Subscribe to Updates
Get the latest creative news from FooBar about art, design and business.
Author: kannadanewsnow09
ಮನೆಯಲ್ಲಿ ಮಾಡುವ ಸಣ್ಣ ತಪ್ಪುಗಳು ಕೂಡ ನಮ್ಮ ಸಂಪತ್ತನ್ನು ಕಡಿಮೆ ಮಾಡುತ್ತದೆ ಎಂಬ ನಂಬಿಕೆ ಇದೆ. ತನಗೆ ಇಷ್ಟವಿಲ್ಲದ ಕೆಲವು ಕೆಲಸಗಳನ್ನು ಮಾಡಿದರೆ ಮಹಾಲಕ್ಷ್ಮಿ ಮನೆಯಲ್ಲಿ ಉಳಿಯುವುದಿಲ್ಲ ಎಂಬ ನಂಬಿಕೆ ಇದೆ. ಆ ರೀತಿ ನಮ್ಮ ಸಂಪತ್ತು ಕಡಿಮೆಯಾಗಲು ಕಾರಣವೇನು? ನಾವು ಮಾಡುವ ತಪ್ಪುಗಳೇನು? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿಯಲಿದ್ದೇವೆ . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು. ಇಂದು ಮಂಡ್ಯದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪೊಲೀಸರು ದಿನವಿಡಿ ಬಿಸಿಲು,ಮಳೆ,ಗಾಳಿ, ಹಬ್ಬ ಹರಿದಿನ ಮರೆತು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎಂದು ಹೇಳಿದರು. ಪೊಲೀಸರು ಇಂತಹಾ ಒಂದು ತ್ಯಾಗಮಯ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಅವರ ಕುಟುಂಬವೂ ಸಹ ಬೆನ್ನೆಲುಬಾಗಿ ನಿಂತಿದೆ. ನಮ್ಮ ನೆಮ್ಮದಿಗಾಗಿ ಹುತಾತ್ಮರಾದ ಪೊಲೀಸರನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡಿದೆ ದಿನವೂ ಸ್ಮರಿಸಬೇಕು ಎಂದು ಅಭಿಪ್ರಾಯಪಟ್ಟರು. ಕಳೆದ ಹದಿನೆಂಟು ವರ್ಷಗಳಿಂದ ನಾನು ಕರ್ತವ್ಯದಲ್ಲಿ ಪೊಲೀಸರೊಂದಿಗೆ ಭಾಗಿಯಾಗಿದ್ದೇನೆ. ನಮ್ಮ ಕುಟುಂಬಕ್ಕಿಂತ ಹೆಚ್ಚು ಕಾಲ ಪೊಲೀಸರೊಂದಿಗೆ ಕೋರ್ಟ್ ನಲ್ಲಿ ಕಾಲ ಕಳೆದಿದ್ದೇನೆ. ಎಲ್ಲಾ ಇಲಾಖೆಗಳಿಗಿಂತ ಹೆಚ್ಚು…
ಚಿತ್ರದುರ್ಗ: ಜಿಲ್ಲೆಯಲ್ಲೊಂದು ಅಮಾನವೀಯ ರೀತಿಯಲ್ಲಿ ಶಿಕ್ಷಕನೊಬ್ಬ ನಡೆದುಕೊಂಡಿದ್ದಂತ ವೀಡಿಯೋ ವೈರಲ್ ಆಗಿತ್ತು. ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮುಖ್ಯ ಶಿಕ್ಷಕನೊಬ್ಬ ಹಲ್ಲೆಗೈದಿದ್ದನು. ಇಂತಹ ಮುಖ್ಯ ಶಿಕ್ಷಕನ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಬಂಧಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ನಗರದ ವೇದ ಪಾಠ ಶಾಲೆಯಲ್ಲಿ ಆಘಾತಕಾರಿ ಘಟನೆ, ಶಿಕ್ಷಕನಿಂದ ಮಕ್ಕಳ ಮೇಲೆ ಹಲ್ಲೆ ಎಂದು ಪೋಸ್ಟ್ ಹರಿದಾಡುತ್ತಿರುತ್ತದೆ ಎಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿದ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಈ ಬಗ್ಗೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯ ಕಲಂ ನಂಬರ್ 115(2), 126(2). 351(2) ಹಾಗೂ ಕಲಂ 75 ಜೆಜೆ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸಿ ಹಾಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿರುವುದಾಗಿ ತಿಳಿಸಿದೆ. https://twitter.com/spchitradurga/status/1980560282654330943 https://kannadanewsnow.com/kannada/mandya-district-ranks-first-in-the-states-census-survey-dc-congratulates/ https://kannadanewsnow.com/kannada/attention-people-of-bengaluru-sumanahalli-electric-crematorium-temporarily-suspended/
ಮಂಡ್ಯ: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ದೊರೆತಿದೆ. ಹೀಗಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಇದಕ್ಕೆ ಕಾರಣವಾದಂತ ಜಿಲ್ಲೆಯ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಜ್ಯದ ಎಲ್ಲಾ ವರ್ಗಗಳ/ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ದಿನಾಂಕ: 22.09.2025 ರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 5,10,000 ಕುಟುಂಬಗಳನ್ನು ಸಮೀಕ್ಷೆ ಮಾಡಲಾಗಿದ್ದು, ಒಟ್ಟು 18, 29 ,582 ಜನಸಂಖ್ಯೆಯ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಹಾಗೂ ಮಂಡ್ಯ ಜಿಲ್ಲೆಯು ರಾಜ್ಯದಲ್ಲೇ 1ನೇ ಸ್ಥಾನವನ್ನು ಪ್ರತಿನಿಧಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಈ ಸಮೀಕ್ಷಾ ಕಾರ್ಯದ ಯಶಸ್ಸಿಗೆ ಸಾಕಷ್ಟು ಜನರು ಹಗಲೂ ಇರುಳು ಎಂಬುದನ್ನೂ ಲೆಕ್ಕಿಸದೆ…
ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಂದುವರಿದು, ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಕ್ಟೋಬರ್ 22 ರಿಂದ 02ನೇ ನವೆಂಬರ್ 2025 ರವರೆಗೆ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ. https://kannadanewsnow.com/kannada/four-people-arrested-for-robbing-a-food-delivery-boy-in-bangalore/ https://kannadanewsnow.com/kannada/preparation-of-dpr-for-500-km-road-with-white-topping-at-a-cost-of-%e2%82%b94000-crore-in-bengaluru-dcm-d-k-shivakumar/
ಬೆಂಗಳೂರು: ನಗರಲ್ಲಿ ಪುಡ್ ಡೆಲಿವರಿ ಬಾಯ್ ಗಳನ್ನು ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದಂತ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಠಾಣೆಯ ಪೊಲೀಸರು ಪುಡ್ ಡಿಲಿವರ್ ಬಾಯ್ ಗಳನ್ನೇ ಟಾರ್ಗೆಟ್ ಮಾಡಿ, ಸುಲಿಗೆ ಮಾಡುತ್ತಿದ್ದಂತ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ನೇಪಾಳ ಮೂಲದ ಪಾರಸ್ ಸಿಂಗ್(25), ಬಿಪಿನ್ ಕರ್ಕಿ(20), ಮುಕೇಶ್ ಸಾಯಿ(19) ಹಾಗೂ ಸಮೀರ್ ಲೋಹಾಲ್ ಎಂಬುದಾಗಿ ಗುರುತಿಸಲಾಗಿದೆ. ಸೆಕ್ಯೂರಿಟಿ, ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಂತ ಆರೋಪಿಗಳು, ಪುಡ್ ಡೆಲಿವರಿ ಬಾಯ್ ಗಳನ್ನು ರಾಬರಿ ಮಾಡುತ್ತಿದ್ದರು. ಪುಡ್ ಡೆಲಿವರಿ ಬಾಯ್ಸ್ ಅಡ್ಡಗಟ್ಟಿ ಮೊಬೈಲ್, ಹಣ ಕದಿಯುತ್ತಿದ್ದರು. ಸೆಪ್ಟೆಂಬರ್.13ರ ರಾತ್ರಿ ಕಸವನಹಳ್ಳಿ ರಸ್ತೆಯಲ್ಲಿ ಪುಡ್ ಡೆಲಿವರಿ ಬಾಯ್ ಸುರೇಶ್ ಎಂಬಾತನಿಗೆ ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಸುರೇಶ್ ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪುಡ್ ಡೆಲಿವರಿ ಬಾಯ್ ಸುರೇಶ್ ನೀಡಿದಂತ ದೂರು ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂಗ 9 ಮೊಬೈಲ್,…
ಬೆಂಗಳೂರು : “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. “ವೈಟ್ ಟಾಪಿಂಗ್ ರಸ್ತೆಗಳು ಸುಮಾರು 25-30 ವರ್ಷಗಳ ಕಾಲ ಬಾಳಿಕೆ ಬರುತ್ತವೆ. ಈಗಾಗಲೇ 148 ಕಿ.ಮೀ ಉದ್ದದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 83 ರಸ್ತೆಗಳ ಅಭಿವೃದ್ದಿಗೆ 1,800 ಕೋಟಿ ಹಣ ವ್ಯಯಿಸಲಾಗುತ್ತಿದೆ. 350 ಕಿಲೋ ಮೀಟರ್ ಉದ್ದದ 182 ರಸ್ತೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಇದಕ್ಕೆ 695 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಮುಖ್ಯಮಂತ್ರಿಯವರು ಹೊಸದಾಗಿ 1100 ಕೋಟಿ ರೂಪಾಯಿ ಅನುದಾನ ನೀಡಿದ್ದು, ಇದರಿಂದ…
ಬೆಂಗಳೂರು: ಮೊಬೈಲ್ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್ (ಹೆಸರು ಬದಲಿಸಲಾಗಿದೆ) ಮೊಬೈಲ್ ಅಕಸ್ಮಾತ್ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್ರನ್ನು ತಕ್ಷಣ ಇನ್ಫ್ಯಾಂಟ್ರಿ ರಸ್ತೆಯ ಸ್ಪರ್ಶ್ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ಮುಖದ ತುಂಬಾ ಕಪ್ಪು ಮಸಿ ತುಂಬಿಕೊಂಡು ಮುಖದ ತುಂಬ ಗಾಯಗಳಾಗಿ ಬಲ ಗೈ ಊದಿಕೊಂಡಿದ್ದನ್ನು ಕಂಡ ಪ್ರಥಮ್ ತಂದೆ ಆಸ್ಪತ್ರೆಗೆ ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತವಾದ ಸ್ಪರ್ಶ್ ಆಸ್ಪತ್ರೆಯ ಬಹು ವಿಭಾಗೀಯ ತಜ್ಞ ವೈದ್ಯರ ತಂಡ ಯುವಕನು ಮೊಬೈಲ್ ಸ್ಫೋಟದಿಂದಾಗಿ ಡಯಾಬಿಟಿಕ್ ಕೀಟೋ ಅಸಿಡೋಸಿಸ್ ಎಂಬ ಮಾರಣಾಂತಿಕ ಸ್ಥಿತಿಗೆ ತಲುಪಿದ್ದನ್ನು ಪತ್ತೆ ಮಾಡಿದರು. ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ತುತು ಚಿಕಿತ್ಸಾ ತಜ್ಞರು, ಮೂಳೆ ತಜ್ಷರು ಹಾಗೂ ಪ್ಲಾಸ್ಟಿಕ್ ಸರ್ಜರಿ ವೈದ್ಯರ ತಂಡ ಚಿಕಿತ್ಸೆ ಆರಂಭಿಸಿತು.…
ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಮೀರ್ ಕುಮಾರ್ ಬಿಸ್ವಾಸ್ ಅವರು ಎರಡನೇ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮಂಗಳವಾರ ಭೇಟಿ ನೀಡಿ, ರಾಜ್ಯದಲ್ಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು. ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ವಿಜ್ಞಾನ, ನರ್ಸಿಂಗ್.. ಹೀಗೆ ಒಟ್ಟು 21 ವಿವಿಧ ಬಗೆಯ ಕೋರ್ಸ್ ಗಳಿಗೆ ಸೀಟು ಹಂಚಿಕೆಯನ್ನು ಕೆಇಎ ಏಕಕಾಲದಲ್ಲಿ ಮಾಡುತ್ತಿದ್ದು, ಅದರ ಪೂರ್ಣ ಮಾಹಿತಿಯನ್ನು ಗದ್ಯಾಳ ಅವರು ಬಿಸ್ವಾಸ್ ಅವರಿಗೆ ಎಳೆ ಎಳೆಯಾಗಿ ವಿವರಿಸಿದರು. ಬಿಸ್ವಾಸ್ ಅವರ ನೇತೃತ್ವದ ನಿಯೋಗ ಜೂನ್ 23ರಂದು ಕೂಡ ಕೆಇಎ ಗೆ ಭೇಟಿ ನೀಡಿ ಮಾಹಿತಿ ಪಡೆದಿತ್ತು. ಇವತ್ತಿನ ಭೇಟಿ ಎರಡನೇಯದಾಗಿದ್ದು ಅನೇಕ ಅನುಮಾನ/ಸಂದೇಹಗಳಿಗೆ ಪರಿಹಾರವನ್ನು ಬಿಸ್ವಾಸ್ ಅವರು ಪಡೆದರು. ಮಹಾರಾಷ್ಟ್ರದಲ್ಲಿ ಒಟ್ಟು…
ಬೆಂಗಳೂರು: ದಸರಾ ಮತ್ತು ದೀಪಾವಳಿ ಅವಧಿಯಲ್ಲಿ ರಾಜ್ಯದ ಹೆಮ್ಮೆಯ “ನಂದಿನಿ” ಬ್ರಾಂಡ್ನಿಂದ ದಾಖಲೆಯ ಸಿಹಿ ಮಾರಾಟವಾಗಿದೆ. ಬರೋಬ್ಬರಿ ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳು ಮಾರಾಟವಾಗಿವೆ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ರು ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ ಎಂದಿದ್ದಾರೆ. ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್ಟಿ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. “ನಂದಿನಿ” ಬ್ರಾಂಡ್ನಡಿಯಲ್ಲಿ ಹಾಲಿನೊಂದಿಗೆ ತುಪ್ಪ, ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು…














