Author: kannadanewsnow09

ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ ಮಾರ್ಗದಲ್ಲಿ KSRTCಯಿಂದ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ” ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ & ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ದಿನಾಂಕ: 28-06-2025 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಪ್ರಾರಂಭಿಸಲಾಗುತ್ತದೆ ಎಂದಿದೆ. ಪ್ಯಾಕೇಜ್ ಟೂರ್ ಸಾರಿಗೆಯ ಪ್ರಯಾಣ ದರದ ವಿವರಗಳು ಅಶ್ವಮೇಧ ಕ್ಲಾಸಿಕ್ ಸಾರಿಗೆ ಪ್ರಯಾಣ ದರವು ವಯಸ್ಕರಿಗೆ ರೂ.600-00 (ಮುಂಗಡ ಬುಕಿಂಗ್ ಸೇರಿ) ಆಗಿದೆ. ಮಕ್ಕಳಿಗೆ (6 ರಿಂದ 12 ವರ್ಷ) ರೂ.450-00 (ಮುಂಗಡ ಬುಕಿಂಗ್ ಸೇರಿ) ದರ ನಿಗದಿ ಪಡಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಮೇಲೆ ತಿಳಿಸಿರುವ ಪ್ಯಾಕೇಜ್ ಟೂರ್ ಸಾರಿಗೆ ಸೌಲಭ್ಯಕ್ಕಾಗಿ ಟಿಕೇಟ್…

Read More

ಬೆಂಗಳೂರು: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ಕಮಲಮ್ಮ, ರಾಮಕೃಷ್ಣಪ್ಪ ಎನ್ನುವಂತ ವೃದ್ಧಾಶ್ರಮವಿದೆ. ಈ ವೃದ್ಧಾಶ್ರಮಕ್ಕೆ ಕೃಷ್ಣಮೂರ್ತಿ(81) ಹಾಗೂ ರಾಧಾ(74) ಎಂಬುವರನ್ನು ಮಕ್ಕಳು ಸೇರಿಸಿದ್ದಾರೆ. ಇದರಿಂದ ಮನನೊಂದಿರುವಂತ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊಸೆ ಮಾಡಿದ ಅಡುಗೆ ಇಷ್ಟವಿಲ್ಲ, ಹೊಂದಾಣಿಕೆಯಾಗದ ಕಾರಣ ಬೇರೆ ಮನೆ ಮಾಡಿಕೊಡುವಂತೆ ಮಗನಿಗೆ ವೃದ್ಧ ದಂಪತಿಗಳು ಕೇಳಿದ್ದರು. ಆದರೇ ಇದನ್ನು ಕೇಳದಂತ ಪುತ್ರ 2021ರಲ್ಲಿ ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಆ ಬಳಿಕ 2023ರಲ್ಲಿ ತಂದೆ ತಾಯಿಯನ್ನು ಮನೆಗೆ ವಾಪಾಸ್ ಕರೆದುಕೊಂಡು ಬಂದಿದ್ದರು. ಆದರೇ ವೃದ್ಧಾಶ್ರಮದಿಂದ ಬಂದ ನಂತ್ರ ಮನೆಯಲ್ಲಿ ಹೊಂದಾಣಿಕೆ ಆಗಿರಲಿಲ್ಲ. ಈ ಕಾರಣದಿಂದಾಗಿ ಮತ್ತೆ ಪುತ್ರ ಬೆಂಗಳೂರಿನ ಜೆಪಿ ನಗರದಲ್ಲಿರುವಂತ 8ನೇ ಹಂತದಲ್ಲಿನ ವೃದ್ಧಾಶ್ರಮಕ್ಕೆ ತಂದೆ ಕೃಷ್ಣಮೂರ್ತಿ, ತಾಯಿ ರಾಧಾ ಸೇರಿಸಿದ್ದರು. ಇದರಿಂದ ಮನನೊಂದಂತ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/study-on-western-ghats-water-retention-capacity-under-the-leadership-of-pccf-minister-eshwar-khandre/ https://kannadanewsnow.com/kannada/cbse-approval-to-conduct-the-10th-grade-board-examination-twice-from-2026/

Read More

ಬೆಂಗಳೂರು : ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity)ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು. ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು. 368 ವೃಕ್ಷ ರಕ್ಷಣೆಗೆ ಕ್ರಮ: ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿರುವ ಜೀವವೈವಿಧ್ಯ ತಾಣದ 368 ವಿವಿಧ…

Read More

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ ಟೌನ್ SEZ (Karle Town SEZ) ಆಫೀಸ್‌ಗೆ ಭೇಟಿ ನೀಡಿ, ಭಾರತದಲ್ಲಿ ನಿರ್ಮಿತವಾದ ಅತ್ಯಾಧುನಿಕ ಕ್ವಾಂಟಮ್ ಕಂಪ್ಯೂಟರ್ – QpiAI Indus ಅನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ತಜ್ಞರು ಮಾಡಿದ ಡೆಮೊನ್ಸ್ಟ್ರೇಷನ್‌ನಲ್ಲಿ QpiAI Indus ನ ತಂತ್ರಜ್ಞಾನ ಸಾಮರ್ಥ್ಯಗಳನ್ನು ವಿವರಿಸಿದರು. ಇದು ಭಾರತೀಯ ಕ್ವಾಂಟಮ್ ಸಂಶೋಧನೆಯಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ, ಹಣಕಾಸು, ರಾಷ್ಟ್ರದ ಭದ್ರತೆ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಅಪಾರವಾಗಿ ಬಳಸಬಹುದಾದ ತಂತ್ರಜ್ಞಾನವಾಗಿದೆ ಎಂದು ತಿಳಿಸಿದರು. ಭೇಟಿಯ ನಂತರ ಸಚಿವ ಎನ್‌ ಎಸ್‌ ಭೋಸರಾಜು ಮಾತನಾಡಿ, “ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರವು ಕಷ್ಟದಲ್ಲಿರುವಂತ ಕಲಾವಿದರಿಗೆ ಮನಮಿಡಿದಿದೆ. ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374 ರಲ್ಲಿನ ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ. 2025-26ನೇ…

Read More

ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲು ಸೇವೆಗಳ ತಾತ್ಕಾಲಿಕ ನಿಲುಗಡೆಯನ್ನು ಜುಲೈ 1ರಿಂದ ಡಿಸೆಂಬರ್ 31, 2025 ರವರೆಗೆ ಆರು ತಿಂಗಳ ಅವಧಿಗೆ ವಿಸ್ತರಿಸಿದೆ. ಬೀರೂರು ನಿಲ್ದಾಣದಲ್ಲಿ: ರೈಲು ಸಂಖ್ಯೆ 16587/16588 ಯಶವಂತಪುರ–ಬಿಕಾನೇರ್–ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ನಿಲುಗಡೆಯು ವಿಸ್ತರಿಸಿದ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ಮುಂದುವರಿಯುತ್ತದೆ. ರಾಮಗಿರಿ ನಿಲ್ದಾಣದಲ್ಲಿ: ಕೆಳಗಿನ ರೈಲುಗಳು ಪ್ರಾಯೋಗಿಕ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ರಾಮಗಿರಿ ನಿಲ್ದಾಣದಲ್ಲಿ ನಿಲುಗಡೆಯನ್ನು ಮುಂದುವರಿಸುತ್ತವೆ: 1. ರೈಲು ಸಂಖ್ಯೆ 17325/17326 ಬೆಳಗಾವಿ – ಮೈಸೂರು – ಬೆಳಗಾವಿ ವಿಶ್ವಮಾನವ ದೈನಂದಿನ ಎಕ್ಸ್‌ಪ್ರೆಸ್. 2. ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು–ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್. https://kannadanewsnow.com/kannada/if-the-elections-are-held-now-karnataka-congress-faces-a-humiliating-defeat-bjps-position-doubles-survey/ https://kannadanewsnow.com/kannada/entrepreneur-sunita-timmengowda-had-a-special-darshan-and-arati-at-tirupati/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಕೇವಲ ಎರಡು ವರ್ಷಗಳಲ್ಲಿ, ರಾಜ್ಯದಲ್ಲಿ ರಾಜಕೀಯ ಗಾಳಿ ನಾಟಕೀಯವಾಗಿ ಬದಲಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡಿದ್ದ ರಾಜ್ಯವು ಈಗ ಅದನ್ನು ಅಗಾಧವಾಗಿ ತಿರಸ್ಕರಿಸುತ್ತಿದೆ. ಜನಸಂಖ್ಯಾಶಾಸ್ತ್ರ, ಸಮುದಾಯಗಳು ಮತ್ತು ಪ್ರದೇಶಗಳಲ್ಲಿ ಬೆಳೆಯುತ್ತಿರುವ ಈ ಅಸಮಾಧಾನವನ್ನು ಪೀಪಲ್ಸ್ ಪಲ್ಸ್ – ಕೊಡೆಮೊ ಸಮೀಕ್ಷೆಯು ಬಹಿರಂಗಪಡಿಸುತ್ತದೆ. ಇದು ಕಾಂಗ್ರೆಸ್ ಸರ್ಕಾರದ ಆಳವಾದ ವೈಫಲ್ಯಗಳು ಮತ್ತು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಹೆಚ್ಚುತ್ತಿರುವ ಬೆಂಬಲದ ಅಲೆಯನ್ನು ಬಹಿರಂಗಪಡಿಸುತ್ತದೆ. ಈ ಮೂಲಕ ಈಗ ಚುನಾವಣೆ ನಡೆದ್ರೆ ಕಾಂಗ್ರೆಸ್ ಸೋಲು ಖಚಿತ, ಬಿಜೆಪಿ ಹೆಚ್ಚು ಸ್ಥಾನ ಪಡೆದು ಗೆಲುವು ನಿಶ್ಚಿತ ಎಂಬುದಾಗಿ ಎತ್ತಿ ತೋರಿಸಿದೆ. 2023 ರ ಚುನಾವಣಾ ಫಲಿತಾಂಶಗಳಿಗಿಂತ ನಾಟಕೀಯವಾಗಿ ಹಿಮ್ಮುಖವಾಗಿ, ಇಂದು ಚುನಾವಣೆ ನಡೆದರೆ ಬಿಜೆಪಿಯ ಸ್ಥಾನಗಳ ಸಂಖ್ಯೆ ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಎಂದು ಸಮೀಕ್ಷೆಯು ಬಹಿರಂಗಪಡಿಸಿದೆ. ಈ ಸ್ಪೋಟಕ ಬದಲಾವಣೆಯು ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳಲ್ಲಿ ಈಡೇರಿಸದ ಭರವಸೆಗಳು, ಗಗನಕ್ಕೇರುತ್ತಿರುವ ಬೆಲೆಗಳು ಮತ್ತು…

Read More

ಬೆಂಗಳೂರು: ವಿಶ್ವ ವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ತಮ್ಮ ಅನುಪಮ ಧಾರ್ಮಿಕ ಸೇವೆಗಳ ಮೂಲಕ ಚಿರಪರಿಚಿತರಾಗಿರುವ ಕರ್ನಾಟಕದ ಉದ್ಯಮಿ ಸುನಿತಾ ತಿಮ್ಮೇಗೌಡ ಅವರು ಬುಧವಾರ (ಜೂನ್ 25ರಂದು) ಕುಟುಂಬ ಸಮೇತರಾಗಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ದರ್ಶನ ಪಡೆದರು. ವೈಕುಂಠ ಏಕಾದಶಿ ಸಮಯದಲ್ಲಿ ತಿರುಪತಿ ದೇವಾಲಯಕ್ಕೆ ಅತ್ಯಾಕರ್ಷಕ ಹೂವಿನ ಅಲಂಕಾರ ಸೇವೆಯನ್ನು ನಡೆಸಿಕೊಡುವ ಮೂಲಕ ತಿಮ್ಮೇಗೌಡರ ಕುಟುಂಬವು ಪ್ರಸಿದ್ಧವಾಗಿದೆ. ವಿದೇಶಿ ಹೂವುಗಳನ್ನು ಬಳಸಿ ದೇವಾಲಯದ ಅಂದವನ್ನು ಹೆಚ್ಚಿಸುವ ಮೂಲಕ ಅವರು ತಿರುಪತಿ ದೇವಸ್ಥಾನದ ಭಕ್ತರಿಂದ ಮೆಚ್ಚುಗೆ ಗಳಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ, ಬುಧವಾರದ ಭೇಟಿಯ ವೇಳೆ ಅವರಿಗೆ ವಿಶೇಷ ಆರತಿಯನ್ನು ಮಾಡುವ ಗೌರವ ಅವಕಾಶ ಲಭಿಸಿತು. ಸುನಿತಾ ತಿಮ್ಮೇಗೌಡ ಅವರೊಂದಿಗೆ ಅವರ ತಂದೆ, ಸುಧಾ ಕೋಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿರುವ ಎಂ. ತಿಮ್ಮೇಗೌಡ, ಸ್ವಾಗತ್ ಗೌಡ ಮತ್ತು ಪೋತರಾಜು ಅವರಿದ್ದರು. ಈ ಭೇಟಿಯ ಸಂದರ್ಭದಲ್ಲಿ, ಸುನಿತಾ ತಿಮ್ಮೇಗೌಡ ಅವರು ಮುಂದಿನ ವರ್ಷದ ವೈಕುಂಠ ಏಕಾದಶಿ ವೇಳೆಗೆ ದೇವರಿಗೆ ನವರತ್ನಗಳ ವಿಶೇಷ ಅಲಂಕಾರವನ್ನು ಮಾಡುವ ಮಹತ್ವಾಕಾಂಕ್ಷೆಯ…

Read More

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವ ಕುರಿತಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ನಡೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಮ್ಮ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಡಾ. ಶಾಲಿನಿ ರಜನೀಶ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ, ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆಯನ್ನು ನೀಡದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ನೀಡಿರುವ ತಮ್ಮ ಎಚ್ಚರಿಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಮುಖ್ಯಮಂತ್ರಿಗಳು ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿಯನ್ನು ಪಡೆಯಲು ನೀಡಿರುವ ನಿರ್ದೇಶನವನ್ನು ಉಲ್ಲೇಖಿಸಿರುವುದು ಕೂಡ ಸರ್ಕಾರದ ಕನ್ನಡಪರ ನಿಲುವನ್ನು ಪ್ರಭಾವಶಾಲಿಯಾಗಿ ಅಭಿವ್ಯಕ್ತಿಸಿದೆ. ಅಧಿಕಾರಿ ವರ್ಗ ಕನಿಷ್ಠ ಈಗಲಾದರೂ ಎಚ್ಚೆತ್ತುಕೊಂಡು ಇನ್ನಷ್ಟು ಮುತುವರ್ಜಿಯಿಂದ ಕನ್ನಡದ ಬಳಕೆಗೆ ಮುಂದಾಗಬೇಕೆಂದು ಆಶಿಸಿದ್ದಾರೆ.…

Read More

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಆದೇಶದಲ್ಲಿ ನಿರ್ದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದು, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಛೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದಿದ್ದಾರೆ. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಲು ತಿಳಿಸಲಾಗಿದೆ. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟವಾಗಿ ಸೂಚನೆಗಳನ್ನು ನೀಡಲಾಗಿದೆ. ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ…

Read More