Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪಂಚಾಯತ್ ವಿಕೇಂದ್ರೀಕರಣ ಕುರಿತು ದೇಶದ ಎಲ್ಲ ರಾಜ್ಯಗಳಲ್ಲಿ ನಡೆಸಿರುವ ಅಧ್ಯಯನ ವರದಿಯನ್ನು ಕೇಂದ್ರದ ಪಂಚಾಯತ್ ರಾಜ್ ಸಚಿವಾಲಯ ಬಿಡುಗಡೆಗೊಳಿಸಿದ್ದು, ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಪಂಚಾಯತ್ ಸಬಲೀಕರಣ, ಆರ್ಥಿಕ ಸ್ವಾಯತ್ತತೆ ಮತ್ತು ಆಡಳಿತ ಸುಧಾರಣೆಗಳ ಕುರಿತು ರಾಜ್ಯಗಳನ್ನು ಮೌಲ್ಯಮಾಪನ ಮಾಡುವ ಪಿಡಿಐ ಚೌಕಟ್ಟು, ಕಾರ್ಯಗಳು, ಹಣಕಾಸು, ಕಾರ್ಯನಿರ್ವಾಹಕರು, ಸಾಮರ್ಥ್ಯ ವೃದ್ಧಿ ಮತ್ತು ಹೊಣೆಗಾರಿಕೆ ಸೇರಿ ಆರು ಪ್ರಮುಖ ನಿಯತಾಂಕಗಳನ್ನು ಆಧರಿಸಿ ಮೌಲ್ಯಮಾಪನ ಮಾಡಿದ್ದು, ಹಣಕಾಸು ಮತ್ತು ಹೊಣೆಗಾರಿಕೆಯ ನಿರ್ಣಾಯಕ ನಿಯತಾಂಕಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದೆ. ಶ್ರೇಯಾಂಕದಲ್ಲಿ ಹಣಕಾಸು ಗರಿಷ್ಠ ಪ್ರಾಮುಖ್ಯ ಹೊಂದಿದೆ. ಎರಡು ವರ್ಷಗಳಲ್ಲಿ ಗ್ರಾಮೀಣಾಭಿವೃದ್ಧಿಗಾಗಿ ಹತ್ತು ಹಲವು ನೂತನ ಯೋಜನೆಗಳನ್ನು ಪರಿಚಯಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಮುಖವಾಗಿ ಕೂಸಿನ ಮನೆ, ಅರಿವು ಕೇಂದ್ರ, ಘನತ್ಯಾಜ್ಯ ನಿರ್ವಹಣೆ, ರಾಜೀವ್ಗಾಂಧಿ ಪಂಚಾಯತ್ರಾಜ್ ಫೆಲೋಶಿಪ್, ಪ್ರಗತಿಪಥ, ಕಲ್ಯಾಣಪಥ, ಹೊಂಬೆಳಕು ಮುಂತಾದವುಗಳು ಗ್ರಾಮೀಣರ ಬದುಕಿಗೆ ಸಹಕಾರಿಯಾಗಿದೆ. ಇದರ ಜೊತೆಗೆ ನರೇಗಾ, ಗ್ರಾಮೀಣ ಕುಡಿಯುವ ನೀರು ಮುಂತಾದ ಕಾರ್ಯಕ್ರಮಗಳನ್ನು ಜನರಿಗೆ ಉಪಯೋಗವಾಗುವಂತೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಉತ್ತರ ಪ್ರದೇಶ: ಬ್ರಾಂಡೆಂಡ್ ಪುಡ್, ಬ್ರಾಂಡೆಂಡ್ ವಾಟರ್ ಬಾಟಲಿ ಹಾಗೆ ಹೀಗೆ ಅಂತ ಯೋಚಿಸಿ ಗ್ರಾಹಕರಾದ ನೀವುಗಳೇನೋ ಖರೀದಿಸುತ್ತೀರಿ. ಆದರೇ ಅದೇ ಬ್ರಾಂಡೆಂಡ್ ಹೆಸರಿನಲ್ಲಿ ನಕಲಿ ಪನ್ನೀರ್, ನಕಲಿ ಬಾಟಲ್ ನೀರು ಮಾರಾಟ ಮಾಡುತ್ತಿದ್ದದ್ದನ್ನು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಸೀಜ್ ಮಾಡಿದ್ದಾರೆ. ಅದು ಎಲ್ಲಿ ಅಂತ ಮುಂದೆ ಓದಿ. ಉತ್ತರ ಪ್ರದೇಶದ ಆಹಾರ ಸುರಕ್ಷತೆ ಮತ್ತು ಔಷಧ ಇಲಾಖೆಯ ಅಧಿಕಾರಿಗಳು ಗೋರಖ್ ಪುರದಲ್ಲಿ ಪನೀರ್ ಉತ್ಪಾದಿಸುವ ಕಾರ್ಖಾನೆ ಹಾಗೂ ಗೌತಮ್ ಬುದ್ಧ ನಗರದಲ್ಲಿ ಪ್ಯಾಕ್ ಮಾಡಿದ ಕುಡಿಯುವ ನೀರು ತಯಾರಿಸುವಂತ ಘಟಕದ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಬರೋಬ್ಬರಿ 2,500 ಕೆಜಿ ಕಲಬೆರಕೆ ಪನೀರ್ ಹಾಗೂ 800 ಲೀಟರ್ ಕಲುಷಿತ ಹಾಲು ಪತ್ತೆಯಾಗಿದೆ. ಈ ಹಾಲನ್ನು ನಾಶಪಡಿಸಿದ್ದಾರೆ. ಇನ್ನೂ ಪನ್ನೀರ್ ತಯಾರಿಕಾ ಘಟಕದಿಂದ 10ಕ್ಕೂ ಹೆಚ್ಚು ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಜೊತೆಗೆ ಪನ್ನೀರ್ ಗೆ ಬಳಸುವಂತ ಬಣ್ಣ, ಸ್ಯಾಕ್ರರಿನ್ ಸೇರಿದಂತೆ ದೊಡ್ಡ…
ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ 2024-25ನೇ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ. 6.5 ರಷ್ಟು ನೈಜವಾಗಿ ಬೆಳವಣಿಗೆ ಕಂಡಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಅಧಿಕೃತ ದತ್ತಾಂಶವು ಶುಕ್ರವಾರ ತೋರಿಸಿದೆ. NSO ನ ಎರಡನೇ ಮುಂಗಡ ಅಂದಾಜಿನ ಪ್ರಕಾರ, 2024-25ರಲ್ಲಿ ದೇಶದ ಆರ್ಥಿಕತೆಯು ಶೇ. 6.5 ರಷ್ಟು ಬೆಳವಣಿಗೆ ಹೊಂದುವ ನಿರೀಕ್ಷೆಯಿದೆ. ಭಾರತೀಯ ರಿಸರ್ವ್ ಬ್ಯಾಂಕ್ 2024-25ನೇ ಹಣಕಾಸು ವರ್ಷಕ್ಕೆ ಶೇ. 6.5 ರಷ್ಟು GDP ಬೆಳವಣಿಗೆಯನ್ನು ನಿರೀಕ್ಷಿಸಿತ್ತು. 2023-24ರಲ್ಲಿ, ಭಾರತದ GDP ಶೇ. 9.2 ರಷ್ಟು ಪ್ರಭಾವಶಾಲಿಯಾಗಿ ಬೆಳೆಯಿತು, ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರೆದಿದೆ. ಅಧಿಕೃತ ದತ್ತಾಂಶದ ಪ್ರಕಾರ, ಆರ್ಥಿಕತೆಯು 2021-22 ಮತ್ತು 2022-23ರಲ್ಲಿ ಕ್ರಮವಾಗಿ ಶೇ. 8.7 ಮತ್ತು ಶೇ. 7.2 ರಷ್ಟು ಬೆಳವಣಿಗೆ ಕಂಡಿದೆ. ಮಾರ್ಚ್ 2025 ರಲ್ಲಿ ಹಣಕಾಸು ಸಚಿವಾಲಯವು ತನ್ನ ವರದಿಯಲ್ಲಿ, ಗಣನೀಯ ಬಾಹ್ಯ ಅಡೆತಡೆಗಳ ಹೊರತಾಗಿಯೂ, 2024-25 ರಲ್ಲಿ ಭಾರತದ ಆರ್ಥಿಕತೆಯು ಶೇಕಡಾ 6.5 ರಷ್ಟು ಬೆಳವಣಿಗೆ ದರವನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಎಂಬುದಾಗಿ ಕರೆಯುವಂತ ಯೋಜನೆಯಡಿ ಸರ್ಕಾರಿ ನೌಕರರ ಕುಟುಂಬಸ್ಥರ ನೋಂದಣಿ ಕಡ್ಡಾಯ. ಹಾಗಾದ್ರೇ ಇದಕ್ಕೆ ಏನೆಲ್ಲ ದಾಖಲೆ ಬೇಕು ಅಂತ ಮುಂದೆ ಓದಿ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪತ್ನಿ ಅಥವಾ ಪತ್ನಿಯ ಉದ್ಯೋಗದ ವಿವರ, ತಂದೆಯ ವಿವರ, ತಾಯಿ, ಮಲ ತಾಯಿ, ಮಕ್ಕಳ ಮಾಹಿತಿಯನ್ನು ನಮೂದಿಸಬೇಕಾಗಿದೆ. ಈ ದಾಖಲೆಗಳು ಕಡ್ಡಾಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. 1.ಸರ್ಕಾರಿ ನೌಕರನ ಹಾಗೂ ಕುಟುಂಬದ ಅರ್ಹ ಸದಸ್ಯರ ಭಾವಚಿತ್ರ – ಪ್ರತಿಯೊಬ್ಬರ ಭಾವಚಿತ್ರವನ್ನು ಪ್ರತ್ಯೇಕವಾಗಿ ನೀಡಬೇಕು. ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವಚಿತ್ರ ಒದಗಿಸಬೇಕು. 2.ಜನ್ಮ ದಿನಾಂಕ ದಾಖಲೆಗಳು 3.ಆಧಾರ್ ಕಾರ್ಡ್ ಗಳು 4.ವೇತನ ಚೀಟಿಗಳು 5.ಕಾನೂನು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜೂನ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 12ನೇ ಸಭೆಯನ್ನು ಕರೆಯಲಾಗಿದೆ ಎಂದಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಜೂನ್.5ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳೋ ಸಾಧ್ಯತೆ ಇದೆ. https://kannadanewsnow.com/kannada/successful-reverse-shoulder-replacement-surgery-performed-on-a-woman-by-doctors-at-the-portis-hospital-in-bangalore/ https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ತೀವ್ರ ಭುಜದ ಸಂಧಿವಾತದಿಂದ ಬಳಲುತ್ತಿದ್ದ 68 ವರ್ಷದ ಮಹಿಳೆಗೆ ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ. ಡಾ. ಮಂಜುನಾಥ್ ಕೋಡಿಹಳ್ಳಿ, ಸಲಹೆಗಾರ – ಆರ್ಥೋಪೆಡಿಕ್ಸ್, ಫೋರ್ಟಿಸ್ ಆಸ್ಪತ್ರೆ ನಾಗರಭವಿ ಮತ್ತು ಅವರ ತಂಡದ ತಜ್ಞರ ಆರೈಕೆಯಡಿಯಲ್ಲಿ ಹಿಮ್ಮುಖ ಒಟ್ಟು ಭುಜದ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಭುಜದ ಚಲನೆ ಮತ್ತು ಕಾರ್ಯದಲ್ಲಿ ಗಮನಾರ್ಹ ಸುಧಾರಣೆಯೊಂದಿಗೆ ಶಸ್ತ್ರಚಿಕಿತ್ಸೆಯ ನಂತರದ ಒಂದು ದಿನದೊಳಗೆ ರೋಗಿಯನ್ನು ಬಿಡುಗಡೆ ಮಾಡಲಾಯಿತು. ರೋಗಿಯಾದ ಶ್ರೀಮತಿ ಬಸಂತಿ, ನಿವೃತ್ತ ಶಾಲಾ ಶಿಕ್ಷಕರು ಮತ್ತು ಬೆಂಗಳೂರು ನಿವಾಸಿ ಆದ ಇವರು, ನಿರಂತರ ಭುಜದ ನೋವಿನಿಂದ ಬಳಲುತ್ತಿದ್ದರು. ಈ ನೋವು ಹೆಚ್ಚುತ್ತಲೇ ಹೋಯಿತು. ದೈನಂದಿಕ ಚಟುವಟಿಕಗಳಾದ, ಕೂದಲನ್ನು ಬಾಚಿಕೊಳ್ಳುವುದು, ಅಡುಗೆ ಮಾಡುವುದು ಮತ್ತು ಒಂದು ಕಪ್ ಚಹಾವನ್ನು ಎತ್ತಲು ಸಹ ಆಗದ ಸ್ಥಿತಿಗೆ ತಲುಪಿದರು. ನಗರದಾದ್ಯಂತ ಹಲವಾರು ಆಸ್ಪತ್ರೆಗಳಿಗೆ ಭೇಟಿ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅವರ ನಿರಂತರ ನೋವು ನಿದ್ರಿಸಲಿ ಸಹ ಆಗದ ಸ್ಥಿತಿ…
ಬೆಂಗಳೂರು: ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಇಂದು ತನ್ನ ಪ್ರೀಮಿಯಂ ಬಣ್ಣ-ಲೇಪಿತ ಉಕ್ಕಿನ ಪೋರ್ಟ್ಫೋಲಿಯೊ ಆಪ್ಟಿಗಾಲ್® ನಲ್ಲಿ ಎರಡು ವಿಶ್ವ ದರ್ಜೆಯ ಉನ್ನತ-ಕಾರ್ಯಕ್ಷಮತೆಯ ಉತ್ಪನ್ನಗಳನ್ನು – ಆಪ್ಟಿಗಾಲ್® ಪ್ರೈಂ ಮತ್ತು ಆಪ್ಟಿಗಾಲ್®ಪಿನಾಕಲ್ – ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎಎಂ/ಎನ್ಎಸ್ ಇಂಡಿಯಾ, ಭಾರತದಲ್ಲಿ ಬಣ್ಣ-ಲೇಪಿತ ಉಕ್ಕಿನ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಈ ಕುರಿತು ಮಾತನಾಡಿದ, ಆರ್ಸೆಲರ್ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ದ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ ರಂಜನ್ ಧರ್, ಮೊದಲ ಬಾರಿಗೆ ಯುರೋಪಿಯನ್ ಸ್ಟ್ಯಾಂಡ್ ಇನ್ನೂ ಉತ್ತಮವಾದ ತುಕ್ಕು-ನಿರೋಧಕ ಉಕ್ಕನ್ನು ಅತ್ಯಾಧುನಿಕ ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣ, ಹೆದ್ದಾರಿ, ದೊಡ್ಡ ಕಟ್ಟಡ ಯೋಜನೆಗಳು ಇತ್ಯಾದಿಗಳಂತಹ ದೊಡ್ಡ ಉನ್ನತ-ಮಟ್ಟದ ಮೂಲಸೌಕರ್ಯ ಮತ್ತು ನಿರ್ಮಾಣ ಯೋಜನೆಗಳಲ್ಲಿ ಬಳಸಲು ಪರಿಚಯಿಸುತ್ತಿದೆ. ಭಾರತದಲ್ಲಿ ಈ ಹಿಂದೆ ಲಭ್ಯವಿರದಿದ್ದ ಉನ್ನತ-ಗುಣಮಟ್ಟದ ಸಿ4 ವಿಶೇಷ ಉಕ್ಕಿನೊಂದಿಗೆ ನಾವು ಹೊಸ ಮಾರುಕಟ್ಟೆ ವಿಭಾಗವನ್ನು ಪ್ರವರ್ತಿಸುತ್ತಿದ್ದೇವೆ; ಅಲ್ಲಿ ನಾವು ಏಕೈಕ…
ಬೆಂಗಳೂರು: ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF / NDRF Items and Norms of Assistance ರ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ, 2024-25 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ…
ಬೆಂಗಳೂರು: ಕನ್ನಡಕ್ಕೆ ಅವಮಾನ ಮಾಡಿರುವಂತ ನಟ ಕಮಲ್ ಹಾಸನ್ ಕ್ಷಮೆಯಾಚಿಸಬೇಕು. ಅವರು ಕ್ಷಮೆ ಯಾಚಿಸದೇ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಮಾಡಿದ್ರೇ ಸಿನಿಮಾ ಥಿಯೇಟರ್ ಗೆ ಬೆಂಕಿ ಹಚ್ಚುವುದಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಾಣಗೌಡ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಸಿನಿಮಾ ರಿಲೀಸ್ ಆಗಲ್ಲ. ರಾಜ್ಯದಲ್ಲಿ ಅವರ ಸಿನಿಮಾ ರಿಲೀಸ್ ಮಾಡುವುದಕ್ಕೆ ಬಿಡಲ್ಲ. ಒಂದು ವೇಳೆ ಕ್ಷಮೆ ಕೇಳದೇ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಹಾಕುವುದಾಗಿ ಎಚ್ಚರಿಕೆ ನೀಡಿದರು. ಅಂದಹಾಗೇ ನಟ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿರೋದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಫಿಲ್ಮಂ ಚೇಂಬರ್ ಕ್ಷಮೆ ಯಾಚನೆಗೆ ಡೆಡ್ ಲೈನ್ ನೀಡಿದೆ. ಇದರ ನಡುವೆ ನಾನು ಕ್ಷಮೆ ಯಾಚಿಸೋದಿಲ್ಲ ಎಂಬುದಾಗಿ ನಟ ಕಮಲ್ ಹಾಸನ್ ಉದ್ಧಟ ತನವನ್ನು ಮುಂದುವರೆಸಿದ್ದಾರೆ. https://kannadanewsnow.com/kannada/breaking-another-tragedy-due-to-rain-in-mangalore-a-country-boat-capsized-in-the-sea-two-drowned/ https://kannadanewsnow.com/kannada/breaking-illegal-ipl-ticket-selling-racket-case-by-police-two-constables-suspended/
ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಆದಾಗ್ಯೂ ಈ ಭೂಮಿ ಪರಭಾರೆ ಆಗಿದೆ, ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು. ಸಚಿವ ಸಂಪುಟದ ಅನುಮತಿ ಇಲ್ಲದೆ,…













