Author: kannadanewsnow09

ಬೆಂಗಳೂರು: ತಂದೆ-ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶದ ಮಿತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು ಮಾಡಿದೆ. 2007ರ ಪೋಷಕರ ಕಲ್ಯಾಣ ಕಾಯ್ದೆಯ ಸೆಕ್ಷನ್ 9ರ ಪರಿಶೀಲನೆ ಅಗತ್ಯವಿದೆ. ಮಕ್ಕಳು ನೀಡಬೇಕಾದ ಗರಿಷ್ಠ ಜೀವನಾಂಶದ ಮಿತಿ 10,000 ಇದೆ. 2007ರ ಜೀವನಾಂಶ ನಿರ್ವಹಣಾ ವೆಚ್ಚಕ್ಕೂ 2025ಕ್ಕೂ ವ್ಯತ್ಯಾಸವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. ಈ ಹಿನ್ನಲೆಯಲ್ಲಿ ಹಣದುಬ್ಬರವನ್ನು ಪರಿಗಣಿಸಿ ಜೀವನಾಂಶದ ಗರಿಷ್ಠ ಮಿತಿ ಹೆಚ್ಚಿಸಬೇಕು ಎಂಬುದಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಅಭಿಪ್ರಾಯ ಪಟ್ಟಿದೆ. ಜೀವನಾಂಶ ವಿಧಿಸಲು 2007ರ ಪೋಷಕರ ಕಲ್ಯಾಣ ಕಾಯ್ದೆಯಲ್ಲಿ ಅವಕಾಶವಿದೆ. ತಂದೆ-ತಾಯಿ ಯೋಗಕ್ಷೇಮ ನಿರ್ಲಕ್ಷಿಸುವ ಮಕ್ಕಳಿಗೆ ವಿಧಿಸುವ ಜೀವನಾಂಶ ಇದಾಗಿದೆ ಎಂದಿದೆ. https://kannadanewsnow.com/kannada/opposition-to-the-selection-of-writer-banu-mustaq-for-the-dussehra-inauguration-three-pils-filed-in-the-high-court/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/

Read More

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ದಾಖಲಾಗಿದ್ದಾವೆ. ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಪ್ರತ್ಯೇಕ ಪಿಐಎಲ್ ಗಳು ದಾಖಲಾಗಿದ್ದಾವೆ. ಬೆಂಗಳೂರಿನ ಟಿ.ಗಿರೀಶ್ ಕುಮಾರ್, ಹೆಚ್.ಎಸ್ ಗೌರವ್, ಆರ್ ಸೌಮ್ಯ ಅವರಿಂದ ಪ್ರತ್ಯೇಕ ಪಿಐಎಲ್ ದಾಖಲಾಗಿದ್ದಾವೆ. ಪಿಐಎಲ್ ನಲ್ಲಿ ದಸರಾ ಉದ್ಘಾಟನೆ ಹಿಂದೂ ಸಂಪ್ರದಾಯದಂತೆ ನಡೀಬೇಕು. ಸರ್ಕಾರ ನೀಡಿರುವ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ಕೋರಲಾಗಿದೆ.  ಈಗಾಗಲೇ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಪಿಐಎಲ್ ದಾಖಲಿಸಿದ್ದಾರೆ. https://kannadanewsnow.com/kannada/commercial-tax-officer-caught-by-lokayukta-while-accepting-bribe-of-rs-25000-in-bengaluru/ https://kannadanewsnow.com/kannada/a-huge-scandal-in-the-state-the-dead-and-the-names-of-those-suffering-from-illness-have-received-nrega-funds/

Read More

ಬೆಂಗಳೂರು: ವಾಣಿಜ್ಯ ತೆರಿಗೆಗೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಮೇಲ್ಮನವಿ ಆದೇಶ ನೀಡಲು 25,000 ಲಂಚ ಸ್ವೀಕರಿಸುತ್ತಿದ್ದಾಗಲೇ ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರದ ವಕೀಲ ಡಿ.ಹೆಚ್ ಗುರುಪ್ರಸಾದ್ ಎಂಬುವರು ವಾಣಿಜ್ಯ ತೆರಿಗೆ ಇಲಾಖೆಗೆ ಸಂಬಂಧಿಸಿದಂತ ಮೇಲ್ಮನವಿ ಆದೇಶ ತಮ್ಮ ಪರವಾಗಿ ನೀಡಲು ಕೋರಿದ್ದರು. ಇದಕ್ಕೆ ಬೆಂಗಳೂರಿನ ಶಾಂತಿನಗರದ ಎಜಿಒ ಜೆಸಿಸಿಟಿ ಅಪೀಲ್-6 ರಾಮಾನುಜ ಎಂಬುವರಿಗೆ ತಿಳಿಸಿದ್ದರು. ದೂರುದಾರರು ಪರವಾಗಿ ಮೇಲ್ಮನವಿ ಆದೇಶ ನೀಡಲು ಎಜಿಒ ರಾಮಾನುಜ ಅವರು 75,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರುದಾರ ಗುರುಪ್ರಸಾದ್ ದೂರಿದ್ದರು. ಈ ದೂರು ಆಧರಿಸಿ ಬೆಂಗಳೂರಿನ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಮೇಲ್ವಿಚಾರಣೆಯಲ್ಲಿ ಪಿಐ ಮಂಜುನಾಥ್, ಆದಿವೇಶ್ ಗುಡಿಗೊಪ್ಪ, ಕೇಶವಮೂರ್ತಿ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. 75,000 ರೂಪಾಯಿಯಲ್ಲಿ ಮುಂಗಡವಾಗಿ 25,000 ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಈ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆಯ ಎಜಿಒ ರಾಮಾನುಜ…

Read More

ಬೆಂಗಳೂರು: ಕೋಗಿಲು ಲೇಔಟ್ ನ ಸರ್ವೇ ನಂ-18,22,99 ಮತ್ತು 100ರ ಸರ್ಕಾರಿ ಜಾಗ ಹಾಗೂ ಸ್ಮಶಾನದ ಒತ್ತುವರಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಇಂದು ಯಲಹಂಕದ ತಹಸೀಲ್ದಾರ್ ಕಚೇರಿ ಬಳಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬ್ಯಾಟರಾಯನಪುರ ನಗರ ಮಂಡಲ ಅಧ್ಯಕ್ಷರಾದ ಕೃಷ್ಣಮೂರ್ತಿ, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಅಧ್ಯಕ್ಷ ಹನುಮಂತೇಗೌಡ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಕಂದಾಯ ಸಚಿವರ ಸ್ವಕ್ಷೇತ್ರದಲ್ಲೇ ಸರ್ಕಾರಿ ಭೂಮಿ ಒತ್ತುವರಿ ನಡೆದಿದೆ ಎಂದು ಪ್ರಮುಖರು ಆಕ್ಷೇಪಿಸಿದರು. ಸರ್ಕಾರಿ ಸ್ಮಶಾನ ಸೇರಿದಂತೆ ಜಮೀನು ಒತ್ತುವರಿ ನಡೆದಿದೆ ಎಂದು ದೂರಿದರು. ಒತ್ತುವರಿ ವಿರುದ್ಧ ದೂರು ನೀಡಿದರೂ ಅಧಿಕಾರಿಗಳು ತೆರವು ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಪ್ರತಿಭಟನೆ ಎಂದು ವಿವರಿಸಿದರು. ತಾಲೂಕು ಕಛೇರಿಗೆ ಮುತ್ತಿಗೆ ಹಾಕಿ ಸಚಿವರ ವಿರುದ್ದ ಆಕ್ರೋಶ ಹೊರ ಹಾಕಲು ಬಿಜೆಪಿ ಕಾರ್ಯಕರ್ತರು ಬಂದಿದ್ದರು. ಒತ್ತುವರಿ ತೆರವುಗೊಳಿಸದಿದ್ದಲ್ಲಿ ಸಚಿವರ ಮನೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಲಾಯಿತು. ಪ್ರತಿಭಟನೆ…

Read More

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳಿಗೆ (ವಿಶೇಷಚೇತನರು, ಗಂಭೀರ ಅನಾರೋಗ್ಯ ಹಾಗೂ ಪತಿ-ಪತ್ನಿ ಪ್ರಕರಣಗಳು) ಸಂಬಂಧಿಸಿದಂತೆ ಕಳೆದ ಒಂದು ವಾರದಿಂದ ನಡೆಸಿದ ಕೌನ್ಸೆಲಿಂಗ್ ವರ್ಗಾವಣೆ ಸಂಪನ್ನಗೊಂಡಿದ್ದು, 561 ಮಂದಿಗೆ ಸ್ಥಳದಲ್ಲೇ ವರ್ಗಾವಣೆ ಆದೇಶ ನೀಡಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಎ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾನದಂಡಗಳಂತೆ ಅಂಗವಿಕಲ ಸೌಲಭ್ಯಕ್ಕೆ ಅರ್ಹರಾದ 61 ಮಂದಿ ಕೌನ್ಸೆಲಿಂಗ್ ವರ್ಗಾವಣೆ ಲಾಭ ಪಡೆದಿದ್ದು, ಗಂಭೀರ ಕಾಯಿಲೆ ಎದುರಿಸುತ್ತಿರುವ 29 ಮಂದಿ ವರ್ಗಾವಣೆಗೊಂಡಿದ್ದಾರೆ, ಹಾಗೆಯೆ 56 ಒಂಟಿ ಮಹಿಳೆಯರು ಸ್ಥಾನ ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಪತಿ-ಪತ್ನಿ ಪ್ರಕರಣಗಳಲ್ಲಿ 213 ಮಂದಿಗೆ ವರ್ಗಾವಣೆ ಸೌಲಭ್ಯ ನೀಡಲಾಗಿದೆ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ಮೂರು ಮಂದಿ ವರ್ಗಾವಣೆಗೆ ಅರ್ಹರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಸೇವೆ ಸಲ್ಲಿಸುತ್ತಿದ್ದ…

Read More

ಕನಕಪುರ: “ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”‌ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ ವಿಚಾರದಲ್ಲಿ ವಿಪಕ್ಷ ನಾಯಕ ಅಶೋಕ್ ಅವರ ಟೀಕೆಗಳ ಬಗ್ಗೆ ಕೇಳಿದಾಗ, “ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಉದ್ಯೋಗವಿಲ್ಲ. ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವೂ ಶೀಘ್ರ ಆಚೆ ಬರಲಿದೆ” ಎಂದು ಹೇಳಿದರು. https://kannadanewsnow.com/kannada/implementation-meeting-of-krishna-upper-canal-project-under-the-leadership-of-cm-siddaramaiah-here-are-the-highlights/ https://kannadanewsnow.com/kannada/women-should-be-careful-now-if-they-sleep-wearing-a-bra-at-night/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ. • ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ. • ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕ್ರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕ್ರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566ಎಕ್ರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕ್ರೆ ಜಮೀನು…

Read More

ಪಂಚಾಂಗ ರೀತ್ಯಾ ಪಿತೃಪಕ್ಷ ಎಂದೇ ಪರಿಗಣಿತವಾಗಿರುವ ಎರಡು ವಾರಗಳ ಅವಧಿ ಭಾದ್ರಪದ ಮಾಸದ ಎರಡನೆಯ ಭಾಗದಲ್ಲಿ ಬಂದು ಮಹಾಲಯ ಅಮಾವಾಸ್ಯೆಗೆ ಪೂರ್ಣಗೊಳ್ಳುತ್ತದೆ. ಈ ಸಮಯದಲ್ಲಿ ಮಕ್ಕಳು ಗತಿಸಿಹೋದ ತಮ್ಮ ಪೂರ್ಜರಿಗೆ ನಡೆಸುವ ಪಿತೃತರ್ಪಣಕ್ಕೆ ನಮ್ಮಲ್ಲಿ ಬಹಳ ಹೆಚ್ಚಿನ ಮಹತ್ವ ಇದೆ.‌ ಈ ತರ್ಪಣವೇ ಶ್ರದ್ಧಾಪೂರ್ವಕವಾಗಿ ತಿಲೋದಕದ ಮೂಲಕ ನಡೆಸುವ ಶ್ರಾದ್ಧವಿಧಿ.‌ ದಕ್ಷಿಣಾಯಣದ ಕನ್ಯಾಮಾಸದಲ್ಲಿ ಸೂರ್ಯನು ಭೂಮಿಗೆ ಅತಿ ಸಮೀಪದಲ್ಲಿರುವುದರಿಂದ ಪಿತೃಪಕ್ಷದಲ್ಲಿ ತರ್ಪಣ ಶ್ರಾದ್ಧಕ್ಕೆ ಹೆಚ್ಚಿನ ಮಹತ್ವವಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ,…

Read More

ಚಂಡೀಗಢ : ಪಂಜಾಬ್‌ನಲ್ಲಿ ಸಂಭವಿಸಿದ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲು ರಿಲಯನ್ಸ್ ಕಂಪನಿಯು ಕಳೆದ ಹಲವಾರು ದಿನಗಳಿಂದ ರಾಜ್ಯದ ಆಡಳಿತ, ಪಂಚಾಯತ್‌ಗಳು ಮತ್ತು ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ಅಮೃತಸರ ಮತ್ತು ಸುಲ್ತಾನ್ ಪುರ್ ಲೋಧಿಯಂತಹ ಹೆಚ್ಚು ಹಾನಿಗೊಳಗಾದ ಗ್ರಾಮಗಳಲ್ಲಿ ತಕ್ಷಣದ ಪರಿಹಾರವನ್ನು ಒದಗಿಸಲಾಗುತ್ತಿದೆ. ಕಂಪನಿಯು ಅಗತ್ಯ ದಿನಸಿ, ಆಶ್ರಯ, ಸಾರ್ವಜನಿಕ ಆರೋಗ್ಯ ಮತ್ತು ಜಾನುವಾರುಗಳ ಮಟ್ಟದಲ್ಲಿ 10-ಪಾಯಿಂಟ್ ಬೆಂಬಲ ಕಾರ್ಯಕ್ರಮವನ್ನು ನಡೆಸುತ್ತಿದೆ. ಪ್ರವಾಹ ಸಂತ್ರಸ್ತ 10,000 ಕ್ಕೂ ಹೆಚ್ಚು ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ನೀಡಲಾಗುತ್ತಿದೆ. ಮಹಿಳೆಯರು ಅಥವಾ ವೃದ್ಧರನ್ನು ಒಳಗೊಂಡಿರುವ 1,000 ಕುಟುಂಬಗಳಿಗೆ 5,000 ರೂ.ಗಳ ವೋಚರ್‌ಗಳನ್ನು ನೀಡಲಾಗುತ್ತಿದೆ. ಸಮುದಾಯ ಅಡಿಗೆಮನೆಗಳಿಗೆ ಪಡಿತರ ಮತ್ತು ಸುರಕ್ಷಿತ ಕುಡಿಯುವ ನೀರಿಗಾಗಿ ಪೋರ್ಟಬಲ್ ವಾಟರ್ ಫಿಲ್ಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಸ್ಥಳಾಂತರಗೊಂಡ ಕುಟುಂಬಗಳಿಗೆ ಅಗತ್ಯ ಪರಿಹಾರ ಸಾಮಗ್ರಿಗಳಾದ ಟಾರ್ಪಾಲಿನ್‌ಗಳು, ಸೊಳ್ಳೆ ಪರದೆಗಳು, ಹಗ್ಗಗಳು ಮತ್ತು ಹಾಸಿಗೆಗಳನ್ನು ವಿತರಿಸಲಾಗುತ್ತಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ದೇಶಕ ಅನಂತ್ ಅಂಬಾನಿ…

Read More

ಬೆಂಗಳೂರು : ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜೀವ ವೈವಿಧ್ಯ ಮಂಡಳಿಯ ಸಭೆಯಲ್ಲಿ ಇತಿಹಾಸ ಪ್ರಸಿದ್ಧ ಮತ್ತು ಸಸ್ಯ ಶ್ರೀಮಂತಿಕೆಯಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ ಸರ್ವೆ ನಂ. 1028 ಮತ್ತು 1047 ರಲ್ಲಿರುವ 8.61 ಎಕರೆ ಪ್ರದೇಶವನ್ನು ಜೈವಿಕ ವೈವಿಧ್ಯ ಕಾಯ್ದೆ, 2002ರ ಸೆಕ್ಷನ್ 37ರ ಅಡಿಯಲ್ಲಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸುವ ನಿರ್ಣಯ ಕೈಗೊಂಡಿದ್ದಾಗಿ ತಿಳಿಸಿದರು. ರಾಜಧಾನಿಯ ಹೃದಯ ಭಾಗದಲ್ಲಿರುವ 34,843 ಚದರಡಿಯ ಪ್ರದೇಶ ಸಸ್ಯ ಸಂಕುಲ, ಪಕ್ಷಿ ಸಂಕುಲ ಮತ್ತು ಕೀಟ ಸಂಕುಲದ ತಾಣವಷ್ಟೇ ಅಲ್ಲದೆ ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣವಾಗಿದೆ ಎಂದೂ ಅವರು ಹೇಳಿದರು. 50-60 ವರ್ಷಗಳಿಂದ ಬೆಳೆದ ಬೃಹತ್ ಮರಗಳಿರುವ ಈ ಸುಂದರ ಪ್ರದೇಶವನ್ನು…

Read More