕೇಳಿದ್ದಾರೆ. ನನ್ನ ಬಳಿ ಹಣ ಇಲ್ಲ. ನಿನಗೆ ಯಾಕೆ ಎಣ್ಣೆ ಕೊಡಿಸಬೇಕು ಎಂಬುದಾಗಿ ಮುನಿಯಪ್ಪ ತಿಳಿಸಿದ್ದಾರೆ. ಇದೇ ಕಾರಣಕ್ಕೆ ಕೋಪದಲ್ಲಿ ಕಾಲೋನಿ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಕಿರಿಕ್ ಮಾಡಲಾಗಿದೆ. ನಾನು ಜೈಲಿನಿಂದ ಹೊರ ಬಂದು 15 ದಿನ ಆಗಿದೆ ಅಷ್ಟೇ. ನನ್ನನ್ನು ಕಂಡ್ರೆ ಭಯ ಇಲ್ವ ಎಂದು…

Read More

ಓಂ ಅಂಜನೇಯಾಯ ವಿದ್ಯಮಹೆ – ಅಂಜನಾದೇವಿಯ ಪುತ್ರನಾದ ಹನುಮಂತನನ್ನು ನಾವು ಧ್ಯಾನಿಸುತ್ತೇವೆ. ವಾಯುಪುತ್ರಾಯ ಧೀಮಹಿ – ವಾಯುದೇವನ ಮಗನಾದ ಹನುಮಂತನಲ್ಲಿ ನಮ್ಮ ಮನಸ್ಸನ್ನು ಕೇಂದ್ರೀಕರಿಸುತ್ತೇವೆ. ತನ್ನೋ ಹನುಮಾನ್ ಪ್ರಚೋದಯಾತ್ – ಆ ಮಹಾ ವೀರ ಹನುಮಂತ ನಮ್ಮ ಬುದ್ಧಿಯನ್ನು, ಶಕ್ತಿ, ಧೈರ್ಯವನ್ನು ಪ್ರೇರೇಪಿಸಲಿ. — ಉಪಯೋಗ ಮತ್ತು ಪ್ರಯೋಜನಗಳು: 1. ಭಯ ನಿವಾರಣೆ – ಭೂತ, ಪ್ರೇತ, ದೆವ್ವ ಅಥವಾ ಅಶುಭ ಶಕ್ತಿಗಳಿಂದ ರಕ್ಷಣೆ ಪಡೆಯಲು ಈ ಮಂತ್ರ ಅತ್ಯಂತ ಪರಿಣಾಮಕಾರಿ. 2. ಶಕ್ತಿ ಮತ್ತು ಧೈರ್ಯ ವೃದ್ಧಿ – ಹನುಮಂತ ಶಕ್ತಿಯ ಸಂಕೇತ. ಈ ಮಂತ್ರ ಜಪ ಮಾಡಿದರೆ ದೈಹಿಕ ಮತ್ತು ಮಾನಸಿಕ ಶಕ್ತಿ ಎರಡೂ ಹೆಚ್ಚಾಗುತ್ತವೆ. 3. ಮನುಷ್ಯನ ಬುದ್ಧಿ, ಸ್ಮರಣೆ ಮತ್ತು ಏಕಾಗ್ರತೆ – ವಿದ್ಯಾರ್ಥಿಗಳು ಮತ್ತು ಪರೀಕ್ಷೆಗೆ ತಯಾರಿ ಮಾಡುವವರು ಈ ಮಂತ್ರವನ್ನು ಪ್ರತಿ ದಿನ 11 ಅಥವಾ 21 ಸಲ ಜಪಿಸಿದರೆ ಏಕಾಗ್ರತೆ ಹೆಚ್ಚಾಗುತ್ತದೆ. 4. ಆತ್ಮವಿಶ್ವಾಸ ಮತ್ತು ಧೈರ್ಯ – ಜೀವನದ ಸಂಕಷ್ಟದಲ್ಲಿ ಆತ್ಮವಿಶ್ವಾಸ ಕಳೆದುಕೊಂಡವರಿಗೆ…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ. ಎಲ್‌ಸಿ 43- ಯಲವಟ್ಟಿ ರಸ್ತೆ ಅ. 28ರ ಬೆ.8 ರಿಂದ ಅ.29 ರ ಸಂಜೆ 6ರವರೆಗೆ ಎಲ್.ಸಿ.46 ಮುಖಾಂತರ -ಹೊಸೊಡಿ ರಸ್ತೆ, ಯಲವಟ್ಟಿ ರಸ್ತೆ ಸಂಪರ್ಕ ಬದಲಿ ಮಾರ್ಗ. ಎಲ್‌ಸಿ 46- ಚಿತ್ರದುರ್ಗ ರಸ್ತೆ-ಅ.30ರ ಬೆ.8 ರಿಂದ ಅ.31 ರ ಸಂಜೆ 6 ರವರೆಗೆ ಹೊಸದಾಗಿ ನಿರ್ಮಿಸಿದ ಮೇಲ್ಸೇತುವೆ ಚಿತ್ರದುರ್ಗ ಸಂಪರ್ಕ ರಸ್ತೆ ಮಾರ್ಗ. ಎಲ್‌ಸಿ 47-ಮಲ್ಲೇಶ್ವರ ನಗರ ರಸ್ತೆ -ನ.2 ರ ಬೆ. 8 ರಿಂದ ನ. 3ರ ಸಂಜೆ 6 ರವರೆಗೆ ಮಲ್ಲೇಶ್ವರ ನಗರ ರಸ್ತೆ-ಹೊನ್ನಾಳಿ ರಸ್ತೆ- ಸಂಗೊಳ್ಳಿ ರಾಯಣ್ಣ ಸರ್ಕಲ್ -ಶಂಕರಮಠ ಸಂಪರ್ಕ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 28.10.2025 (ಮಂಗಳವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ ಐ/ಔ, ಸಪ್ತಗಿರಿ ಐ/ಔ, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. https://kannadanewsnow.com/kannada/one-dead-another-seriously-injured-as-labour-department-building-collapses-in-shivamogga/ https://kannadanewsnow.com/kannada/public-attention-significant-change-in-aadhaar-card-update-rules-from-november-1/

Read More

ಶಿವಮೊಗ್ಗ: ಇಲ್ಲಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ನಿರ್ಮಿಸಿದ್ದಂತ ನೂತನ ಕಾರ್ಮಿಕ ಇಲಾಖೆಯ ಸಮುಚ್ಛಯದ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಅಲ್ಲದೇ ಈ ದುರ್ಘಟನೆಯಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತನನ್ನು ಸಿದ್ಲೀಪುರ ಗ್ರಾಮದ ಮಂಜು(35) ಎಂಬುದಾಗಿ ಗುರುತಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಬಳಕೆಯಾಗಿದ್ದ ತಾತ್ಕಾಲಿಕ ಕಟ್ಟಡ ಕೆಡವಲು ಮಂಜು ಮತ್ತು ಆತನ ಸಹೋದರ ಮುತ್ತು ಮುಂದಾಗಿದ್ದರು. ಈ ವೇಳೆಯಲ್ಲಿ ಸಮುಚ್ಛಯದ ಕಟ್ಟಡ ಒಂದು ಭಾಗದ ಗೋಡೆ ದಿಢೀರ್ ಕುಸಿತಗೊಂಡು ಈ ದುರಂತ ಸಂಭವಿಸಿದೆ. ಗೋಡೆ ಕುಸಿತಗೊಂಡ ಕಾರಣ ಅವಶೇಷಗಳ ಅಡಿಯಲ್ಲಿ ಸಿಲುಕಿ ಮಂಜು ಸಾವನ್ನಪ್ಪಿದ್ದರೇ, ಸಹೋದರ ಮುತ್ತು ಕೈ ಕಾಲುಗಳಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/consensual-sex-not-a-crime-high-courts-landmark-judgment/

Read More

ಬೆಂಗಳೂರು: ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದಂತ ರೇಪ್ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಡೇಟಿಂಗ್ ಆಪ್ ನಲ್ಲಿ ಭೇಟಿ, ಓಯೋ ರೂಂನಲ್ಲಿ ರೇಪ್ ಆರೋಪ ಸಂಬಂಧ ಹೈಕೋರ್ಟ್ ಗೆ ಮಹಿಳೆಯೊಬ್ಬರು ದಾಖಲಿಸಿದ್ದಂತ ಎಫ್ಐಆರ್ ರದ್ದುಪಡಿಸುವಂತೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲವೆಂದು ತೀರ್ಪು ನೀಡಿದೆ. ಸಾಂಪ್ರಾಸ್ ಆಂಥೋಣಿ ಎಂಬುವರ ವಿರುದ್ಧ ದಾಖಲಿಸಿದ್ದಂತ ಕೇಸ್ ರದ್ದುಪಡಿಸಿ ಆದೇಶಿಸಿದೆ. ಮಹಿಳೆ, ಯುವಕ ಡೇಟಿಂಗ್ ಆಪ್ ನಲ್ಲಿ 1 ವರ್ಷದಿಂದ ಸಂಪರ್ಕದಲ್ಲಿದ್ದರು. ಭೇಟಿಯಾಗಲು ನಿರ್ಧರಿಸಿ ರೆಸ್ಟೋರೆಂಟ್ ನಲ್ಲಿ ಊಟ ಮಾಡಿದ್ದರು. ನಂತ್ರ ಓಯೋ ರೂಮ್ ಗೆ ಕರೆದೊಯ್ದು ಯುವಕನಿಂದ ಲೈಂಗಿಕ ಕ್ರಿಯೆ ನಡೆಸಲಾಗಿದೆ. ಲೈಂಗಿಕ ಕ್ರಿಯೆಗೆ ಮುಂದಾದಾಗ ಒಪ್ಪಿಗೆ ನಿರಾಕರಿಸಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಒಪ್ಪಿಗೆ ಹಿಂಪಡೆದ ಬಳಿಕವೂ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿದ್ದಾರೆ. ಮರುದಿನ…

Read More

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠವು ಮಧ್ಯಂತರ ಆದೇಶ ಮಾಡಿದೆ. ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯ್ತಿ, ನರಸಿಂಹರಾಜಪುರ ಪಟ್ಟಣ ಪಂಚಾಯ್ತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ ನರಸೀಪುರ ಪುರಸಭೆ, ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಅರ್ಜಿ ಸಲ್ಲಿಸಲಾಗಿತ್ತು. ಸದಸ್ಯರ ಅವಧಿಯಿಂದ ಎಒ ನೇಕವಾಗಿದ್ದ ಅವಧಿ ಹೊರತುಪಡಿಸಲು ಕೋರಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಚುನಾಯಿತ ಸದಸ್ಯರ ಅಧಿಕಾರವಧಿ ಮುಗಿಯುವ ತನಕ ನೇಮಕ ಬೇಡವೆಂದು ಆದೇಶಿಸಿದೆ. ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಸೂಚಿಸಿದೆ. ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಲಾಗಿದೆ.

Read More

ಬೆಂಗಳೂರು :- ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್‌ಐಟಿಯವರು ಹೇಳಿದ್ದರು. 31ರೊಳಗೆ ಕೊಡಬಹುದು ಅಥವಾ ಒಂದೆರಡು ದಿನ ವಿಳಂಬವಾಗಬಹುದು. ಅಂತಿಮ ವರದಿಯನ್ನು ಕೊಡುವಂತೆ ಹೇಳಿದ್ದೇವೆ. ಪತ್ತೆಯಾಗಿರುವ ಮೂಳೆಗಳ ಎಫ್‌ಎಸ್‌ಎಲ್ ವರದಿ, ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ ಮಾಡಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನ ನಾವು ಹೇಳಲು ಬರುವುದಿಲ್ಲ. ಅವರು ಏನು ತೀರ್ಮಾನ ಮಾಡುತ್ತಾರೆ ಕಾದು ನೋಡೋಣ. ದಿನನಿತ್ಯ ಮಾಧ್ಯಮದಲ್ಲಿ ಹೇಳಿಕೆ ಕೊಡಬಹುದು ಅಷ್ಟೇ. ಇಲ್ಲಿವರೆಗೆ ಹೈಕಮಾಂಡ್‌ನವರು ಏನಾದರು ಹೇಳಿದ್ದಾರೆಯೇ? ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಮಾಡುತ್ತೇವೆ ಎಂಬುದರ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಮಾಹಿತಿ ಇಲ್ಲ. ಏನಾದರು ಹೈಕಮಾಂಡ್‌ನಿಂದ ಸೂಚನೆ ಬಂದಿದ್ದರೆ ನಾವು ಪ್ರತಿಕ್ರಿಯಿಸಬಹುದು. ಹೈಕಮಾಂಡ್…

Read More

ಮೈಸೂರು : ಸರಗೂರು ತಾಲೂಕು ಬೆಣ್ಣೆಗೆರೆ (ಮುಳ್ಳೂರು) ಬಳಿ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ, ಎಚ್.ಡಿ. ಕೋಟೆ, ಸರಗೂರಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ಇದ್ದರೂ, ಮೈಸೂರಿಗೆ ಏಕೆ ತಂದರು ಎಂಬ ಬಗ್ಗೆ ತನಿಖೆ ಮಾಡಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ಹಿಂದಿನಿಂದಲೂ ಇದೆ. ಅರಣ್ಯ ದಂಚಿನ ಗ್ರಾಮದ…

Read More

ಬೆಂಗಳೂರು: ರಾಜ್ಯದಲ್ಲಿನ ಮಕ್ಕಳ ಶಾಲಾ ಸಮಯದಲ್ಲಿ ಆಟದ ಅವಧಿಯನ್ನು ಕಡಿತಗೊಳಿಸದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ಕೆ.ಟಿ ತಿಪ್ಪೇಸ್ವಾಮಿ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ರಾಜ್ಯದ ವಿವಿಧ ಭಾಗಗಳಲ್ಲಿ ನಡೆಸಿದ ಮಕ್ಕಳೊಂದಿಗೆ ಸಂವಾದ, ಶಾಲಾ ಭೇಟಿಯ ಸಮಯದಲ್ಲಿ 10ನೇ ತರಗತಿಯ ಮಕ್ಕಳು ವೇಳಾಪಟ್ಟಿಯಲ್ಲಿ ನಿಗದಿಗೊಳಿಸಿದ ಆಟದ ಅವಧಿಗಳನ್ನು ನಡೆಸದೆ ಇರುವ ಬಗ್ಗೆ ಆಯೋಗದ ಗಮನಕ್ಕೆ ತಂದಿರುತ್ತಾರೆ ಎಂದಿದ್ದಾರೆ. ಸ್ವತಃ ನಾನು ಹಲವು ಪ್ರೌಢಶಾಲೆಯ ಮಕ್ಕಳ ಜೊತೆಗೆ ಮಾತನಾಡಿದಾಗ ಇದನ್ನು ಗಮನಿಸಿರುತ್ತೇನೆ. ಆಟ, ಕಲೆ, ಸಂಗೀತದಂತಹ ಪತ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸದ ಅವಿಭಾಜ್ಯ ಅಂಗ. ಇದನ್ನು ಮನಗಂಡು ವಿಶ್ವಸಂಸ್ಥೆಯು ಜೂನ್ 11 ಅನ್ನು ಪ್ರತೀ ವರ್ಷ ಅಂತರಾಷ್ಟ್ರೀಯ ಆಟದ ದಿನವೆಂದು ಗುರುತಿಸಿದೆ. 10ನೇ ತರಗತಿಯ…

Read More