Author: kannadanewsnow09

ಬೆಂಗಳೂರು: ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಅನುದಾನ ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಕೇಂದ್ರ ಜಲಶಕ್ತಿ ರಾಜ್ಯ ಸಚಿವರು ಮಾಡಿರುವ ಆರೋಪ ನಿರಾಧಾರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಿಧಿ ಬಳಕೆಯಲ್ಲಿ ವಿಫಲ ಎಂಬ ಆರೋಪ ಸಂಪೂರ್ಣವಾಗಿ ತಪ್ಪು ಎಂದಿರುವ ಸಚಿವರು 2019-20ರಿಂದ 2024-25ರ ಅವಧಿಗೆ 28,623.89 ಕೋಟಿ ರೂ. ಸೂಚಕ ಹಂಚಿಕೆಯಾಗಿದ್ದು ವಾಸ್ತವವಾಗಿ ಅಷ್ಟು ಗಾತ್ರದ ಅನುದಾನ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವುದಿಲ್ಲ, ಈ ಅವಧಿಯಲ್ಲಿ 2025ರ ಫೆಬ್ರವರಿ 10ರವರೆಗೆ ಕೇಂದ್ರ ಸರ್ಕಾರ 11,760.00 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ, ಈ ಅನುದಾನವನ್ನು ಕರ್ನಾಟಕ ರಾಜ್ಯ ಸರ್ಕಾರವು ಸಂಪೂರ್ಣವಾಗಿ (99.95%) ಬಳಸಿಕೊಂಡಿದೆ. ಆದ್ದರಿಂದ, ಕರ್ನಾಟಕ ರಾಜ್ಯವು ಜೆಜೆಎಂ ನಿಧಿಗಳನ್ನು ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂಬ ಆರೋಪವು ಸತ್ಯಕ್ಕೆ ದೂರವಾಗಿದೆ ಮತ್ತು ದಾರಿತಪ್ಪಿಸುವಂತಿದೆ ಎಂದಿರುವ ಸಚಿವರು ಕೇಂದ್ರ ಸಚಿವರು ಪೂರ್ವಗ್ರಹದಿಂದ ಮಾಡಿರುವ ಆರೋಪವನ್ನು ತೀವ್ರವಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸೂಚಿಸಿದೆ. ಈ ಕುರಿತಂತೆ ಪ್ರೌಢ ಶಿಕ್ಷಣದ ನಿರ್ದೇಶಕರು ರಾಜ್ಯದ ಎಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಅದರಲ್ಲಿ  ಮಾನ್ಯ ಆಯುಕ್ತರು ಅಬಕಾರಿ ಇಲಾಖೆಯವರು ಸರ್ಕಾರಕ್ಕೆ ಬರೆದಿರುವ ತಮ್ಮ ಪತ್ರದಲ್ಲಿ ಉಪ ಕಾರ್ಯದರ್ಶಿಗಳು, ಜುವಿನೈಲ್ ಜಹೀ ಕಮಿಟಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರು ದಿನಾಂಕ: 12.10.2023 ರಂದು ನಡೆಸಿರುವ ಸಭೆಯಲ್ಲಿ, ವುಸ್ತಾಪಿಸಿರುವ ಅಂಶಗಳಂತೆ ಎಂದಿದ್ದಾರೆ. ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ. ವ್ಯಸನ ಮುಕ್ತಗೊಳಿಸುವ ಬಗ್ಗೆ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ…

Read More

ಮುಂಬೈ : ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ ಅಂಬಾನಿ ಅವರ ನೇತೃತ್ವದಲ್ಲಿ ರಿಲಯನ್ಸ್ ಫೌಂಡೇಶನ್ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಮಾಡಿರುವ ಕ್ರೀಡಾಭಿವೃದ್ಧಿಯ ಸಾಧನೆಗಳಿಗಾಗಿ, ಇಂದು (ಫೆಬ್ರವರಿ 14) ಮುಂಬೈನಲ್ಲಿ ನಡೆದ 2025ರ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಸಮಾರಂಭದಲ್ಲಿ ಪ್ರತಿಷ್ಠಿತ ‘ಅತ್ಯುತ್ತಮ ಕಾರ್ಪೊರೇಟ್’ (ಕ್ರೀಡಾ ಪ್ರೋತ್ಸಾಹಕ್ಕಾಗಿ) ಪ್ರಶಸ್ತಿಯ ಗೌರವವನ್ನು ಪಡೆದುಕೊಂಡಿದೆ. ರಿಲಯನ್ಸ್ ಫೌಂಡೇಶನ್ ನಿಂದ ಪ್ರೋತ್ಸಾಹ ಪಡೆಯುತ್ತಿರುವ ಕ್ರೀಡಾಪಟು ಜ್ಯೋತಿ ಯರ್ರಾಜಿ ಟ್ರ್ಯಾಕ್‌ನಲ್ಲಿ ಮಾಡಿರುವ ಅದ್ಭುತ ಸಾಧನೆಗಳನ್ನು ಗುರುತಿಸಿ ವರ್ಷದ ಕ್ರೀಡಾಪಟು (ಟ್ರ್ಯಾಕ್ ಮತ್ತು ಫೀಲ್ಡ್) ಪ್ರಶಸ್ತಿಯನ್ನು ನೀಡಲಾಯಿತು. ಇದು ಕೂಡ ರಿಲಯನ್ಸ್ ಫೌಂಡೇಶನ್ ನ ಕ್ರೀಡಾ ಪ್ರೋತ್ಸಾಹದ ಕೆಲಸಕ್ಕೆ ಸಿಕ್ಕ ಮನ್ನಣೆಯಂತಿದೆ. ರಿಲಯನ್ಸ್ ಫೌಂಡೇಶನ್ ತನ್ನ ವಿವಿಧ ಕ್ರೀಡಾ ಯೋಜನೆಗಳ ಮೂಲಕ ದೇಶದ ಕ್ರೀಡಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿದೆ. ಕಳೆದ ವರ್ಷ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ‘ಕಂಟ್ರಿ ಹೌಸ್’ ಆದ ‘ಇಂಡಿಯಾ ಹೌಸ್‌’ನಂತಹ ಉಪಕ್ರಮದೊಂದಿಗೆ ರಿಲಯನ್ಸ್ ಪ್ರತಿಷ್ಠಾನವು ಭಾರತದ ಕ್ರೀಡಾ ಅಭಿಯಾನದ ಯಶಸ್ಸಿನಲ್ಲಿ ಮಹತ್ವದ…

Read More

ಕನಕಪುರ: “ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ ಇಲ್ಲಿರುವ ಕೆಲವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದೆವು. ಇದು ಕನಕಪುರ ಲೋಕಸಭಾ ಕ್ಷೇತ್ರ ಇತ್ತು. ನಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಮಾಡಿದೆವು. ಈಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲು ಮುಂದಾಗಿದ್ದು, ಇದನ್ನು ಮಾಡಬಾರದು ಎಂದು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅವರು ಏನಾದರೂ ಮಾಡಲಿ, ಈ ಜಿಲ್ಲೆಯನ್ನು…

Read More

ಬೆಂಗಳೂರು: ವೈಯಕ್ತಿಕ ಆದಾಯ ತೆರಿಗೆ ದರದ ಬದಲಾವಣೆ ಕುರಿತು ಮಧ್ಯಮ ವರ್ಗವು ಬೇಡಿಕೆ ಇಡುತ್ತ ಬಂದಿತ್ತು. 12 ಲಕ್ಷ ವಾರ್ಷಿಕ ಆದಾಯಕ್ಕೆ ತೆರಿಗೆ ಇಲ್ಲ ಎಂಬ ಪ್ರಮುಖ ನಿರ್ಧಾರವನ್ನು ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷಗಳ ಬಳಿಕ ಎನ್‍ಡಿಎ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಪಡೆದಿದೆ. ಮೊದಲ ಮತ್ತು ಎರಡನೇ ಅಧಿಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಮಾಡಿದ ಉತ್ತಮ ಕಾರ್ಯಗಳೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು. ದೇಶದ ಉತ್ತರ- ದಕ್ಷಿಣ, ಪೂರ್ವ ಪಶ್ಚಿಮದಲ್ಲಿ ಈ ಬದಲಾವಣೆಗಳನ್ನು ಜನತೆ ನೋಡಿದ್ದಾರೆ. 60-70 ವರ್ಷಗಳಲ್ಲಿ ನೋಡದಷ್ಟು ಉತ್ತಮ ಅಭಿವೃದ್ಧಿ ಕಾರ್ಯಗಳು ಕಳೆದ 10 ವರ್ಷದಲ್ಲಿ ಕಾಣುತ್ತಿವೆ ಎಂದು ಜನರು ಹೇಳುತ್ತಿದ್ದಾರೆ ಎಂದು ವಿವರಿಸಿದರು.…

Read More

ಬೆಂಗಳೂರು: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಆರು ತಿಂಗಳ ಡೆವಲಪ್ ಮೆಂಟ್ ಪ್ರೊಫೆಷನಲ್ ಸರ್ಟಿಫಿಕೇಟ್ ಕೋರ್ಸ್ ತರಬೇತಿಗೆ ಸಂವಾದ – ಬದುಕು ಕಮ್ಯೂನಿಟಿ ಕ್ಯಾಂಪಸ್ ನಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಬದುಕು ಕೋರ್ಸ್ ನ ನಿರ್ದೇಶಕರಾದಂತ ಮುರುಳಿ ಮನೋಹರ್ ಕಾಟಿ ಅವರು ಮಾಹಿತಿ ನೀಡಿದ್ದು,  ಸಾಮಾಜಿಕ ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡಲು ‌ಇಚ್ಚಿಸುವವರಿಗೆ ಸಂವಾದ- ಬದುಕು ಕ್ಯಾಂಪಸ್‌ನಲ್ಲಿ ಆರು ತಿಂಗಳಿನ ಸರ್ಟಿಫಿಕೇಟ್ ಕೋರ್ಸ್‌‌ನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. ಈ ಕೋರ್ಸ್ ಗೆ ಅರ್ಜಿ ಸಲ್ಲಿಸಲು ತಾವು ಈ ಕೆಳಗಿನ ಗೂಗಲ್ ಲಿಂಕ್‌ನ್ನು ಬಳಸಿ. https://forms.gle/4MJRBrUUQmJ9wyAA9 ನಲ್ಲಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇನ್ನೂ ಸಂವಾದ ಸಂಸ್ಥೆ ಕುರಿತು ‌ಮತ್ತು‌ ಬದುಕು ಕಾರ್ಯಕ್ರಮಗಳ ಬಗ್ಗೆ ತಿಳಿಯಲು www.samvadabaduku.org ವೆಬ್ ಸೈಟ್ ಗೆ ಭೇಟಿ ಮಾಡುವಂತೆ ತಿಳಿಸಿದ್ದಾರೆ. ಆರು ತಿಂಗಳ ಡೆವಲಪ್ ಮೆಂಟ್ ಪ್ರೊಫೆಷನಲ್ ಸರ್ಟಿಫಿಕೇಟ್ ಕೋರ್ಸ್ ತರಬೇತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5/03/2025 ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7337835677 & 9880194185 ಗೆ ಸಂಪರ್ಕಿಸುವುದು.  ಬೆಳಿಗ್ಗೆ 10 ಗಂಟೆಯಿಂದ ಸಂಜೆ 6…

Read More

ದಾವಣಗೆರೆ: ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ತಾವು ರೇಡಿಂಗ್ ಮಾಡಿ, ಚಾಲನೆ ನೀಡಲು ಹೋಗಿ ಆಯತಪ್ಪಿ ಬಿದ್ದು ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿರುವಂತ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಯಮತಿ ತಾಲ್ಲೂಕಿನ ಸೊರಗೊಂಡನ ಕೊಪ್ಪದಲ್ಲಿ ಸೇವಾಲಾಲ್ ಜಯಂತೋತ್ಸವದ ಪ್ರಯುಕ್ತ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಈ ಪಂದ್ಯಾವಳಿಗೆ ಚಾಲನೆ ನೀಡಲು ಆಹ್ವಾನಿಸಲಾಗಿತ್ತು. ಸೇವಾಲಾಲ್ ಜಯಂತೋತ್ಸವದ ಕಬ್ಬಡಿ ಪಂದ್ಯಾವಳಿ ಚಾಲನೆಗೆ ತೆರಳಿದ್ದಂತ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು ತಾವು ರೇಡಿಂಗ್ ಮಾಡಲು ಹೋಗಿದ್ದರು. ಆ ಮೂಲಕ ಚಾಲನೆ ನೀಡಲು ತೊಡಗಿದರು. ರೇಡಿಂಗ್ ಮಾಡುವಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದಂತ ಅವರ ಕಾಲಿಗೆ ಗಾಯವಾಗಿದೆ. ಅವರನ್ನು ಕೂಡಲೇ ಸ್ಥಳದಲ್ಲಿದ್ದಂತ ಕ್ರೀಡಾಪಟುಗಳು ಹಿಡಿದು ಮೇಲೆತ್ತಿದರು. ಆಯತಪ್ಪಿ ಬಿದ್ದ ಘಟನೆಯಲ್ಲಿ ರುದ್ರಪ್ಪ ಲಮಾಣಿ ಅವರ ಕಾಲಿಗೆ ಪೆಟ್ಟಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮನೆಗೆ ತೆರಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/alert-state-workers-beware-if-you-receive-fraudulent-calls-bring-them-to-the-notice-of-the-authorities-immediately/ https://kannadanewsnow.com/kannada/former-goa-mla-attacked-by-auto-driver-in-belagavi-collapses-dies/

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುವ ಭಾಗ್ಯವನ್ನು ಕಾಂಗ್ರೆಸ್‌ ನೀಡಿದೆ. ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಲಾಗಿದೆ. ಈಗ ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ, ಸಿಎಂ ಸಿದ್ದರಾಮಯ್ಯನವರ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಇವರ ಚಿಂತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೇರೆ ರಾಜ್ಯ, ದೇಶಗಳ ವಿದ್ಯಾರ್ಥಿಗಳು ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬರುತ್ತಿದ್ದಾರೆ. ಮಂಡ್ಯದ ವಿಶ್ವವಿದ್ಯಾಲಯವನ್ನು ಮುಚ್ಚಿ, ಅಮ್ಯೂಸ್‌ಮೆಂಟ್‌ ಪಾರ್ಕ್‌ ಹಾಗೂ ಜಲಕ್ರೀಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಹೆಚ್ಚು ಕನ್ನಡಿಗರು ಇರುವ ಮಂಡ್ಯದಲ್ಲೇ ಶಿಕ್ಷಣಕ್ಕೆ ಕೊಡಲಿ ಪೆಟ್ಟು ಹಾಕಲಾಗಿದೆ. ಉಪನ್ಯಾಸಕರ ನೇಮಕವಿಲ್ಲ,…

Read More

ಶಿವಮೊಗ್ಗ: ಆಲ್ಕೊಳ ವಿ.ವಿ.ಕೇಂದ್ರದಲ್ಲಿ ಬ್ಯಾಂಕ್-3ರ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 17 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.30ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಫೆಬ್ರವರಿ.17ರಂದು ವಿನೋಬನಗರ, ಮೈತ್ರಿ ಅಪಾರ್ಟ್ಮೆಂಟ್, 100 ಅಡಿರಸ್ತೆ, 60 ಅಡಿರಸ್ತೆ, ಜೈಲ್ ರಸ್ತೆ, ಶುಭಮಂಗಳ ಹಿಂಭಾಗ ಮತ್ತು ಮುಂಭಾಗ, ಪೊಲೀಸ್ ಚೌಕಿ, ಮೇಧಾರ ಕೇರಿ, ಫ್ರೀಡಂಪಾರ್ಕ್ ಎದುರು, ರಾಜೇಂದ್ರನಗರ, ರವೀಂದ್ರನಗರ,ಗಾAಧಿನಗರ, ವೆಂಕಟೇಶನಗರ, ಸವಳಂಗರಸ್ತೆ, ಆಲ್ಕೋಳ, ಮಂಗಳಾ ಮಂದಿರ ರಸ್ತೆ ಕರೆಂಟ್ ಇರೋದಿಲ್ಲ ಎಂಬುದಾಗಿ ಹೇಳಿದೆ. ಇನ್ನೂ ಮುನಿಯಪ್ಪ ಲೇಔಟ್, ಸಂಗೋಳ್ಳಿರಾಯಣ್ಣ ಲೇಔಟ್, ಆದರ್ಶನಗರ, ಸೋಮಿನಕೊಪ್ಪ, ಹೊಂಗಿರಣ ಲೇಔಟ್, ಜೆ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಇ ಬ್ಲಾಕ್, ಶಿವಸಾಯಿ ಕಾಸ್ಟಿಂಗ್, ಪ್ರೆಸ್ ಕಾಲೋನಿ, ಬೈರನಕೊಪ್ಪ, ಶಾರದಮ್ಮ ಲೇಔಟ್, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಗೆಜ್ಜೇನಹಳ್ಳಿ, ಗೆಜ್ಜೇನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ದೇವಕಾತಿಕೊಪ್ಪ ಇಂಡಸ್ಟ್ರೀಯಲ್ ಏರಿಯಾ,…

Read More

ಶಿವಮೊಗ್ಗ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರಳುವಂತ ನಿರೀಕ್ಷೆಯಲ್ಲಿರುವಂತ ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ನೈರುತ್ಯ ರೈಲ್ವೆ ಇಲಾಖೆಯಿಂದ ಶಿವಮೊಗ್ಗ ಟು ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಲು ಭಕ್ತರು ತೆರಳುತ್ತಿದ್ದಾರೆ. ಇವರ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ದಿನಾಂಕ 22-02-2025ರಂದು ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ ಎಂದಿದೆ. ವಿಶೇಷ ರೈಲು ಸಂಖ್ಯೆ 06223 ದಿನಾಂಕ 22-02-2025ರಂದು ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ ಹೊರಟು, ದಿನಾಂಕ 24-02-2025 ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ. ಇನ್ನೂ ಇದೇ 06224 ರೈಲು ದಿನಾಂಕ 25-02-2025ರಂದು ಬೆಳಿಗ್ಗೆ 5.40ಕ್ಕೆ ಪ್ರಯಾಗ್ ರಾಜ್ ನಿಂದ ಹೊರಟು, ದಿನಾಂಕ 24-02-2025ರ ಬೆಳಿಗ್ಗೆ 6.40ಕ್ಕೆ ಶಿವಮೊಗ್ಗ ತಲುಪಲಿದೆ.…

Read More