Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ : ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವಂತ ದರ ನಿಗದಿಗೆ ಒತ್ತಾಯಿಸಿದ ಪ್ರತಿಭಟನೆಗೆ ಸಾಗರದಲ್ಲೂ ಬೆಂಬಲ ವ್ಯಕ್ತವಾಗಿದೆ. ಇಂದು ಸಾಗರದಲ್ಲೂ ಕಬ್ಬು ಬೆಳೆಗಾರರ ರೈತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಹೆದ್ದಾರಿ ತಡೆ ನಡೆಸಿ ಆಗ್ರಹಿಸಲಾಯಿತು. ಇಂದು ಕಬ್ಬಿನ ದರ ನಿಗಧಿ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಿಂದ ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ ಬೆಂಬಲಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ವರದಹಳ್ಳಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬಿಗೆ ದರ ನಿಗಧಿಪಡಿಸಲು ಒತ್ತಾಯಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿರಿಸಿದೆ. ರಾಜ್ಯ ಸರ್ಕಾರ ರೈತರ ಪ್ರತಿಭಟನೆಯನ್ನು ಕೇವಲವಾಗಿ ಪರಿಗಣಿಸಿದ್ದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪ್ರತಿಭಟನೆ ಪ್ರಾರಂಭವಾಗಿ ಐದಾರು ದಿನ ಕಳೆದರೂ ಮುಖ್ಯಮಂತ್ರಿಗಳು ರೈತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಕಳೆದ…

Read More

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರತಿಭಟನೆಯ ವೇಳೆಯಲ್ಲಿ ಕಿಡಿಗೇಡುಗಳು ಕಲ್ಲು ತೂರಾಟ ನಡೆಸಿದ್ದರಿಂದಾಗಿ ಡಿವೈಎಸ್ಪಿ ಒಬ್ಬರ ಕೈ ಮುರಿತಗೊಂಡಿದ್ದರೇ, ನಾಲ್ಕು ಬಸ್ಸುಗಳ ಗಾಜು ಪುಡಿಪುಡಿಯಾಗಿದೆ. ಬೆಳಗಾವಿ ಜಿಲ್ಲೆಯ ಹುತ್ತರಗಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆಯಲ್ಲಿ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದಾಗಿ 4 ಬಸ್ ಗಳ ಗಾಜು ಪುಡಿ ಪುಡಿಯಾಗಿದೆ. ಇದಷ್ಟೇ ಅಲ್ಲವೇ ಪೊಲೀಸ್ ವಾಹನಗಳ ಮೇಲೂ ಉದ್ರಿಕ್ತ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದಾಗಿ ಡಿವೈಎಸ್ಪಿ ಸಜ್ಜನ್ ಎಂಬುವರ ಕೈ ಮುರಿತವಾಗಿರೋದಾಗಿ ಹೇಳಲಾಗುತ್ತಿದೆ. ಇನ್ನೂ ಕೆ ಎಸ್ ಆರ್ ಟಿ ಸಿ ಬಸ್ಸುಗಳ ಮೇಲೂ ಹುತ್ತರಗಿಯಲ್ಲಿ ಕಲ್ಲು ತೂರಾಟವನ್ನು ಮಾಡಲಾಗಿದೆ. ಹೀಗಾಗಿ 4 ಕೆ ಎಸ್ ಆರ್ ಟಿಸಿ ಬಸ್ಸುಗಳಿಗೆ ಹಾನಿಯಾಗಿದೆ. ಕೆ ಎಸ್ ಆರ್ ಟಿಸಿ ಬಸ್ಸಿನ ಗಾಜುಗಳು ಪುಡಿ ಪುಡಿಯಾಗಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/your-pan-card-will-be-inactive-from-january-1-2026-heres-why/ https://kannadanewsnow.com/kannada/did-the-authorities-really-give-duty-to-a-bmtc-driver-who-was-drunk-what-is-the-real-truth-read-here/

Read More

ಬೆಂಗಳೂರು: ನಗರದಲ್ಲಿ ಕುಡಿದು ಬರುತ್ತಿದ್ದಂತ ಚಾಲಕರಿಂದ ಲಂಚ ಪಡೆದು ಡ್ಯೂಟಿ ನೀಡುತ್ತಿದ್ದರು ಎನ್ನುವ ಕಾರಣಕ್ಕಾಗಿ ಬಿಎಂಟಿಸಿಯ ಅಧಿಕಾರಿಗಳು ಸೇರಿದಂತೆ 9 ಮಂದಿಯನ್ನು ಅಮಾನತುಗೊಳಿಸಲಾಗಿತ್ತು. ಆದರೇ ಈ ಅಮಾನತ್ತಿನ ಹಿಂದೆ ತನಿಖಾಧಿಕಾರಿ ಸರಿಯಾಗಿ ವರದಿ ನೀಡದೇ, ಮಹಾ ಎಡವಟ್ಟು ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂಬುದಾಗಿ ಬಿಎಂಟಿಸಿ ಬಲ್ಲ ಮೂಲಗಳಿಂದ ಕನ್ನಡ ನ್ಯೂಸ್ ನೌಗೆ ತಿಳಿದು ಬಂದ ಮಾಹಿತಿಯಾಗಿದೆ. ಹಾಗಾದ್ರೆ ವಾಸ್ತವ ಸತ್ಯ ಏನು ಅಂತ ಮುಂದೆ ಓದಿ. ಬಿಎಂಟಿಸಿ ಡಿಪೋದಲ್ಲಿ ಚಾಲಕರಿಗೆ ಡ್ಯೂಟಿಗೆ ಮುನ್ನ ಕುಡಿತ ತಪಾಸಣೆ ಬಿಎಂಟಿಸಿ ಪ್ರತಿ ಡಿಪೋಗಳಲ್ಲಿಯೂ ಡ್ಯೂಟಿಗೆ ಹಾಜರಾಗುವಂತ ಚಾಲಕರನ್ನು ಕುಡಿತದ ತಪಾಸಣೆಗೆ ಒಳಪಡಿಸಿ, ಕುಡಿದ ಪ್ರಮಾಣವನ್ನು ಪತ್ತೆ ಹಚ್ಚುವ ಪರಿಪಾಟವಿದೆ. ಒಂದು ವೇಳೆ ತಪಾಸಣೆಯ ಸಂದರ್ಭದಲ್ಲಿ ಕುಡಿದು ಬಂದಿರೋದು ಪತ್ತೆಯಾದರೇ ಅಂತವರಿಗೆ ಡ್ಯೂಟಿಯನ್ನು ನೀಡೋದಿಲ್ಲ. ಕುಡಿದು ಡ್ಯೂಟಿಗೆ ಹಾಜರಾಗೋದಕ್ಕೆ ಬಂದಂತ ಚಾಲಕರ ಕುಡಿತರ ಪ್ರಮಾಣವನ್ನು ವರದಿ ಮಾಡಿಕೊಳ್ಳುವಂತ ಡಿಪೋದಲ್ಲಿನ ಅಧಿಕಾರಿಗಳು, ಅವರಿಗೆ ದಂಡವನ್ನು ವಿಧಿಸುವ ನಿಯಮವಿದೆ. 10ಎಂಜಿ/100ಎಂಎಲ್ ಪ್ರಮಾಣದಲ್ಲಿ ಕುಡಿದಿದ್ದರೂ ಡ್ಯೂಟಿ ನೀಡಿಲ್ಲ ಈ ನಿಯಮ,…

Read More

ನವದೆಹಲಿ: ಪ್ಯಾನ್ ಕಾರ್ಡ್ ಅನ್ನು ಆಧಾರ್ ಜೊತೆ ಲಿಂಕ್ ಮಾಡಲು ಕೊನೆಯ ದಿನಾಂಕ ಸಮೀಪಿಸುತ್ತಿರುವುದರಿಂದ ಪ್ಯಾನ್ ಕಾರ್ಡ್ ಹೊಂದಿರುವವರು ವೇಗವಾಗಿ ಕಾರ್ಯನಿರ್ವಹಿಸಬೇಕು. ಡಿಸೆಂಬರ್ 31, 2025 ರೊಳಗೆ ನೀವು ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ, ಜನವರಿ 1, 2026 ರಿಂದ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಟ್ಯಾಕ್ಸ್‌ಬಡ್ಡಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಇದನ್ನು ಹೈಲೈಟ್ ಮಾಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಲ್ಲಿ, ಮರುಪಾವತಿಗಳನ್ನು ಸ್ವೀಕರಿಸುವಲ್ಲಿ ಅಥವಾ ಇತರ ಹಣಕಾಸು ವಹಿವಾಟುಗಳನ್ನು ನಡೆಸುವಲ್ಲಿ ಸಂಭಾವ್ಯ ಅಡಚಣೆಗಳ ಬಗ್ಗೆ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಪ್ಯಾನ್ ಅನ್ನು ಸಕ್ರಿಯವಾಗಿಡಲು ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಅತ್ಯಗತ್ಯ ಎಂದು ಸರ್ಕಾರ ಒತ್ತಿ ಹೇಳಿದೆ. ಹಾಗೆ ಮಾಡಲು ವಿಫಲವಾದರೆ ನಿಮ್ಮ ಸಂಬಳ ಕ್ರೆಡಿಟ್‌ಗಳು, SIP ಗಳಂತಹ ಹೂಡಿಕೆಗಳು ಮತ್ತು ಹಣಕಾಸಿನ ಅನುಸರಣೆಯ ಮೇಲೆ ಪರಿಣಾಮ ಬೀರಬಹುದು, ಇದು ಎಲ್ಲಾ ಅರ್ಹ ಬಳಕೆದಾರರು ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ಣಾಯಕವಾಗಿಸುತ್ತದೆ. ಆಧಾರ್‌ನೊಂದಿಗೆ ಪ್ಯಾನ್ ಅನ್ನು ಯಾರು ಲಿಂಕ್ ಮಾಡಬೇಕು? ಏಪ್ರಿಲ್ 3, 2025…

Read More

ಬೆಂಗಳೂರು: ಒಂದೆಡೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ಮತ್ತೊಂದೆಡೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಂದಿನ ಸಿಎಂ ಸಿದ್ಧರಾಮಯ್ಯ ಅವರ ತುಮಕೂರು ಪ್ರವಾಸ ರದ್ದುಗೊಂಡಿರುವುದಾಗಿ ಸಿಎಂ ಕಚೇರಿಯಿಂದ ತಿಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 07-11-2025ರಂದು ಶುಕ್ರವಾರ ಕೈಗೊಳ್ಳಲು ಉದ್ದೇಶಿಸಲಾಗಿದ್ದಂತ ತುಮಕೂರು ಜಿಲ್ಲಾ ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಲಾಗಿದೆ ಎಂಬುದಾಗಿ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಮಾಹಿತಿ ನೀಡಿದ್ದಾರೆ. https://kannadanewsnow.com/kannada/farmers-anger-flares-up-in-belgaum-stones-thrown-at-police-and-police-vehicles/ https://kannadanewsnow.com/kannada/sugarcane-growers-demands-impossible-to-meet-sugar-factory-owners-plead-with-cm/

Read More

ಬೆಂಗಳೂರು: ನಾವೇ ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ. ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯವಾದ ಮಾತಾಗಿದೆ. ಬೇಕಾದ್ರೆ ಕಷ್ಟದಲ್ಲಿರುವಂತ ನಮ್ಮ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರವೇ ತೆಗೆದುಕೊಂಡು ನಡೆಸಲಿ. ನಾವು ಮಾತ್ರ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸೋದಕ್ಕೆ ಅಸಾಧ್ಯ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿಎಂ ಮುಂದೆ ತಮ್ಮ ಕಷ್ಟದ ಅಳಲನ್ನು ಸಕ್ಕರೆ ಕಾರ್ಖಾನೆ ಮಾಲೀಕರು ತೋಡಿಕೊಂಡರು. ಉತ್ತರ ಭಾರತದ ಸಕ್ಕರೆ ಕಾರ್ಖಾನೆಗಳಿಗೆ ಹೆಚ್ಚು ಅನುಕೂಲ ಆಗುವಂತಿದೆ. ಸಕ್ಕರೆ ಉತ್ಪಾದನೆ, ಮಾರಾಟದಲ್ಲಿ ಅವರಿಗೆ ಅನುಕೂಲವಾಗ್ತಿದೆ. ದಕ್ಷಿಣ ಭಾರತದ ಕಾರ್ಖಾನೆಗಳಿಗೆ ಅನ್ಯಾಯ ಆಗುತ್ತಲೇ ಇದೆ. ಉತ್ತರ ಭಾರತದ ಕಾರ್ಖಾನೆ ಮಾಲೀಕರು ಕೇಂದ್ರದ ವಿರುದ್ಧ ಧ್ವನಿ ಎತ್ತುವುದಿಲ್ಲ. ನಾವು ಧ್ವನಿ ಎತ್ತಿಯೂ ಪ್ರಯೋಜನ ಆಗುತ್ತಿಲ್ಲ ಎಂಬುದಾಗಿ ಅಳಲು ತೋಡಿಕೊಂಡಿದ್ದಾರೆ. ಕಬ್ಬು ಬೆಳೆಗಾರರ ಕಣ್ಣೀರು ಒರೆಸಲು ನಾವು ಸಾಲ ಮಾಡಿ ಬ್ಯಾಂಕ್…

Read More

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ರಿಕ್ತರಿಂದ ಪೊಲೀಸರು, ಪೊಲೀಸ್ ವಾಹನಗಳು, ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಪಟನಾ ನಿರತ ಹಲವು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ನಡೆಸಲಾಗುತ್ತಿದ್ದಂತ ಪ್ರತಿಭಟನೆಯು, ಇಂದು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ಸಾಗುವಂತ ವಾಹನಗಳ ಮೇಲೆ ಪ್ರತಿಭಟನಾ ನಿರತರ ರೈತರು ಕಲ್ಲು ತೂರಾಟ ನಡೆಸಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇನ್ನೂ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರು, ಪೊಲೀಸ್ ವಾಹನಗಳು ಹಾಗೂ ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಉದ್ರಿಕ್ತ ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಜೊತೆಗೆ ಕಲ್ಲು ತೂರಾಟ ನಡೆಸಿದಂತ ಹಲವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು…

Read More

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ರಿಕ್ತರಿಂದ ಪೊಲೀಸ್, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಪಟನಾ ನಿರತ ಹಲವು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ನಡೆಸಲಾಗುತ್ತಿದ್ದಂತ ಪ್ರತಿಭಟನೆಯು, ಇಂದು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ಸಾಗುವಂತ ವಾಹನಗಳ ಮೇಲೆ ಪ್ರತಿಭಟನಾ ನಿರತರ ರೈತರು ಕಲ್ಲು ತೂರಾಟ ನಡೆಸಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇನ್ನೂ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸ್, ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಉದ್ರಿಕ್ತ ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಜೊತೆಗೆ ಕಲ್ಲು ತೂರಾಟ ನಡೆಸಿದಂತ ಹಲವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿದ ನೆಪ ಇಟ್ಟುಕೊಂಡು ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು ಜೆಡಿಎಸ್ ಗಂಬೀರವಾಗಿ ಆರೋಪ ಮಾಡಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ನಗರದ ಪ್ರೀಡಮ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಸಾವಿರಾರು ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರವನ್ನು ತೆರಿಗೆ ಭಯೋತ್ಪಾದಕ ಸರ್ಕಾರ (Tax Terrorism Government) ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯದಲ್ಲಿ ಸುಳ್ಳು ಮತ್ತು ಅಭಿವೃದ್ಧಿ ಮಾರಕ ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಜನ ವಿರೋಧಿ ಕೃತ್ಯಗಳಲ್ಲಿ ನಿರಂತರವಾಗಿ ತೊಡಗಿದೆ. ಗ್ಯಾರಂಟಿಗಳಿಗೆ ವಾರ್ಷಿಕ ಕೇವಲ ₹52,000 ಕೋಟಿಯಷ್ಟೇ ಅನುದಾನ ನೀಡುತ್ತಿದ್ದರೂ,₹4,09,549 ಕೋಟಿಯಷ್ಟು ಆಯವ್ಯಯದ ಹಣವೆಲ್ಲವೂ ಗ್ಯಾರಂಟಿಗಳಿಗೆ ಹೋಗುತ್ತಿದೆ ಎಂದು ಜನರನ್ನು ನಂಬಿಸಿ ಮೋಸ ಮಾಡುತ್ತಿದೆ. ಗ್ಯಾರಂಟಿಗಳ ನೆಪದಲ್ಲಿ ಅಭಿವೃದ್ಧಿಗೆ ತಿಲಾಂಜಲಿ ಇಟ್ಟು ದರ…

Read More

ಬೀದರ್ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ…

Read More