Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ. ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ ಅವಕಾಶವನ್ನು ಮೇ ತಿಂಗಳ 10 ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು. ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ…
ಬೆಂಗಳೂರು: ದೇಶದ ವಿಚಾರದಲ್ಲೂ ಕಾಂಗ್ರೆಸ್ಸಿಗರು ಪಾಕಿಸ್ತಾನಕ್ಕೆ ಸಹಾಯ ಆಗುವಂತೆ ಮಾತನಾಡುತ್ತಾರೆ. ಯಾಕೆ ಹೀಗೆ? ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮಗೆ ನಮ್ಮ ಸೈನಿಕರ ಬಗ್ಗೆ ಹೆಮ್ಮೆ ಇದೆ. ನಾವು ಯಾವತ್ತೂ ನಮ್ಮ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿಲ್ಲ. ಸೈನಿಕರ ಕ್ರೆಡಿಟ್ ಕಿತ್ತುಕೊಳ್ಳುವ ಕೆಲಸವನ್ನು ಯಾರೂ ಮಾಡಿಲ್ಲ; ಯುದ್ಧರಂಗಕ್ಕೆ ಹೋದವರು ಸೈನಿಕರೇ ಎಂದರು. ಕಾಂಗ್ರೆಸ್ಸಿನವರು ಹಿಂದೆ ಸರ್ಜಿಕಲ್ ಸ್ಟ್ರೈಕ್ ಆದಾಗ ಸಾಕ್ಷಿ ಕೇಳಿದ್ದೀರಲ್ಲವೇ ಎಂದು ಕೇಳಿದರು. ಆಗ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿದ್ದೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮಗೆ ಆಗ ಸೈನಿಕರ ಬಗ್ಗೆ ನಂಬಿಕೆ ಎಲ್ಲಿ ಹೋಗಿತ್ತು? ಎಂದರಲ್ಲದೆ, ನಾವು ನಮ್ಮ ಸೈನಿಕರನ್ನು ನಂಬುತ್ತೇವೆ; ಅವರ ಬಗ್ಗೆ ನಮಗೆ ಹೆಮ್ಮೆಯೂ ಇದೆ ಎಂದು ನುಡಿದರು. 1962ರ ಭಾರತ- ಚೀನಾ ಯುದ್ಧವನ್ನು ಹೊರತುಪಡಿಸಿ ಇನ್ಯಾವುದೇ ಯುದ್ಧದಲ್ಲಿ ನಮ್ಮ ಸೈನಿಕರು ಯುದ್ಧಭೂಮಿಯಲ್ಲಿ ಸೋತಿಲ್ಲ ಎಂದು ವಿವರಿಸಿದರು. ಆಗ ಯುದ್ಧ ನಿಲ್ಲಿಸಿದ್ದೇಕೆ? 1948ರಲ್ಲಿ ಯುದ್ಧದ…
ಬೆಂಗಳೂರು: 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯ ವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದರು. 108 ಅಂಬ್ಯುಲೆನ್ಸ್ ಗಳ ಸೇವೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಬಹು ಮುಖ್ಯವಾದದ್ದು. ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ.. ಸರ್ಕಾರದಿಂದ ಏಜನ್ಸಿಗೆ ಹಣ ಪಾವತಿಯಾದರೂ, ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ. ಸರ್ಕಾರ ಹಲವು ಬಾರಿ ಮದ್ಯಪ್ರವೇಶಿಸಿ ಅಂಬ್ಯುಲೆನ್ಸ್ ಡ್ರೈವರ್ ಗಳ ಸಮಸ್ಯೆಯನ್ನ ಬಗೆಹರಿಸಬೇಕಾಗಿತ್ತು. ಸರ್ಕಾರವೇ ನಿರ್ವಹಣೆ ಮಾಡುವುದರಿಂದ ಇನ್ಮುಂದೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು…
ಸಾಗರ: ಪ್ರಾಣಿ ಜನನ ನಿಯಂತ್ರಣ ನಿಯಮ 2001ನ್ನು ಕಡ್ಡಾಯವಾಗಿ ಪಾಲಿಸುವಂತೆ ಒತ್ತಾಯಿಸಿ ಬುಧವಾರ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಸದಸ್ಯರು ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಅವರಿಗೆ ಮನವಿ ಸಲ್ಲಿಸಿದರು. ಭಾರತ ಸರ್ಕಾರ ಪ್ರಾಣಿ ಜನನ ನಿಯಂತ್ರಣ ನಿಯಮಗಳು 2001 (ನಾಯಿಗಳು) ಜಾರಿಗೊಳಿಸಿರುತ್ತದೆ. ಸದರಿ ನಿಯಮ ಪ್ರಕಾರ ಪ್ರಾದೇಶಿಕ ಹೊಣೆಗಾರಿಕೆಯನ್ನು ಸಾಗರ ನಗರಸಭೆ ಹೊಂದಿರುತ್ತದೆ. ಸದರಿ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ನಾಯಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ಮೂಲಕ ಸಾರ್ವನಿಕರ ನೆಮ್ಮದಿಗೆ ಮತ್ತು ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ ನಗರಸಭೆಯದ್ದೇ ಆಗಿರುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ. ಆದರೆ ಸಾಗರ ನಗರಸಭೆ ಭಾರತ ಸರ್ಕಾರ ಅನುಷ್ಟಾನಗೊಳಿಸಿರುವ ಪ್ರಾಣಿ ಜನನ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ವಿಫಲವಾಗಿರುತ್ತದೆ. ಈ ಹಿಂದೆ ಒಂದೆರಡು ಬಾರಿ ಕಾನೂನು ಜಾರಿಗೆ ಪ್ರಯತ್ನ ನಡೆಸಿದ್ದಾಗ್ಯೂ ಅದು ಯಶಸ್ವಿಯಾಗಿಲ್ಲ. ಆದ್ದರಿಂದ ತಕ್ಷಣ ನಿಯಮವನ್ನು ಜಾರಿಗೆ ತರಬೇಕು. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಬೇಕು. ಸಮಿತಿಯ ಸಲಹೆ ಸೂಚನೆ ಮೇರೆಗೆ ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.…
ನವದೆಹಲಿ: ಇಂದು ಹೂಡಿಕೆದಾರರಿಗೆ ಸಂತಸದ ಸುದ್ದಿಯನ್ನು ಶೇರು ಮಾರುಕಟ್ಟೆ ತಂದಿದೆ. ನಿಫ್ಟಿ 50 ಸೂಚ್ಯಂಕವು 0.36% ರ್ಯಾಲಿ ಅಥವಾ 88-ಪಾಯಿಂಟ್ಗಳ ಏರಿಕೆಯೊಂದಿಗೆ 24,666 ಕ್ಕೆ ಮುಕ್ತಾಯವಾಯಿತು, ಆದರೆ ಸೆನ್ಸೆಕ್ಸ್ 82,429 ಪಾಯಿಂಟ್ಗಳಲ್ಲಿ ಮುಕ್ತಾಯವಾಯಿತು, ಇದು ಹಿಂದಿನ ಮುಕ್ತಾಯಕ್ಕಿಂತ 182 ಪಾಯಿಂಟ್ಗಳು ಅಥವಾ 0.22% ಹೆಚ್ಚಾಗಿದೆ. ಆದಾಗ್ಯೂ, ವಿಶಾಲ ಮಾರುಕಟ್ಟೆಯು ಅಸ್ಥಿರ ಅವಧಿಯಲ್ಲಿ ಮುಂಚೂಣಿಯ ಸೂಚ್ಯಂಕಗಳನ್ನು ಮೀರಿಸುವಲ್ಲಿ ಯಶಸ್ವಿಯಾಯಿತು, ನಿಫ್ಟಿ ಮಿಡ್ಕ್ಯಾಪ್ 100 ಸೂಚ್ಯಂಕವು 1.13% ಮತ್ತು ನಿಫ್ಟಿ ಸ್ಮಾಲ್ಕ್ಯಾಪ್ 100 ಸೂಚ್ಯಂಕವು 1.36% ಏರಿಕೆಯಾಯಿತು. ಸೋಮವಾರ ನಾಲ್ಕು ವರ್ಷಗಳಲ್ಲಿ ತನ್ನ ಅತ್ಯುತ್ತಮ ಇಂಟ್ರಾಡೇ ಜಿಗಿತವನ್ನು ದಾಖಲಿಸಿದ ನಂತರ ಭಾರತೀಯ ಷೇರು ಮಾರುಕಟ್ಟೆ ಇನ್ನೂ ದಿಕ್ಕನ್ನು ಕಂಡುಹಿಡಿಯಲು ಹೆಣಗಾಡುತ್ತಿರುವಾಗ, ದೇಶೀಯ ರಕ್ಷಣಾ ಷೇರುಗಳು ಸತತ ಮೂರನೇ ದಿನವೂ ಆವೇಗವನ್ನು ಹೆಚ್ಚಿಸುತ್ತಿವೆ. ಯಾವುದೇ ದೌರ್ಬಲ್ಯದ ಲಕ್ಷಣಗಳನ್ನು ತೋರಿಸುತ್ತಿಲ್ಲ. ಏತನ್ಮಧ್ಯೆ, ಏಪ್ರಿಲ್ನಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು ಆರು ವರ್ಷಗಳಲ್ಲಿಯೇ ಅತ್ಯಂತ ನಿಧಾನಗತಿಗೆ ಇಳಿದಿದ್ದು, ಆಹಾರ ಬೆಲೆಗಳು ಕಡಿಮೆಯಾಗಿರುವುದರಿಂದ ಇದು ಸಂಭವಿಸಿದೆ. ಇದು ಮಾರುಕಟ್ಟೆಯ ಭರವಸೆಯನ್ನು ಹೆಚ್ಚಿಸಿದೆ. ಭಾರತೀಯ…
ಇಸ್ಲಮಾಬಾದ್: ಪಾಪಿ ಪಾಕಿಸ್ತಾನದ ಮತ್ತೊಂದು ಕರಾಳ ಮುಖ ಬಯಲಾಗಿದೆ. ಉಗ್ರ ಮಸೂದ್ ಅಜರ್ ಗೆ ಪಾಕಿಸ್ತಾನದಿಂದ 14 ಕೋಟಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ಅಜರ್ ಹತ್ಯೆ ಮಾಡಲಾಗಿತ್ತು. ಹೀಗೆ ಹತ್ಯೆಯಾದಂತ ಉಗ್ರ ಮಸೂದ್ ಅಜರ್ ಗೆ ಪಾಕಿಸ್ತಾನವು 14 ಕೋಟಿ ಪರಿಹಾರವನ್ನು ಘೋಷಿಸಿದೆ. ಅಂದಹಾಗೇ ಮಸೂದ್, ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕನಾಗಿದ್ದನು. ಭಾರತದ ದಾಳಿಯಲ್ಲಿ ಉಗ್ರ ಮಸೂದ್ ಸೇರಿದಂತೆ ಕುಟುಂಬದ 14 ಜನರು ಬಲಿಯಾಗಿದ್ದರು. ಹೀಗೆ ಹತ್ಯೆಯಾದಂತ ಉಗ್ರರ ಕುಟುಂಗಳಿಗೆ ತಲಾ 1 ಕೋಟಿ ಪರಿಹಾರವನ್ನು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಅಲ್ಲದೇ ಮಸೂದ್ ಅಜರ್ ಮನೆ ಮರು ನಿರ್ಮಾಣ ಮಾಡಲಾಗುತ್ತಿದೆ. https://kannadanewsnow.com/kannada/helicopter-service-to-the-vaishno-devi-temple-in-jammu-and-kashmir-has-been-resumed/ https://kannadanewsnow.com/kannada/breaking-from-now-on-the-108-ambulance-service-will-be-provided-by-the-government-a-significant-decision-by-the-health-department/
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಕಾರಣದಿಂದ ವೈಷ್ಣೋದೇವಿ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಪುನರಾರಂಭಿಸಲಾಗಿದೆ. ಜಮ್ಮು-ಕಾಶ್ಮೀರದ ಐತಿಹಾಸಿಕ ದೇವಾಲಯಗಳಲ್ಲಿ ವೈಷ್ಣೋದೇವಿ ದೇವಾಲಯವೂ ಒಂದಾಗಿದೆ. ಈ ದೇವಾಲಯಕ್ಕೆ ಕೆಲವರು ನಡೆದು ಸಾಗಿದರೇ ಮತ್ತೆ ಕೆಲವರು ಹೆಲಿಕಾಪ್ಟರ್ ಸೇವೆ ಬಳಸಿ ತೆರಳುತ್ತಾರೆ. ಇಂತಹ ಹೆಲಿಕಾಪ್ಟರ್ ಸೇವೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆಯ ಕಾರಣ ಸ್ಥಗಿತಗೊಳಿಸಲಾಗಿತ್ತು. ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಕಾರಣ 7 ದಿನಗಳ ಬಳಿಕ ಮತ್ತೆ ಭಕ್ತರು ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಸೇವೆಯನ್ನು ಪುನರಾರಂಭಿಸಲಾಗಿದೆ. https://kannadanewsnow.com/kannada/union-cabinet-approves-the-6th-semiconductor-unit-worth-%e2%82%b93706-crores/ https://kannadanewsnow.com/kannada/breaking-from-now-on-the-108-ambulance-service-will-be-provided-by-the-government-a-significant-decision-by-the-health-department/
ನವದೆಹಲಿ: ಉತ್ತರ ಪ್ರದೇಶದ ಜೆವಾರ್ನಲ್ಲಿ ಭಾರತದ ಆರನೇ ಸೆಮಿಕಂಡಕ್ಟರ್ ಘಟಕವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಭಾರತ ಸೆಮಿಕಂಡಕ್ಟರ್ ಮಿಷನ್ (ISM) ಅಡಿಯಲ್ಲಿ ಅನುಮೋದನೆ ಪಡೆಯುತ್ತಿರುವ ಆರನೇ ಸೆಮಿಕಂಡಕ್ಟರ್ ಘಟಕ ಇದಾಗಿದೆ. ಇಲ್ಲಿಯವರೆಗೆ, 5 ಸೆಮಿಕಂಡಕ್ಟರ್ ಘಟಕಗಳಿಗೆ ಅನುಮೋದನೆ ನೀಡಲಾಗಿದೆ. ಅಲ್ಲಿ ತ್ವರಿತ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ವರ್ಷ ಒಂದು ಘಟಕದಲ್ಲಿ ಉತ್ಪಾದನೆ ಪ್ರಾರಂಭವಾಗಲಿದೆ. ಈ ಸಂಬಂಧ, ಇನ್ನೂ ಒಂದು ಸೂಪರ್-ಅಡ್ವಾನ್ಸ್ಡ್ ಘಟಕವಿದೆ. ಇದು HCL ಮತ್ತು ಫಾಕ್ಸ್ಕಾನ್ನ ಜಂಟಿ ಉದ್ಯಮವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು. ಈ ಸ್ಥಾವರವು ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು, ಆಟೋಮೊಬೈಲ್ಗಳು, ಇತರ ಸಾಧನಗಳಿಗೆ ಡಿಸ್ಪ್ಲೇ ಡ್ರೈವರ್ ಚಿಪ್ಗಳನ್ನು ತಯಾರಿಸುತ್ತದೆ ಎಂದು ವೈಷ್ಣವ್ ಹೇಳಿದರು. https://twitter.com/ANI/status/1922587966846775373
ನವದೆಹಲಿ: ಭಾರತ ಮತ್ತು ಪಾಕ್ ಕದನ ವಿರಾಮದ ನಂತ್ರ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತೊಂದು ಬಲ ಬಂದಿದೆ. ಭಾರತವು ಸ್ವದೇಶಿ ನಿರ್ಮಿತ ಕೌಂಟರ್ ಸ್ವಾರ್ಮ್ ಡ್ರೋನ್ ವ್ಯವಸ್ಥೆಯ ಭಾರ್ಗವಸ್ತ್ರದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ‘ಭಾರ್ಗವಸ್ತ್ರ’ ಎಂಬ ಹೊಸ ಕಡಿಮೆ-ವೆಚ್ಚದ ಪ್ರತಿ-ಡ್ರೋನ್ ವ್ಯವಸ್ಥೆಯನ್ನು ಹಾರ್ಡ್ ಕಿಲ್ ಮೋಡ್ನಲ್ಲಿ ವಿನ್ಯಾಸಗೊಳಿಸಲಾಗಿದೆ, ಇದನ್ನು ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್ (SDAL) ಅಭಿವೃದ್ಧಿಪಡಿಸಿದೆ, ಇದು ಡ್ರೋನ್ ಸಮೂಹಗಳ ಹೆಚ್ಚುತ್ತಿರುವ ಬೆದರಿಕೆಯನ್ನು ನಿಭಾಯಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಗುರುತಿಸುತ್ತದೆ. ಈ ವ್ಯವಸ್ಥೆಯ ಮೈಕ್ರೋ ರಾಕೆಟ್ಗಳನ್ನು ಗೋಪಾಲ್ಪುರದ ಸೀವರ್ಡ್ ಫೈರಿಂಗ್ ರೇಂಜ್ನಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು, ಎಲ್ಲಾ ನಿರ್ದಿಷ್ಟ ಕಾರ್ಯಕ್ಷಮತೆಯ ಗುರಿಗಳನ್ನು ತಲುಪಿತು. https://twitter.com/ANI/status/1922575408811184429 ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಗೋಪಾಲ್ಪುರದಲ್ಲಿ 13 ಮೇ 2025 ರಂದು ರಾಕೆಟ್ಗಾಗಿ ಮೂರು ಪ್ರಯೋಗಗಳನ್ನು ನಡೆಸಲಾಯಿತು. ತಲಾ ಒಂದು ರಾಕೆಟ್ ಅನ್ನು ಹಾರಿಸುವ ಮೂಲಕ ಎರಡು ಪ್ರಯೋಗಗಳನ್ನು ನಡೆಸಲಾಯಿತು. 2 ಸೆಕೆಂಡುಗಳ ಒಳಗೆ ಎರಡು ರಾಕೆಟ್ಗಳನ್ನು ಸಾಲ್ವೋ ಮೋಡ್ನಲ್ಲಿ ಹಾರಿಸುವ ಮೂಲಕ ಒಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಗುತ್ತಿಗೆಯಾಧಾರದ ಮೇಲೆ ನೇಮಕಗೊಳ್ಳುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅದೇ ಈ ಹಿಂದೆ ಇದ್ದಂತ ವೇತನವನ್ನು ಪರಿಷ್ಕರಿಸಿದೆ. ಶೇ.25ರಷ್ಟು ವೇತನವನ್ನು ಹಚ್ಚಳ ಮಾಡಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ SNCU & ICU ದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಸದರಿ ಹುದ್ದೆಗಳು NHM ಯೋಜನೆಯಡಿ ಈ ಕೆಳಕಂಡಂತೆ ಮಂಜೂರಾಗಿರುತ್ತವೆ ಎಂದಿದೆ. ಸ್ಟಾಫ್ ನರ್ಸ್ – 9041 ಎಬಿಬಿಎಸ್ ವೈದ್ಯರು – 1398 ತಜ್ಞ ವೈದ್ಯರು- 899 NHM ಯೋಜನೆಯಡಿ ಎಂಬಿಬಿಎಸ್ ಹಾಗೂ ತಜ್ಞ ವೈದ್ಯರ ವೇತನ ಕಡಿಮೆಯಿರುವ ಕಾರಣ ಅನೇಕ ವೈದ್ಯರ ಹುದ್ದೆಗಳು ಖಾಲಿ ಉಳಿದಿದ್ದು ನೇಮಕಾತಿ ಪ್ರಕ್ರಿಯೆಗೆ ಕ್ರಮ ವಹಿಸಲಾಗಿದ್ದರೂ ಸಹ ವೇತನ ಕಡಿಮೆ…













