Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ: ಜಿಲ್ಲೆಯ ಕರ್ನಾಟಕ ಹಾಲು ಉತ್ಪಾದ ಮಹಾಮಂಡಳದ ಕಚೇರಿಯ ಮುಂದೆಯೇ ವಾಮಾಚಾರ ಮಾಡಿರುವಂತ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಬಳ್ಳಾರಿ ನಗರದಲ್ಲಿರುವಂತ ಕೆಎಂಎಫ್ ಕಚೇರಿಯ ಮುಂದೆಯೇ ವಾಮಾಚಾರ ಮಾಡಲಾಗಿದೆ. ನಿಂಬೆಹಣ್ಣು, ಕುಡಿಕೆ, ಮಡಿಕೆ, ಕುಂಕುಮ ಇರಿಸಿ ವಾಮಾಚಾರವನ್ನು ಮಾಡಿರೋದಾಗಿ ಹೇಳಲಾಗುತ್ತಿದೆ. ಈಗಾಗಲೇ ನಷ್ಟದಲ್ಲಿರುವಂತ ಕೆಎಂಎಫ್ ಮುಂದೆಯೇ ವಾಮಾಚಾರದಿಂದಾಗಿ ಕಚೇರಿಯ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಬಳ್ಳಾರಿಯ ಕೆಎಂಎಫ್ ನಲ್ಲಿನ ಆಂತರಿಕ ವೈಮನಸ್ಸಿನಿಂದಲೇ ಈ ಕೃತ್ಯ ಎಸಗಿರೋದಾಗಿ ಹೇಳಲಾಗುತ್ತಿದೆ. ಮಡಿಕೆ, ತಾಯತ, 8 ನಿಂಬೆಹಣ್ಣು, ಕುಂಬಳಕಾಯಿಗೆ ಬಣ್ಣದ ದಾರ ಕಟ್ಟಿರುವಂತ ದುಷ್ಕರ್ಮಿಗಳು ವಾಮಾಚಾರ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/eds-press-release-on-muda-politically-motivated-cm-siddaramaiah/ https://kannadanewsnow.com/kannada/now-melania-has-a-meme-coin-out-after-trumps-new-cryptocurrency/
ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು. ಹಣ ದುರುಪಯೋಗದ ಪ್ರಶ್ನೆ ಇಲ್ಲ ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು. ತಪ್ಪಿತಸ್ಥರ ವಿರುದ್ಧ ಕ್ರಮ ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್…
ಬೆಂಗಳೂರು: ಇದೇ ಜನವರಿ.30ರಂದು ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಂಪುಟ ಸಭೆಯಲ್ಲೇ ಜಾತಿಗಣತಿ ವರದಿಯನ್ನು ಮಂಡನೆ ಮಾಡಲಾಗುತ್ತಿದ್ದು, ಆ ಬಳಿಕ ಜಾರಿಯ ನಿರ್ಧಾರವನ್ನು ಸರ್ಕಾರ ಪ್ರಕಟಿಸಲಿದೆ. ಕಳೆದ ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯ ಕುರಿತಂತೆ ಚರ್ಚಿಸುವುದಾಗಿ ತಿಳಿಸಿದ್ದರು. ಆ ಕಾಲ ಕೂಡಿ ಬಂದಿದೆ. ಜನವರಿ 30, 2025ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ದಿನಾಂಕ 30-01-2025ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 3ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಈ ಸಚಿವ ಸಂಪುಟ ಸಭೆ ಮಹತ್ವದ್ದಾಗಿದ್ದು, ಹಲವು ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ. https://kannadanewsnow.com/kannada/caste-census-to-hide-corruption-ex-mla-rajkumar-patil/ https://kannadanewsnow.com/kannada/now-melania-has-a-meme-coin-out-after-trumps-new-cryptocurrency/ https://kannadanewsnow.com/kannada/are-you-suffering-from-stuttering-participate-in-this-free-workshop-tondre-clear/
ಕಲಬುರಗಿ : ಇಡಿ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದರರ್ಥ ಸಿಎಂ ಅವರು ಕುಟುಂಬಕ್ಕೆ14 ಸೈಟು ಪಡೆದುಕೊಂಡಿದ್ದಾರೆ, ಮುಡಾಗೆ ಕೋಟಿ ಕೋಟಿ ನಷ್ಟ ಆಗಿದೆ ಅಕ್ರಮವಾಗಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ, ಇದರಿಂದಲೂ ಭಾರೀ ನಷ್ಟ ಆಗಿದೆ ಅಂತ ಮಾಜಿ ಶಾಸಕ ರಾಜಕುಮಾರ ಪಾಟೀಲ್ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆರ್ ಟಿ ಐ ಕಾರ್ಯಕರ್ತ ಹಾಗು ಮೂಡ ಅಕ್ರಮದ ವಿರುದ್ದ ಹೋರಾಟ ಮಾಡುತ್ತಿರುವ ಸ್ನೇಹಮಹಿ ಕೃಷ್ಣ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು ಸ್ನೇಹಮಯಿ ಕೃಷ್ಣಾ ಅವರ ಮೇಲೆಯೇ ಸರ್ಕಾರ ಆರೋಪ ಮಾಡಿ ಅವರನ್ನು ಬಂಧಿಸಲು ಹೋಗಿತ್ತು ಇಡಿ ಮುಟ್ಟುಗೋಲು ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಿ ಸ್ಥಾನದಲ್ಲಿ ಮತ್ತೆ ನಿಲ್ಲುವಂತಾಗಿದೆ ತತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಅಂತ ಹೇಳಿದರು . ಬಿಜೆಪಿಯವ್ರು ಅನುದಾನ ವಾಪಸ್ ಕೊಡಲಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ, ರಾಜ್ಯ ಸರ್ಕಾರ ನಮಗೇನು ಉಪಕಾರ ಮಾಡ್ತಿದ್ದಾರಾ? ಅಂತ ಪ್ರಶ್ನೆ…
ಬೆಳಗಾವಿ : “ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಾನು, ಪಕ್ಷ, ಹೈಕಮಾಂಡ್ ಉಂಟು. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ” ಎಂದು ಕಿಡಿಯಾದರು. ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ, ಆಂತರಿಕ ಬೇಗುದಿ ಇಲ್ಲವೇ ಎಂದು ಕೇಳಿದಾಗ, “ಯಾವ ಬಂಡಾಯವೂ ಇಲ್ಲ. ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ. ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ” ಎಂದರು. ಯಾರದ್ದೋ ಸುಳ್ಳನ್ನು…
ನವದೆಹಲಿ: ಕಿರುತೆರೆ ಮತ್ತು ಮರಾಠಿ ಚಲನಚಿತ್ರ ನಟ ಯೋಗೇಶ್ ಮಹಾಜನ್ ಹಠಾತ್ ಹೃದಯ ಸ್ತಂಭನದಿಂದ ನಿಧನರಾದರು. ಪ್ರಸ್ತುತ ನಡೆಯುತ್ತಿರುವ ಟಿವಿ ಶೋ ಶಿವ ಶಕ್ತಿ ಟ್ಯಾಪ್ ತ್ಯಾಗ್ ತಾಂಡವ್ ನಲ್ಲಿನ ಪಾತ್ರಕ್ಕಾಗಿ ಹೆಸರುವಾಸಿಯಾದ ನಟ, ನಿಗದಿತ ಚಿತ್ರೀಕರಣಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು. ಈ ವೇಳೆಯಲ್ಲೇ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ ಉಮರ್ಗಾಂವ್ ಫ್ಲ್ಯಾಟ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮನರಂಜನಾ ಉದ್ಯಮವು ನಷ್ಟದಿಂದ ತತ್ತರಿಸುತ್ತಿದೆ. ಸಹೋದ್ಯೋಗಿಗಳು ಮತ್ತು ಅಭಿಮಾನಿಗಳು ಅವರ ಅಕಾಲಿಕ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಸಹನಟಿ ಆಕಾಂಕ್ಷಾ ರಾವತ್ ತಮ್ಮ ದುಃಖವನ್ನು ಹಂಚಿಕೊಂಡರು. ಯೋಗೇಶ್ ಅವರನ್ನು ಸದಾ ಹಾಸ್ಯ ಪ್ರಜ್ಞೆ ಹೊಂದಿರುವ ರೋಮಾಂಚಕ ವ್ಯಕ್ತಿ ಎಂದು ಬಣ್ಣಿಸಿದರು. “ನಾವು ಒಂದು ವರ್ಷಕ್ಕೂ ಹೆಚ್ಚು ಕಾಲ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಹಠಾತ್ ನಿರ್ಗಮನವನ್ನು ತಡೆದುಕೊಳ್ಳುವುದು ಕಷ್ಟಕರವಾಗಿದೆ ಎಂದು ಅವರು ಹೇಳಿದರು. ಮುಂಬೈಚೆ ಶಹಾನೆ ಮತ್ತು ಸಂಸಾರಚಿ ಮಾಯಾ ಮುಂತಾದ ಮರಾಠಿ…
ಬೆಂಗಳೂರು: ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತದಿಂದ ಪೊಲೀಸ್ ವ್ಯವಸ್ಥೆ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷ- ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಅದರ ಜೊತೆಗೇ ಬಿಜಾಪುರದಲ್ಲಿ ಹಾಡಹಗಲಲ್ಲೇ ವ್ಯಕ್ತಿಯನ್ನು ಥಳಿಸಿದ ಘಟನೆ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈಚೆಗೆ ಚಾಮರಾಜಪೇಟೆಯಲ್ಲೂ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿತ್ತು. ಅದು ರಾಜ್ಯಾದ್ಯಂತ ಮಾತ್ರವಲ್ಲದೆ, ದೇಶಾದ್ಯಂತ ಸುದ್ದಿಯಾಗಿದೆ ಎಂದು ಗಮನ ಸೆಳೆದರು. ಕಾನೂನು- ಸುವ್ಯವಸ್ಥೆ ಸರಿಯಾಗಿದೆ ಎಂಬಂತೆ ರಾಜ್ಯದ ಗೃಹ ಸಚಿವರು ಬಿಂಬಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಈ ಕಾಂಗ್ರೆಸ್ ಸರಕಾರವು ಎಲ್ಲೋ ಒಂದು ಕಡೆ ಈ ಥರ ಘಟನೆಗಳು ನಡೆದಾಗ ಮೃದು ಧೋರಣೆ ಅನುಸರಿಸುತ್ತದೆ. ದೇಶದ್ರೋಹಿಗಳು, ಹಿಂದೂ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದು, ಇವರಿಗೆ ಭಯವೇ ಇಲ್ಲವಾಗಿದೆ ಎಂದು ಟೀಕಿಸಿದರು. ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಗೃಹ ಸಚಿವರು ಎಚ್ಚತ್ತುಕೊಳ್ಳಬೇಕಿದೆ ಎಂದು ಆಗ್ರಹಿಸಿದರು. ಒಂದೆಡೆ…
ಕಲಬುರ್ಗಿ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಮತ್ತೊಂದು ಭೀಕರ ಅಪಘಾತ ಎನ್ನುವಂತೆ ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣಹೊಂದಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿಯ ಮಗದಂಪುರದ ಬಳಿಯಲ್ಲಿ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ಅವಿನಾಶ್(24) ಅಭಿಷೇಕ್(26) ಹಾಗೂ ಸಂಜೀವ್ (40) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಘಟನೆಯಲ್ಲಿ ಕಾರಿನಲ್ಲಿದ್ದಂತ ಇತೆರ ಮೂವರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕುಂಚಾವರಂ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂದಹಾಗೇ ಕಾರಿನಲ್ಲಿದ್ದವರು ಬೀದರ್ ನಿಂದ ತೆರಳುತ್ತಿದ್ದರು. ಲಾರಿ ತೆಲಂಗಾಣದಿಂದ ಚಿಂಚೋಳಿ ಕಡೆಗೆ ಸಾಗುತ್ತಿತ್ತು. ಈ ವೇಳೆಯಲ್ಲಿ ಕಲಬುರ್ಗಿಯ ಚಿಂಚೋಳಿ ಮಗದಂಪುರ ಬಳಿಯಲ್ಲಿ ಕಾರಿಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. https://kannadanewsnow.com/kannada/35-word-swearing-in-700-guests-heres-whats-special-about-donald-trumps-inauguration/ https://kannadanewsnow.com/kannada/now-melania-has-a-meme-coin-out-after-trumps-new-cryptocurrency/
ಬೆಂಗಳೂರು: ಆಚಾರ್ಯ ರಕ್ಷಾ ಕಾರ್ತಿಕ್ ಮತ್ತು ಅವರ ಶಿಷ್ಯವೃಂದವು ಅಂದು ಸಂತ ತ್ಯಾಗರಾಜ ಸ್ವಾಮಿಗೆ ತಮ್ಮ ವಿಶಿಷ್ಟ ನೃತ್ಯ ಪ್ರದರ್ಶನದ ಮೂಲಕ ಗೌರವ ಸಲ್ಲಿಸಿದರು. ಕಳೆದ ಜನವರಿ 19, 2025ರಂದು “ತ್ಯಾಗರಾಜ ಆರಾಧನೆ: ನೃತ್ಯದ ಮೂಲಕ” ಎಂಬ ಶೀರ್ಷಿಕೆಯ ಕಾರ್ಯಕ್ರಮವು ಪ್ರಸನ್ನ ಗಣಪತಿ ದೇವಸ್ಥಾನ, ಕೆ.ಎಚ್.ಬಿ ಕಾಲೋನಿ, ಕೊರಮಂಗಲದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂತ ತ್ಯಾಗರಾಜ ಸ್ವಾಮಿಗಳ ಜೀವನ, ಸಂಗೀತದ ವೈಭವ, ಮತ್ತು ಶ್ರೀರಾಮನ ಮೇಲಿನ ಅವರ ಅಚಲ ಭಕ್ತಿ ಆಧಾರಿತ ಈ ವಿಶಿಷ್ಟ ನೃತ್ಯ ಪ್ರದರ್ಶನವು ಪ್ರೇಕ್ಷಕರ ಮನಸೆಳೆದಿತು. ಆಚಾರ್ಯ ರಕ್ಷಾ ಕಾರ್ತಿಕ್ ಅವರ ನೃತ್ಯ ಮತ್ತು ಅವರ ಶಿಷ್ಯರ ಕಲಾತ್ಮಕ ಅಭಿನಯವು ತ್ಯಾಗರಾಜರ ಸಂಗೀತದ ಆಧ್ಯಾತ್ಮಿಕತೆಯನ್ನು ಪ್ರಬಲವಾಗಿ ಹಿರಿದಾಣ ನೀಡಿತು. ಈ ಪ್ರಸ್ತುತಿ ಪ್ರೇಕ್ಷಕರಿಂದ ಅತ್ಯಂತ ಮೆಚ್ಚುಗೆಗೆ ಪಾತ್ರವಾಯಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ತಮ್ಮ ಸಾನ್ನಿಧ್ಯದಿಂದ ಕಾರ್ಯಕ್ರಮಕ್ಕೆ ಹೆಚ್ಚು ಕಳೆ ಬಂದಿತು. ಗೌರವ ಅತಿಥಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ…
ಅಮೇರಿಕಾ: ಡೊನಾಲ್ಡ್ ಟ್ರಂಪ್ ಜನವರಿ 20 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಕಾಲಮಾನ ರಾತ್ರಿ 10.30 ಕ್ಕೆ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡೊನಾಲ್ಡ್ ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆರಿಕದ 230 ವರ್ಷಗಳ ಪ್ರಜಾಪ್ರಭುತ್ವದಲ್ಲಿ ಅಧಿಕಾರಕ್ಕೆ ಬಂದು, ಮರುಚುನಾವಣೆಯಲ್ಲಿ ಸೋತು ನಂತರ ಶ್ವೇತಭವನಕ್ಕೆ ಮರಳಿದ ಎರಡನೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್. 1880 ಮತ್ತು 1890 ರ ದಶಕಗಳಲ್ಲಿ 22 ಮತ್ತು 24 ನೇ ಅಧ್ಯಕ್ಷರಾಗಿದ್ದ ಗ್ರೋವರ್ ಕ್ಲೀವ್ಲ್ಯಾಂಡ್ ಸತತ ಎರಡನೇ ಅಧ್ಯಕ್ಷೀಯ ಅವಧಿಯಾಗಿದ್ದರು. ಡೊನಾಲ್ಡ್ ಟ್ರಂಪ್ ಪದಗ್ರಹಣ ಸಮಾರಂಭದ ವಿಶೇಷತೆ ಏನು? 1. ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಯುನೈಟೆಡ್ ಸ್ಟೇಟ್ಸ್ ಕ್ಯಾಪಿಟಲ್ ರೊಟುಂಡಾದಲ್ಲಿ ನಡೆಯಲಿದೆ. 2020 ರ ಚುನಾವಣೆಯಲ್ಲಿ ಜೋ ಬೈಡನ್ ಅವರ ವಿಜಯವನ್ನು ಉರುಳಿಸಲು ಬಯಸಿದ ಗಲಭೆಕೋರರು ನಾಲ್ಕು ವರ್ಷಗಳ ಹಿಂದೆ ವಶಪಡಿಸಿಕೊಂಡ ಸ್ಥಳ ಇದು. ವಾಷಿಂಗ್ಟನ್ನ ಇಂದಿನ ಶೂನ್ಯ ತಾಪಮಾನದ ಮುನ್ಸೂಚನೆಯು…