Subscribe to Updates
Get the latest creative news from FooBar about art, design and business.
Author: kannadanewsnow09
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…
ಶಿವಮೊಗ್ಗ: ಎಟಿಎಂಗೆ ಹಣ ತೆಗೆಯಲು ಬಂದ ಮುಗ್ದ ಜನರಿಗೆ ಸಹಾಯ ಮಾಡುವ ನೆಪದಲ್ಲಿ ಅವರನ್ನು ವಂಚಿಸುತ್ತಿದ್ದಂತ ಇಬ್ಬರು ಆರೋಪಿಗಳನ್ನು ಸಾಗರ ಪೇಟೆ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಾಗರ ತಾಲ್ಲೂಕು ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರು, ಅಕ್ಟೋಬರ್ ನಲ್ಲಿ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಗಲ್ ಪಟ್ಟಣದ ಕೆನರಾ ಬ್ಯಾಂಕ್ ಎಟಿಎಂನಿಂದ ಹಣ ತೆಗೆಯುತ್ತಿದ್ದಂತ ವಯೋ ವೃದ್ಧರನ್ನು ವಂಚಿಸಿದ್ದ ಬಗ್ಗೆ ದೂರು ದಾಖಲಾಗಿತ್ತು. ವಯೋ ವೃದ್ಧರಿಂದ ಎಟಿಎಂ ಹಾಗೂ ಅದರ ಪಿನ್ ಪಡೆದು ತಾಳಗುಪ್ಪ ಎಸ್ ಬಿ ಐ ಬ್ಯಾಂಕ್ ಎಟಿಎಂನಿಂದ 1,49,999 ಹಣವನ್ನು ಡ್ರಾ ಮಾಡಿಕೊಂಡಿರೋ ಬಗ್ಗೆ ದೂರು ದಾಖಲಾಗಿತ್ತು ಎಂದಿದ್ದಾರೆ. ಇದೇ ರೀತಿಯಲ್ಲಿ ಶಿರಾಳಕೊಪ್ಪದಲ್ಲಿಯೂ ಒಬ್ಬ ಮಹಿಳೆಯನ್ನು ವಂಚಿಸಿ, ಅವರಿಂದ ಎಟಿಎಂ ಕಾರ್ಡ್, ಪಿನ್ ಪಡೆದು ಸುಮಾರು 95,000 ಹಣವನ್ನು ಡ್ರಾ ಮಾಡಿಕೊಂಡಿದ್ದ ಬಗ್ಗೆಯೂ ಶಿರಾಳಕೊಪ್ಪ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು ಎಂಬುದಾಗಿ ಮಾಹಿತಿ ನೀಡಿದರು. ಈ ಎರಡು ಪ್ರಕರಣಗಳನ್ನು…
ಪ್ರಯಾಗ್ರಾಜ್ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಮಂಗಳವಾರ ಮಹಾ ಕುಂಭ ಸ್ನಾನ ಮಾಡಿದರು. ಅಂಬಾನಿ ಕುಟುಂಬದ ನಾಲ್ಕು ತಲೆಮಾರುಗಳು ಸಹ ಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ತಲುಪಿತು. ಮುಕೇಶ್ ಅಂಬಾನಿಯವರ ಮೊಮ್ಮಕ್ಕಳಾದ ಪೃಥ್ವಿ ಮತ್ತು ವೇದಾ, ತಾಯಿ ಕೋಕಿಲಾ ಬೆನ್, ಮಗ-ಸೊಸೆ ಆಕಾಶ್ ಮತ್ತು ಶ್ಲೋಕಾ ಹಾಗೂ ಅನಂತ್ ಮತ್ತು ರಾಧಿಕಾ ಅವರೊಂದಿಗೆ ಪ್ರಯಾಗ್ರಾಜ್ ತಲುಪಿದರು. ಸಂಗಮದಲ್ಲಿ ಸ್ನಾನ ಮಾಡಿದ ನಂತರ, ಅಂಬಾನಿ ಕುಟುಂಬವು ನಿರಂಜನಿ ಅಖಾಡದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರ ಸಮ್ಮುಖದಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿತು. ಅಂದಹಾಗೆ ಇದೇ ಸಂದರ್ಭದಲ್ಲಿ ಮುಕೇಶ್ ಅಂಬಾನಿ ಅವರ ಅತ್ತೆ ಪೂರ್ಣಿಮಾ ಬೆನ್ ದಲಾಲ್, ನೀತಾ ಅಂಬಾನಿ ಅವರ ಸೋದರಿ ಮಮತಾ ಬೆನ್ ದಲಾಲ್ ಸಹ ಇದ್ದರು. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ನಂತರ ಅಂಬಾನಿ ಕುಟುಂಬವು ಮಹಾಕುಂಭದಲ್ಲಿ ನಿರ್ಮಿಸಲಾದ ಪರಮಾರ್ಥ ನಿಕೇತನ ಆಶ್ರಮವನ್ನು ತಲುಪಿತು. ಆ ಆಶ್ರಮದಲ್ಲಿ…
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ), ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ (ವಿಎಸ್ಎಸ್ಸಿ) ಸಹಯೋಗದೊಂದಿಗೆ ಡ್ರೋಗ್ ಪ್ಯಾರಾಚೂಟ್ಗಳಲ್ಲಿ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಿತು. ಇದು ಗಗನಯಾನ ಸಿಬ್ಬಂದಿ ಮಾಡ್ಯೂಲ್ ಅನ್ನು ಬಾಹ್ಯಾಕಾಶದಿಂದ ಇಳಿಯುವಾಗ ನಿಧಾನಗೊಳಿಸಲು ನಿರ್ಣಾಯಕವಾಗಿದೆ. ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ (ಟಿಬಿಆರ್ಎಲ್) ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ (ಆರ್ಟಿಆರ್ಎಸ್) ಸೌಲಭ್ಯದಲ್ಲಿ ಈ ಪರೀಕ್ಷೆಗಳು ನಡೆದವು. ಡ್ರೋಗ್ ಪ್ಯಾರಾಚೂಟ್ ಗಳನ್ನು ಸಿಬ್ಬಂದಿ ಮಾಡ್ಯೂಲ್ ಅನ್ನು ಸ್ಥಿರಗೊಳಿಸಲು ಮತ್ತು ಮರು-ಪ್ರವೇಶದ ಸಮಯದಲ್ಲಿ ಅದರ ವೇಗವನ್ನು ಸುರಕ್ಷಿತ ಮಟ್ಟಕ್ಕೆ ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಇತ್ತೀಚಿನ ಪರೀಕ್ಷೆಯು ಇಳಿಯುವಾಗ ಸಿಬ್ಬಂದಿ ಮಾಡ್ಯೂಲ್ ಅನುಭವಿಸಿದ ದಾಳಿಯ ಗರಿಷ್ಠ ಕೋನದಲ್ಲಿ ನಿಯೋಜನೆಯನ್ನು ಅನುಕರಿಸಲು ಎರಡು ಡ್ರೋಗ್ ಪ್ಯಾರಾಚೂಟ್ಗಳನ್ನು ಏಕಕಾಲದಲ್ಲಿ ಹಾರಿಸುವುದನ್ನು ಒಳಗೊಂಡಿತ್ತು. ಈ ಶಂಕುವಿನಾಕಾರದ ರಿಬ್ಬನ್-ಮಾದರಿಯ ಪ್ಯಾರಾಚೂಟ್ಗಳು 5.8 ಮೀಟರ್ ವ್ಯಾಸವನ್ನು ಹೊಂದಿವೆ ಮತ್ತು ಛಾವಣಿ ಪ್ರದೇಶ ಮತ್ತು ತೆರೆಯುವ ಆಘಾತವನ್ನು ಕಡಿಮೆ ಮಾಡಲು ಏಕ-ಹಂತದ ರೀಫಿಂಗ್ ಕಾರ್ಯವಿಧಾನವನ್ನು ಬಳಸುತ್ತವೆ, ಸುಗಮ ಮತ್ತು ನಿಯಂತ್ರಿತ ಇಳಿಯುವಿಕೆಯನ್ನು…
ಬೆಂಗಳೂರು: ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರಿಗಳನ್ನು ಹೊಂದಿದೆ. ಇದನ್ನೆಲ್ಲ ಸಾಧಿಸಲು ಬೆಂಗಳೂರಿನ ಆಚೆಗೆ ಹಾಗೂ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆ/ತಾಲ್ಲೂಕುಗಳಿಗೆ ಆದ್ಯತೆ ಕೊಡಲಾಗಿದೆ. ಇದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡಲಾಗುವುದು ಎಂದು ಹೊಸ ನೀತಿಯಲ್ಲಿ ತಿಳಿಸಲಾಗಿದೆ. ಹೊಸ ನೀತಿಯಲ್ಲಿ ಅಂಶಗಳನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿವರಿಸಿದ್ದಾರೆ. ಈ ನೀತಿಯಲ್ಲಿ ಡಿ ಎಂ ನಂಜುಂಡಪ್ಪ ವರದಿ ಆಧರಿಸಿ ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲ್ಲೂಕುಗಳನ್ನು ಝೋನ್-1 ಮತ್ತು 2ರಡಿ…
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025” ಆರಂಭಗೊಂಡಿದೆ. ಈ ಸಮಾವೇಶದಲ್ಲಿ ಭಾಗಿಯಾದಂತ ಸಿಎಂ ಸಿದ್ಧರಾಮಯ್ಯ ಮಾಡಿದ ಭಾಷಣದ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. 1. ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರವ ರಾಜ್ಯ; ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಧೃಢೀಕರಿಸುತ್ತಿದ್ದೇವೆ. ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ-ಸ್ನೇಹಿ ಪರಿಸರ ವ್ಯವಸ್ಥೆಯಿದ್ದು, ಇಲ್ಲಿ ಮಾಡುವ ಪ್ರತಿ ಹೂಡಿಕೆಯೂ ಯಶಸ್ವಿಯಾಗುವಂತೆ ಹಾಗೂ ಸುಸ್ಥಿರ ಬೆಳವಣಿಗೆಗೆ ಕೊಡುಗೆ ನೀಡುವಂತೆ ಖಾತ್ರಿಪಡಿಸುತ್ತೇವೆ. 2. ಕದಂಬ, ಗಂಗರು, ಚಾಲುಕ್ಯ, ಹೊಯ್ಸಳ, ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಒಡೆಯರ ಆಳ್ವಿಕೆಯಲ್ಲಿ ಕರ್ನಾಟಕ ನೇಕಾರಿಕೆ, ಲೋಹಶಾಸ್ತ್ರ, ಶಿಲ್ಪಕಲೆ, ಕರಕುಶಲ ಸಾಮಗ್ರಿಗಳ ತಯಾರಿಕೆಯ ತವರಾಗಿತ್ತು ಮತ್ತು ಪ್ರಮುಖ ವ್ಯಾಪಾರ ಕೇಂದ್ರವಾಗಿತ್ತು. 3. ಪ್ರಖ್ಯಾತ ಬಿದರಿ ಕಲೆ (ಲೋಹಕಲೆ), ಮೈಸೂರು ರೇಷ್ಮೆ ನೇಕಾರಿಕೆ ಮತ್ತು ಶ್ರೀಗಂಧ ಕೆತ್ತನೆಯಂತಹ ಕುಶಲಕಲೆಗಳು ರಾಜ ಮನೆತನಗಳ ಆಶ್ರಯದಲ್ಲಿ ಅಭಿವೃದ್ಧಿ…
ಬೆಂಗಳೂರು : ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ. ಮಂಗಳವಾರ ಸಮಾವೇಶದ ಉದ್ಘಾಟನೆ ಬಳಿಕ ನವೀರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿದ ಸಂಸ್ಥೆಗಳ ಮುಖ್ಯಸ್ಥರು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಂದ ಒಪ್ಪಂದ ಪತ್ರ ಸ್ವೀಕರಿಸಿದರು. ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಅವರು ಉಪಸ್ಥಿತರಿದ್ದರು. ನವೀಕರಿಸಹುದಾದ ಇಂಧನ ಕ್ಷೇತ್ರದಲ್ಲಿ ಒಟ್ಟು 13 ಕಂಪನಿಗಳು ಹೂಡಿಕೆಗೆ ಆಸಕ್ತಿ ತೋರಿದ್ದು, ಒಟ್ಟು 3,42,925 ಕೋಟಿ ರೂ. ಹೂಡಿಕೆಗೆ ಮುಂದಾಗಿದ್ದಾರೆ. ಇದರಿಂದ 78,253 ಮಂದಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಪ್ರಮುಖ ಹೂಡಿಕೆಗಳು: ಜೆಎಸ್ ಡಬ್ಲ್ಯು ನಿಯೋ ಎನರ್ಜಿ ಲಿಮಿಟೆಡ್- 56 ಸಾವಿರ ಕೋಟಿ ರೂ. ರಿನ್ಯೂ ಪ್ರೈ. ಲಿ. ಮತ್ತು ಟಾಟಾ ಪವರ್ ರಿನಿವೇಬಲ್ ಎನರ್ಜಿ ಲಿಮಿಟೆಡ್…
ಬೆಂಗಳೂರು: ಕಾಂಗ್ರೆಸ್ ಶಾಸಕರ ಕುಟುಂಬವೇ ಆಯಾ ಕ್ಷೇತ್ರಗಳಲ್ಲಿ ದುಂಡಾವರ್ತಿಯಲ್ಲಿ ತೊಡಗಿರುವುದು ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್ ವರ್ತನೆ ಮೂಲಕ ಹೊರಕ್ಕೆ ಬಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್, ಹೆಣ್ಮಗಳು, ಸರಕಾರಿ ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ಬೈದ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಅವರಿಗೆ ಬೆದರಿಕೆ ಹಾಕಿದ್ದು ವಿಡಿಯೋದಲ್ಲಿದೆ ಎಂದು ವಿವರಿಸಿದರು. ಕಾನೂನು ಏನು ಮಾಡುತ್ತಿದೆ? ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ನಿಮ್ಮ ಶಾಸಕರು ಏನು ಮಾಡಿದರೂ ಸರಿ ಎಂಬ ಧೋರಣೆಯೇ ಎಂದು ಕೇಳಿದರು. ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಅವರನ್ನು ಈಗಾಗಲೇ ಬಂಧಿಸಬೇಕಿತ್ತು ಎಂದು ನುಡಿದರು. ಹೆಣ್ಮಕ್ಕಳಿಗೆ ಇದೇನಾ ಗೌರವ ಕೊಡುವುದು ಎಂದು ಬೇರೆಯವರನ್ನು ಮಾತನಾಡುತ್ತಾರೆ. ಈಗ ಸರಕಾರ ನಡೆಸುವ ಕಾಂಗ್ರೆಸ್ಸಿಗರು ಇದೇನಾ ಹೆಣ್ಮಕ್ಕಳಿಗೆ ಗೌರವ ಕೊಡುವುದು ಎಂದು ಪ್ರಶ್ನಿಸಿದರು. ಶಾಸಕರ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಗಮ ಕಾರ್ಯಾಚರಣೆ ಹಾಗೂ ವಾಯುಯಾನ ಪ್ರದೇಶದಲ್ಲಿನ ತುರ್ತು ಪ್ರತಿಕ್ರಿಯೆಯ ದಕ್ಷತೆಯನ್ನು ಹೆಚ್ಚಿಸಲು ವೈಮಾನಿಕ ವೀಕ್ಷಣೆ ಪ್ರದರ್ಶನ (Aerial View Display System-AVD) ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಈ ವ್ಯವಸ್ಥೆಯು ವಿಮಾನಗಳ ಸಂಚಾರ, ವಾಯುಯಾನ ಪ್ರದೇಶದಲ್ಲಿ ವಾಹನಗಳ ಚಲನೆಯ ಸಮನ್ವಯ, ತುರ್ತು ಪರಿಸ್ಥಿತಿಯ ನಿರ್ವಹಣೆಗಳನ್ನು ಕೇಂದ್ರೀಕೃತ ಡ್ಯಾಶ್ಬೋರ್ಡ್ ನಲ್ಲಿ ಮೇಲ್ವಿಚಾರಣೆ ಮಾಡಲು ಅನುವು ಮಾಡಿಕೊಡುತ್ತದೆ. ವೈಮಾನಿಕ ವೀಕ್ಷಣೆ ಪ್ರದರ್ಶನ (ಎವಿಡಿ) ವ್ಯವಸ್ಥೆಯು ವಿಮಾನ ನಿಲ್ದಾಣದ ನಿರ್ವಾಹಕರು, ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳಿಗೆ ವಾಯುಯಾನ ಪ್ರದೇಶದಲ್ಲಿ ನಡೆಯುವ ಎಲ್ಲ ಚಟುವಟಿಕೆಗಳ ಏಕೀಕೃತ ನೋಟವನ್ನು ಒದಗಿಸುವ ಮೂಲಕ, ವಿಮಾನ ಕಾರ್ಯಾಚರಣೆಯ ದಕ್ಷತೆ ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಸಹಕರಿಸುತ್ತದೆ. ಈವರೆಗೆ ಬಳಕೆಯಲ್ಲಿದ್ದ ವಾಯು ಸಂಚಾರ ನಿಯಂತ್ರಣ ಕೇಂದ್ರವನ್ನು ಸಂಪರ್ಕಿಸಿ ವಿಮಾನಗಳನ್ನು ಗುರುತಿಸುತ್ತಿದ್ದ ಸಾಂಪ್ರದಾಯಿಕ ವ್ಯವಸ್ಥೆಯನ್ನು ಸರಳಗೊಳಿಸಿ, ವಿಮಾನಗಳನ್ನು ಅವುಗಳ ಸಂಖ್ಯೆಗಳ ಮೂಲಕ ಗುರುತಿಸುವ ಸೌಲಭ್ಯವನ್ನು ಈ ವ್ಯವಸ್ಥೆ ಒದಗಿಸುತ್ತದೆ. ಜೊತೆಗೆ, ವಿಮಾನ ಸಂಚಾರದ ಎಲ್ಲ ರೀತಿಯ ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ಮೂಲಕ…
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ’ ಎಂದರು. ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದೀಮೂಲಗಳಿಂದ ಶುದ್ಧ…