Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಪಂಪ್ಡ್ ಸ್ಟೋರೇಜ್ ಅಣುಕು ಶವಯಾತ್ರೆ ನಡೆಸುವ ಮೂಲಕ ಶನಿವಾರದಿಂದ ಪ್ರಾರಂಭಿಸಲಾಗಿದೆ. ಮಾಜಿ ಶಾಸಕ ಬಿ.ಸ್ವಾಮಿರಾವ್ ಹಸಿರು ನಿಶಾನೆ ತೋರಿಸಿ, ಯೋಜನೆ ಕೈಬಿಡುವ ಹಕ್ಕೊತ್ತಾಯದ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಸಿ ಕಚೇರಿ ಮುಂದೆ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಬಿ.ಸ್ವಾಮಿರಾವ್, ಶರಾವತಿ ಪಂಪ್ಡ್ ಸ್ಟೋರೇಜ್ ಅತ್ಯಂತ ಅವೈಜ್ಞಾನಿಕ ಪರಿಸರಕ್ಕೆ ಮಾರಕವಾದ ಯೋಜನೆಯಾಗಿದೆ. ಮಲೆನಾಡಿಗರ ಮೇಲೆ ಪದೇಪದೇ ಒಂದಿಲ್ಲೊAದು ಅವೈಜ್ಞಾನಿಕ ಯೋಜನೆ ಹೇರುವ ಕೆಲಸ ಮಾಡಲಾಗುತ್ತಿದೆ. ಶರಾವತಿ ನದಿ ನೀರಿನ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಸಾಗರ ಹೋರಾಟದ ನೆಲೆಯಾಗಿದ್ದು ಕಾಗೋಡು ಸತ್ಯಾಗ್ರಹದ ಮೂಲಕ ಗೇಣಿ ರೈತರಿಗೆ ಭೂಮಿ ದೊರಕಿಸಿ ಕೊಟ್ಟ ಹೆಗ್ಗಳಿಕೆ ಹೊಂದಿದೆ. ತಕ್ಷಣ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ನಿಲ್ಲಿಸಬೇಕು. ಕಾಗೋಡು ಚಳುವಳಿಯಲ್ಲಿ ಭಾಗವಹಿಸಿದ…
ಶಿವಮೊಗ್ಗ : ರಾಜ್ಯ ಸರ್ಕಾರ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಸಮುದಾಯದವರು ಸೌಲಭ್ಯ ಪಡೆಯಲು ಹಿಂದೇಟು ಹಾಕಬಾರದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಡಳಿ ಮೂಲಕ ಸರ್ಕಾರ ಜಾರಿಗೆ ತಂದಿರುವ ಯೋಜನೆ ಪಡೆಯಲು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಮನವಿ ಮಾಡಿದರು. ಪ್ರಮುಖವಾಗಿ ಪಿಯುಸಿಯಿಂದ ಪದವಿವರೆಗೆ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಸಾಂದೀಪಿನಿ ಶಿಷ್ಯ ವೇತನ ಯೋಜನೆಯಡಿ 15ಸಾವಿರ ರೂ. ನಿರ್ವಹಣಾ ವೆಚ್ಚ ನೀಡುತ್ತಿದ್ದು, ಅರ್ಹ ವಿಪ್ರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ಅರ್ಜಿಯ ಜೊತೆಗೆ ಆಧಾರ್ ಕಾರ್ಡ್ ಮತ್ತು ಇಡಬ್ಲೂö್ಯಎಸ್ ಸಂಖ್ಯೆಯನ್ನು ನಮೂದಿಸಬೇಕು. ಮೆಡಿಕಲ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಹ ಧನ ಸಹಾಯ ನೀಡಲಾಗುತ್ತದೆ. ವಿದ್ಯಾರ್ಥಿಗಳು ದಿನಾಂಕ 30-11-2025ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದರು. ಯೋಜನೆಯಡಿ 450 ವಿದ್ಯಾರ್ಥಿಗಳು…
ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ತಾಲೂಕಿನ ಬೆಳಧರ ಗ್ರಾಮದ ಬಳಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದಂತ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ತುಮಕೂರು ಕೂರಿನಿಂದ ಪಾವಗಡದತ್ತ ಖಾಸಗಿ ಬಸ್ ತೆರಳುತ್ತಿತ್ತು. ಕೊರಟಗೆರೆಯಿಂದ ಧರ್ಮಸ್ಥಳಕ್ಕೆ ಕಾರು ತೆರಳುತ್ತಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಭೈಚಾರಪುರ ಗ್ರಾಮದ ಶಿವಶಂಕರ್(30), ಕೊರಟಗೆರೆಯ ಶಿವಕುಮಾರ್(27) ಹಾಗೂ ಗೋವಿಂದಪ್ಪ(50) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ಗಾಯಗೊಂಡಿರುವಂತ ರೆಡ್ಡಿಹಳ್ಳಿಯ ಶಂಕರ್(28) ಎಂಬಾತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಿತ್ತಿನಾಗೇನಹಳ್ಳಿಯ ವೇಣುಗೋಪಾಲ್ ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ನಂತ್ರ ಸ್ಥಳದಿಂದ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು ಮಕ್ಕಳಿಗೆ ಆಧಾರ್ ಕಡ್ಡಾಯ ಬಯೋಮೆಟ್ರಿಕ್ ನವೀಕರಣಕ್ಕಾಗಿ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ. ಶುಲ್ಕ ವಿನಾಯಿತಿ ಈಗಾಗಲೇ ಅಕ್ಟೋಬರ್ 1 ರಿಂದ ಜಾರಿಗೆ ಬರುತ್ತಿದ್ದು, ಒಂದು ವರ್ಷದ ಅವಧಿಗೆ ಜಾರಿಯಲ್ಲಿರುತ್ತದೆ. ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಐದು ವರ್ಷ ವಯಸ್ಸಿನ ನಂತರ ಮಕ್ಕಳ ಬೆರಳಚ್ಚುಗಳು, ಐರಿಸ್ ಮತ್ತು ಫೋಟೋವನ್ನು ಕಡ್ಡಾಯವಾಗಿ ಆಧಾರ್ನಲ್ಲಿ ನವೀಕರಿಸಬೇಕಾಗುತ್ತದೆ ಮತ್ತು ಎರಡನೇ ನವೀಕರಣವನ್ನು 15-17 ವರ್ಷ ವಯಸ್ಸಿನ ನಡುವೆ ಮಾಡಬೇಕಾಗುತ್ತದೆ. ಈ ನವೀಕರಣಗಳನ್ನು 5-7 ವರ್ಷ ವಯಸ್ಸಿನ ಮಕ್ಕಳಿಗೆ ಮತ್ತು 15-17 ವರ್ಷ ವಯಸ್ಸಿನವರಿಗೆ ಯಾವುದೇ ಶುಲ್ಕವಿಲ್ಲದೆ ಅನುಮತಿಸಲಾಗಿದೆ. ಮಗುವಿಗೆ ಐದು ವರ್ಷ ತುಂಬಿದಾಗ, ಫಿಂಗರ್ಪ್ರಿಂಟ್ಗಳು, ಐರಿಸ್ ಮತ್ತು ಹೊಸ ಛಾಯಾಚಿತ್ರವನ್ನು ಕಡ್ಡಾಯವಾಗಿ ನವೀಕರಿಸಬೇಕು – ಇದನ್ನು ಮೊದಲ ಕಡ್ಡಾಯ ಬಯೋಮೆಟ್ರಿಕ್ ನವೀಕರಣ (MBU) ಎಂದು ಕರೆಯಲಾಗುತ್ತದೆ. 15 ನೇ ವಯಸ್ಸಿನಲ್ಲಿ ಎರಡನೇ ನವೀಕರಣದ ಅಗತ್ಯವಿದೆ, ಇದನ್ನು MBU-2…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಸಂಸ್ಥೆ, ನಿಗಮ, ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವಂತ ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕೆಇಎ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಖಾಲಿ ಇರುವಂತ 18 ಹುದ್ದೆ, ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ 14 ಸೇರಿದಂತೆ 394 ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇಮಕಾತಿ ಹುದ್ದೆಗಳ ವಿವರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- 18 ಹುದ್ದೆಗಳು ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ – 14 ಹುದ್ದೆಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು – 40 ಹುದ್ದೆಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ- 63 ಹುದ್ದೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ- 19 ಹುದ್ದೆ ಕೃಷಿ ಮಾರಾಟ ಇಲಾಖೆ- 180 ಹುದ್ದೆಗಳು ತಾಂತ್ರಿಕ ಶಿಕ್ಷಣ ಇಲಾಖೆ – 50 ಹುದ್ದೆಗಳು ಶಾಲಾ ಶಿಕ್ಷಣ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದ್ದು, ಮೊದಲ ದಿನ 5 ನಗರ ಪಾಲಿಕೆಗಳಲ್ಲಿ 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾದಾರರು ನಿಮ್ಮ ಮನೆಗಳಿಗೆ ಬರುವ ವೇಳೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಹಕರಿಸಲು ಮತ್ತು ಭಾಗವಹಿಸಲು ಎಲ್ಲಾ ನಾಗರಿಕರಲ್ಲಿ ವಿನಂತಿಸಿದೆ. ನೀವು ಸಹ ಸ್ವತಃ ಆನ್ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು: ವೆಬ್ ಸೈಟ್ ಲಿಂಕ್ https://kscbcselfdeclaration.karnataka.gov.in/ 1. ಕೇಂದ್ರ ನಗರ ಪಾಲಿಕೆ : 2,822 2. ಪೂರ್ವ ನಗರ ಪಾಲಿಕೆ : 3,105 3. ಉತ್ತರ ನಗರ ಪಾಲಿಕೆ : 5,987 4. ದಕ್ಷಿಣ ನಗರ ಪಾಲಿಕೆ : 3,145 5. ಪಶ್ಚಿಮ ನಗರ ಪಾಲಿಕೆ : 7,082 ಒಟ್ಟು ಮನೆಗಳು: 22,141 https://kannadanewsnow.com/kannada/note-do-you-know-how-many-days-you-can-store-water-in-your-home/ https://kannadanewsnow.com/kannada/suicide-attempt-by-jumping-onto-namma-metro-train-tracks-in-bengaluru-train-services-resume/
ಶಿವಮೊಗ್ಗ: ಸಾಗರ ಟೌನ್ ಠಾಣೆಯ ಪಿಎಸ್ಐ ಟಿ.ಎಂ ನಾಗರಾಜು ಹಾಗೂ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮಪ್ಪ ಅವರನ್ನು ವರ್ಗಾವಣೆ ಮಾಡಿ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದಾರೆ. ಈ ಕುರಿತಂತೆ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದಂತ ಡಾ.ಬಿಆರ್ ರವಿಕಾಂತೇಗೌಡ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆಯ ಪಿಎಸ್ಐ ಆಗಿದ್ದಂತ ಟಿ.ಎಂ ನಾಗರಾಜು ಅವರನ್ನು ಹಾವೇರಿ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇನ್ನೂ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮಪ್ಪ ಅವರನ್ನು ಸ್ಥಳ ತೋರಿಸದೇ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಸಾಗರ ಟೌನ್ ಠಾಣೆ-3ಯ ಪಿಎಸ್ಐ ಅಕ್ಬರ್ ಮುಲ್ಲಾ ಅವರನ್ನು ಶಿವಮೊಗ್ಗದ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದರೇ, ಶಿವಮೊಗ್ಗ ಪಶ್ಚಿಮ ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಅವರನ್ನು ಸ್ಥಳ ತೋರಿಸದೇ ದಾವಣಗೆರೆಯ ಐಜಿ ವಲಯ…
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ಶ್ರಮ ಶಕ್ತಿ ಸಾಲ / ಸಹಾಯಧನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ / ಸಹಾಯಧನ ಯೋಜನೆ, ಸಾಂತ್ವನ ಯೋಜನೆ , ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ Foreign Education / Overseas Education Loan) ವ್ಯಾಪಾರ / ಉದ್ದಿಮೆಗಳಿಗೆ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ (ಅಂದರೆ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರಿಂದ ) ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಆಸಕ್ತರು ವೆಬ್ ಸೈಟ್ https://kmdconline.karnataka.gov.in ನಲ್ಲಿ…
ಬಳ್ಳಾರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಬೇಕಾಗಿರುವುದರಿಂದ ಅರ್ಹ ಶಿಕ್ಷಕರಿಂದ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತಾ ದಿನಾಂಕ 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ವೇಳಾಪಟ್ಟಿ: 06.11.2025 (ಗುರುವಾರ): ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನ. 25.11.2025 (ಮಂಗಳವಾರ): ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನ. 25.11.2025 (ಮಂಗಳವಾರ) ರಿಂದ 10.12.2025 (ಬುಧವಾರ) ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗಧಿಪಡಿಸಿದ ಅವಧಿ. 30.12.2025 (ಮಂಗಳವಾರ): ಅಂತಿಮ ಮತದಾರರ…
ಕೂದಲಿನ ಬೇರುಗಳು ಗಟ್ಟಿಯಾಗಿ ಉಳಿದರೆ ನಮ್ಮ ಕೂದಲಿನ ಸಾಂದ್ರತೆಯನ್ನು ಯಾರೂ ಕಡಿಮೆ ಮಾಡಲು ಸಾಧ್ಯವಿಲ್ಲ. ಅಂದರೆ, ಉಪ್ಪು ನೀರು, ಧೂಳು ಮತ್ತು ಇತರ ಸಮಸ್ಯೆಗಳು ನಿಮ್ಮ ಕೂದಲಿನ ಬೇರುಗಳನ್ನು ದುರ್ಬಲಗೊಳಿಸಬಹುದು. ಇಂದಿನ ಪರಿಸ್ಥಿತಿಯಲ್ಲಿ ನಿಮ್ಮ ಕೂದಲು ತುಂಬಾ ಉದುರಲು ಪ್ರಾರಂಭಿಸುತ್ತಿದೆಯೇ? ಅದನ್ನು ಸರಿಪಡಿಸಲು ಮನೆಯಲ್ಲಿ ಅನುಸರಿಸಬೇಕಾದ ಸೌಂದರ್ಯ ಸಲಹೆಗಳು ಯಾವುವು ಎಂಬುದನ್ನು ಈ ಪೋಸ್ಟ್ನಲ್ಲಿ ನಾನು ತಿಳಿಯಲಿದ್ದೇನೆ . ಎರಡು ವಿಧದ ಸೌಂದರ್ಯ ಸಲಹೆಗಳನ್ನು ಹೇಳಲಾಗಿದೆ, ನೀವು ಈ ಎರಡು ಸಲಹೆಗಳಲ್ಲಿ ಒಂದನ್ನು ಅನುಸರಿಸಿ ಅಥವಾ ವಾರಕ್ಕೊಮ್ಮೆ ಎರಡೂ ಸಲಹೆಗಳನ್ನು ಅನುಸರಿಸಿದರೆ, ನಿಮ್ಮ ಕೂದಲು ಕಾಡು ಕಾಡಿನಂತೆ ಬೆಳೆಯಲು ಪ್ರಾರಂಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…














