Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಸೋಮವಾರದಂದು ವಿವಿಧೆಡೆ ಪ್ರತಿಷ್ಠಾಪಿಸಿದ್ದಂತ ಗಣೇಶ ಮೂರ್ತಿಯನ್ನು ಮೆರಣಿಗೆಯ ಮೂಲಕ ಕೊಂಡೊಯ್ದು ವಿಸರ್ಜಿಸಲಾಯಿತು. ಇದೇ ವೇಳೆ ಸಾಗರದ ವಿನೋಬಾ ಯುವಕ ಸಂಘದ 62ನೇ ಗಣೇಶೋತ್ಸವ ಸಮಾರೋಪ ಸಮಾರಂಭದ ವೇಳೆ ನಗರಸಭಾ ಸದಸ್ಯ ವಿ.ಶಂಕರ್ ಅವರಿಗೆ ಸನ್ಮಾನಿಸಲಾಯಿತು. ಸಾಗರದ ವಿನೋಬಾ ಯುವಕ ಸಂಘ, ವಿನೋಬಾ ಕಲಾವಿದರು (ರಿ.) ಇವರ 62ನೇ ಗಣೇಶೋತ್ಸವದ ಸಮಾರೋಪ ಸಮಾರಂಭದಲ್ಲಿ ನಗರಸಭಾ ಸದಸ್ಯರಾದ ವಿ. ಶಂಕರ್, ಕರಾಟೆ ಪಟು ಕೀರ್ತನಾ ಎ ಗೌಡರ್, ಶಿಕ್ಷಕರಾದ ಎಂ. ಸತ್ಯ ನಾರಾಯಣ ಸೇರಿದಂತೆ, ಹಿರಿಯ ಸದಸ್ಯರಾದ ಕೃಷ್ಣ ಮೂರ್ತಿ ಎನ್ ಶೇಟ್, ಹಿರಿಯ ಸದಸ್ಯರಾದ ಜಗನ್ನಾಥ ಎನ್ ಶೇಟ್ ರವರನ್ನು ಸನ್ಮಾನಿಸಲಾಯಿತು. ನಿತ್ಯಾನಂದ ಶೆಟ್ಟಿ, ರವಿ ಉಡುಪ, ಉಮೇಶ್ ಚೌಟಗಿ, ಕೆ. ಶ್ರೀಧರ, ಗಣಪತಿ ಅಪ್ಪಾಚಾರ್, ವಿನಾಯಕ ಗುಡಿಗಾರ್, ಜನಾರ್ದನ ಆಚಾರಿ, ಎಂ. ಆರ್. ಮಹೇಶ್ ಮೊದಲಾದ ವರುಷ ಹಾಜರಿದ್ದರು. https://kannadanewsnow.com/kannada/swachhta-pakhwada-fortnightly-campaign-launched-by-mysuru-division-of-south-western-railway/ https://kannadanewsnow.com/kannada/kea-announces-revised-schedule-for-various-exams-including-psi-kset-here-is-the-new-exam-date/

Read More

ಮೈಸೂರು: ಇಂದು, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎರಡು ವಾರಗಳ ಅವಧಿಯ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಿದ್ದು, ಇದು 17ನೇ ಸೆಪ್ಟೆಂಬರ್ 2024 ರಿಂದ 1 ಅಕ್ಟೋಬರ್ 2024 ರವರೆಗೆ ನಡೆಯುತ್ತದೆ. ಈ ಬಗ್ಗೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಪಿಆರ್ ಓ ಆಗಿರುವಂತ ಗಿರೀಶ್ ಧರ್ಮರಾಜ್ ಕಲಗೊಂಡ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎರಡು ವಾರಗಳ ಅವಧಿಯ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಅವರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಆವರಣದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸುವ ಮೂಲಕ ಪ್ರಾರಂಭಿಸಿದರು. ನಂತರ ಮೈಸೂರಿನ ರೈಲ್ವೆ ಆಸ್ಪತ್ರೆಯಲ್ಲಿ ಸಸಿಗಳನ್ನು ನೆಡಲಾಯಿತು. 17ನೇ ಸೆಪ್ಟೆಂಬರ್ 2024 ರಂದು ಪ್ರಾರಂಭವಾದ ವ್ಯಾಪಕವಾದ ಸ್ವಚ್ಛತಾ ಸೇವಾ ಅಭಿಯಾನದ ಭಾಗವಾಗಿ, ಈ ಉಪಕ್ರಮವು ರೈಲ್ವೆ ನಿಲ್ದಾಣಗಳು, ರೈಲುಗಳು, ಕಛೇರಿಗಳು ಮತ್ತು ಇತರ ರೈಲ್ವೆ ಆವರಣಗಳಲ್ಲಿ ಸ್ವಚ್ಛತೆಯನ್ನು…

Read More

ಕಲಬುರ್ಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ, ಕಲಬುರಗಿಯಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರು ಹಾಗೂ ಅಧ್ಯಕ್ಷರು ಕ.ಕ.ರಾ.ಸಾ.ನಿಗಮ ರಾಮಲಿಂಗರೆಡ್ಡಿ ರವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ಎಂ.ರಾಚಪ್ಪರವರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡಿರುವ ಬೀದರ ವಿಭಾಗ-05, ವಿಜಯಪೂರ ವಿಭಾಗ-04, ಕಲಬುರಗಿ ವಿಭಾಗ-02 ಹಾಗೂ ರಾಯಚೂ ವಿಭಾಗ-03 ಒಟ್ಟು 14 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ ರೂ.10.00ಲಕ್ಷಗಳಂತೆ ಒಟ್ಟು 14 ಜನರಿಗೆ ರೂ.1.40 ಕೋಟಿಗಳ ಪರಿಹಾರ ಮೊತ್ತದ ಧನಾದೇಶಗಳನ್ನು ವಿತರಿಸಿದರು. ಸದರಿ ಧನಾದೇಶಗಳನ್ನು ವಿತರಿಸಿ ಮಾತಾನಾಡಿದ ಸನ್ಮಾನ್ಯ ಸಾರಿಗೆ ಹಾಗೂ ಮುಜಾರಾಯಿ ಸಚಿವರು ಕ.ಕ.ರ.ಸಾ.ನಿಗಮವು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂತರಿಕ ಗುಂಪು ವಿಮ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡ ಸಿಬ್ಬಂದಿಯವರ ನಾಮನಿರ್ದೇಶಿತರಿಗೆ ರೂ.10.00 ಲಕ್ಷ ಪರಿಹಾರ ವಿತರಿಸುವ ಯೋಜನೆಯನ್ನು ರೂಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಹಾಗೂ ಪರಿಹಾರ ಮೊತ್ತವನ್ನು ಮಕ್ಕಳ ಶಿಕ್ಷಣ…

Read More

ಪಶ್ಚಿಮ ಬಂಗಾಳ:  ಕೋಲ್ಕತ್ತಾದ ನೂತನ ಪೊಲೀಸ್ ಆಯುಕ್ತರಾಗಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ. ಆರ್ಜಿ ಕಾರ್ ಬಿಕ್ಕಟ್ಟನ್ನು ಪರಿಹರಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಭಟನಾನಿರತ ವೈದ್ಯರನ್ನು ಭೇಟಿಯಾದ ನಂತರ ಮತ್ತು ವೈದ್ಯರು ಮುಂದಿಟ್ಟ ಹೆಚ್ಚಿನ ಬೇಡಿಕೆಗಳಿಗೆ ಒಪ್ಪಿದ್ದರಿಂದ ಕೋಲ್ಕತಾದ ಮಾಜಿ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಮತ್ತು ಇತರ ಇಬ್ಬರನ್ನು ವಜಾಗೊಳಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಏತನ್ಮಧ್ಯೆ, ವಿನೀತ್ ಕುಮಾರ್ ಗೋಯಲ್ ಅವರನ್ನು ಪಶ್ಚಿಮ ಬಂಗಾಳದ ಎಸ್ಟಿಎಫ್ನ ಎಡಿಜಿ ಮತ್ತು ಐಜಿಪಿಯಾಗಿ ನೇಮಿಸಲಾಗಿದೆ. ಕಳೆದ ತಿಂಗಳು ಕೋಲ್ಕತಾದ ಆರ್ಜಿ ಕಾರ್ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ತರಬೇತಿ ವೈದ್ಯರಿಗೆ ನ್ಯಾಯ ಕೋರಿ ವೈದ್ಯರು ಆಗಸ್ಟ್ 10 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ವೈದ್ಯಕೀಯ ಶಿಕ್ಷಣ ನಿರ್ದೇಶಕ (ಡಿಎಂಇ) ಕೌಸ್ತವ್ ನಾಯಕ್ ಮತ್ತು ಉತ್ತರ ಕೋಲ್ಕತಾ ಜಿಲ್ಲಾಧಿಕಾರಿ ಅಭಿಷೇಕ್ ಗುಪ್ತಾ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ ದೇಬಶಿಶ್ ಹಲ್ದಾರ್ ಅವರನ್ನು ಆಯಾ ಹುದ್ದೆಗಳಿಂದ ತೆಗೆದುಹಾಕಲಾಗುವುದು…

Read More

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆಇಎಯಿಂದ ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ಪಿಎಸ್ಐ ಪರೀಕ್ಷೆ ಸೇರಿದಂತೆ ವಿವಿಧ ನೇಮಕಾತಿಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದಿದೆ. PSI ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಅಕ್ಟೋಬರ್.3, 2024ರಂದು ನಡೆಯಲಿದೆ. ವಯೋಮಿತಿ ಸಡಿಲ ಮಾಡಿರುವ ಕಾರಣ VAO ಮತ್ತು GTTC ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಹೀಗಿದೆ ಪಿಎಸ್ಐ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ( PSI Recruitment Exam ) ದಿನಾಂಕ 03-10-2024ರಂದು ಬೆಳಿಗ್ಗೆ 10.30ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 12.30ರಿಂದ 2 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಇಲ್ಲಿದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ದಿನಾಂಕ 29-09-2024ರ…

Read More

ಕಲಬುರ್ಗಿ : ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ನಾಗಮಂಗಲ, ಮಂಗಳೂರು ಸೇರಿದಂತೆ ಒಂದಷ್ಟು ಕಡೆ ಗಣಪತಿ ವಿಸರ್ಜನೆ ಗಲಾಟೆಗಳಲ್ಲಿ ಪಿಎಫ್ ಐ, ಬಾಂಗ್ಲಾ ವಲಸಿಗರ ಕೈವಾಡವಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಗಣಪತಿ ವಿಸರ್ಜನೆ ವೇಳೆ ಉಂಟಾಗಿರುವ ಗಲಭೆಗಳ ವಿರುದ್ಧ ನಮ್ಮ ಸರ್ಕಾರ ಕೂಡಲೇ ಕ್ರಮ ತೆಗೆದುಕೊಂಡಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಸರ್ಕಾರ ಮಾಡುತ್ತದೆ. ಪೊಲೀಸ್ ಇಲಾಖೆ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತದೆ. ಈ ವಿಚಾರದಲ್ಲಿ ರಾಜಕಾರಣ ಮಾತನಾಡುವವರು ಮಾತನಾಡಲಿ” ಎಂದರು. ಪರಪ್ಪನ ಅಗ್ರಹಾರದ ಮೇಲೆ ಪೊಲೀಸ್ ದಾಳಿ, ಗುತ್ತಿಗೆದಾರ ಚೆಲುವರಾಜು ಅವರಿಂದ ಶಾಸಕ ಮುನಿರತ್ನ ಅವರ ಮತ್ತೊಂದು ಆಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ “ನಾನು ಅಮೆರಿಕದಲ್ಲಿದ್ದ ಕಾರಣಕ್ಕೆ ಯಾವ ವಿಚಾರಗಳ ಬಗ್ಗೆಯೂ ಮಾಹಿತಿ ಇಲ್ಲ. ಎಲ್ಲದರ ಬಗ್ಗೆ ತಿಳಿದು ಮಾತನಾಡುತ್ತೇನೆ” ಎಂದು ಹೇಳಿದರು. ಅಮೆರಿಕ…

Read More

ಬೆಂಗಳೂರು: ಇಂದು ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಅಭಿಯೋಜಕರು ಕಾಲಾವಕಾಶ ಕೋರಿದ ಕಾರಣ ನಾಳೆಗೆ ಮುಂದೂಡಿದೆ. ಈ ಮೂಲಕ ಬಿಗ್ ಶಾಕ್ ನೀಡಲಾಗಿದೆ. ಹೀಗಾಗಿ 1 ದಿನ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ಆದಂತೆ ಆಗಿದೆ. ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 82ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯಿತು. ಮುನಿರತ್ನ ಪರವಾಗಿ ಅಶೋಕ್ ಹಾರನಹಳ್ಳಿ ಅವರು ವಾಧಿಸಿದರು. ಈ ವಾದದ ಬಳಿಕ ಸರ್ಕಾರಿ ಅಭಿಯೋಜಕರು ಕಾಲಾವಕಾಶ ಕೋರಿದ ಕಾರಣ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇನ್ನೂ ಇಂದು ಬಿಜೆಪಿ ಶಾಸಕ ಮುನಿರತ್ನ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿತ್ತು. ಆ ಅವಧಿಯನ್ನು ನಾಳೆಯವರೆಗೂ ವಿಸ್ತರಿಸಿದೆ. ಈ ಮೂಲಕ ಶಾಸಕ ಮುನಿರತ್ನ ಜೈಲುಪಾಲಾಗಿದ್ದಾರೆ. https://kannadanewsnow.com/kannada/we-dont-need-to-conspire-minister-lakshmi-hebbalkar/ https://kannadanewsnow.com/kannada/breaking-sc-stays-bulldozer-operation-across-the-country/

Read More

ಕಲಬುರಗಿ: ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಬಂಧನ ಕಾಂಗ್ರೆಸ್ ಷಡ್ಯಂತ್ರ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ, ಕರ್ನಾಟಕದ ಜೈಲುಗಳು ಸಾಕಾಗುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. ಷಡ್ಯಂತ್ರ, ಸೇಡಿನ ರಾಜಕಾರಣ ಮಾಡುವುದು, ಬಿಜೆಪಿಯವರ ಚಾಳಿ. ಮಾಜಿ ಮಂತ್ರಿಯಾದವರು ಮಹಿಳೆ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಸಾವಿರ ಜನ ಅನುಕರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಅಂತ ತಿಳಿದುಕೊಂಡು ಮಾತಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ಮಾತಾಡುವಾಗ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು ಎಂದು ಸಚಿವರು ಹೇಳಿದರು. ನಾಗಮಂಗಲ ಘಟನೆ ನಡೆಯಬಾರದಿತ್ತು ನಾಗಮಂಗಲ ಗಲಭೆಗೆ ಕೇರಳ ಲಿಂಕ್ ಇದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು,…

Read More

ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ಹಳಿಗಳ ಮೇಲೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಆದರೇ ರೈಲು 10 ಮೀಟರ್ ದೂರ ಕ್ರಮಿಸಿದರೂ, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ಬರುತ್ತಿದ್ದಂತೆ ಟ್ರ್ಯಾಕ್ ಮೇಲೆ ವ್ಯಕ್ತಿಯೊಬ್ಬ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೇ ರೈಲು 10 ಮೀಟರ್ ಕ್ರಮಿಸಿದರೂ, ವ್ಯಕ್ತಿ ಅಡಿಯಲ್ಲೇ ಬದುಕುಳಿದಿದ್ದಾನೆ. ಈ ಕುರಿತು ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಬಿಹಾರ ಮೂಲದ ಸಿದ್ಧಾರ್ಥ್ ಎಂಬ ಸುಮಾರು 30 ವರ್ಷದ ವ್ಯಕ್ತಿ ಇಂದು ಅಂದರೆ 17.09.2024 ರಂದು 14.13 ಗಂಟೆಗೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ರೈಲು ಸಮೀಪಿಸುತ್ತಿದ್ದಾಗ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ನಂತರ, ತಕ್ಷಣವೇ ತುರ್ತು ಟ್ರಿಪ್ ಸಿಸ್ಟಮ್ ಇಟಿಎಸ್ ಅನ್ನು ನಿರ್ವಹಿಸಲಾಯಿತು ಮತ್ತು ಸ್ಟೇಷನ್ ಕಂಟ್ರೋಲರ್ ಮತ್ತು ತಂಡವು ಅವನನ್ನು ರಕ್ಷಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ. ಇಡೀ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳ ಸಾಮಾನ್ಯ ಸ್ಥಿತಿಯನ್ನು…

Read More

ನವದೆಹಲಿ: ಉದ್ಯೋಗದಾತರು ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಸ್ವೀಕರಿಸುವ ಮೊದಲು ಉದ್ಯೋಗಿ ಅದನ್ನು ಹಿಂತೆಗೆದುಕೊಂಡರೆ, ರಾಜೀನಾಮೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಹೇಳಿದೆ. ರೈಲ್ವೆಗೆ ಉದ್ಯೋಗಿಯನ್ನು ಮರುಸ್ಥಾಪಿಸಲು ಅನುಮತಿ ನೀಡುವಾಗ ಉನ್ನತ ನ್ಯಾಯಾಲಯ ಈ ತೀರ್ಪನ್ನು ನೀಡಿದೆ. ಉದ್ಯೋಗಿಯ ರಾಜೀನಾಮೆ ಪತ್ರವನ್ನು ಸ್ವೀಕರಿಸುವ ಬಗ್ಗೆ ಕೇವಲ ಆಂತರಿಕ ಸಂವಹನವನ್ನು ರಾಜೀನಾಮೆ ಪತ್ರವನ್ನು ಸ್ವೀಕರಿಸುವುದು ಎಂದು ಹೇಳಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಂತಹ ಸ್ವೀಕಾರವನ್ನು ಉದ್ಯೋಗಿಗೆ ಅಧಿಕೃತವಾಗಿ ತಿಳಿಸಬೇಕು. ಅರ್ಜಿದಾರರು 1990 ರಿಂದ ಕೊಂಕಣ ರೈಲು ನಿಗಮದಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ. ಅವರು ಡಿಸೆಂಬರ್ ೨೦೧೩ ರಲ್ಲಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು, ಇದು ಒಂದು ತಿಂಗಳ ಅವಧಿ ಮುಗಿದ ನಂತರ ಜಾರಿಗೆ ಬರಲಿದೆ ಎಂದು ಪರಿಗಣಿಸಬಹುದು ಎಂದು ಹೇಳಿದರು. ರಾಜೀನಾಮೆ ಪತ್ರವನ್ನು 07.04.2014 ರಿಂದ ಅಂಗೀಕರಿಸಲಾಗಿದ್ದರೂ, ಮೇಲ್ಮನವಿದಾರರಿಗೆ ಅಂತಹ ಸ್ವೀಕಾರದ ಬಗ್ಗೆ ಯಾವುದೇ ಅಧಿಕೃತ ಸಂವಹನವಿಲ್ಲ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.…

Read More