Author: kannadanewsnow09

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (International Cricket Council -ICC) ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪವರ್‌ಪ್ಲೇ ನಿಯಮಗಳಲ್ಲಿ ಪ್ರಮುಖ ಬದಲಾವಣೆಯನ್ನು ಪರಿಚಯಿಸಿದೆ. ಸಾಂಪ್ರದಾಯಿಕವಾಗಿ, ಪವರ್‌ಪ್ಲೇ ಆರು ಓವರ್‌ಗಳನ್ನು ಒಳಗೊಂಡಿತ್ತು. ಆದರೆ ಮಳೆ ಅಥವಾ ಇತರ ಅಡಚಣೆಗಳಿಂದಾಗಿ ಓವರ್‌ಗಳನ್ನು ಕಡಿಮೆ ಮಾಡಿದ ಪಂದ್ಯಗಳಲ್ಲಿ, ಪವರ್‌ಪ್ಲೇ ಅವಧಿಯನ್ನು ಈಗ ಪ್ರಮಾಣಾನುಗುಣವಾಗಿ ಸರಿಹೊಂದಿಸಲಾಗುತ್ತದೆ. ವಿಶಿಷ್ಟವಾಗಿ, ಪವರ್‌ಪ್ಲೇ ಟಿ20 ಪಂದ್ಯದ ಒಟ್ಟು ಓವರ್‌ಗಳ ಸುಮಾರು 30% ಅನ್ನು ಒಳಗೊಂಡಿದೆ. ಐಸಿಸಿ ಟಿ20ಐಗಳಲ್ಲಿ ಪವರ್‌ಪ್ಲೇ ನಿಯಮಗಳನ್ನು ಪರಿಷ್ಕರಿಸಿದೆ ಪರಿಷ್ಕೃತ ವ್ಯವಸ್ಥೆಯಡಿಯಲ್ಲಿ, ಪಂದ್ಯವನ್ನು 19 ಓವರ್‌ಗಳಿಗೆ ಇಳಿಸಿದರೆ, ಪವರ್‌ಪ್ಲೇ 5.4 ಓವರ್‌ಗಳವರೆಗೆ ಇರುತ್ತದೆ. 15 ಓವರ್‌ಗಳ ಪಂದ್ಯಕ್ಕೆ, ಅದು 4.3 ಓವರ್‌ಗಳಾಗಿರುತ್ತದೆ ಮತ್ತು 8 ಓವರ್‌ಗಳ ಪಂದ್ಯದಲ್ಲಿ, ಪವರ್‌ಪ್ಲೇ ಪ್ರತಿ ತಂಡಕ್ಕೆ 2 ಓವರ್‌ಗಳಾಗಿರುತ್ತದೆ. ಈ ಹೊಸ ನಿಯಮಗಳು ಜುಲೈನಿಂದ ಜಾರಿಗೆ ಬರಲಿವೆ. ಈ ಹೊಂದಾಣಿಕೆ ಕ್ರಿಕೆಟ್‌ಗೆ ಸಂಪೂರ್ಣವಾಗಿ ಹೊಸದೇನಲ್ಲ. ಇದನ್ನು ಈಗಾಗಲೇ ಇಂಗ್ಲೆಂಡ್‌ನ T20 ಬ್ಲಾಸ್ಟ್‌ನಲ್ಲಿ ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಅಲ್ಲಿ ಆಟಗಾರರು ಮತ್ತು ಪಂದ್ಯದ…

Read More

ಒಡಿಶಾ: ಪುರಿ ರಥಯಾತ್ರೆಯಲ್ಲಿ ಜನದಟ್ಟಣೆಯ ನಂತ್ರ ಉಂಟಾದಂತ ಕಾಲ್ತುಳಿತದಿಂದಾಗಿ 500 ಕ್ಕೂ ಹೆಚ್ಚು ಭಕ್ತರಿಗೆ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಒಡಿಶಾದ ಪುರಿಯಲ್ಲಿ ವಾರ್ಷಿಕ ರಥಯಾತ್ರೆಯ ಸಂದರ್ಭದಲ್ಲಿ, ಭಗವಾನ್ ಬಲಭದ್ರನ ರಥವನ್ನು ಎಳೆಯಲು ಭಾರಿ ಜನಸಮೂಹ ಮುಗಿಬಿದ್ದ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿ 500 ಕ್ಕೂ ಹೆಚ್ಚು ಭಕ್ತರು ಗಾಯಗೊಂಡರು. ಶತಮಾನಗಳಷ್ಟು ಹಳೆಯದಾದ ಸಂಪ್ರದಾಯದ ಭಾಗವಾಗಿ ಎಳೆಯುವ ಮೂರು ಭವ್ಯ ರಥಗಳಲ್ಲಿ ಒಂದಾದ ತಾಳಧ್ವಜ ರಥವನ್ನು ಶಾಸ್ತ್ರೋಕ್ತವಾಗಿ ಎಳೆಯುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಕರಾವಳಿ ಯಾತ್ರಾ ಪಟ್ಟಣಕ್ಕೆ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ ಉತ್ಸವವು, ಜಗನ್ನಾಥ ದೇವಸ್ಥಾನದಿಂದ ಸುಮಾರು 2.5 ಕಿಲೋಮೀಟರ್ ದೂರದಲ್ಲಿರುವ ಗುಂಡಿಚ ದೇವಸ್ಥಾನಕ್ಕೆ ತನ್ನ ಸಹೋದರರಾದ ಬಲಭದ್ರ ಮತ್ತು ದೇವತೆ ಸುಭದ್ರಾ ಅವರೊಂದಿಗೆ ಭಗವಾನ್ ಜಗನ್ನಾಥನ ಪ್ರಯಾಣವನ್ನು ಸೂಚಿಸುತ್ತದೆ. ದೇವತೆಗಳು ಗುಂಡಿಯಂಚಿಗೆ ಕೊಂಡೊಯ್ದು, ಅಲ್ಲಿನ ದೇವಸ್ಥಾನದಲ್ಲಿ ಒಂದು ವಾರ ವಾಸಿಸುತ್ತಾರೆ ಮತ್ತು ನಂತರ ಇದೇ ರೀತಿಯ ಮೆರವಣಿಗೆಯಲ್ಲಿ ಹಿಂತಿರುಗುತ್ತಾರೆ. ತಾಳಧ್ವಜ ರಥದ ಪವಿತ್ರ ಹಗ್ಗಗಳನ್ನು…

Read More

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನವೂ ಒಂದು. ಈ ದೇವಾಲಯದ ಹುಂಡಿ ಏಣಿಕೆ ಕಾರ್ಯವನ್ನು ಗುರುವಾರ ನಡೆಸಲಾಗಿದೆ. ಈ ಭಾರೀ ಲಕ್ಷ ಲಕ್ಷ ಹುಂಡಿ ಹಣ ಸಂಗ್ರಹವಾಗಿದೆ. ಈ ಬಗ್ಗೆ ಚಂದ್ರಗುತ್ತಿ ದೇವಸ್ಥಾನದ ಆಡಳಿತಾಧಿಕಾರಿ ಜಿ.ಕೆ ಪ್ರಮೀಳಾ ಕುಮಾರಿ ಅವರು ಮಾಹಿತಿ ಹಂಚಿಕೊಂಡಿದ್ದು, ಗುರುವಾರದಂದು ಸಾಗರ ಉಪ ವಿಭಾಗಾಧಿಕಾರಿ ವಿರೇಶ್ ಕುಮಾರ್ ನೇತೃತ್ವದಲ್ಲಿ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ ರೂ.32,34,350 ಹಣ ಸಂಗ್ರಹವಾಗಿರುವುದಾಗಿ ತಿಳಿಸಿದ್ದಾರೆ. ಈ ಹಿಂದೆ ಪ್ರತಿ ವರ್ಷ ಸುಮಾರು 20 ಲಕ್ಷದಷ್ಟು ಮಾತ್ರವೇ ಹೆಚ್ಚಾಗುತ್ತಿತ್ತು. ಆದರೇ ಈ ವರ್ಷ 70 ಲಕ್ಷದಷ್ಟು ಏರಿಕೆಯಾಗಿದೆ. ಸುಮಾರು 50 ಲಕ್ಷದಷ್ಟು ಆದಾಯ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನಕ್ಕೆ ಹೆಚ್ಚುವರಿಯಾಗಿ ಹರಿದು ಬಂದಿದೆ ಎಂದರು. ಕೆನರಾ ಬ್ಯಾಂಕ್ ನಿಂದ ದೇವಸ್ಥಾನಕ್ಕೆ ಟ್ರ್ಯಾಕ್ಟರ್ ದೇಣಿಗೆಯಾಗಿ ನೀಡಲಾಗಿದೆ. 52 ಲಕ್ಷ ರೂಪಾಯಿಯಲ್ಲಿ ಸಮುದಾಯ ಭವನಕ್ಕೆ ಬಣ್ಣ, ಆಫೀಸ್ ಕಾಂಪೌಂಡ್ ನಿರ್ಮಾಣ,…

Read More

ದಾವಣಗೆರೆ: ಜಿಲ್ಲೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಕಾರಣದಿಂದಾಗಿ ವಂದೇ ಭಾರತ್ ರೈಲು ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ವಂದೇ ಭಾರತ್ ರೈಲು ಕೆಟ್ಟು ನಿಂತಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ದಾವಣಗೆರೆಯಲ್ಲೇ ರೈಲು ನಿಲುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ರೈಲಿನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿಯಿಂದ ಮುಂದಾಗಲಿದ್ದಂತ ದುರಂತವೊಂದು ತಪ್ಪಿದೆ. ಧಾರವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದಂತ ವಂದೇ ಭಾರತ್ ರೈಲು. ರೈಲಿನ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿಗೆ ಪ್ರಯಾಣಿಕರನ್ನು ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಕಳುಹಿಸಿ ಕೊಡಲಾಗಿದೆ. https://kannadanewsnow.com/kannada/platform-renovation-at-mysore-railway-station-temporary-diversion-for-passengers/ https://kannadanewsnow.com/kannada/geoblackrock-brokerage-has-received-sebi-approval-to-start-brokerage-operations/

Read More

ಮೈಸೂರು:  ಮೈಸೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸಂಖ್ಯೆ 2 ಮತ್ತು 3 ರ (ಎಫ್‌ಒಬಿ) ಮೆಟ್ಟಿಲುಗಳ ನವೀಕರಣ ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲತೆ ಹೆಚ್ಚಿಸಲು ನೈಋತ್ಯ ರೈಲ್ವೆ ಮೈಸೂರು ವಿಭಾಗವು ಮೈಸೂರು ರೈಲು ನಿಲ್ದಾಣದಲ್ಲಿ ಮೂಲಸೌಕರ್ಯಗಳ ನವೀಕರಣ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ಲಾಟ್‌ಫಾರಂ ಸಂಖ್ಯೆ 2 ಮತ್ತು 3 ರಲ್ಲಿ ಇರುವ ಫುಟ್ ಓವರ್ ಬ್ರಿಜ್ (ಎಫ್‌ಒಬಿ) ಮೆಟ್ಟಿಲುಗಳು 60 ದಿನಗಳ ಕಾಲ ನವೀಕರಣ ಮತ್ತು ದುರಸ್ತಿ ಕೆಲಸಗಳಿಗೆ ಒಳಪಡಲಿವೆ. ಹಲವು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಈ ಮೆಟ್ಟಿಲುಗಳು ಹಳೆಯದಾಗಿರುವುದರಿಂದ, ಇಂದಿನ ಸುರಕ್ಷತಾ ಮಾನದಂಡಗಳನ್ನು ಪೂರೈಸಲು ಅವುಗಳನ್ನು ಬದಲಿಸಲಾಗುವುದು. ಈ ಅವಧಿಯಲ್ಲಿ ಪ್ರಯಾಣಿಕರ ಸುಲಭ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗೆ ಲಿಫ್ಟ್ ಮತ್ತು ಅಂಡರ್‌ಪಾಸ್ ಬಳಸುವಂತೆ ವಿನಂತಿಸಲಾಗಿದೆ. ಸ್ಪಷ್ಟ ಮಾರ್ಗಸೂಚಿ ಫಲಕಗಳು, ಘೋಷಣೆಗಳು ಹಾಗೂ ನಿಲ್ದಾಣ ಸಿಬ್ಬಂದಿಯಿಂದ ಸಹಾಯ ಲಭ್ಯವಿರುತ್ತದೆ. ಈ ಅವಧಿಯಲ್ಲಿ ಉಂಟಾಗುವ ತೊಂದರೆಗಾಗಿ ನೈಋತ್ಯ ರೈಲ್ವೆ ವಿಷಾದಿಸುತ್ತದೆ ಹಾಗೂ ಪ್ರಯಾಣಿಕರ…

Read More

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆಗಳನ್ನು ನೀಡಿದರು. ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸದೇ ಇರುವುದನ್ನು ಉಲ್ಲೇಖಿಸಿ ಹೇಳಿದರು. ಬಿಡಿ ಬಿಡಿ ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆಯಾಗಿ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿರುವುದು ಸ್ಪಷ್ಟವಾಗುತ್ತಿದೆ ಎಂದು. ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥಾ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಪರಿಣಾಮ 11 ಮಂದಿ ಮೃತಪಟ್ಟರು ಎಂದು ತಿಳಿಸಿದರು. ಕಾಲ್ತುಳಿತ ಘಟನೆ ನಡೆದ…

Read More

ಮುಂಬೈ : ಭಾರತದಲ್ಲಿ ಬ್ರೋಕರೇಜ್ ಸಂಸ್ಥೆಯಾಗಿ ಕಾರ್ಯಾಚರಣೆ ಪ್ರಾರಂಭಿಸಲು ಜಿಯೋ ಬ್ಲ್ಯಾಕ್‌ರಾಕ್ ಬ್ರೋಕಿಂಗ್ ಪ್ರೈವೇಟ್ ಲಿಮಿಟೆಡ್ (ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್) ಸೆಬಿಯಿಂದ ಅನುಮೋದನೆ ಪಡೆದಿದೆ. ಅಂದಹಾಗೆ ಇದು ಜಿಯೋ ಬ್ಲ್ಯಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ (ಜಿಯೋಬ್ಲಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್)ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆ ಆಗಿದೆ. ಕೈಗೆಟುಕುವ, ಪಾರದರ್ಶಕ, ಹಾಗೂ ತಂತ್ರಜ್ಞಾನ ಚಾಲಿತ ಅನುಷ್ಠಾನ ಸಾಮರ್ಥ್ಯ ಇರುವಂಥದ್ದನ್ನು ಭಾರತೀಯ ಹೂಡಿಕೆದಾರರಿಗೆ ತರಬೇಕು ಎಂಬ ಗುರಿಯನ್ನು ಇರಿಸಿಕೊಂಡಿದೆ. ಜಿಯೋ ಬ್ಲ್ಯಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಎಂಬುದು ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ ಹಾಗೂ ಬ್ಲ್ಯಾಕ್‌ರಾಕ್ ಇಂಕ್ ಮಧ್ಯದ 50:50 ಜಂಟಿ ಉದ್ಯಮ. ಜಿಯೋ ಬ್ಲ್ಯಾಕ್‌ರಾಕ್ ಅಸೆಟ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಜಿಯೋಬ್ಲಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಕಾರ್ಯಾಚರಣೆ ಪ್ರಾರಂಭಿಸಲು ಇತ್ತೀಚೆಗೆ ಪಡೆದ ನಿಯಂತ್ರಕ ಅನುಮೋದನೆ ಜೊತೆಗೆ, ಬ್ರೋಕಿಂಗ್ ಪರವಾನಗಿಯನ್ನು ಪಡೆಯುವುದರಿಂದ ಜಿಯೋಬ್ಲಾಕ್‌ರಾಕ್ ಜಂಟಿ ಉದ್ಯಮವು ಭಾರತದಲ್ಲಿ ಸಮಗ್ರ ಹೂಡಿಕೆ ಪರಿಹಾರಗಳನ್ನು ನೀಡಲು ಸಾಧ್ಯವಾಗುತ್ತದೆ. ಜಿಯೋಬ್ಲ್ಯಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರಿನ ವಕೀಲ ಶಿವಣ್ಣಗೌಡ, ಧಾರವಾಡದ ನಿವೃತ್ತ ಪ್ರಾಂಶುಪಾಲ ಡಾ.ಸಿಎಂ ಕುಂದಗೋಳ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದಿದ್ದಾರೆ. ಇನ್ನೂ ಕಲಬುರ್ಗಿಯ ವಕೀಲ ಚಂದ್ರಪ್ಪ, ಬೆಂಗಳೂರು ದಕ್ಷಿಣ ಜಿಲ್ಲೆಯ ನಿವೃತ್ತ ಐಎಫ್ಎಸ್ ಅಧಿಕಾರಿ ಡಾ.ಜಿಎನ್ ಶ್ರೀಕಂಠಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾ ಕುಲಾಯಿ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರುಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದ್ದಾರೆ. https://kannadanewsnow.com/kannada/shock-for-the-rural-population-of-the-state-installation-of-smart-meters-mandatory-from-july-1/ https://kannadanewsnow.com/kannada/new-stadium-construction-in-bangalore-with-a-capacity-of-60000-spectators-deputy-chief-minister-d-k-shivakumar/

Read More

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ, ಪೂಜಾ ಕುಣಿತ, ಕಹಳೆ ವಾದ್ಯಗಳು ಆಕರ್ಷಿಸಿದವು. ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಹಣ್ಣುಹಂಪಲು, ಬ್ರೆಡ್, ಬಿಸ್ಕೆಟ್ ವಿತರಿಸಲಾಯಿತು. ಮಾಗಡಿ ಕೆಂಪಾಪುರದಲ್ಲಿಅಲಂಕೃತ ನಾಡಪ್ರಭು ಸಮಾಧಿ ಬಳಿ ಸಂಜೆ 165 ದೀಪಗಳನ್ನು ಬೆಳಗಿಸಲಾಯಿತು. ಇದೇ ವೇಳೆ ನೆರೆದವರು ಕೆಂಪೇಗೌಡರ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಯಂತ್ಯುತ್ಸವ ಪ್ರಯುಕ್ತ ಮಂಗಳವಾರ ಮಾಗಡಿ ಕೆಂಪಾಪುರದಲ್ಲಿ ‘ನಾಡಪ್ರಭು ಕೆಂಪೇಗೌಡ ಸಮಾಧಿ ಪರಿಸರ ಶುದ್ಧಿ ಅಭಿಯಾನ’ ಹಮ್ಮಿಕೊಳ್ಳಲಾಗಿತ್ತು. ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ…

Read More

ಬೆಂಗಳೂರು : “ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಅದೇ ರೀತಿ ಕೆಂಪೇಗೌಡರ ಸಾಧನೆಗಳು ಶಾಶ್ವತ. ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ ಆದರೆ ಬದುಕು ನಡೆಸಿದ್ದು, ಸಮಾಜಕ್ಕೆ ಸಂದೇಶ ನೀಡಿದ್ದು ವಿಶ್ವಮಾನವರಾಗಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ʼಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿಶ್ವದೆಲ್ಲೆಡೆ ಬೆಂಗಳೂರಿನ ಕೀರ್ತಿ ಹರಡಿದೆ. ಈ ನಗರದ ಅಭಿವೃದ್ಧಿಗೆ ಕೆಂಪೇಗೌಡರೇ ಸ್ಫೂರ್ತಿ ಎಂಬುದನ್ನು ನಾವು ಮರೆಯಬಾರದು. 500 ವರ್ಷಗಳ ಹಿಂದೆಯೇ ಮಾದರಿ ಆಡಳಿತಕ್ಕೆ ಅಡಿಪಾಯ ಹಾಕಿದವರು. ಎಲ್ಲಾ ಜಾತಿ, ಧರ್ಮಗಳಿಗೆ ಅವಕಾಶ ನೀಡಿ ಸಮಾಜಕ್ಕೆ ಸಂದೇಶ ನೀಡಿದವರು” ಎಂದು ತಿಳಿಸಿದರು. “ನಮ್ಮ ಸಮುದಾಯದವರಿಗೆ ಒಂದು ಸಂದೇಶ ನೀಡಲು ಬಯಸುತ್ತೇನೆ. ನಾವುಗಳು ಯಾರೂ ಸಹ ಇಂತಹದ್ದೇ ಜಾತಿಯಲ್ಲಿ ಹುಟ್ಟಬೇಕು…

Read More