Author: kannadanewsnow09

ನಾಗ್ಬುರ: ನಾಯಕರು 75 ವರ್ಷಕ್ಕೆ ನಿವೃತ್ತಿಯಾಗಬೇಕು ಎಂಬುದಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದಂತ ಹೇಳಿಕೆ ಈಗ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಠಿಸಿದೆ. ನಾಗ್ಬುರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವಂತ ಅವರು ನಾಯಕರು 75 ವರ್ಷ ತುಂಬಿದ ಬಳಿಕ ಪಕ್ಕಕ್ಕೆ ಸರಿಯಬೇಕು. ಪಕ್ಕಕ್ಕೆ ಸರಿದು ಇತರರಿಗೂ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದಿದ್ದಾರೆ. ಇದೇ ಸೆಪ್ಟೆಂಬರ್.17ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ಹೇಳಿಕೆ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಠಿಸಿದೆ. https://kannadanewsnow.com/kannada/chitradurga-invitation-for-applications-for-the-talent-award-from-sslc-and-puc-students/ https://kannadanewsnow.com/kannada/important-state-cabinet-meeting-scheduled-for-july-17/

Read More

ಚಿತ್ರದುರ್ಗ : ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ಹಿರಿಯೂರು ತಾಲೂಕಿನ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಜೆರಾಕ್ಸ್ ಹಾಗೂ ಭಾವಚಿತ್ರದೊಂದಿಗೆ ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಅರ್ಜಿ ಭರ್ತಿ ಮಾಡಿ ಕಛೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.  ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿನಾಂಕ ಶೀಘ್ರದಲ್ಲೇ ತಿಳಿಸಲಾಗುವುದು. ಎಲ್ಲಾ ಸಮುದಾಯಗಳ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಯನ್ನು ಕಛೇರಿಯಲ್ಲಿ ಪಡೆಯಬಹುದು. ಅಂದಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶ್ರೀ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಯಾoಕ್ ನ ನಿರ್ದೇಶಕ ಮಲ್ಲಪ್ಪನಹಳ್ಳಿ…

Read More

ಬೆಂಗಳೂರು: ಜುಲೈ 7ರ ನಂತರ ಯುಜಿನೀಟ್ -2025ಕ್ಕೆ ನೋಂದಣಿ ಮತ್ತು ಆನ್ಲೈನ್ ಅರ್ಜಿ ಭರ್ತಿ ಮಾಡಿ, ಶುಲ್ಕ ಪಾವತಿಸಿರುವ (‘ಎ’ಯಿಂದ ‘ಒ’ವರೆಗೆ ಹಾಗೂ ‘ಝಡ್’ ಕ್ಲಾಸ್ ನಡಿ ಸೀಟು ಕ್ಲೇಮು ಮಾಡಿರುವವರು) ಅಭ್ಯರ್ಥಿಗಳು, ವೈದ್ಯಕೀಯ / ದಂತ ವೈದ್ಯಕೀಯ / ಆರ್ಯುವೇದ / ಹೋಮಿಯೋಪತಿ /ಯುನಾನಿ ಕೋರ್ಸುಗಳ ಪ್ರವೇಶಾತಿಗಾಗಿ ಎಲ್ಲಾ ಅಗತ್ಯ ಮೂಲ ದಾಖಲೆಗಳ ಪರಿಶೀಲನೆಗೆ ಕೆಇಎ, ಬೆಂಗಳೂರು ಇಲ್ಲಿಗೆ ಜುಲೈ 17ರಿಂದ 19ರೊಳಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ವಿಶೇಷ ಪ್ರವರ್ಗಗಳಡಿ ಕ್ಲೇಮು ಮಾಡಿರುವವರು, ವಿಶೇಷ ಚೇತನ ಅಭ್ಯರ್ಥಿಗಳು, ‘ಎ’ಯಿಂದ ‘ಒ’ ಹಾಗೂ ‘ಝಡ್’ ಕ್ಲಾಸಿನಡಿ ಕ್ಲೇಮು ಮಾಡಿರುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಕುರಿತಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಆ ಪ್ರಕಾರ ಹಾಜರಾಗಬೇಕು, ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಯುಜಿಸಿಇಟಿ ಸಂದರ್ಭದಲ್ಲಿಯೇ ನೀಡಲಾಗಿದೆ. ಅಭ್ಯರ್ಥಿಗಳು ಓದಿಕೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಕನ್ನಡ ಭಾಷಾ ಪರೀಕ್ಷೆ ಹೊಸದಾಗಿ…

Read More

ಬೆಂಗಳೂರು: ಸರ್ವರ್ ನಲ್ಲಿ ಕಾಣಿಸಿಕೊಂಡಿದ್ದ ಸಮಸ್ಯೆಯು ಸಹಜ ಸ್ಥಿತಿಗೆ ಮರಳುತ್ತಿದ್ದರೂ ಯುಜಿಸಿಇಟಿ-25 ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಪ್ಷನ್ ಎಂಟ್ರಿ ದಿನಾಂಕವನ್ನು ಜುಲೈ 15ರಿಂದ ಜುಲೈ 18ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ವರ್ ಸಮಸ್ಯೆ ಕಾರಣಕ್ಕೆ ಲಾಗಿನ್ ಆಗಿ ಆಪ್ಷನ್ಸ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿದ್ದುದನ್ನು ಪರಿಗಣಿಸಿ ಈ ವಿಸ್ತರಣೆ ಮಾಡಲಾಗಿದೆ. ಎಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ. ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಈ ಪ್ರಕ್ರಿಯೆ ಪೂರೈಸಲು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಅಭ್ಯರ್ಥಿಗಳು ಕಾಲೇಜುಗಳು ಮತ್ತು ಕೋರ್ಸುಗಳ ಪಟ್ಟಿಯನ್ನು ಆದ್ಯತೆಯ ಕ್ರಮದಲ್ಲಿ (ಕಾಲೇಜ್ ಕೋಡ್ ಮತ್ತು ಕೋರ್ಸ್ ಕೋಡ್) ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ದಪಡಿಸಿಕೊಂಡು ನಂತರ ಪೋರ್ಟಲ್ ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು. ಹೀಗೆ ಮಾಡುವುದರಿಂದ ಒಮ್ಮೆಗೇ ಅಧಿಕ ಸಂಖ್ಯೆಯ ಅಭ್ಯರ್ಥಿಗಳು…

Read More

ಶಿವಮೊಗ್ಗ : ಸಾಗರ-ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅಪ್ರಬುದ್ದರಾಗಿ ಮಾತನಾಡುವುದನ್ನು ಬಿಡಬೇಕು. ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬವಾಗಲೂ ನಾನಾಗಲೀ, ಸಂಸದ ಬಿ.ವೈ.ರಾಘವೇಂದ್ರ ಆಗಲಿ ಕಾರಣವಲ್ಲ. ಆ ಯೋಜನೆ ರೂಪಿಸುವಾಗ ನೀರಿನ ಆಳ ಅಂದಾಜಿಸದೆ ಹೋಗಿರುವುದೇ ಕಾಮಗಾರಿ ವಿಳಂಬವಾಗಲು ಕಾರಣ ಎಂಬುದಾಗಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸ್ಪಷ್ಟ ಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು ಹಸಿರುಮಕ್ಕಿ ಸೇತುವೆ ವೀಕ್ಷಣೆಗೆ ಹೋದಾಗ ಅನಗತ್ಯ ಪ್ರಲಾಪ ಮಾಡಿ ವಿಳಂಬಕ್ಕೆ ನಾವೇ ಕಾರಣ ಎಂದು ಹೇಳಿರುವುದು ಅವಿವೇಕನತಕ್ಕೆ ಸಾಕ್ಷಿಯಾಗಿದೆ ಎಂದರು. 2018ರಲ್ಲಿ ಕಾಗೋಡು ತಿಮ್ಮಪ್ಪ ಅವರು ಹಸಿರುಮಕ್ಕಿ ಸೇತುವೆಗೆ 115 ಕೋಟಿ ಬಿಡುಗಡೆ ಮಾಡಿಸಿದ್ದರು. ಯೋಜನೆ ರೂಪಿಸುವಾಗ 22 ಅಡಿ ನೀರು ನಿಲ್ಲುತ್ತದೆ ಎಂದು ತೋರಿಸಲಾಗಿತ್ತು. ಆದರೆ ಹಸಿರುಮಕ್ಕಿಯಲ್ಲಿ 62ರಿಂದ 72 ಅಡಿ ನೀರು ನಿಲ್ಲುತ್ತದೆ. ಕೆ.ಆರ್.ಐ.ಡಿ.ಎಲ್. ಯೋಜನೆ ಉಸ್ತುವಾರಿ…

Read More

ಶಿವಮೊಗ್ಗ : ಗ್ರಾಮ ಪಂಚಾಯ್ತಿ ಒಂದು ಮಿನಿ ವಿಧಾನಸೌಧವಿದ್ದಂತೆ. ವಿಧಾನಸೌಧದಲ್ಲಿ ಏನೆಲ್ಲಾ ನಿರ್ಧಾರ ಆಗುತ್ತೋ ಗ್ರಾಮ ಪಂಚಾಯ್ತಿಗಳಲ್ಲೂ ಹಾಗೆಯೇ ಆಗುತ್ತವೆ.  ಗ್ರಾಮ ಪಂಚಾಯ್ತಿ ಅಭಿವೃದ್ದಿಯಾದರೆ, ದೇಶ ಅಭಿವೃದ್ದಿಯಾದಂತೆಯೇ ಸರಿ. ಪಂಚಾಯ್ತಿ ಸದಸ್ಯರು ಒಟ್ಟಾಗಿ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪಡವಗೋಡು ಗ್ರಾಮದಲ್ಲಿ ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಶೆಡ್ ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅನುದಾನದಲ್ಲಿ ನವೀಕೃತ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದಂತ ಅವರು, ಗ್ರಾಮಸ್ಥರು ಗ್ರಾಮಸಭೆಗೆ ಹಾಜರಾಗಿ ಸರ್ಕಾರದಿಂದ ಬಂದ ಅನುದಾನದ ಮಾಹಿತಿಯನ್ನು ಪಡೆಯುತ್ತಿರುಬೇಕು. ಗ್ರಾಮ ಸಭೆಗೆ ಹಾಜರಾಗದೆ ತಮಗೆ ಸೌಲಭ್ಯವೆ ಸಿಗುತ್ತಿಲ್ಲ ಎಂದು ನನ್ನ ಬಳಿ ದೂರು ತೆಗೆದುಕೊಂಡು ಬರಬೇಡಿ ಎಂದು ತಿಳಿಸಿದರು. ಗ್ರಾಮ ಸಭೆಗಳಿಗೆ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಹಾಜರಾಗಬೇಕು. ಸರ್ಕಾರದ ಅನುದಾನ ತಳಮಟ್ಟದಿಂದ ಸದ್ವಿನಿಯೋಗವಾಗಬೇಕಾದರೆ ಗ್ರಾಮ ಪಂಚಾಯ್ತಿಗಳು ಸಶಕ್ತವಾಗಬೇಕು. ರಾಜ್ಯ ಸರ್ಕಾರ ಮಹಿಳಾ ಗ್ರಾಮ ಸಭೆಯನ್ನು…

Read More

ಮಂಡ್ಯ : ಜುಲೈ 28 ರಂದು ಮದ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು, ಹೀಗಾಗಿ ತಾಲೂಕಿನ ಜನತೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಮಾವೇಶದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ತಾಲೂಕು ಮಟ್ಟದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ 1300 ಕೋಟಿ ರೂ ಗಳಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ. ಅದಕ್ಕಾಗಿ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಇದು ನಮ್ಮ ತಾಲೂಕಿನ ಹೆಮ್ಮೆ ಎಂದರು. ಅಷ್ಟೇ ಅಲ್ಲದೇ ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ, ಸಾರ್ವಜನಿಕ ಆಸ್ಪತ್ರೆಯ ಉನ್ನತೀಕರಣ ಕಾಮಗಾರಿ ಸೇರಿದಂತೆ ಹಲವಾರು ಇನ್ನಿತರೆ ಕಾಮಗಾರಿಗಳು ಮುಂದಿನ ದಿನಗಳಲ್ಲಿ ನಡೆಯಲಿದ್ದು, ಇಂತಹ ಅಭೂತಪೂರ್ವ ಕಾರ್ಯಕ್ರಮವು ನಮ್ಮ ತಾಲೂಕಿನಲ್ಲಿ ನಡೆಯುತ್ತಿರುವುದು ನಮ್ಮ ಹೆಮ್ಮಯೆಂದು ಮನಗಂಡು ತಾಲೂಕಿನ ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾವೇಶಕ್ಕೆ…

Read More

ನವದೆಹಲಿ: ದೆಹಲಿ-ಎನ್‌ಸಿಆರ್ ಭೂಕಂಪನಲ್ಲಿ ಎರಡು ದಿನಗಳಲ್ಲಿ ಎರಡನೇ ಭೂಕಂಪ ಸಂಭವಿಸಿದೆ. ಅದರ ಹತ್ತಿರದ ನಗರಗಳಲ್ಲಿ ಮತ್ತೆ ಕಂಪನದ ಅನುಭವವಾಗಿದೆ. ಗುರುವಾರದಂದು ಹರಿಯಾಣದ ಜಜ್ಜರ್ ಬಳಿ 4.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಾದ್ಯಂತ ಕಂಪನ ಉಂಟಾಗಿದೆ. ಕೇಂದ್ರಬಿಂದು ಜಜ್ಜರ್‌ನಿಂದ ಈಶಾನ್ಯಕ್ಕೆ 3 ಕಿ.ಮೀ ಮತ್ತು ದೆಹಲಿಯಿಂದ ಪಶ್ಚಿಮಕ್ಕೆ 51 ಕಿ.ಮೀ ದೂರದಲ್ಲಿದೆ. ಬೆಳಿಗ್ಗೆ 9.04 ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/it-is-more-important-to-give-a-voice-power-to-speak-than-what-the-party-has-given-deputy-chief-minister-dk-shivakumar/ https://kannadanewsnow.com/kannada/good-news-for-state-workers-smart-cards-to-be-distributed-tomorrow/

Read More

ಕಲಬುರಗಿ: ಹಣ ನೀಡುವಂತೆ ಬೇಡಿಕೆ ಇಟ್ಟಿರುವ ಪರಿಣಾಮ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಯಾದಗಿರಿ ಡಿವೈಎಸ್ಪಿ ಹುದ್ದೆಗೆ ವರದಿ ಮಾಡಿಕೊಳ್ಳದಂತೆ ಅಡ್ಡಿಪಡಿಸಿರುವ ವಿರುದ್ಧ ಮಾಜಿ ಶಾಸಕ, ಬಿಜೆಪಿ ವಿಭಾಗೀಯ ಪ್ರಭಾರಿ ರಾಜಕುಮಾರ ಪಾಟೀಲ್ ತೇಲ್ಕೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿವೈಎಸ್ಪಿ ಹುದ್ದೆಯ ತರಬೇತಿ ಪೂರ್ಣಗೊಳಿಸಿ ಯಾದಗಿರಿಯಲ್ಲಿ ಡಿವೈಎಸ್ಪಿ ಹುದ್ದೆಯ ಕಾರ್ಯಭಾರದ ಕರ್ತವ್ಯದ ವರದಿ ಮಾಡಿಕೊಳ್ಳದಿರುವಂತೆ ಒತ್ತಡ ಹಾಕಿರುವುದನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡು ಮತ್ತೊಂದು ದುರಂತಕ್ಕೆ ಅವಕಾಶ ಮಾಡಿಕೊಡದೇ ತಕ್ಷಣವೇ ಕರ್ತವ್ಯ ಹಾಜರಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ ಮೋಹನ್ ಅವರಿಗೆ ಪತ್ರ ಬರೆದಿರುವ ತೇಲ್ಕೂರ, ಜೇವರ್ಗಿ ತಾಲೂಕಿನ ವಿಜಯಕ್ರಾಂತಿ ಪ್ರತಿಭಾನ್ವಿತೆ. ಸ್ಪರ್ಧಾತ್ಮಕಾ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ನೇರವಾಗಿ ಡಿವೈಎಸ್ಪಿಯಾಗಿದ್ದಾರೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರಿಂದ ತೆರವು ಇದ್ದ ಯಾದಗಿರಿ ಡಿವೈಎಸ್ಪಿ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಮಹಾನಿರ್ದೇಶಕರು…

Read More

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!! ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ…

Read More