Author: kannadanewsnow09

ಹಣದ ಅಧಿಪತಿಯಾಗಬಲ್ಲ ಮಾತೆ ಮಹಾಲಕ್ಷ್ಮಿಯು ನಮ್ಮ ಮನೆಯಲ್ಲಿ ಶಾಶ್ವತವಾಗಿ ನೆಲೆಸುವಂತೆ ನಾವು ಅನೇಕ ಪರಿಹಾರಗಳನ್ನು ಮತ್ತು ಅನೇಕ ಪೂಜೆಗಳನ್ನು ಮಾಡುತ್ತಿದ್ದೇವೆ. ತಾಯಿ ಮಹಾಲಕ್ಷ್ಮಿ ನಮ್ಮ ಮನೆಯಲ್ಲಿ ಖಾಯಂ ಆಗಿ ನೆಲೆಸಿದರೆ ಆದಾಯ ಹೆಚ್ಚುತ್ತದೆ, ಸಾಲದ ಬಾಧೆಯಿಂದ ಪಾರಾಗುತ್ತದೆ, ದುಂದು ವೆಚ್ಚ ತಡೆಯುತ್ತದೆ ಎಂದು ಹೇಳಲಾಗುತ್ತದೆ. ಶುಕ್ರವಾರದಂದು ಉಪ್ಪನ್ನು ಖರೀದಿಸುವುದು ನಾವು ಮಾಡುವ ಪರಿಹಾರಗಳಲ್ಲಿ ಒಂದಾಗಿದೆ. ನೀವು ಈ ರೀತಿ ಉಪ್ಪನ್ನು ಖರೀದಿಸಿದರೆ, ಆಧ್ಯಾತ್ಮಿಕತೆಯ ಬಗ್ಗೆ ನಾವು ಈ ಪೋಸ್ಟ್‌ನಲ್ಲಿ ನೋಡಲಿದ್ದೇವೆ , ಆ ಉಪ್ಪಿನೊಂದಿಗೆ ನೀವು ಖರೀದಿಸುವ ಮೂರು ವಸ್ತುಗಳು ನಿಮಗೆ ಅನಿರೀಕ್ಷಿತ ಅದೃಷ್ಟವನ್ನು ತರುತ್ತವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು…

Read More

ಶಿವಮೊಗ್ಗ: ಸಮಾಜಕ್ಕೆ ಮಾದರಿಯಾಗಬಲ್ಲ ಪಾತ್ರಗಳ ಕೊರತೆಯೇ ಆಧುನಿಕ ಸಿನಿಮಾಗಳ ಪ್ರಮುಖ ಸಮಸ್ಯೆಯಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ ಎಸ್.ಎಂ.ಗೋಪಿನಾಥ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು 15ನೇ ಸಹ್ಯಾದ್ರಿ ಚಲನಚಿತ್ರೋತ್ಸವವನ್ನು “ನಿರಾಶ್ರಿತರ ಬಿಕ್ಕಟ್ಟು” ವಿಷಯ ಕುರಿತು ಸೆಪ್ಟೆಂಬರ್ 17-21ರ ವರೆಗೆ ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದು, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಕನೇ ಖಳನಾಯಕ ಆಗಿರುವ, ಅತೀ ಹಿಂಸೆ, ಕೊಳ್ಳೆ ಹೊಡೆಯುವಿಕೆ ಅಂತಹ ಪಾತ್ರಗಳನ್ನು, ಸಿನಿಮಾಗಳನ್ನು ನಾವಿಂದು ಕಾಣುತ್ತಿದ್ದೇವೆ. ಪ್ಯಾನ್ ಇಂಡಿಯಾ ಸಿನಿಮಾಗಳು ಎಂದು ಹೇಳಿಕೊಂಡು ಬರುತ್ತಿರುವ ಎಲ್ಲವುಗಳಲ್ಲಿಯೂ ಇದೆ ಕಥಾನಕವಿದೆ. ಯುವಜನರು ಇವುಗಳನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕೆ, ಮಾದರಿ ಎಂದುಕೊಳ್ಳಬೇಕೆ ಎಂದು ಕಳವಳ ವ್ಯಕ್ತಪಡಿಸಿದರು. ಶಿವಮೊಗ್ಗ ಚಿತ್ರ ಸಮಾಜ ಸಿನಿಮೊಗೆಯ ಸಂಚಾಲಕ ಮತ್ತು ಪತ್ರಕರ್ತ ವೈದ್ಯನಾಥ ಹೆಚ್ ಯು ಅವರು ಚಿತ್ರೋತ್ಸವಉದ್ಘಾಟಿಸಿ ಮಾತನಾಡುತ್ತ, ಇಂದಿನ ಸಿನಿಮಾಗಳಲ್ಲಿ ನಾಯಕ – ನಾಯಕಿಯರ ವಿಜೃಂಭಣೆ ಅಧಿಕಗೊಂಡು ಕಥೆ ಗೌಣವಾಗುತ್ತಿದೆ. ಉತ್ತಮ ಬದುಕಿಗೆ ಬೇಕಾದ…

Read More

ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಶಿಪ್ ಅನ್ವಯವಾಗುವುದಿಲ್ಲ. ಈ ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಹಾಗಾದ್ರೆ ಯಾರಿಗೆಲ್ಲ ಸಿಗಲಿದೆ? ಮಾನದಂಡಗಳೇನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್‌ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂದು ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿದ್ದು, ಈ ಸುದ್ದಿಯು “ಸುಳ್ಳುಸುದ್ದಿ”ಯಾಗಿದೆ. ಈ ಯೋಜನೆಯಲ್ಲಿ ನಿರ್ದಿಷ್ಟ ಮಾನದಂಡಗಳು ಅನ್ವಯವಾಗುವ ಮಕ್ಕಳಿಗೆ ಮಾತ್ರ ಸ್ಕಾಲರ್‌ಶಿಪ್ ಲಭಿಸುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಯೋಜನೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿಂದ (ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯ) ಹೊರಹೋಗಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ಮಕ್ಕಳು, ಇಬ್ಬರೂ ಪೋಷಕರನ್ನು ಕಳೆದುಕೊಂಡ…

Read More

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ನಾಳೆ, ನಾಡಿದ್ದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 18-09-2024ರಂದು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಸೆ.18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಗಬ್ಬಲಾಳ, ಉತ್ತರಹಳ್ಳಿ, ಇಸ್ಟೋ ಲೇಔಟ್‌ ಕೈಗಾರಿಕಾ ಪ್ರದೇಶ, ಆದರ್ಶ ಅಪಾರ್ಟಮೆಂಟ್‌ 1 ಮತ್ತು 2. ಮಂತ್ರಿ ಟ್ರಾನ್ಕ್ವಿಲ್‌ ಅಪಾರ್ಟ್‌ ಮೆಂಟ್‌, ಮಾರುತಿ ಲೇಔಟ್‌, ಭಾರತ್‌ ಲೇಔಟ್‌, ದೊಡ್ಡಕಲ್ಲಸಂದ್ರ ಕೈಗಾರಿಕಾ ಪ್ರದೇಶ, ವಿಟಲಾ ನಗರ, ಯಾವಳಾಂ ನಗರ, ಮಾರುತಿ ನಗರ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ದಿನಾಂಕ 19.09.2024(ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “220/66/11ಕೆ.ವಿ ಎನ್.ಆರ್.ಎಸ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ…

Read More

ಮಂಡ್ಯ: ಜಿಲ್ಲೆಯ ಮದ್ದೂರಿನ ಶಿವಪುರದ ಧ್ವಜ ಸತ್ಯಾಗ್ರಹ ಸ್ಮಾರಕ ಸೌಧ ಪುನರುಜ್ಜೀವನ ಮಾಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆರ್ಥಿಕ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ತಾವು ಸಲ್ಲಿಸಿದ ಮನವಿಗೆ ಸಿಎಂ ಸ್ಪಂದಿಸಿ, ಸ್ಮಾರಕದ ನವೀಕರಣಕ್ಕೆ ಕ್ರಮ ವಹಿಸಿದ್ದು, ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆಗಳು ಎಂದು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 1937 ರಲ್ಲಿ ಶಿವಪುರದಲ್ಲಿ ಹೋರಾಟಗಾರರಾದ ಎನ್.ವೀರಣ್ಣ ಗೌಡ, ಕೊಪ್ಪದ‌ ಜೋಗಿ ಗೌಡ, ಸಾಹುಕಾರ ಚೆನ್ನಯ್ಯ ನೇತೃತ್ವದಲ್ಲಿ ನಡೆದಿದ್ದ ಹೋರಾಟದ ನೆನಪಿಗೆ ಅಲ್ಲಿ ಸೌಧ ನಿರ್ಮಾಣ ಮಾಡಲಾಗಿತ್ತು. ಆದರೆ, ಸೌಧ ನಿರ್ವಹಣೆ ಇಲ್ಲದೇ ಹಾಳು ಬಿದ್ದಿವೆ. ಸ್ಮಾರಕದ ಒಳಗಡೆ ಇರುವ ಚಿತ್ರಪಟಗಳು ಹಾಳಾಗಿವೆ. ಉದ್ಯಾನವನ ನಿರ್ವಹಣೆ ಇಲ್ಲದೇ ಸೊರಗಿದೆ. ಸಂಗೀತ ಕಾರಂಜಿ ನೃತ್ಯ ನಿಲ್ಲಿಸಿ ತುಕ್ಕು ಹಿಡಿದಿದೆ. ಸ್ಮಾರಕ ಭವನದ ಒಳಗೆ ಧೂಳು ತುಂಬಿಕೊಂಡಿದೆ. ಭವನದ ಬಾಗಿಲು ಸದಾ ಹಾಕಿಕೊಂಡಿರುವುದರಿಂದ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಮೊಕಿ ಟ್ರೈನಿಂಗ್ ಬೇಸ್ನಲ್ಲಿ ಮಂಗಳವಾರ (ಸೆಪ್ಟೆಂಬರ್ 17) ನಡೆದ ಫೈನಲ್ನಲ್ಲಿ ಚೀನಾವನ್ನು 1-0 ಅಂತರದಿಂದ ಸೋಲಿಸಿ 2024 ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ನಂತರ ಭಾರತೀಯ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ನಾಲ್ಕನೇ ಕ್ವಾರ್ಟರ್ನಲ್ಲಿ ನಾಯಕ ಹರ್ಮನ್ಪ್ರೀತ್ ಸಿಂಗ್ ಏಕೈಕ ಗೋಲ್ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಈ ಹಿಂದೆ 2011, 2016 ಮತ್ತು 2023ರಲ್ಲಿ ಟ್ರೋಫಿ ಎತ್ತಿ ಹಿಡಿದಿದ್ದ ಭಾರತ, ಇತಿಹಾಸದಲ್ಲಿ ಐದನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಟೂರ್ನಿಯಲ್ಲಿ ಎರಡನೇ ಅತ್ಯಂತ ಯಶಸ್ವಿ ತಂಡವೆಂದರೆ ಪಾಕಿಸ್ತಾನ, ಅದು ಮೂರು ಬಾರಿ ಟ್ರೋಫಿಯನ್ನು ಎತ್ತಿಹಿಡಿದಿದೆ. ದಕ್ಷಿಣ ಕೊರಿಯಾ 2021 ರಲ್ಲಿ ಪ್ರಶಸ್ತಿಯನ್ನು ಗೆದ್ದಿತು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚೀನಾ ಫೈನಲ್ ತಲುಪಿದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಅವರ ಅತ್ಯುತ್ತಮ ಅಂತ್ಯವನ್ನು ಸೂಚಿಸುತ್ತದೆ. https://kannadanewsnow.com/kannada/ramanagara-five-members-of-a-family-killed-as-car-rams-into-tree-in-ramanagara/ https://kannadanewsnow.com/kannada/kea-announces-revised-schedule-for-various-exams-including-psi-kset-here-is-the-new-exam-date/

Read More

ರಾಮನಗರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿರುವಂತ ಘಟನೆ ರಾಮನಗರ ಗುಡೇಮಾರನಹಳ್ಳಿಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಡೆಮಾರಹನಳ್ಳಿ ಬಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣಹೊಂದಿರುವುದಾಗಿ ತಿಳಿದು ಬಂದಿದೆ. ಮಾರುತಿ ಎರಿಟಿಗ ಕಾರಿನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಕಾರಿನಲ್ಲಿ ಇದ್ದಂತ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. https://kannadanewsnow.com/kannada/bjp-mla-munirathna-sent-to-14-day-judicial-custody/ https://kannadanewsnow.com/kannada/kea-announces-revised-schedule-for-various-exams-including-psi-kset-here-is-the-new-exam-date/

Read More

ಬೆಂಗಳೂರು: ಗುತ್ತಿಗೆದಾರರಿಗೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿದಂತ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಕೇಸ್ ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. https://twitter.com/ANI/status/1836001039985811696 https://kannadanewsnow.com/kannada/arvind-kejriwal-submits-resignation-as-delhi-cm/ https://kannadanewsnow.com/kannada/breaking-sc-stays-bulldozer-operation-across-the-country/

Read More

ನವದೆಹಲಿ: ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ಎಎಪಿ ನಾಯಕಿ ಅತಿಶಿ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಘೋಷಿಸಿದ ಸ್ವಲ್ಪ ಸಮಯದ ನಂತರ ಕೇಜ್ರಿವಾಲ್ ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದರು. ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐದು ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾದ ಕೂಡಲೇ ಕೇಜ್ರಿವಾಲ್ ತಮ್ಮ ರಾಜೀನಾಮೆಯನ್ನು ಘೋಷಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಮುಂಚಿತವಾಗಿ ಚುನಾವಣೆಗೆ ಕರೆ ನೀಡುವ ಮೂಲಕ ಕೇಜ್ರಿವಾಲ್ ರಾಷ್ಟ್ರಕ್ಕೆ ಆಘಾತವನ್ನುಂಟು ಮಾಡಿದರು. ದೆಹಲಿಯ ಜನರು ನನ್ನನ್ನು ಮರಳಿ ಕರೆತಂದ ನಂತರವೇ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಹೇಳಿದರು. https://twitter.com/ANI/status/1835997363049005496 https://kannadanewsnow.com/kannada/is-rs-24000-scholarship-available-for-all-fatherless-children-heres-the-real-truth-of-the-viral-news/ https://kannadanewsnow.com/kannada/kea-announces-revised-schedule-for-various-exams-including-psi-kset-here-is-the-new-exam-date/

Read More

ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಶಿಪ್ ಅನ್ವಯವಾಗುವುದಿಲ್ಲ. ಈ ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಹಾಗಾದ್ರೇ ತಂದೆಯಿಲ್ಲದ ಮಕ್ಕಳಿಗೆ 24000 ಸ್ಕಾಲರ್ ಶಿಪ್ ಲಭ್ಯವಿದ್ಯಾ ಅಥವಾ ಇಲ್ಲವೇ ಎನ್ನುವ ವೈರಲ್ ಸುದ್ದಿಯ ಅಸಲಿ ಸತ್ಯದ ಬಗ್ಗೆ ಮುಂದೆ ಓದಿ. ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್‌ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂದು ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿದ್ದು, ಈ ಸುದ್ದಿಯು “ಸುಳ್ಳುಸುದ್ದಿ”ಯಾಗಿದೆ. ಈ ಯೋಜನೆಯಲ್ಲಿ ನಿರ್ದಿಷ್ಟ ಮಾನದಂಡಗಳು ಅನ್ವಯವಾಗುವ ಮಕ್ಕಳಿಗೆ ಮಾತ್ರ ಸ್ಕಾಲರ್‌ಶಿಪ್ ಲಭಿಸುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಯಾರಿಗೆಲ್ಲ ಸ್ಕಾಲರ್ ಶಿಪ್ ಲಭ್ಯ? ಈ ಯೋಜನೆಯಲ್ಲಿ ಮಕ್ಕಳ ಪಾಲನಾ…

Read More