Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಕರ್ನಾಟಕ ವಾರ್ತೆ : ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾ ರೇಣುಕಾ ದೇವಿ ಶ್ರೀ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಶನಿವಾರದಂದು ಸೊರಬ ಸಮೀಪದ ಚಂದ್ರಗುತ್ತಿಯ ಶ್ರೀ ರೇಣುಕಾದೇವಿಯ ದರ್ಶನ ಪಡೆದ ನಂತರ ಅವರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದರು. ಶ್ರೀ ಕ್ಷೇತ್ರದಲ್ಲಿನ ಸ್ವಚ್ಛತೆ, ಶೌಚಾಲಯ, ಶುದ್ಧ ಕುಡಿಯುವ ನೀರು, ವಸತಿ ಮತ್ತಿತರ ವಿಷಯಗಳ ಕುರಿತು ಸುಧೀರ್ಘ ಸಮಾಲೋಚನೆ ನಡೆಸಿದ ಅವರು ಯತ್ರಾರ್ತಿಗಳ ಅನುಕೂಲಕ್ಕಾಗಿ ತುರ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಸ್ತುತ ಸಂದರ್ಭದಲ್ಲಿ ಸ್ಥಿತವಾಗಿರುವ ಹಾಗೂ ಪಾರಂಪರಿಕವಾಗಿರುವ ಮೂಲ ಕಟ್ಟಡವು ಶಿಥಿಲಗೊಂಡಿದೆ ಮಾತ್ರವಲ್ಲದೆ ಮಳೆಯಿಂದ ಸೋರುತ್ತಿದೆ.…
ನಾವೆಲ್ಲರೂ ಕಷ್ಟಪಟ್ಟು ದುಡಿಯುತ್ತೇವೆ, ಆದರೆ ಆ ಹಣವನ್ನು ಯಾವುದಾದರೂ ಒಳ್ಳೆಯ ಕಾರ್ಯಕ್ಕೆ ಬಳಸಿದರೆ ಮನಸ್ಸಿಗೆ ಸಮಾಧಾನ, ಆದರೆ ಹಣ ವ್ಯರ್ಥವಾಗುತ್ತಲೇ ಹೋದರೆ ಮನಸ್ಸಿಗೆ ತುಂಬಾ ನೋವಾಗುತ್ತದೆ ಮತ್ತು ದುಃಖವಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…
ನಾವು ಅನಿರೀಕ್ಷಿತ ಸ್ಥಳದಲ್ಲಿ ಮತ್ತು ಅನಿರೀಕ್ಷಿತ ಸಂದರ್ಭಗಳಲ್ಲಿ ಪಡೆಯುವ ಆದಾಯ ಅಥವಾ ಲಾಭವನ್ನು ಅದೃಷ್ಟ ಎಂದು ಹೇಳುತ್ತೇವೆ. ಈ ಅದೃಷ್ಟ ನಮ್ಮ ಜೀವನದಲ್ಲಿ ಬಂದರೆ ನಾವು ಜೀವನದ ಮುಂದಿನ ಹಂತಕ್ಕೆ ಹೋಗುತ್ತೇವೆ. ಆದರೆ ಈ ದಿಢೀರ್ ಅದೃಷ್ಟ ಎಲ್ಲರಿಗೂ ಸಿಗುವುದಿಲ್ಲ. ಆದರೆ ಇದನ್ನು ಸಾಧಿಸಲು ಕೆಲವು ಬುದ್ಧಿವಂತ ಮಾರ್ಗಗಳಿವೆ. ಅದರ ಬಗ್ಗೆ ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ…
ಶಿವಮೊಗ್ಗ: ಇಂದು ನಾಗರ ಪಂಚಮಿ. ರಾಜ್ಯಾಧ್ಯಂತ ಸಡಗರ, ಸಂಭ್ರಮದಿಂದ ಹುತ್ತಕ್ಕೆ ಹಾಲೆರೆದು ಪೂಜಿಸಲಾಗಿದೆ. ಇಂತಹ ನಾಗರ ಪಂಚಮಿ ದಿನದಂದೇ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ಸಾಗರ ತಾಲ್ಲೂಕಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಾಗರ ಪಂಚಮಿಯ ಇಂದಿನ ದಿನದಂದೇ ಬಾಣಂತಿಯಾಗಿದ್ದಂತ ರಂಜಿತಾ(22) ಎಂಬುವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ರಂಜಿತಾ ಅವರು ಹುತ್ತಾದಿಂಬ ಗ್ರಾಮದಲ್ಲಿ ಜಾನು+ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ರಂಜಿತಾ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಅಂದಹಾಗೇ ರಂಜಿತಾ ಅವರು ಮೂರು ತಿಂಗಳ ಹಿಂದಷ್ಟೇ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಇಂದು ಹಾವು ಕಚ್ಚಿ ಸಾವನ್ನಪ್ಪಿದ್ದರಿಂದ ಇಬ್ಬರು ಮಕ್ಕಳು ತಾಯಿಯನ್ನು ಕಳೆದುಕೊಂಡಂತೆ ಆಗಿದೆ.
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿವಿಯು ಹಬ್ಬ-ಹರಿದಿನಗಳಂದು ಹಾಗೂ ವಾರಾಂತ್ಯದ ಭಾನುವಾರದಂದು ಪರೀಕ್ಷೆ ನಡೆಸಲು ತಯಾರಿ ನಡೆದಿದೆ ಎಂಬ ಮಾಹಿತಿ ಬಂದಿದೆ. ಆ.25ರಂದು ಹಬ್ಬದ ದಿನದಂದೇ ಪರೀಕ್ಷೆ ನಿಗದಿ ಮಾಡಲಿದೆ ಎನ್ನಲಾಗುತ್ತಿದೆ. ಇಂತಹ ಎಲ್ ಎಲ್ ಬಿ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ಹೋರಾಟಗಾರ ಕ್ರಿಸ್ಟನ್ ಮನೆಜಸ್ ಅವರು ಕುಲಪತಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿವಿಯ ಕುಲಪತಿಗಳಿಗೆ ಪತ್ರ ಬರೆದಿರುವಂತ ಅವರು, ಹಬ್ಬ ಹರಿದಿನಗಳಂದು, ರಾಷ್ಟ್ರೀಯ ರಜಾದಿನಗಳಂದು ಹಾಗೂ ವಾರಾಂತ್ಯದ ಭಾನುವಾರದಂದು ಶೈಕ್ಷಣಿಕ ತರಗತಿಗಳನ್ನು ಹಾಗೂ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂಬ ಸಂಪ್ರದಾಯ ಬಹುಕಾಲ ಹಿಂದಿನಿಂದಲೇ ನಡೆದು ಬಂದಿರುವ ಸಂಪ್ರದಾಯ ಎಂದು ಹೇಳಿದ್ದಾರೆ. ಕರ್ನಾಟಕ ಕಾನೂನು ವಿಶ್ವವಿದ್ಯಾಲಯವು ಈ ಸಂಪ್ರದಾಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ವಿಷಾದದ ಸಂಗತಿ. ಕಳೆದ ಸೆಮಿಸ್ಟರ್ ಪರೀಕ್ಷೆ ವೇಳೆ ಕ್ರೈಸ್ತ ಧರ್ಮೀಯರ ಹಬ್ಬದ ದಿನದಂದು ಪರೀಕ್ಷೆ ನಿಗದಿ ಪಡಿಸಿ, ವ್ಯಾಪಕ ಆಕ್ಷೇಪ ವ್ಯಕ್ತವಾದ ನಂತರ ಬದಲಾವಣೆ ಮಾಡಲಾಗಿತ್ತು. ಈ ಬಾರಿ ಹಿಂದೂಗಳ…
ಶಿವಮೊಗ್ಗ: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ 11-08-2024ರಂದು ಸೊರಬ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:11.08.2024 ರಂದು 110/11 ಕೆವಿ ಸೊರಬ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ನೀಡಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ‘ದಿನಾಂಕ:11.08.2024 ರಂದು ಕೆಳಕಂಡ ಫೀಡರ್ಗಳ ತುರ್ತು ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 10/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಎಫ್-21 ಸೊರಬ ಪಟ್ಟಣ ಸೇರಿದಂತೆ ಎಫ್2 ಸಾರೇಕೊಪ್ಪ, ಎಫ್-3 ಬಳ್ಳಬೈಲು, ಎಫ್ ಓಟೂರು, ಎಫ್ ಚಿಕ್ಲಾವಲ, ಎಫ್9 ಒಳಾಗಿ, ಎಫ್-11 ಮಂಟಿ, ಎಫ್15 ಕಲ್ಲಂಬ ಎನ್ಜೆವೈ, ಎಫ್-16 ಕಸೂರು ಎಸ್ವೈ, ಎಫ್17 ಯಲವ, ಎನ್ಟಿಮೈ ಎಫ್-23 ತಾವರೆಹಳ್ಳಿ, ಎಫ್-24 ಕಕ್ಕರಸಿ, ಎಫ್-25 ನಡಹಳ್ಳಿ ಹಾಗೂ ಎಫ್26 ಸೊರಬ ಇಂಡಸ್ಟ್ರೀಯಲ್ ಫೀಡಲ್ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ…
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿರುವ ಪ್ರಕರಣಗಳಲ್ಲಿ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಂದು ಜೈಲಿನಿಂದ ಹೊರಬಂದರು. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎಎಪಿಯ ಸಂಜಯ್ ಸಿಂಗ್, ನ್ಯಾಯಾಲಯದ ತೀರ್ಪನ್ನು ಶ್ಲಾಘಿಸಿದರು, ಇದನ್ನು “ಸತ್ಯದ ಗೆಲುವು” ಮತ್ತು “ಕೇಂದ್ರದ ಸರ್ವಾಧಿಕಾರದ ಮುಖಕ್ಕೆ ಕಪಾಳಮೋಕ್ಷ” ಎಂದು ಕರೆದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೋಪಾಲ್ ರೈ, “ಇದು ಕೇವಲ ಜಾಮೀನು ಅಲ್ಲ, ಆದರೆ ಬಿಜೆಪಿಯ ಸೋಲು” ಎಂದು ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಬಿಆರ್ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್, ತಮ್ಮ ಸಹೋದರಿ ಮತ್ತು ಪಕ್ಷದ ಎಂಎಲ್ಸಿ ಕೆ.ಕವಿತಾ ಸೇರಿದಂತೆ ಎಲ್ಲರಿಗೂ ಶೀಘ್ರದಲ್ಲೇ ಜಾಮೀನು ಸಿಗುತ್ತದೆ ಎಂದು ಆಶಿಸಿದ್ದಾರೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, 17 ತಿಂಗಳ ಸುದೀರ್ಘ ಸೆರೆವಾಸ ಮತ್ತು ವಿಚಾರಣೆಯ ವಿಳಂಬದ ಹಿನ್ನೆಲೆಯಲ್ಲಿ ಪಿಎಂಎಲ್ಎಯ ‘ತ್ರಿವಳಿ…
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ 20,000/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು. ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು. 28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು…
ನವದೆಹಲಿ: ತಮ್ಮನ್ನು ಏಕವಚನದಲ್ಲಿ ಕೀಳಾಗಿ ನಿಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಮಟ್ಟದಲ್ಲಿ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಿಕೆಶಿಯನ್ನು ನಪುಂಸಕ ಎಂದು ಕರೆದರು. ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿ.ಕೆ.ಶಿವಕುಮಾರ್ ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ಸಂಪುಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್..ಹುಷಾರು! ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು. ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು…
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು, ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಜೆಪಿ ಪಾದಯಾತ್ರೆಯ ನಡುವೆ ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ʼನಾನು ಕಳ್ಳ ಅಲ್ಲ, ನನ್ನ ಬಿಟ್ಟುಬಿಡಿʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗಿಂತ ಮುಂದೆ ಹೋಗಿ ಹೇಳುತ್ತಿದ್ದಾರೆ. ಈ ಹಿಂದೆ ರೀಡು ಮಾಡಿದವರು ಕೂಡ ಇವರೇ. ಅದರ ಸಂಬಂಧ ರಚನೆಯಾದ ಕೆಂಪಣ್ಣ ಆಯೋಗವನ್ನು ಮುಚ್ಚಿ ಹಾಕಿದ್ದಾರೆ. ಈಗ ದೇಸಾಯಿ ಆಯೋಗ ರಚಿಸಿದ್ದಾರೆ ಎಂದು ದೂರಿದರು. ಟಿ.ಜೆ.ಅಬ್ರಹಾಂ ಕಳ್ಳ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಅಬ್ರಹಾಂ ಅವರನ್ನು ಬೆಂಬಲಿಸಿದ್ದರು. ಅಬ್ರಹಾಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಅಬ್ರಹಾಂ ಫ್ರಾಡ್ ಆಗಿದ್ದರೆ ಆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆಯಲಿ. ಬಿಜೆಪಿ…