Author: kannadanewsnow09

ನವದೆಹಲಿ: ದೆಹಲಿ ಸಿಎಂ ಮೇಲಿನ ದಾಳಿಯ ಕೆಲವು ದಿನಗಳ ನಂತರ, ರೇಖಾ ಗುಪ್ತಾ ಕಾರ್ಯಕ್ರಮದ ಸಂದರ್ಭದಲ್ಲಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ದೆಹಲಿ ಸಿಎಂ ಮೇಲೆ ದಾಳಿ ನಡೆದ ಕೆಲವು ದಿನಗಳ ನಂತರ, ರೇಖಾ ಗುಪ್ತಾ ಅವರ ನಿವಾಸದಲ್ಲಿ ಅವರ ಮೇಲೆ ದಾಳಿ ನಡೆದ ಎರಡು ದಿನಗಳ ನಂತರ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಗಾಂಧಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಎರಡು ದಿನಗಳ ಹಿಂದೆ ಗಾಂಧಿ ನಗರದಲ್ಲಿ ನಡೆದ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಕಾರ್ಯಕ್ರಮದಲ್ಲಿ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. https://twitter.com/ANI/status/1958802161132880239 ಎರಡು ದಿನಗಳ ಹಿಂದೆ ಗುಪ್ತಾ ಅವರ ಮೇಲೆ ನಡೆದ ದಾಳಿಯ ನಂತರ ಇದು ಅವರ ಮೊದಲ ಸಾರ್ವಜನಿಕ ಪ್ರದರ್ಶನವಾಗಿತ್ತು. ವರದಿಗಳ ಪ್ರಕಾರ,…

Read More

ಬೆಂಗಳೂರು: ಸೆಪ್ಟೆಂಬರ್ ಮಾಸಾಂತ್ಯದಿಂದ ಕರ್ನಾಟಕದಲ್ಲಿ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿಗೆ ಹೊಸ ಹೈಟೆಕ್ ಸ್ಮಾರ್ಟ್ ಕಾರ್ಡ್ ಗಳ ವಿತರಣೆ ವ್ಯವಸ್ಥೆ ಜಾರಿಗೆ ಬರಲಿದೆ. ರಾಜ್ಯದಲ್ಲೂ ಒನ್ ನೇಷನ್ ಒನ್ ಕಾರ್ಡ್ ಜಾರಿಗೆ ಬರಲಿದ್ದು ಡಿಎಲ್, ಆರ್ ಸಿ ಕಾರ್ಡ್ ನಲ್ಲಿ ವಿಧಾನಸೌಧ ಮರೆಯಾಗಲಿದೆ. ಅಂದರೆ ಈಗ ವಿತರಿಸುವ ಸ್ಮಾರ್ಟ್ ಕಾರ್ಡ್ ಗಳಲ್ಲಿ ಇರುವಂತೆ ವಿಧಾನಸೌಧ, ಕರ್ನಾಟಕದ ಚಿಹ್ನೆ, ತ್ರಿವರ್ಣ ಧ್ವಜ ಇದ್ಯಾವುದು ಹೊಸದಾಗಿ ವಿತರಿಸುವ ಕಾರ್ಡ್ ನಲ್ಲಿ ಇರುವುದಿಲ್ಲ. ಹೌದು. ಕರ್ನಾಟಕದಲ್ಲಿ ಒನ್ ನೇಷನ್ ಒನ್ ಕಾರ್ಡ್ ಜಾರಿಯಾದ ನಂತ್ರ ಕಾರ್ಡ್ ಮೇಲ್ಭಾಗದಲ್ಲಿ ರಾಷ್ಟ್ರೀಯ ಚಿಹ್ನೆಯಾದ ಅಶೋಕ ಸ್ತಂಭ ಮಾತ್ರವೇ ಇರಲಿದೆ. ವಿಧಾನಸೌಧ ಇರೋದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒನ್ ನೇಷನ್ ಒನ್ ಕಾರ್ಡ್ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ಪೂರೈಕೆಯಾಗಲಿದೆ. ಈವರೆಗೆ ವಿತರಿಸುವ ಕಾರ್ಡ್ ಗಳಲ್ಲಿ ಆಯಾ ರಾಜ್ಯಗಳ ಚಿಹ್ನೆಗಳು, ಆಡಳಿತ ಸೌಧದ ಪೋಟೋ ಮತ್ತಿತರ ವಿಶೇಷಗಳನ್ನು ಮುದ್ರಿಸಲು ಅವಕಾಶವಿತ್ತು. ಆದರೆ ಇದೀಗ ಒನ್ ನೇಷನ್ ಒನ್ ಕಾರ್ಡ್ ಯೋಜನೆಯಲ್ಲಿ…

Read More

ಬೆಂಗಳೂರು: ನಗರದಲ್ಲಿ ಹೋಟೆಲ್ ಮತ್ತು ಪಿ.ಜಿಗಳಲ್ಲಿ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 14 ಮೊಬೈಲ್ ಫೋನ್ ಮತ್ತು 4 ಲ್ಯಾಪ್‌ಗಳ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 76 ಲಕ್ಷ ಆಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ತಲಘಟ್ಟಪುರ ಪೊಲೀಸ್ ಠಾಣಾ ಸರಹದ್ದಿನ ಮೆಟ್ರೋ ನಿಲ್ದಾಣದ ಹತ್ತಿರದ ಪಿ.ಜಿವೊಂದರಲ್ಲಿ ವಾಸವಾಗಿರುವ ಪಿರಾದುದಾರರು, ದಿನಾಂಕ:16/07/2025 ರಂದು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:15/07/2025 ರಂದು ರಾತ್ರಿ ಪಿರಾದುದಾರರು ತಂಗಿದ್ದ ಪಿ.ಜಿ ಯ ಕೊಠಡಿಗೆ ಮತ್ತೋರ್ವ ವ್ಯಕ್ತಿಯು ತಂಗಲು ಬಂದಿದ್ದು, ಆತನು ಪಿರಾದುದಾರರ 01 ಐ-ಫೋನ್ ಮತ್ತು 01 ಲ್ಯಾಪ್‌ಟಾಪ್ ಹಾಗೂ ಇತರೆ ದಾಖಲಾತಿಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿ,…

Read More

ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ. ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:13/07/2025 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:12/07/2025 ರಂದು ರಾತ್ರಿ ಹೆಚ್.ಆರ್.ಬಿ.ಆರ್ ಲೇಔಟ್ ನ 8ನೇ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ್ಗೆ, ದ್ವಿ-ಚಕ್ರ ವಾಹನದಲ್ಲಿ ಹಿಂಬದಿಯಿಂದ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಪಿದ್ಯಾದುದಾರರ ಕತ್ತಿನಲ್ಲಿದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತಕೊಂಡು ದ್ವಿ-ಚಕ್ರ ವಾಹನದಲ್ಲಿ ಪರಾರಿಯಾಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಸರ ಅಪಹರಣ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:19/07/2025 ರಂದು…

Read More

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನ ಕದಿಯುತ್ತಿದ್ದಂತ ಓರ್ವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯದ 8 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಬೆಂಗಳಊರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ ಕಾಮರಾಜ ನಗರ, ಹೆಚ್.ಆರ್.ಬಿ.ಆರ್ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:24/07/2025 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:20/07/2025 ರಂದು ಬೆಳಗ್ಗೆ ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿರುವ ಜ್ಯೂವೆಲ್ಲರಿ ಅಂಗಡಿಯೊಂದರ ಮುಂಭಾಗದಲ್ಲಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ, ಕೆಲಸಕ್ಕೆ ಹೋಗಿರುತ್ತಾರೆ. ಅದೇ ದಿನ ಸಂಜೆ ವಾಪಸ್ ಬಂದು ನೋಡಲಾಗಿ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:03/08/2025 ರಂದು ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿರುವ ಟೀ…

Read More

ಉಜಿರೆ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮಹಿಳೆಯರಿಂದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ: 28.08.2025 ರಿಂದ 01.10.2025ರ ವರೆಗೆ 35 ದಿನಗಳ ಕಾಲ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲಾಗುತ್ತಿದೆ. ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ತರಬೇತಿಯನ್ನು ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಬಳಿಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಈ ತರಬೇತಿಯನ್ನು ನೀಡಲಾಗುವುದು. 18-45ವರ್ಷದ ಒಳಗಿನ ಕರ್ನಾಟಕ ರಾಜ್ಯದವರಿಗೆ ಮಾತ್ರ ಅವಕಾಶವವಿದ್ದು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ತರಬೇತಿ ಇಚ್ಚಿಸುವವರು https://forms.gle/9LUE1UvHMAv21vRS7 ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದಲ್ಲೇ 6364561982ಗೆ ವಾಟ್ಸ್ ಆಪ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9980885900, 9448348569, 9380626695, 8296770307, 8861514706, 9591044014, 9902594791 ಸಂಪರ್ಕಿಸಿ. ಇಲ್ಲದೇ https://www.rudsetujire.com ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ. https://kannadanewsnow.com/kannada/lawyers-demand-the-implementation-of-a-proper-law-to-regulate-massage-and-spa-services-in-the-state/

Read More

ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ ತರಬೇಕೆಂದು ವಕೀಲರ ಸಮೂಹ ಆಗ್ರಹಿಸಿದೆ. ರಾಜ್ಯದಲ್ಲಿ Spa ಕೇಂದ್ರಗಳ ಮೇಲೆ ಪೊಲೀಸರು ಆಗಾಗ್ಗೆ ದಾಳಿ ನಡೆಸುತ್ತಿರುವ ಸನ್ನಿವೇಶಗಳು ಮರುಕಳಿಸುತ್ತಿವೆ. ಮಸಾಜ್ ಹಾಗೂ ಸ್ಪಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕಾನೂನೇ ಇಲ್ಲದಿರುವಾಗ ಅಕ್ರಮ ಎಂಬ ವ್ಯಾಖ್ಯಾನವೂ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸರು ಮಸಾಜ್ ಹಾಗೂ ಸ್ಪಾ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆಗಳೂ ಅನೈತಿಕವಾಗುತ್ತದೆ ಎಂಬುದು ಕಾನೂನು ತಜ್ಞರ ಅಭಿಪ್ರಾಯ. ಈ ವಿಚಾರದಲ್ಲಿ ರಾಜ್ಯದ ನ್ಯಾಯಾಂಗ ಕ್ಷೇತ್ರದ ಪರಿಣಿತರು ಇಟ್ಟಿರುವ ಹೆಜ್ಜೆ ಗಮನಸೆಳೆದಿದೆ. ಈ ಸಂಬಂಧ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮನೋರಾಜ್ ರಾಜೀವ್ ನೇತೃತ್ವದಲ್ಲಿ ಮಂಗಳೂರಿನ ವಕೀಲರ ತಂಡವು ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷ ನಾಯಕರಿಗೆ ಮನವಿ ಸಲ್ಲಿಸಿ, ಮಸಾಜ್ ಹಾಗೂ ಸ್ಪಾ ಇತ್ಯಾದಿ ಹೆಲ್ತ್ ಕೇರ್ ಸೆಂಟರ್ ಗಳಿಗೆ ಸೂಕ್ತ ಕಾನೂನು ರೂಪಿಸಬೇಕೆಂದು ಆಗ್ರಹಿಸಿದೆ. ಮಂಗಳೂರು…

Read More

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸುವಂತೆ ಮನವಿ ಮಾಡಿದರು. 3 ಜಿಲ್ಲೆಯಲ್ಲಿ ಪರಿಸರ ಗಣಪ: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸುತ್ತಾರೆ. ಆ ಮೂರು ಜಿಲ್ಲೆಗಳಲ್ಲಿ ಸಾಧ್ಯವಾಗುವುದಾದರೆ ಉಳಿದ ಜಿಲ್ಲೆಗಳಲ್ಲಿ ಏಕೆ ಆಗುವುದಿಲ್ಲ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು. ಪಿಓಪಿ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹೆಚ್ ಆರ್ ಎಂ ಎಸ್-5 ತಂತ್ರಾಂಶದಲ್ಲಿ ವೇತನ ಸೆಳೆಯುವ ನೌಕರರು ಹಬ್ಬದ ಮುಂಗಡ ಪಡೆಯಲು ಹಾಗೂ ಗಳಿಕೆ ರಜೆಯ ನಗಧೀಕರಣಕ್ಕಾಗಿ ಇಎಸ್ಎಸ್ ನ ಅಪ್ಲಿಕೇಶನ್ ಮೂಲಕವೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ 2.0 ನಿರ್ದೇಶನಾಲಯ ಯೋಜನಾ ವ್ಯವಸ್ಥಾಪಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯಗಳ/ ಇಲಾಖೆಗಳ ಪೈಕಿ ಹೆಚ್.ಆರ್.ಎಂ.ಎಸ್- 2 ನ ತಂತ್ರಾಂಶವನ್ನು ಬಳಸಿ ಈಗಾಗಲೇ ವೇತನ ಸೆಳೆಯುತ್ತಿರುವ ನೌಕರರಿಗೆ ESS (Employee Self Service) web portal “https://hrmsess.karnatakata.gov.in” ಅಪ್ಲಿಕೇಶನ್ (APK Name: gov.ka.ess_app) Android ESS ಬಳಸಿ ಸದರಿ ನೌಕರರ/ ಅಧಿಕಾರಿಗಳ ಲಾಗಿನ್ ಮೂಲಕ ಈ ಕೆಳಕಂಡ ವಿವರಗಳನ್ನು ವೀಕ್ಷಿಸಬಹುದು: 1. ವೇತನ ಪಟ್ಟಿ. 2. ರಜಾ ವಿವರಗಳು. a. ಗಳಿಕೆ ರಜೆ. b. ಅರ್ಧ ವೇತನ ರಜೆ. c. ಮುಂಬರುವ ಸಾರ್ವಜನಿಕ ರಜಾದಿನಗಳು. 3. ಸಾಲದ ವಿವರಗಳು. a. ಸಕ್ರಿಯ ಸಾಲಗಳು,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ…

Read More