Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ. ಈ ಮೂಲಕ ಯುಜಿಸಿಇಟಿಗೆ ಸಂಬಂಧಿಸಿದಂತೆ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್ ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್ ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್ ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಅದರ ಬಳಿಕ ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜು.22ರವರೆಗೆ ಅವಕಾಶ…
ಹೈದರಾಬಾದ್: ಐಪಿಎಲ್ ಟಿಕೆಟ್ ವಿತರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್ಸಿಎ) ಅಧ್ಯಕ್ಷ ಜಗನ್ ಮೋಹನ್ ರಾವ್ ಅವರನ್ನು ಸಿಐಡಿ ಬಂಧಿಸಿದೆ. ಉಪ್ಪಲ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯಗಳ ಟಿಕೆಟ್ಗಳನ್ನು ಅಕ್ರಮವಾಗಿ ಬ್ಲಾಕ್ ನಲ್ಲಿ ಮಾರಾಟ ಮಾಡಿದಂತ ಆರೋಪದ ಮೇಲೆ ನಲ್ಲಕುಂಟಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ. ಉಚಿತ ಅಥವಾ ಅಧಿಕೃತ ವಿತರಣೆಗಾಗಿ ಮೀಸಲಾದ ಟಿಕೆಟ್ಗಳನ್ನು ಬೇರೆಡೆಗೆ ತಿರುಗಿಸಿ ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ ಎಂಬುದಕ್ಕೆ ಪೊಲೀಸ್ ತನಿಖೆಯಲ್ಲಿ ಪುರಾವೆಗಳು ಕಂಡುಬಂದಿವೆ ಎಂದು ವರದಿಯಾಗಿದೆ. ಇದು ಪೂರ್ಣ ಸಾಮರ್ಥ್ಯದ ಹಕ್ಕುಗಳ ಹೊರತಾಗಿಯೂ ಅಭಿಮಾನಿಗಳಿಗೆ ಪ್ರವೇಶವನ್ನು ವಂಚಿತಗೊಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಆಡಳಿತಾತ್ಮಕ ಪ್ರಕ್ಷುಬ್ಧತೆ ಮತ್ತು ಆಡಳಿತ ಸಮಸ್ಯೆಗಳಿಂದ ಹಾನಿಗೊಳಗಾದ ಎಚ್ಸಿಎಗೆ ರಾವ್ ಅವರ ಬಂಧನವು ಮತ್ತೊಂದು ಹೊಡೆತವಾಗಿದೆ. ಈ ಘಟನೆಯು ಸಂಘದ ಕಾರ್ಯನಿರ್ವಹಣೆಯ ಬಗ್ಗೆ, ವಿಶೇಷವಾಗಿ ಐಪಿಎಲ್ನಂತಹ ಉನ್ನತ ಮಟ್ಟದ ಕಾರ್ಯಕ್ರಮಗಳ ಸಮಯದಲ್ಲಿ ಸಾರ್ವಜನಿಕರ ಪರಿಶೀಲನೆಯನ್ನು ಮತ್ತೆ ಕೆರಳಿಸಿದೆ. 2025 ರ ಇಂಡಿಯನ್…
ಧಾರವಾಡ : ಕನ್ನಡಕ್ಕಾಗಿ ಹೋರಾಟ ನಡೆಸಿದವರ ಮೇಲೆ ಪೊಲೀಸ್ ಪ್ರಕರಣಗಳು ದಾಖಲಾಗಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಪೊಲೀಸ್ ಮತ್ತು ಜಿಲ್ಲಾಡಳಿತ ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಹೇಳಿದರು. ಅವರು ಇಂದು (ಜುಲೈ 9) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಗೋಕಾಕ ಚಳುವಳಿಯ ಸ್ಮರಣೆಗಾಗಿ ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಹತ್ತಿರ ಇರುವ ಸರ್ಕಲ್ನಲ್ಲಿ ಡಾ. ರಾಜಕುಮಾರ ಅವರ ಸ್ಮಾರಕವನ್ನು ನಿರ್ಮಿಸಬೇಕು ಎಂಬುದು ಕನ್ನಡಪರ ಹೋರಾಟಗಾರರ ಬೇಡಿಕೆಯಾಗಿದೆ. ಈ ಕುರಿತು ಸರ್ಕಾರಕ್ಕೆ ನಿಯಮಾನುಸಾರ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದರು. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕನ್ನಡ ಉದ್ಯೋಗಿಗಳ ಸಂಖ್ಯೆ ಕಡಿಮೆ ಇರುವದರಿಂದ ಗ್ರಾಹಕರಿಗೆ ಭಾಷೆ ಸಮಸ್ಯೆ ಉಂಟಾಗುತ್ತಿದೆ. ಕೇಂದ್ರ ಸರ್ಕಾರ ಸ್ಥಳೀಯ ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಬ್ಯಾಂಕ್ ಉದ್ಯೋಗಿಗಳಿಗೆ ಸ್ಥಳೀಯ ಭಾಷೆ, ವಿಶೇಷವಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿದೆ. ರಾಜ್ಯ ಸರ್ಕಾರ…
ಧಾರವಾಡ: ಗ್ರಾಹಕನಿಗೆ ಮೋಸ ಮಾಡಿದಂತ ಬೆಂಗಳೂರಿನ ಲೈಫ್ ಸ್ಟೈಲ್ ಹಾಲಿಡೆಸ್ ಪ್ರೈ.ಲಿ ಗೆ ದಂಡ ವಿಧಿಸಿ ಮತ್ತು ಪರಿಹಾರ ಕೊಡಲು ಗ್ರಾಹಕರ ಆಯೋಗ ಆದೇಶಿಸಿದೆ. ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ಅನಸುಯಮ್ಮ ವೃತ್ತಿಯಲ್ಲಿ ಖಾಸಗಿ ವ್ಯವಹಾರವನ್ನು ಮಾಡಿಕೊಂಡಿದ್ದಾರೆ. ಎದುರುದಾರರು ಪ್ರವಾಸ ಮತ್ತು ಹೊಟೇಲ ವಾಸ್ತವ್ಯದ ಸೇವೆಗಳನ್ನು ದೇಶ ಮತ್ತು ವಿದೇಶಗಳಲ್ಲಿ ಹೊಂದಿರುತ್ತಾರೆ. ಎದುರುದಾರರು ನೀಡಿದಂತಹ ಜಾಹಿರಾತುಗಳು ಮತ್ತು ಅವರು ಕೊಟ್ಟಂತಹ ಭರವಸೆಗಳನ್ನು ನಂಬಿ ದೂರುದಾರರು ಎದುರುದಾರರ ಕಂಪನಿಯಲ್ಲಿ ರೂ.1,35,000 ಗಳ ಪೈಕಿ ಶೇ.50 ಪಾವತಿಸಿ ಸದಸ್ಯತ್ವವನ್ನು ಪಡೆದಿದ್ದರು. ಮೇ-2024 ರಲ್ಲಿ ದೂರುದಾರರು ತಮ್ಮ 6 ಜನ ಕುಟುಂಬದ ಸದಸ್ಯರೊಂದಿಗೆ ಕೇರಳದ ಅಲ್ಲಾಪುಝಾ ಹೋಗುವ ನಿಮಿತ್ಯ ಎದುರುದಾರರಿಗೆ ಪೋನ್ ಮುಖಾಂತರಕರೆ ಮಾಡಿ ಹೊಟೇಲ್ ಬುಕ್ ಮಾಡಲು ಹೇಳಿದ್ದರು. ಅದರಂತೆ ಎದುರುದಾರರು ರೂ.20,000 ಪಾವತಿಸುವಂತೆ ದೂರುದಾರರಿಗೆ ಕೇಳಿ ಪಡೆದಿರುತ್ತಾರೆ. ದೂರುದಾರರು ಕೇರಳದಲ್ಲಿ ಬೋಟ್ ಹೌಸ್ ಬುಕ್ ಮಾಡಲು ಎದುರುದಾರರಿಗೆ ಕೇಳಿಕೊಂಡಾಗ ಹೆಚ್ಚಿನ ಹಣ ರೂ.9,000 ಪಾವತಿಸುವಂತೆ ದೂರುದಾರರಿಗೆ ಕೇಳಿದಾಗ ದೂರುದಾರರು ಅದನ್ನು ಎದುರುದಾರರ ಏಜೆಂಟ್ಗೆ ಪಾವತಿಸಿರುತ್ತಾರೆ.…
ಬಳ್ಳಾರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2025-26 ನೇ ಸಾಲಿಗೆ ವಿವಿಧ ಕಾರ್ಯಕ್ರಮಗಳಡಿ ಮಂಜೂರಾಗಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಹುದ್ದೆಗಳ ವಿವರ: ಮಕ್ಕಳ ಆರೋಗ್ಯ ವಿಭಾಗ-01(ಎಂಬಿಬಿಎಸ್), ಇ-ಆಸ್ಪತ್ರೆ ವಿಭಾಗ-02(ಎಂಬಿಬಿಎಸ್), ಎಸ್ಎನ್ಸಿಯು ವಿಭಾಗ-06(ಎಂಬಿಬಿಎಸ್), ತಾಯಿ ಆರೋಗ್ಯ ವಿಭಾಗ-02(ಎಂಬಿಬಿಎಸ್), ಎನ್ಸಿಡಿ ವಿಭಾಗ-05(ಎಂಬಿಬಿಎಸ್), ಎನ್ಯುಹೆಚ್ಎಂ ವಿಭಾಗ-02(ಎಂಬಿಬಿಎಸ್), ನಮ್ಮ ಕ್ಲಿನಿಕ್-03(ಎಂಬಿಬಿಎಸ್) ಸೇರಿ ಒಟ್ಟು 21 ಮತ್ತು ಮಕ್ಕಳ ತಜ್ಞ ವೈದ್ಯರು-01, ಇತರೆ ತಜ್ಞ ವೈದ್ಯರು-01. ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜುಲೈ 11 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಗುತ್ತಿಗೆ ಆಧಾರದ ನೇಮಕಾತಿಯನ್ನು ರಾಷ್ಟಿçÃಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ಮೇರಿಟ್ ಕಮ್ ರೋಷ್ಟರ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಗುತ್ತಿಗೆ ಆಧಾರದ…
ಬೆಂಗಳೂರು: ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ Options ದಾಖಲಿಸಲು ಮತ್ತೆ ದಿನಾಂಕ ವಿಸ್ತರಿಸಲಾಗಿದೆ. ಜುಲೈ 10ರಂದು ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಇದು ಕೊನೆ ಅವಕಾಶ ಎಂದು KEA ED ಪ್ರಸನ್ನ ಅವರು ತಿಳಿಸಿದ್ದಾರೆ. https://twitter.com/KEA_karnataka/status/1942958252863721503 ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್ ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್ ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್ ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ…
ಬೆಂಗಳೂರು: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಮತ್ತು ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಮಾಯಾಮೃಗ ನಾಟಕ ಪ್ರದರ್ಶನವನ್ನು ಜುಲೈ 11ರಂದು ಶುಕ್ರವಾರ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ. ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ. ಇದೇ ಸಂದರ್ಭದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರನ್ನು ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಭಿನಂದಿಸಲಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮವನ್ನು ಶಾಸಕ ಎಚ್.ಪಿ.ಸ್ವರೂಪ್ ಉದ್ಘಾಟಿಸಲಿದ್ದಾರೆ. ಜಿಪಂ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು, ರಂಗಸಿರಿ ಅಧ್ಯಕ್ಷ…
ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಬಳ್ಳಾರಿ ಇದರ ಕಾರ್ಯವ್ಯಾಪ್ತಿಯ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಒಕ್ಕೂಟದ ಆಡಳಿತ ಕಚೇರಿಯ 02 ಕಿ.ಮೀ ವ್ಯಾಪ್ತಿಯಲ್ಲಿ ಜುಲೈ 09 ರಂದು ಸಂಜೆ 06 ಗಂಟೆಯಿAದ ಜುಲೈ 11 ರ ಬೆಳಿಗ್ಗೆ 06 ಗಂಟೆಯವರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಮದ್ಯ ಮಾರಾಟ, ಸಾಗಣಿಕೆ ಮಾಡದಂತೆ ಹಾಗೂ ಮದ್ಯ ಅಂಗಡಿ, ಬಾರ್-ರೆಸ್ಟೋರೆಂಟ್ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆ.ಎಸ್.ಪಿ.ಬಿ.ಸಿ.ಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/three-people-including-the-wife-who-killed-her-husband-along-with-her-lover-have-been-arrested/ https://kannadanewsnow.com/kannada/the-following-documents-are-mandatory-for-the-aadhaar-card-renewal-these-are-uidais-new-rules/
ಟ್ವಿಟರ್ ಎಂದು ಕರೆಯಲಾಗುತ್ತಿದ್ದ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್ನ ಸಿಇಒ ಲಿಂಡಾ ಯಾಕರಿನೊ ಬುಧವಾರ ತಮ್ಮ ದೀರ್ಘ ಎಕ್ಸ್ ಪೋಸ್ಟ್ನಲ್ಲಿ ತಮ್ಮ ರಾಜೀನಾಮೆಯ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮಸ್ಕ್ ತನ್ನ ವೇದಿಕೆಯನ್ನು ಪರಿವರ್ತಿಸುವ ದೃಷ್ಟಿಕೋನವನ್ನು ಕಾರ್ಯಗತಗೊಳಿಸಲು ಸಹಾಯ ಮಾಡಲು 2023 ರಲ್ಲಿ ಯಾಕರಿನೊ X ನಲ್ಲಿ ಉನ್ನತ ಹುದ್ದೆಯನ್ನು ವಹಿಸಿಕೊಂಡರು. ತಮ್ಮ ಪೋಸ್ಟ್ನಲ್ಲಿ, ಯಾಕರಿನೊ ಹೀಗೆ ಹೇಳಿದರು, “ಎರಡು ಅದ್ಭುತ ವರ್ಷಗಳ ನಂತರ, ನಾನು ನ CEO ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ. @elonmusk ಮತ್ತು ನಾನು ಮೊದಲು ಅವರ X ಗಾಗಿ ದೃಷ್ಟಿಕೋನದ ಬಗ್ಗೆ ಮಾತನಾಡಿದಾಗ, ಈ ಕಂಪನಿಯ ಅಸಾಧಾರಣ ಧ್ಯೇಯವನ್ನು ನಿರ್ವಹಿಸಲು ಇದು ಜೀವಮಾನದ ಅವಕಾಶ ಎಂದು ನನಗೆ ತಿಳಿದಿತ್ತು. ವಾಕ್ ಸ್ವಾತಂತ್ರ್ಯವನ್ನು ರಕ್ಷಿಸುವ, ಕಂಪನಿಯನ್ನು ತಿರುಗಿಸುವ ಮತ್ತು X ಅನ್ನು ಎವೆರಿಥಿಂಗ್ ಅಪ್ಲಿಕೇಶನ್ ಆಗಿ ಪರಿವರ್ತಿಸುವ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ನಾನು ಅವರಿಗೆ ಅಪಾರವಾಗಿ ಕೃತಜ್ಞನಾಗಿದ್ದೇನೆ.” “X ತಂಡದ ಬಗ್ಗೆ ನನಗೆ ನಂಬಲಾಗದಷ್ಟು ಹೆಮ್ಮೆಯಿದೆ – ನಾವು ಒಟ್ಟಾಗಿ ಸಾಧಿಸಿದ…
ಹಾಸನ: ಜಿಲ್ಲೆಯಲ್ಲಿ ಪ್ರಿಯಕರನ ಜೊತೆಗೆ ಸೇರಿ ಪತಿಯನ್ನು ಕೊಂದಿದ್ದಂತ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಗ್ರಾಮಾಂತರ ಠಾಣೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ.5ರಂದು ಮಧು(36) ಎಂಬಾತನನ್ನು ಕೊಲೆಗೈದು ಶವ ಬಿಸಾಡಿ ಹೋಗಲಾಗಿತ್ತು. ಹತ್ಯೆಗೀಡಾಗಿದ್ದ ಮಧು ಪತ್ನಿ ಭವ್ಯ, ಅವರ ತಾಯಿ ಜಯಂತಿ, ಪ್ರಿಯಕರ ಮೋಹನ್ ಕುಮಾರ್ ನನ್ನು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ಮೂಲದ ಮೋಹನ್ ಜೊತೆಗೆ ಭವ್ಯ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗುತ್ತಿದೆ. ಕಳೆದ ಎರಡು ವರ್ಷದಿಂದ ಮೋಹನ್ ಕುಮಾರ್ ಜೊತೆಗೆ ಭವ್ಯ ಸಂಬಂಧ ಹೊಂದಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಂತ ಪತಿ ಮಧುವನ್ನು ಕಂಠಪೂರ್ತಿ ಕುಡಿಸಿ ಉಸಿರುಗಟ್ಟಿಸಿ ಕೊಲೆಗೈದಿದ್ದು. ಆ ಬಳಿಕ ಹೂವಿನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 376ರ ಬಳಿ ಶವ ಎಸೆದಿದ್ದರು. ಇದಲ್ಲದೇ ಮಧು ಅಪಘಾತದಲ್ಲಿ ಮೃತಪಟ್ಟಿದ್ದಾಗಿ ಬಿಂಬಿಸೋದಕ್ಕೆ ಪತ್ನಿ ಭವ್ಯ ಯತ್ನಿಸಿದ್ದರು. ಆದರೇ ಮಧು ತಾಯಿ ರುಕ್ಮಿಣಿ ತನ್ನ ಮಗನನ್ನು ಹತ್ಯೆ ಮಾಡಿರುವುದಾಗಿ ಹಾಸನ ಗ್ರಾಮಾಂತರ…














