Author: kannadanewsnow09

ಮಹಾರಾಷ್ಟ್ರ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಲ್ಲಿ, ಜುಲೈ 12 ರ ಶನಿವಾರದಂದು ಜಯಂತ್ ಪಾಟೀಲ್ ಅವರು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಶರದ್ಚಂದ್ರ ಪವಾರ್) ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಶಶಿಕಾಂತ್ ಶಿಂಧೆ ಹೊಸ ರಾಜ್ಯ ಅಧ್ಯಕ್ಷರಾಗಲು ಪ್ರಮುಖ ಸ್ಪರ್ಧಿಯಾಗಲಿದ್ದಾರೆ. ಜುಲೈ 15, 2025 ರಂದು ಶಿಂಧೆ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಈ ಹಿಂದೆ, ಎನ್‌ಸಿಪಿ-ಎಸ್‌ಪಿಯ ಸಂಸ್ಥಾಪನಾ ದಿನದಂದು, ಪಾಟೀಲ್ ಅವರು ಈ ಹುದ್ದೆಗೆ ರಾಜೀನಾಮೆ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಕಳೆದ ಏಳು ವರ್ಷಗಳಲ್ಲಿ ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರಿಗೆ ಹಲವು ಅವಕಾಶಗಳನ್ನು ನೀಡಿದ್ದಾರೆ ಮತ್ತು ಈಗ, ಮುಖ್ಯಸ್ಥ ಹುದ್ದೆಯಲ್ಲಿ ಹೊಸ ಮುಖಗಳಿಗೆ ಸಮಯ ಬಂದಿದೆ ಎಂದು ಅವರು ಹೇಳಿದರು. ಪವಾರ್ ಸಾಹೇಬ್ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಮತ್ತು ಹೊಸ ಮುಖವನ್ನು ಆಯ್ಕೆ ಮಾಡಲು ನಾನು…

Read More

ಬೆಂಗಳೂರು: ಜಾತ್ಯತೀತ ಜನತಾದಳ ಆತ್ಮದಂತೆ ಸೇವಾದಳ ಕೆಲಸ ಮಾಡಬೇಕು ಎಂದು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಕರೆ ನೀಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಜನತಾದಳ ಸೇವಾದಳದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ಸೇವಾದಳ ವಿಭಾಗದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬಹಳ ಶಿಸ್ತುಬದ್ಧವಾಗಿ, ಅತ್ಯಂತ ದಕ್ಷತೆ ಕ್ಷಮತೆಯಿಂದ ದೇಶವನ್ನು ರಕ್ಷಿಸುವ ಯೋಧರಂತೆ ಕೆಲಸ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೃಹತ್ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಅವರು ಕೂಡ ಸಂಘಟನೆಗಾಗಿ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಸೇವಾದಳ ವಿಭಾಗದ ಕರ್ತವ್ಯ ಮಹತ್ವದ್ದಾಗಿರುತ್ತದೆ ಎಂದು ರಮೇಶ್ ಗೌಡರು ಒತ್ತಿ ಹೇಳಿದರು. ಪಕ್ಷದ ಕಚೇರಿಯಲ್ಲಿ ನಡೆಯುವ ಸಭೆ, ಸಮಾರಂಭಗಳು ಹಾಗೂ ಬೃಹತ್ ಸಮಾವೇಶಗಳು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ನಡೆಯಬೇಕು ಎಂದರೆ ಸೇವಾದಳದ ಪತ್ರ ಹಿರಿದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸೇವಾದಳವೂ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕಾಗುತ್ತದೆ ಎಂದು…

Read More

ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಹೂವಿನಹೊಳೆ ಪ್ರತಿಷ್ಠಾನದಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೂವಿನಹೊಳೆ ಪ್ರತಿಷ್ಠಾನದ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಮಾಹಿತಿ ನೀಡಿದ್ದು, ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 95ಕ್ಕೂ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ಮಕ್ಕಳಿಗೆ ನಮ್ಮ ಸಂಘದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ರಾಜ್ಯದಲ್ಲಿ ಶೇ.95ಕ್ಕೂ ಹೆಚ್ಚು ಅಂಕವನ್ನು ಪಡೆದಂತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಹೂವಿನಹೊಳೆ ಪ್ರತಿಷ್ಠಾನದಿಂದ ಖಾಸಗಿ ದಾನಿಗಳ ನೆರವಿನಿಂದ ಹತ್ತು ಸಾವಿರದ ವರೆಗೆ ವಿದ್ಯಾರ್ಥಿ ವೇತನ ನೀಡಲು ಮುಂದೆ ಬಂದಿದೆ. ಅರ್ಜಿ ಸಲ್ಲಿಸಲು ಕಡೆದಿನ ಜುಲೈ.13, 2025 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 8088081008 ಈ ನಂಬರ್ ಗೆ ವಾಟ್ಸ್ ಅಪ್ ನಲ್ಲಿ ಅಂಕಪಟ್ಟಿ ಸಹಿತ ಅರ್ಜಿ ಸಲ್ಲಿಸುವಂತೆ ಕೋರಿದ್ದಾರೆ. ಅಂದಹಾಗೇ ಶೇ.95ಕ್ಕೂ ಹೆಚ್ಚು ಅಂಕಪಡೆದಂತ ವಿದ್ಯಾರ್ಥಿಗಳು ತಮ್ಮ ಹೆಸರು,…

Read More

ವಿಜಯನಗರ: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ತುಂಬಿದ ಕೊಡ ತುಳುಕಿತಲೇ ಪರಾಕ್ ಎಂಬುದಾಗಿ ವರ್ಷದ ಭವಿಷ್ಯವಾಣಿಯನ್ನು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ ನುಡಿಯಲಾಗಿದೆ. ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಈ ನುಡಿಯಲ್ಲಿ ಡಿ.ಕೆ ಶಿವಕುಮಾರ್ ಸಿಎಂ ಆಗುವ ಯೋಗ ಇದೆ ಎಂಬುದಾಗಿ ಶ್ರೀವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಬದಲಾವಣೆ ಗೂಡಾರ್ಥದಲ್ಲಿದೆ ಎಂಬುದಾಗಿ ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿಯನ್ನು ಮೈಲಾರಲಿಂಗೇಶ್ವರ ದೇವರ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಿಸಿದ್ದಾರೆ. 2025ರ ಪ್ರಸಕ್ತ ವರ್ಷದ ದೈವವಾಣಿ ತುಂಬಿದ ಕೊಡ ತುಳಿಕಿತಲೇ ಪರಾಕ್ ಎಂಬುದಾಗಿದೆ. ಇದರ ಅರ್ಥ ರಾಜ್ಯದಲ್ಲಿ ತುಂಬಿದ ಕೊಡಪಾನದಂತೆ ಈಗ ಸರ್ಕಾರ ಇದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದರೇ ಯಾವುದೇ ತೊಂದರೆ ಆಗಲ್ಲ. ಮನಸ್ಸು ಕದಲಿದರೇ ಸರ್ಕಾರಕ್ಕೆ ಅಪಾಯವಿದೆ ಎಂಬುದಾಗಿ ಕಾರ್ಣಿಕ ನುಡಿಯಾಗಿದೆ. ತುಂಬಿದ ಕೊಡ ಏನಾದರೂ ತುಳಿಕಿದರೇ ಸರ್ಕಾರಕ್ಕೆ ತೊಂದರೆಯಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಬದಲಾವಣೆ ಆಗೋದು…

Read More

ವಿಜಯನಗರ: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ ಎಂಬುದಾಗಿ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಈ ನುಡಿಯಲ್ಲಿ ಡಿ.ಕೆ ಶಿವಕುಮಾರ್ ಸಿಎಂ ಆಗುವ ಯೋಗ ಇದೆ ಎಂಬುದಾಗಿ ಶ್ರೀವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಬದಲಾವಣೆ ಗೂಡಾರ್ಥದಲ್ಲಿದೆ ಎಂಬುದಾಗಿ ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿಯನ್ನು ಮೈಲಾರಲಿಂಗೇಶ್ವರ ದೇವರ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಿಸಿದ್ದಾರೆ. 2025ರ ಪ್ರಸಕ್ತ ವರ್ಷದ ದೈವವಾಣಿ ತುಂಬಿದ ಕೊಡ ತುಳಿಕಿತಲೇ ಪರಾಕ್ ಎಂಬುದಾಗಿದೆ. ಇದರ ಅರ್ಥ ರಾಜ್ಯದಲ್ಲಿ ತುಂಬಿದ ಕೊಡಪಾನದಂತೆ ಈಗ ಸರ್ಕಾರ ಇದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದರೇ ಯಾವುದೇ ತೊಂದರೆ ಆಗಲ್ಲ. ಮನಸ್ಸು ಕದಲಿದರೇ ಸರ್ಕಾರಕ್ಕೆ ಅಪಾಯವಿದೆ ಎಂಬುದಾಗಿ ಕಾರ್ಣಿಕ ನುಡಿಯಾಗಿದೆ. ತುಂಬಿದ ಕೊಡ ಏನಾದರೂ ತುಳಿಕಿದರೇ ಸರ್ಕಾರಕ್ಕೆ ತೊಂದರೆಯಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವೆಂಕಪ್ಪಯ್ಯ ಒಡೆಯರ್ ತಿಳಿಸಿದ್ದಾರೆ.

Read More

ಧಾರವಾಡ : ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ಪ್ರಧಾನ ಮತ್ರಿ ಕೃಷಿ ಸಿಂಚಾಯಿ (PMKSY) ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳಡಿಸಿಕೊಳ್ಳಲು ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆಕ್ಟರ್ ವರೆಗೆ ಶೇ.90 ರಷ್ಟು ಸಹಾಯಧನ 2 ಹೆಕ್ಟರ್ ರಿಂದ 5 ಹೆಕ್ಟರ್ ವರೆಗೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು. ತೋಟಗಾರಿಕೆ ಬೆಳೆ ಬೆಳೆದಿರುವ ನೀರಿನ ಸೌಲಭ್ಯವಿರುವ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಇಮ್ತಿಯಾಜ್ ಚಂಗಾಪುರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮವಹಿಸಲಾಗಿದೆ. ಜನರು ಈ ಕೆ ಎಸ್ ಪಿ ಎನ್ನುವಂತ ಆಪ್ ಮೊಬೈಲ್ ನಲ್ಲಿ ಹಾಕಿಕೊಂಡರೇ, ನಿಮ್ಮ ಸುರಕ್ಷತೆಗೆ ಪೊಲೀಸರೇ ನಿಮ್ಮ ಜೊತೆಯಲ್ಲಿ ಇದ್ದಂತೆಯೇ ಸರಿ. ಕರ್ನಾಟಕ ಪೊಲೀಸ್ ಇಲಾಖೆಯು ಜನರ ಸುರಕ್ಷತೆಗಾಗಿ ಕೆ ಎಸ್ ಪಿ ಸೇಫ್ ಕನೆಕ್ಟ್ ಆಪ್ ಎಂಬುದನ್ನು ಬಿಡುಗಡೆ ಮಾಡಲಾಗಿದೆ. ಸೇಫ್ ಕನೆಕ್ಟ್ ಒಂದು ದ್ವಿಮುಖ ಆಡಿಯೋ, ವೀಡಿಯೋ ಕರೆಗಳನ್ನು ಒದಗಿಸುವ ಮೂಲಕ ನಾಗರೀಕರು ಮತ್ತು ಪೊಲೀಸ್ ಸಂಸ್ಥೆಗಳನ್ನು ಸಬಲೀಕರಣಗೊಳಿಸಲುವಂತ ಕೆಲಸವನ್ನು ಮಾಡುತ್ತದೆ. ಅದೇ ಮಾದರಿಯಲ್ಲೇ ಕೆ ಎಸ್ ಪಿ ಸೇಫ್ ಕನೆಕ್ಟ್ ಆಪ್ ಅನ್ನು ವಿನ್ಯಾಸಗೊಳಿಸಲಾಗಿದೆ. https://twitter.com/BlrCityPolice/status/1943607175672430866 ಈ ಅತ್ಯಾಧುನಿಕ ವ್ಯವಸ್ಥೆ ಯಾವುದೇ ಘಟನೆಯ ನೈಜ ಸಮಯದ ವೀಡಿಯೋ ಕರೆಗಳು, ಲೈವ್ ಲೊಕೇಶನ್ ಟ್ರ್ಯಾಕಿಂಗ್ ಮಾಹಿತಿಯನ್ನು ಸೇಫೆ ಸಿಟಿ ಕಮಾಂಡ್ ಸೆಂಟರ್ ಗೆ ತಲುಪಿಸಲು ನೆರವಾಗುತ್ತದೆ. ಆ ಮೂಲಕ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಪೊಲೀಸರೇ ಜೊತೆಗಿದ್ದಷ್ಟು ನೆರವಾಗುತ್ತದೆ. KSP ಆಪ್ ನಲ್ಲಿ ಸುರಕ್ಷತೆಯ ಏನೆಲ್ಲಾ ಇದೆ ಗೊತ್ತಾ? ನೀವು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜುಲೈ.17ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 17-07-2025ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 15ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಜುಲೈ.17ರಂದು ನಿಗದಿಯಾಗಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ. https://kannadanewsnow.com/kannada/verification-of-documents-for-medical-course-admission-will-begin-from-july-17/ https://kannadanewsnow.com/kannada/if-the-village-panchayat-develops-the-country-develops-mla-gopalakrishna-belur/

Read More

ಯುರೋಪಿಯನ್ ಕ್ರಿಕೆಟ್‌ಗೆ ಒಂದು ಹೆಗ್ಗುರುತು ಎನ್ನುವಂತೆ ಇಟಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಐಸಿಸಿ ಪುರುಷರ ಟಿ 20 ವಿಶ್ವಕಪ್‌ಗೆ ಅಧಿಕೃತವಾಗಿ ಅರ್ಹತೆ ಪಡೆದಿದೆ. ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ತಂಡವು ತನ್ನ ಸ್ಥಾನವನ್ನು ಪಡೆದುಕೊಂಡಿತು, ಇದು ಜಾಗತಿಕ ವೇದಿಕೆಯಲ್ಲಿ ಇಟಾಲಿಯನ್ ಕ್ರಿಕೆಟ್‌ಗೆ ಪ್ರಮುಖ ಪ್ರಗತಿಯ ಕ್ಷಣವಾಗಿದೆ. ಇಟಲಿಯ ಅರ್ಹತೆಯು ಸಾಂಪ್ರದಾಯಿಕವಲ್ಲದ ದೇಶಗಳಲ್ಲಿ ಕ್ರಿಕೆಟ್‌ನ ಬೆಳೆಯುತ್ತಿರುವ ಉಪಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಸ್ಥಿರ ಪ್ರದರ್ಶನ, ತೀಕ್ಷ್ಣವಾದ ತಂತ್ರಗಳು ಮತ್ತು ದೇಶೀಯ ಮತ್ತು ವಿದೇಶಿ ಮೂಲದ ಆಟಗಾರರ ಅತ್ಯುತ್ತಮ ಕೊಡುಗೆಗಳೊಂದಿಗೆ, ಇಟಲಿ ವಿಶ್ವದ ಅತ್ಯುತ್ತಮ ತಂಡಗಳೊಂದಿಗೆ ಸ್ಪರ್ಧಿಸಲು ಸಿದ್ಧವಾಗಿದೆ ಎಂದು ಸಾಬೀತುಪಡಿಸಿತು. 2026 ರಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಸ್ಪರ್ಧಿಸುವ 20 ತಂಡಗಳಲ್ಲಿ ಇಟಲಿ ಈಗ ಸೇರಲಿದೆ. ದಕ್ಷಿಣ ಯುರೋಪಿನಲ್ಲಿ ಹೊಸ ಪೀಳಿಗೆಯ ಕ್ರಿಕೆಟಿಗರಿಗೆ ಒಂದು ಗುರುತು ಬಿಟ್ಟು ಸ್ಫೂರ್ತಿ ನೀಡುವ ಗುರಿಯನ್ನು ಹೊಂದಿರುವುದರಿಂದ ಅವರ ಚೊಚ್ಚಲ ಪಂದ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು. ಹೊರಗಿನವರಾಗಿರುವುದರಿಂದ ಹಿಡಿದು ವಿಶ್ವದ ಅತಿದೊಡ್ಡ…

Read More

ಮೈಸೂರು: ಮೈಸೂರಿನ ಅಗ್ರಹಾರ ವಾರ್ಡಿನ ರಾಮಾನುಜ ರಸ್ತೆಯಲ್ಲಿ ನಿನ್ನೆ ರಾತ್ರಿ ಮಚ್ಚು ಲಾಂಗು ಗಳಿಂದ ಆಟೋದಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವುದು ನಿಜಕ್ಕೂ ಖಂಡನೀಯ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ರಾಮಾನುಜ ರಸ್ತೆಯಲ್ಲಿ ಇಂತಹ ಘಟನೆಗಳು ನಡೆದಿರಲಿಲ್ಲ ಇಂತಹಾ ಘಟನೆಯಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಉಂಟಾಗಿದೆ ಎಂದು ತೇಜಸ್ವಿ ಹೇಳಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಇತರ ಪುಂಡರಿಗೂ‌ ಎಚ್ಚರಿಕೆ ನೀಡಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ. https://kannadanewsnow.com/kannada/local-farmers-agree-to-provide-land-for-sharavati-pumped-storage-mla-gopalakrishna-beluru/ https://kannadanewsnow.com/kannada/leaders-should-retire-at-75-rss-chief-mohan-bhagwats-statement-that-created-a-huge-stir/

Read More