Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು : ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದ್ದು, ಪ್ರತ್ಯೇಕ ಕೇಡರ್ ಸೃಷ್ಟಿಸಿ, ಶೀಘ್ರವೇ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಳಗಾವಿ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಒಂಬತ್ತೂ ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ವನ್ಯಜೀವಿ ವೈದ್ಯರ ನೇಮಕ ಆಗುವವರೆಗೂ ಇರುವ ಪಶುವೈದ್ಯರಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಗಳಲೆ (Hemorrhagic Septicemia)ರೋಗ- ಬ್ಯಾಕ್ಟೀರಿಯಾ ಸೋಂಕು ಕಾರಣವಾಗಿದೆ ಎಂದು ವೈದ್ಯರು ದೃಢಪಡಿಸಿದ್ದು, ಈ ಸೋಂಕು ಗಾಳಿಯಿಂದ, ನೀರಿನಿಂದ, ಆಹಾರದಿಂದ ಅಥವಾ ಪ್ರಾಣಿ ಪಾಲಕರಿಂದ ಪಸರಿಸಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸುವಂತೆ ಮತ್ತು ಬೇರೆ ಪ್ರಾಣಿಗಳಿಗೆ ಪಸರಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಮಾಣಿತ ಮಾನದಂಡ…
ಬೆಂಗಳೂರು: ಶಿವನಸಮುದ್ರದ ಕಾಲುವೆಗೆ ಇಳಿದಿದ್ದ ಗಂಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನೀರು ಕುಡಿಯಲು ಕಾಲುವೆಗೆ ಇಳಿದ ಆನೆ ಕಳೆದ ಮೂರು ದಿನಗಳಿಂದ ಮೇಲೆ ಬರಲಾರದೆ, ಆಹಾರವೂ ಸಿಗದೆ ನಿತ್ರಾಣವಾಗಿತ್ತು. ಅರಣ್ಯ ಸಿಬ್ಬಂದಿ ಕಠಿಣ ಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ಆನೆಯನ್ನು ಸುರಕ್ಷಿತವಾಗಿ ಮೇಲೆತ್ತಿರುವುದಾಗಿ ತಿಳಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆನೆಯೊಂದು ಶಿವನಸಮುದ್ರದ ಕಾಲುವೆಯಲ್ಲಿ ಸಿಲುಕಿದೆ ಎಂಬ ಮಾಹಿತಿ ತಮಗೆ ದೊರೆತ ಕೂಡಲೇ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಕರೆ ಮಾಡಿ ತತ್ ಕ್ಷಣ ಕ್ರಮ ಕೈಗೊಂಡು ಆನೆ ರಕ್ಷಿಸಲು ಸೂಚಿಸಿದ್ದಾಗಿಯೂ ಸಚಿವರು ಹೇಳಿದರು. 12 ವರ್ಷದ ಆನೆಯನ್ನು 50 ಅಡಿ ಆಳದಿಂದ ಮೇಲೆತ್ತಲಾಗಿದೆ. ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಚರಣೆಗೆ ಅಡ್ಡಿಯಾಗಿತ್ತು. ರಕ್ಷಿಸಲಾದ ಆನೆ ಯಶಸ್ವಿಯಾಗಿ ಹತ್ತಿರದ ಅರಣ್ಯದತ್ತ ಹೆಜ್ಜೆ ಹಾಕಿದೆ ಎಂದೂ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ “ನ್ಯೂಸ್ ರೂಂ ನಲ್ಲಿ AI ಹಾಗೂ ಫ್ಯಾಕ್ಟ್ ಚೆಕ್” ಕುರಿತಂತೆ ನವೆಂಬರ್ 29 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ಪರಿಶಿಷ್ಟ ಜಾತಿಯ 35 ಮಂದಿ ಹಾಗೂ ಪರಿಶಿಷ್ಟ ಪಂಗಡದ 15 ಮಂದಿ ಒಟ್ಟು 50 ಪತ್ರಿಕಾ ಸಂಪಾದಕರಿಗೆ ತರಬೇತಿ ನೀಡಲಾಗುವುದು. ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಹಿನ್ನೆಲೆಯಲ್ಲಿ ಪತ್ರಕರ್ತರು ಈ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಬೇತಿ ಸಹಕಾರಿಯಾಗಲಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಿಕೆಗಳ ಸಂಪಾದಕರು ಈ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಕುರಿತಂತೆ ಇಲಾಖಾ ಮಾಧ್ಯಮ ಪಟ್ಟಿಯಲ್ಲಿರುವ ಕುರಿತ ದಾಖಲೆ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್/…
BREAKING: ಪೋಕ್ಸೋ ಕೇಸಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಡಿ.2ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪೋಕ್ಸೋ ಕೇಸಲ್ಲಿ ಈಗ ಸಂಕಷ್ಟ ಎದುರಾಗಿದೆ. ಡಿಸೆಂಬರ್.2ರಂದು ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಪೋಕ್ಸೋ ಕೇಸಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ ತಡೆಯಾಜ್ಞೆ ತೆರವಾದ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಎಸ್ ಪಿ ಪಿ ಅಶೋಕ್ ನಾಯ್ಕ್ ಅವರು ಅರ್ಜಿಯನ್ನು ಒಂದನೇ ತ್ವರಿತ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ವೈ.ಎಂ ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಸೆಂಬರ್.2ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. https://kannadanewsnow.com/kannada/mla-s-suresh-kumar-who-became-a-traffic-policeman-do-you-know-the-reason/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಬೆಂಗಳೂರು: ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಮಂಗಳವಾರ ತಮ್ಮ ಶಾಸಕರ ಕರ್ತವ್ಯಗಳನ್ನು ಬದಲಾಯಿಸಿಕೊಂಡು ಸಂಚಾರ ಪೊಲೀಸ್ ಜಾಕೆಟ್ ಧರಿಸಿ ಬೀದಿಗಿಳಿದರು. ಬೆಳಿಗ್ಗೆ 9 ರಿಂದ 11.30 ರವರೆಗೆ ಸುಮಾರು ಮೂರು ಗಂಟೆಗಳ ಕಾಲ, ಶಾಸಕರು ಭಾಷ್ಯಂ ವೃತ್ತದಲ್ಲಿ ವೈಯಕ್ತಿಕವಾಗಿ ಸಂಚಾರ ನಿರ್ವಹಿಸಿದರು, ಇಲಾಖೆ ಎದುರಿಸುತ್ತಿರುವ ಜಾರಿ ಸವಾಲುಗಳ ನೇರ ಅನುಭವವನ್ನು ಪಡೆದರು. ತಮ್ಮ ಅಧಿಕಾರಾವಧಿಯ ನಂತರ ಮಾತನಾಡಿದ ಕುಮಾರ್, ಈ ಅನುಭವವನ್ನು ಉತ್ತಮ ಮತ್ತು ಒಳನೋಟವುಳ್ಳದ್ದಾಗಿ ಬಣ್ಣಿಸಿದರು. ಬಿಟಿಪಿ ಉಪಕ್ರಮದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತಿಳಿದುಕೊಂಡ ನಂತರ ಕರ್ತವ್ಯಕ್ಕೆ ಸೇರಲು ಅವರು ಬಹಳ ದಿನಗಳಿಂದ ಆಶಿಸಿದ್ದಾರೆ ಎಂದು ಅವರು ಬಹಿರಂಗಪಡಿಸಿದರು. ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಕಾರ್ತಿಕ್ ರೆಡ್ಡಿ ಅವರೊಂದಿಗೆ ಮಾತನಾಡಿದ ನಂತರ, ಅವರು ಅಸ್ಟ್ರಾಮ್ ಅಪ್ಲಿಕೇಶನ್ ಮೂಲಕ ನೋಂದಾಯಿಸಿಕೊಂಡರು ಮತ್ತು ತಮ್ಮ ಆದ್ಯತೆಯ ಜಂಕ್ಷನ್ ಅನ್ನು ಆಯ್ಕೆ ಮಾಡಿಕೊಂಡರು. ಪ್ರಸ್ತುತ ವ್ಯಾಯಾಮವು ಸಂಚಾರ ಪೊಲೀಸರು ಎದುರಿಸುತ್ತಿರುವ ಸವಾಲುಗಳನ್ನು ಅರಿತುಕೊಳ್ಳಲು ಮತ್ತು ಅನುಭವಿಸಲು ಸಹಾಯ ಮಾಡಿದೆ ಎಂದು ಶಾಸಕರು ಗಮನಿಸಿದರು.…
ಬೆಂಗಳೂರು: ಶಬರಿಮಲೈ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯ ಸರ್ಕಾರವು ಈ ಕೆಳಕಂಡ ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಸಲಹಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳಲ್ಲಿ ಎಂದಿದ್ದಾರೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ಇದೊಂದು ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊ ಎನ್ಸಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮಾರಣಾಂತಿಕ ಖಾಯಿಲೆಯನ್ನು ಉಂಟು ಮಾಡುತ್ತದೆ ಎಂದಿದ್ದಾರೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ…
ನವದೆಹಲಿ: ಭಾರತ ಸೇರಿದಂತೆ ವಿಶ್ವದಾಧ್ಯಂತ ಪ್ರಸಿದ್ಧ ಸಾಮಾಜಿಕ ಮಾಧ್ಯಮವಾಗಿರುವಂತ ಎಕ್ಸ್ ಡೌನ್ ಆಗಿದೆ. ಹೀಗಾಗಿ ಬಳಕೆದಾರರು ಪರದಾಡುತ್ತಿರುವುದಾಗಿ ವರದಿಯಾಗಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಮಂಗಳವಾರ ಸಂಜೆ ಸ್ಥಗಿತಗೊಂಡಿತು ಏಕೆಂದರೆ ಅನೇಕ ಬಳಕೆದಾರರು ಅಪ್ಲಿಕೇಶನ್ ಮತ್ತು ವೆಬ್ಸೈಟ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ವಿಷಯವನ್ನು ತಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡಿದ್ದಾರೆ. ಡೌನ್ಡೆಟೆಕ್ಟರ್ ಪ್ರಕಾರ, ತನ್ನ ಪ್ಲಾಟ್ಫಾರ್ಮ್ನಲ್ಲಿ ಬಳಕೆದಾರರು ಸಲ್ಲಿಸಿದ ದೋಷಗಳು ಸೇರಿದಂತೆ ಹಲವಾರು ಮೂಲಗಳಿಂದ ಸ್ಥಿತಿ ವರದಿಗಳನ್ನು ಒಟ್ಟುಗೂಡಿಸುವ ಮೂಲಕ ಸ್ಥಗಿತಗಳನ್ನು ಟ್ರ್ಯಾಕ್ ಮಾಡುವ ಮೂಲಕ ಮೊಬೈಲ್ ಮತ್ತು ಕಂಪ್ಯೂಟರ್ನಲ್ಲಿ ಪ್ಲಾಟ್ಫಾರ್ಮ್ ಅನ್ನು ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಹಲವಾರು ಬಳಕೆದಾರರು ಹೇಳಿದ್ದಾರೆ. https://kannadanewsnow.com/kannada/honorarium-increased-for-anganwadi-workers-and-helpers-minister-lakshmi-hebbalkar/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಬಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬದಲಾವಣೆ ತರಬೇಕು, ಶಿಸ್ತು ತರಬೇಕು ಅಂತ ಕೆಲಸ ಮಾಡುತ್ತಿರುವೆ. ಎಲ್ಲರ ಸಹಕಾರದಿಂದ ಇಂದು ನಮ್ಮ ಇಲಾಖೆ ಮನೆ ಮನೆಗೆ ಹೆಸರಾಗಿದೆ. ಮೊದಲು ಕೆಡಿಪಿ…
ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು ನಾಶಮಾಡುವ…
ಮಂಡ್ಯ : ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯವಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ತೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಮದ್ದೂರು ನಗರದ ಟಿಎಪಿಸಿಎಂಎಸ್ ಆವರಣದಲ್ಲಿ ಆಯೋಜಿಸಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪಾತ್ರ ಅಪಾರವಾಗಿದ್ದು, ರೈತರ ಜೀವನಾಡಿಯಾಗುತ್ತಿವೆ. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನಗಳಿಂದ ಅಸಾಧ್ಯವಾಗಿದ್ದು, ಸಹಕಾರ ಸಂಘಗಳಿಂದ ಮಾತ್ರ ಸಾಧ್ಯವಾಗಲಿದೆ. ರೈತರಿಗೆ ಕಾಲ ಕಾಲಕ್ಕೆ ಸಾಲ ಸೌಲಭ್ಯ ನೀಡಿ ರೈತರ ಬೆನ್ನೆಲುಬಾಗಿ ನಿಂತಿರುವುದರಿಂದ ರೈತರ ಬದುಕು ಕೂಡ ಹಸನಾಗುತ್ತಿದೆ. ಸಹಕಾರ ಸಂಸ್ಥೆಗಳು ಇನ್ನಷ್ಟು ಅಭಿವೃದ್ಧಿಯಾಗಬೇಕು ಇದರಿಂದ ರೈತರ ಬದುಕು ಸುಧಾರಣೆಗೊಳ್ಳಲಿದ್ದು, ತಾಲೂಕಿನ ಸಹಕಾರ…














