Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯ ಘೋಷಿತ ಸಂಸ್ಥೆಯನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರ ಕಡತದಲ್ಲಿನ ಪ್ರಸ್ತಾವನೆಯಲ್ಲಿ ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಸರ್ಕಾವಣೆ ಸಂದರ್ಭದಲ್ಲಿ ಸಿ.ಸಿ.ಟಿ.ವಿ.ಯಲ್ಲಿ ಸೆರೆಯಾಗಿರುವ ದೇವಾಲಯದ ಸಿಬ್ಬಂದಿಗಳಿಂದಲೇ ಕಳ್ಳತನವಾಗಿರುವ ದೃಶ್ಯದ ತುಣುಕಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು, ಸದರಿ ದೇವಾಲಯದಲ್ಲಿ ಆಡಳಿತ ನಿರ್ವಹಣೆಯನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣ ಸದರಿ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅನ್ವಯ ಸರ್ಕಾರದ ವಶಕ್ಕೆ ಪಡೆಯುವ ಸಂಬಂಧ ಸ್ಪಷ್ಟ ಅಭಿಪ್ರಾಯದ ವರದಿಯನ್ನು ಸಲ್ಲಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರು ದಿನಾಂಕ:01.10.2024ರಂದು ಜಿಲ್ಲಾಧಿಕಾರಿಯವರನ್ನು ಕೋರಲಾಗಿರುತ್ತದೆ ಎಂದಿದೆ. ಅದರಂತೆ, ಅಪರ ಜಿಲ್ಲಾಧಿಕಾರಿಗಳು ಮತ್ತು…
ಉತ್ತರ ಕನ್ನಡ: ಜಿಲ್ಲೆಯ ಜಿಲ್ಲಾಸ್ಪತ್ರೆಯ ಸರ್ಜನ್ ಒಬ್ಬರು ಗುತ್ತಿಗೆದಾರರೊಬ್ಬರಿಂದ 30,000 ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉತ್ತರ ಕನ್ನಡದ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಶಿವಾನಂದ ಕುಡ್ತಲಕರ ಅವರೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವೈದ್ಯರಾಗಿದ್ದಾರೆ. ಗುತ್ತಿಗೆದಾರ ಮೌಸೀರ್ ಅಹ್ಮದ್ ಶೇಖ್ ಎಂಬುವರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಗುತ್ತಿಗೆದಾರ ಮೌಸೀನ್ 8 ತಿಂಗಳ ಹಿಂದೆ 3.5 ಲಕ್ಷ ಹಾಸಿಗೆ ಟೆಂಡರ್ ಪಡೆದಿದ್ದರು. ರೋಗಿಗಳ ಹಾಸಿಗೆ ಟೆಂಡರ್ 75,000 ರೂ ಕಮೀಷನ್ ಗಾಗಿ ಒತ್ತಡ ಹಾಕಿದ್ದರು. 3.5 ಲಕ್ಷ ಹಣ ಬಿಡುಗಡೆ ಮಾಡಲು 75,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿನ್ನೆ 75,000 ಲಂಚದ ಹಣದಲ್ಲಿ ಗುತ್ತಿಗೆದಾರ ಮೌಸೀನ್ ಉತ್ತರ ಕನ್ನಡ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಶಿವಾನಂದಗೆ 20,000 ನೀಡಿದ್ದರು. ಇಂದು ಜಿಲ್ಲಾಸ್ಪತ್ರೆಯ ತಮ್ಮ ಚೇಂಬರ್ ನಲ್ಲಿಯೇ 30,000 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ಧನ್ಯಾ ನಾಯ್ಕ್ ನೇತೃತ್ವದಲ್ಲಿ…
ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ “ವಿಶೇಷ ತೀವ್ರ ಪರಿಷ್ಕರಣೆ (SIR)”ಯನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಗುರುವಾರ (ಜುಲೈ 10) ಸುಪ್ರೀಂ ಕೋರ್ಟ್ಗೆ ಭಾರತದ ಚುನಾವಣಾ ಆಯೋಗವು ( Election Commission of India ) ಆಧಾರ್ ಕಾರ್ಡ್ ( Aadhaar card ) ಪೌರತ್ವದ ಪುರಾವೆಯಲ್ಲ ಎಂದು ತಿಳಿಸಿದೆ. 2003 ರ ಮತದಾರರ ಪಟ್ಟಿಯಲ್ಲಿ ಇಲ್ಲದ ಮತದಾರರ ಎಣಿಕೆಗಾಗಿ ಪೌರತ್ವ ದಾಖಲೆಗಳಾಗಿ ECI ನಿರ್ದಿಷ್ಟಪಡಿಸಿದ ಹನ್ನೊಂದು ದಾಖಲೆಗಳ ಪಟ್ಟಿಯಿಂದ ಆಧಾರ್ ಕಾರ್ಡ್ ಮತ್ತು ಮತದಾರರ ಕಾರ್ಡ್ ಅನ್ನು ECI ಹೊರಗಿಟ್ಟಿರುವುದನ್ನು ಅರ್ಜಿದಾರರು ಪ್ರಶ್ನಿಸಿದರು. ಅರ್ಜಿದಾರರಲ್ಲಿ ಒಬ್ಬರ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, ಜನತಾ ಪ್ರಾತಿನಿಧ್ಯ ಕಾಯ್ದೆಯ ಪ್ರಕಾರ ಆಧಾರ್ ಕಾರ್ಡ್ ಸ್ವೀಕಾರಾರ್ಹ ದಾಖಲೆಯಾಗಿದ್ದರೂ, ಬಿಹಾರ SIR ಗೆ ECI ಅದನ್ನು ಸ್ವೀಕರಿಸುವುದಿಲ್ಲ ಎಂದು ಗಮನಸೆಳೆದರು. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಆಧಾರ್ ಏಕೆ ಸ್ವೀಕಾರಾರ್ಹವಲ್ಲ ಎಂದು ECI ಅನ್ನು ಕೇಳಿತು. ಇದಕ್ಕೆ…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ಹಿತದೃಷ್ಟಿಯಿಂದ ನಿನ್ನೆ ನಡೆದ ಸಭೆಯಲ್ಲಿ ಟೀಕೆಗಳ ಹೊರತಾಗಿ, ಉತ್ತಮ ಸಲಹೆಗಳನ್ನು ನೀಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಸಲಹೆಗಳನ್ನು ಗಮನಿಸಿ, ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಆ ಪ್ರಕಾರ ಏನು ಮಾಡಬಹುದು ಎಂಬುದರ ಕುರಿತು ಚರ್ಚೆ ಮಾಡುತ್ತೇವೆ. ತದನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಮಳೆಗಾಲ ಮುಗಿದ ನಂತರ ಎಲ್ಲ ಧಾರ್ಮಿಕ ಮುಖಂಡರನ್ನೊಳಗೊಂಡತೆ ದೊಡ್ಡಮಟ್ಡದ ಸಭೆ ಮಾಡಲು ಸಲಹೆ ಕೊಟ್ಟಿದ್ದಾರೆ. ಕಟ್ಟುನಿಟ್ಟಿನ ಕಾನೂನು ಪಾಲನೆ ಮಾಡುವುದು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟಿಂಗ್ ಮಾಡುವುದನ್ನು ನಿಲ್ಲಿಸಬೇಕು ಎಂದು ಕರೆ ಕೊಡಲಾಗಿದೆ. ಇದನ್ನು ಮುಂದುವವರಿಸಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಅನೇಕ ಕ್ರಮಗಳನ್ನು ತೆಗೆದುಕೊಂಡು, ಆ ಭಾಗದಲ್ಲಿ ಶಾಂತಿ ನೆಲೆಸುವಂತೆ ಮಾಡುತ್ತೇವೆ. ಈಗಾಗಲೇ ಒಂದಿಷ್ಟು ಬದಲಾವಣೆಗಳನ್ನು ನೋಡಬಹುದು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಸೂಕ್ಷ್ಮತೆ ಜಿಲ್ಲೆ ಎನ್ನುವುದು ಬೇಡ. ಕೆಲವು ಘಟನೆಗಳು, ಅಪರಾಧಗಳಿಂದ ಹೀಗೆಲ್ಲ ಆಗುತ್ತಿದೆ ಎಂಬುದನ್ನು…
ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India – UIDAI) ಆಧಾರ್ ನೋಂದಣಿ ( Aadhaar registration ) ಮತ್ತು 2025–26ರ ಮೌಲ್ಯಮಾಪನ ವರ್ಷಕ್ಕೆ ಅನ್ವಯವಾಗುವ ಮಾರ್ಪಾಡುಗಳಿಗಾಗಿ ಪರಿಷ್ಕೃತ ಮಾನ್ಯ ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಧಾರ್ ಸುತ್ತಲಿನ ಪ್ರಮುಖ ನಿಯಮಗಳಲ್ಲಿ ಒಂದೆಂದರೆ, ಪ್ರತಿಯೊಬ್ಬ ವ್ಯಕ್ತಿಯು ಒಂದೇ ಆಧಾರ್ ಸಂಖ್ಯೆಯನ್ನು ಮಾತ್ರ ಹೊಂದಲು ಅನುಮತಿಸಲಾಗಿದೆ. ಒಬ್ಬ ವ್ಯಕ್ತಿಯು ಬಹು ಆಧಾರ್ ಐಡಿಗಳನ್ನು ಪಡೆದಿರುವ ಸಂದರ್ಭಗಳಲ್ಲಿ – ಬಹುಶಃ ವ್ಯವಸ್ಥೆಯ ದೋಷಗಳು ಅಥವಾ ಪುನರಾವರ್ತಿತ ಅರ್ಜಿಗಳಿಂದಾಗಿ – ಬಯೋಮೆಟ್ರಿಕ್ ವಿವರಗಳೊಂದಿಗೆ ರಚಿಸಲಾದ ಮೊದಲ ಆಧಾರ್ ಮಾತ್ರ ಸಕ್ರಿಯ ಮತ್ತು ಮಾನ್ಯವಾಗಿರುತ್ತದೆ. ಹೆಚ್ಚುವರಿಯಾಗಿ, ಆಧಾರ್ ಸೇವೆಗಳಿಗೆ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯನ್ನು ಆಧಾರ್ (ದಾಖಲಾತಿ ಮತ್ತು ನವೀಕರಣ) ಮೊದಲ ತಿದ್ದುಪಡಿ ನಿಯಮಗಳು, 2025 ರ ಪ್ರಕಾರ ಪರಿಷ್ಕರಿಸಲಾಗಿದೆ. ನವೀಕರಿಸಿದ ಮಾರ್ಗಸೂಚಿಗಳು ಈಗ ಗುರುತು, ವಿಳಾಸ, ಜನ್ಮ ದಿನಾಂಕ ಮತ್ತು ಕುಟುಂಬ ಸಂಬಂಧಗಳನ್ನು ಪರಿಶೀಲಿಸಲು ಬಳಸಬಹುದಾದ ದಾಖಲೆಗಳ ಪ್ರಕಾರಗಳನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸುತ್ತವೆ. ಪರಿಶೀಲನೆಗೆ…
ಶಿವಮೊಗ್ಗ: ಅಧಿಕಾರ ಅಂತಸ್ತು ಶಾಶ್ವತವಲ್ಲ. ಆದರೇ ಹೃದಯ ವೈಶಾಲ್ಯತೆ ಮಾತ್ರ ಶಾಶ್ವತ ಅನ್ನೋದಕ್ಕೆ ಸಾಕ್ಷಿಯೇ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಎಂಬುದು ಆ ಭಾಗದ ಜನರ ಮಾತು. ಈಗ ತಾಜಾ ಉದಾಹರಣೆ ಎನ್ನುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಜ್ಜಿಗೆ ಸಹಾಯ ಮಾಡಿ ಜನ-ಮನ ಗೆದ್ದಿದ್ದಾರೆ. ಶಾಸಕರಂದ್ರೆ ಹೀಗೆ ಇರ್ಬೇಕು ಅಲ್ವ? ಎನ್ನುವಂತ ಹೃದಯ ವೈಶಾಲ್ಯತೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ತಮ್ಮನ್ನು ಭೇಟಿಯಾಗುವ ಜನರನ್ನು ನಗುಮುಖದಿಂದಲೇ ಸ್ವಾಗತಿಸೋದು ಹುಟ್ಟು ಗುಣವೇ ಆಗಿದೆ. ಯಾರೇ ಕಷ್ಟ ಅಂತ ತಮ್ಮ ಬಳಿ ಬಂದ್ರು ಅವರನ್ನು ಪ್ರೀತಿಯಿಂದ ಮಾತನಾಡಿಸುವಂತ ಶಾಸಕರು, ತಮ್ಮ ಕೈಲಾದ ಸಹಾಯವನ್ನು, ಅವರ ಕೆಲಸವನ್ನು ತಕ್ಷಣ ಮಾಡಿಯೇ ಕಳುಹಿಸೋದು. ಹೀಗಾಗಿ ಕ್ಷೇತ್ರದಲ್ಲಿ ಜನಾನುರಾಗಿ ನಾಯಕರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ಪ್ರವಾಸದ ನಿಮಿತ್ತ, ಸಾಗರ ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಕಾರಣ ಸಂತ್ರಸ್ತರ ಜನರನ್ನು ಸಾಂತ್ವಾನಿಸಿ, ಪರಿಹಾರ ದೊರಕಿಸಿಕೊಡುವಂತ ಕಾರ್ಯಕ್ಕಾಗಿ…
ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿಎಲ್ಸಿ), ಪಾಲುದಾರಿಕೆಯಲ್ಲಿ ಕೈಗೆಟಕುವ ಬಹುಮಹಡಿ ವಸತಿ ಯೋಜನೆ (ಎಎಚ್ಪಿ), ಕೈಗೆಟಕುವ ಬಾಡಿಗೆ ವಸತಿ ಯೋಜನೆ (ಎಆರ್ಎಚ್), ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐಎಸ್ಎಸ್) ಈ 4 ವಸತಿ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ (ಖಾಲಿ ನಿವೇಶನ/ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ-2.0 (ನಗರ) ದಡಿ ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ ತಮ್ಮ ಹಾಗೂ ತಮ್ಮ ಕುಟುಂಬದ ಹೆಸರಿನಲ್ಲಿ ಸ್ವಂತ ಪಕ್ಕಾ ಮನೆಯನ್ನು ಹೊಂದಿರದ ಹಾಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆ / ಇತರೆ ಇಲಾಖೆಯಿಂದ ಕಳೆದ 20 ವರ್ಷಗಳಲ್ಲಿ ಸಹಾಯಧನ ಪಡೆದು ಮನೆ ನಿರ್ಮಿಸದ ಎಲ್ಲಾ ಅರ್ಹ ವಸತಿ ರಹಿತ ಹಾಗೂ ನಿವೇಶನ ರಹಿತರು ವಸತಿ…
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ( PM Kisan Samman Nidhi Yojana ) ಪ್ರಯೋಜನ ಪಡೆಯಲು ರೈತರು ಈ ಕೆಳಗೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅವು ಏನು ಅಂತ ಮುಂದೆ ಓದಿ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ 6000 ಸಹಾಯಧನವನ್ನು ನೀಡಲಾಗುತ್ತದೆ. ಈ ಯೋಜನೆಯ ಲಾಭ ಪಡೆಯಲು ಕೆಲ ನಿಯಮಗಳನ್ನು ರೈತರು ಪಾಲಿಸುವಂತೆ ಕೇಂದ್ರ ಕೃಷಿ ಇಲಾಖೆ ತಿಳಿಸಿದೆ. https://twitter.com/CBC_Bengaluru/status/1942903452931076183 ರೈತರ ಭವಿಷ್ಯದ ಸುರಕ್ಷತೆ, ಭಾರತದ ಕೃಷಿಯ ಸಮೃದ್ಧಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನ ಪಡೆಯಲು ರೈತರು ಈ ಕೆಳಗೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅದೆಂದರೇ.. ಇ-ಕೆವೈಸಿ ಪೂರ್ಣಗೊಳಿಸಿ. ಬ್ಯಾಂಕ್ ಖಾತೆ ಜೊತೆ ಆಧಾರ್ ಸಂಯೋಜನೆ ಖಾತ್ರಿಪಡಿಸಿಕೊಳ್ಳಿ ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿಕೊಳ್ಳಿ. ಬಾಕಿ ಇರುವ ಭೂ ದಾಖಲೆಗಳ ವಿವಾದ ಪರಿಹರಿಸಿಕೊಳ್ಳಿ. pmkisan.gov.in ನಲ್ಲಿ ಫಲಾನುಭವಿ…
ಗುರುವಿನ ಅನುಗ್ರಹವಿಲ್ಲದಿದ್ದರೆ ಭಗವಂತನ ಅನುಗ್ರಹವಿಲ್ಲ ಎಂದು ಹೇಳುತ್ತಾರೆ. ಗುರುಭಗವಾನ್ ಅವರ ಆಶೀರ್ವಾದವಿದ್ದರೆ ಮಾತ್ರ ಜೀವನದಲ್ಲಿ ಅತ್ಯಂತ ವೇಗವಾಗಿ ಪ್ರಗತಿಯಾಗುತ್ತದೆ. ಗುರುವಿನ ಅನುಗ್ರಹವಿದ್ದರೆ ಮಾತ್ರ ಈ ದೇವರ ಆಶೀರ್ವಾದವಿರುತ್ತದೆ. ಅದೇ ರೀತಿ, ನಮಗೆ ಕಲಿಸಿದ ಗುರುವನ್ನು ನಾವು ಎಂದಿಗೂ ಮರೆಯಬಾರದು. ಆಧ್ಯಾತ್ಮಿಕವಾಗಿ ನಮಗೆ ಮಾರ್ಗದರ್ಶನ ನೀಡುವ ಗುರುವನ್ನು ಸಹ ನಾವು ಮರೆಯಬಾರದು. ಗುರುವಿಗೆ ಧನ್ಯವಾದ ಹೇಳಲು ಒಂದು ದಿನವಿದ್ದರೆ, ಅದು ಈ ಗುರು ಪೂರ್ಣಿಮೆ. ನಮ್ಮ ಜಾತಕದಲ್ಲಿ, ನಮ್ಮ ಜನ್ಮದಲ್ಲಿ ಕೋಟಿ ದೋಷಗಳಿದ್ದರೂ, ಗುರು ಮಾತ್ರ ಅವುಗಳನ್ನು ತೆಗೆದುಹಾಕಲು ಸಾಧ್ಯ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…
ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ. ಈ ಮೂಲಕ ಯುಜಿಸಿಇಟಿಗೆ ಸಂಬಂಧಿಸಿದಂತೆ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್ ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್ ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್ ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಅದರ ಬಳಿಕ ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜು.22ರವರೆಗೆ ಅವಕಾಶ…














