Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿ ಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ. ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ. ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರೆದರೆ ಮಾತ್ರ ದೆಹಲಿಗೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು…

Read More

ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರೆದರೆ ಮಾತ್ರ ದೆಹಲಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು, ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನ್ನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು. https://kannadanewsnow.com/kannada/breaking-central-government-cancels-mandatory-order-to-pre-install-sanchar-sathi-app/ https://kannadanewsnow.com/kannada/breaking-massive-operation-by-ccb-police-in-bengaluru-drugs-worth-28-crore-seized-two-foreign-nationals-arrested/

Read More

ಕೊಳ್ಳೆಗಾಲ : ಇತ್ತೀಚೆಗೆ ಶಿವನಸಮುದ್ರದ ಜಲವಿದ್ಯುತ್ ಗಾರದ ಜಲಾಶಯದ ಬಳಿಯ ನಾಲೆಯಲ್ಲಿ ಸಿಲುಕಿದ್ದ ಸಲಗವನ್ನು ಯಶಸ್ವಿಯಾಗಿ ರಕ್ಷಿಸಿದ ಅರಣ್ಯ ಸಿಬ್ಬಂದಿ ಮತ್ತು ಪಶುವೈದ್ಯರನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಇಂದು ಸನ್ಮಾನಿಸಿದರು. ಕೊಳ್ಳೆಗಾಲದಲ್ಲಿಂದು ಕಮಾಂಡ್ ಸೆಂಟರ್ ಉದ್ಘಾಟಿಸಿದ ತರುವಾಯ ನಡೆದ ಅಧಿಕಾರಿಗಳ ಸಭೆಗೂ ಮುನ್ನ 40 ಅಡಿ ಆಳದಿಂದ ಆನೆಯನ್ನು ರಕ್ಷಿಸಿದ ತಂಡದಲ್ಲಿದ್ದ ಮಂಡ್ಯ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರಘು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ವಲಯ ಅರಣ್ಯಾಧಿಕಾರಿ ಗವಿಯಪ್ಪ, ಪಶುವೈದ್ಯ ಆದರ್ಶ್ ಹಾಗೂ ಶಾರ್ಪ್ ಶೂಟರ್ ಅಕ್ರಮ್ ಅವರನ್ನು ಈಶ್ವರ ಖಂಡ್ರೆ ಸನ್ಮಾನಿಸಿದರು. ಉತ್ತಮ ಕಾರ್ಯ ಮಾಡಿದ ಸಿಬ್ಬಂದಿ ಪ್ರಶಂಸೆಗೆ ಮತ್ತು ಸನ್ಮಾನಕ್ಕೆ ಅರ್ಹರಾಗುತ್ತಾರೆ. ಅದೇ ರೀತಿ ತಪ್ಪು ಮಾಡುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಯನ್ನೂ ನೀಡಿದರು. https://kannadanewsnow.com/kannada/breaking-central-government-cancels-mandatory-order-to-pre-install-sanchar-sathi-app/ http://kannadanewsnow.com/kannada/breaking-massive-operation-by-ccb-police-in-bengaluru-drugs-worth-28-crore-seized-two-foreign-nationals-arrested/

Read More

ಮಂಡ್ಯ: ಜಿಲ್ಲೆಯಲ್ಲಿ ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿಗೆ ನುಗ್ಗೋದಕ್ಕೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ವೇಳೆ ತಳ್ಳಾಟ ನೂಕಾಟ ಕೂಡ ಉಂಟಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಪರಿಸ್ಥಿತಿ ಕೂಡಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಸಲಾಗುತ್ತಿದೆ. ಈ ವೇಳೆಯಲ್ಲೇ ಜಾಮೀಯಾ ಮಸೀದಿ ಕಡೆಗೆ ನುಗ್ಗೋದಕ್ಕೆ ಹನುಮ ಮಾಲಾಧಾರಿಗಳು ಯತ್ನಿಸಿರುವಂತ ಘಟನೆ ನಡೆದಿದೆ. ಜಾಮೀಯಾ ಮಸೀದಿಗೆ ನುಗ್ಗೋದಕ್ಕೆ ಯತ್ನಿಸಿದಂತ ಹನುಮ ಮಾಲಾಧಾರಿಗಳನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆಯಲ್ಲಿ ಹನುಮ ಮಾಲಾಧಾರಿಗಳು, ಪೊಲೀಸರ ನಡುವೆ ತಳ್ಳಾಟ, ನೂಕಾಟ ಕೂಡ ಉಂಟಾಗಿದೆ. ಇದೀಗ ಶ್ರೀರಂಗ ಪಟ್ಟಣದ ಜಾಮಿಯಾ ಮಸೀದಿ ವೃತ್ತದಲ್ಲಿ ಹನುಮ ಮಾಲಾಧಾರಿಗಳು ಜಮಾವಣೆಗೊಂಡಿದ್ದಾರೆ. ಕೇಸರಿ ಧ್ವಜ ತಿರುಗಿಸಿ ಮಸೀದಿ ಜಾಗ ನಮ್ಮದು ಎಂಬುದಾಗಿ ಘೋಷಣೆ ಕೂಗುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಾಮಿಯಾ ಮಸೀದಿ ಬಳಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. https://kannadanewsnow.com/kannada/menstrual-leave-for-female-government-employees-in-the-state-government-issues-important-order/ https://kannadanewsnow.com/kannada/shocking-sslc-student-commits-suicide-after-bearing-theft-charges/

Read More

ಬೆಂಗಳೂರು: ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ. ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆಯನ್ನು ಪಡೆಯಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ. ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. ಕಾರ್ಮಿಕ ಇಲಾಖೆಯ ಮತ್ತೊಂದು ಮಹತ್ವದ ಕ್ರಮ ಜಾರಿ ರಾಜ್ಯದ ಸರ್ಕಾರಿ ಮಹಿಳಾ ಉದ್ಯೋಗಿಗಳ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಜಾರಿ ಮಾಡಲಾದ ಋತುಚಕ್ರ ರಜೆಯು ಕಾರ್ಮಿಕ ಇಲಾಖೆಯ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ. ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಈ ಸೌಲಭ್ಯ ಜಾರಿಯಾಗುವಲ್ಲಿ ಪ್ರಮುಖ ಪಾತ್ರ…

Read More

ನವದೆಹಲಿ: ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ಗಾಗಿ ಹೊಸ ಭದ್ರತಾ ವೈಶಿಷ್ಟ್ಯವನ್ನು ಪರಿಚಯಿಸಿದೆ. ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒನ್-ಟೈಮ್ ಪಾಸ್‌ವರ್ಡ್ (OTP) ಪರಿಶೀಲನೆಯ ನಂತರವೇ ಪ್ರಯಾಣಿಕರಿಗೆ ಈಗ ಟಿಕೆಟ್‌ಗಳನ್ನು ನೀಡಲಾಗುತ್ತದೆ. ಈ OTP ಪರಿಶೀಲನಾ ವ್ಯವಸ್ಥೆಯು ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ. ರೈಲ್ವೆ ಮಂಡಳಿ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ತತ್ಕಾಲ್ ಬುಕಿಂಗ್ ವ್ಯವಸ್ಥೆಯಲ್ಲಿ ಪ್ರಮುಖ ಮಾರ್ಪಾಡು ಇದೆ. ಸಿಸ್ಟಮ್-ರಚಿತ ಒನ್-ಟೈಮ್ ಪಾಸ್‌ವರ್ಡ್ (OTP) ದೃಢೀಕರಣದ ನಂತರವೇ ತತ್ಕಾಲ್ ಟಿಕೆಟ್‌ಗಳನ್ನು ಈಗ ನೀಡಲಾಗುತ್ತದೆ. ಈ OTP ಅನ್ನು ಬುಕಿಂಗ್ ಸಮಯದಲ್ಲಿ ಪ್ರಯಾಣಿಕರು ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ ಮತ್ತು OTP ಯ ಯಶಸ್ವಿ ಮೌಲ್ಯೀಕರಣದ ನಂತರವೇ ಟಿಕೆಟ್ ನೀಡಲಾಗುತ್ತದೆ ಎಂದು ಪಶ್ಚಿಮ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ. ಮೊದಲ ಹಂತದಲ್ಲಿ, OTP ಆಧಾರಿತ ತತ್ಕಾಲ್ ದೃಢೀಕರಣ ವ್ಯವಸ್ಥೆಯನ್ನು ರೈಲು ಸಂಖ್ಯೆ 12009/12010, ಮುಂಬೈ ಸೆಂಟ್ರಲ್-ಅಹಮದಾಬಾದ್ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಅಳವಡಿಸಲಾಗುವುದು. ನಂತರ ಇದನ್ನು ನೆಟ್‌ವರ್ಕ್‌ನಾದ್ಯಂತ ಇತರ ರೈಲುಗಳಿಗೆ ವಿಸ್ತರಿಸಲಾಗುವುದು. ಈ ಹೊಸ ವ್ಯವಸ್ಥೆಯು…

Read More

ಶಿವಮೊಗ್ಗ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತ ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಈ ಘಟನೆ ನಡೆದಿದೆ. ಮದುವೆಯಾದ ಮರು ದಿನವೇ ನವವಿವಾಹಿತ ರಮೇಶ್(30) ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ನವೆಂಬರ್.30ರಂದು ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ರಮೇಶ್ ಅವರು ಮದುವೆಯಾಗಿದ್ದರು. ಆದರೇ ಮನಕಲಕುವ ಘಟನೆ ಎನ್ನುವಂತೆ ಡಿಸೆಂಬರ್.1ರಂದು ರಮೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮದುವೆಯಾದ ಬಳಿಕ ರಮೇಶ್ ವಧುವಿನ ಮನೆಗೆ ತೆರಳಿದ್ದರು. ಅಲ್ಲಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧು ಮನೆಗೆ ಕರೆದುಕೊಂಡು ಹೋಗಲಾಗಿತ್ತು. ವಧುವಿನ ಮನೆಗೆ ತಲುಪಿದ ನಂತ್ರ ರಮೇಶ್ ದಂಪತಿಗಳು ದೇವರಿಗೆ ಕೈ ಮುಗಿಯುಲು ತೆರಳಿದ ವೇಳೆಯಲ್ಲೇ ಕುಸಿದು ಬಿದ್ದಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆಯಲ್ಲೇ ಮಾರ್ಗ ಮಧ್ಯೆ ಕೊನೆಯುಸಿರು ಎಳೆದಿದ್ದಾರೆ. ರಮೇಶ್ ಅಂತ್ಯಕ್ರಿಯೆಯನ್ನು ಮಂಗಳವಾರದಂದು ನೆರವೇರಿಸಲಾಗಿದೆ. https://kannadanewsnow.com/kannada/conference-to-be-organized-in-delhi-against-vote-rigging-on-december-14-dcm-d-k-shivakumar/ https://kannadanewsnow.com/kannada/shocking-sslc-student-commits-suicide-after-bearing-theft-charges/

Read More

ಬೆಂಗಳೂರು: ಮತಗಳ್ಳತನದ ವಿರುದ್ಧ ದೆಹಲಿಯಲ್ಲಿ ಡಿಸೆಂಬರ್.14ರಂದು ಸಮಾವೇಶ ನಡೆಸಲಾಗುತ್ತದೆ. ರಾಜ್ಯದಿಂದ ಪ್ರತಿ ಜಿಲ್ಲೆಯಿಂದ 300 ಜನರನ್ನು ರೈಲು ಮೂಲಕ ಜನರನ್ನು ಕರೆದೊಯ್ಯಲು ಸೂಚಿಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್.14ರಂದು ಮತಗಳ್ಳತನದ ವಿರುದ್ಧ ದೆಹಲಿ ರಾಮಲೀಲಾ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದಿಂದ ಹೆಚ್ಚಿನ ಜನರನ್ನು ಸಭೆಗೆ ಕರೆತರಲು ಸೂಚಿಸಿದ್ದೇನೆ ಎಂದರು. ಡಿಸೆಂಬರ್.14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವಂತ ಮತಗಳ್ಳತನದ ವಿರುದ್ಧದ ಸಮಾವೇಶದಲ್ಲಿ ಭಾಗಿಯಾಗಲು ಎಲ್ಲಾ ಸಚಿವರು, ಶಾಸಕರಿಗೆ ಹೇಳಿದ್ದೇನೆ. ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದೊಯ್ಯಲು ಸೂಚಿಸಿದ್ದೇನೆ. ಬೆಂಗಳೂರಿನಿಂದಲೇ ಹೆಚ್ಚು ಜನರನ್ನು ಕರೆದುಕೊಂಡು ಹೋಗಬೇಕಿದೆ ಎಂದು ಹೇಳಿದರು. ಜನರನ್ನು ರೈಲುಗಳಲ್ಲಿ ದೆಹಲಿಗೆ ಕರೆದೊಯ್ಯಲು ನಿರ್ಧಾರ ಮಾಡಿದ್ದೇವೆ. ಸಚಿವರು, ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ನಿಮ್ಮ ಜವಾಬ್ದಾರಿ ಇದೆ. ನೀವೇ ಮಾಡಬೇಕು ಎಂಬುದಾಗಿ ಹೇಳಿದ್ದೇನೆ ಎಂದರು. https://kannadanewsnow.com/kannada/bjp-files-complaint-against-metro-officials-to-lokayukta-do-you-know-the-reason/ https://kannadanewsnow.com/kannada/shocking-sslc-student-commits-suicide-after-bearing-theft-charges/

Read More

ಬೆಂಗಳೂರು: ನಮ್ಮ ಮೆಟ್ರೋ ಅಧಿಕಾರಿಗಳ ವಿರುದ್ಧವೇ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು ನೀಡಲಾಗಿದೆ. ಕಾರಣವೇನು ಅಂತ ಮುಂದೆ ಓದಿ. ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿಗಳ ವಿರುದ್ಧ ಬಿಜೆಪಿಯಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಅದು ನಮ್ಮ ಮೆಟ್ರೋ ನಿಲ್ದಾಣಗಳು, ಶೌಚಾಲಯಗಳು, ಹಸಿರು ಪ್ರದೇಶಕ್ಕೆ ನೀಡಲಾಗಿದ್ದ ಸರ್ಕಾರಿ ಜಾಗವನ್ನು ಖಾಸಗಿ ಹೋಟೆಲ್ ಉದ್ಯಮಿಗಳಿಗೆ ಕೊಟ್ಟು ಅಕ್ರಮ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಆಗಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ, ಜಯನಗರ ಶಾಸಕ ಕೆ.ಸಿ ರಾಮಮೂರ್ತಿ ನೇತೃತ್ವದಲ್ಲಿ ಲೋಕಾಯುಕ್ತಕ್ಕೆ ನಮ್ಮ ಮೆಟ್ರೋ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಬಿಜೆಪಿ ನೀಡಿರುವಂತ ದೂರಿನಲ್ಲಿ ಮೆಟ್ರೋ ಮಾರ್ಗದಲ್ಲಿ ಅಕ್ರಮ ವಾಣಿಜ್ಯ ಮಳಿಗೆಗಳಿಗೆ ಅವಕಾಶ ಮಾಡಿಕೊಟ್ಟಿರುವಂತ ಗಂಭೀರ ಆರೋಪವನ್ನು ಮಾಡಲಾಗಿದೆ. https://kannadanewsnow.com/kannada/minister-ramalinga-reddy-distributes-rs-1-crore-compensation-each-to-the-families-of-deceased-ksrtc-employees/ https://kannadanewsnow.com/kannada/attention-public-complete-these-3-important-tasks-by-december-31st/

Read More

ಬೆಂಗಳೂರು: ಅಪಘಾತ ಹಾಗೂ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂರು ಸಿಬ್ಬಂದಿಯ ಕುಟುಂಬಕ್ಕೆ ತಲಾ ರೂ.1 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 3.10 ಕೋಟಿ ಪರಿಹಾರ ಹಾಗೂ ಇಬ್ಬರು ಅವಲಂಬಿತರಿಗೆ ರೂ.14 ಲಕ್ಷದಂತೆ ರೂ.28 ಲಕ್ಷ ಪರಿಹಾರ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದರು. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆ ಎಸ್ ಆರ್ ಟಿ ಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಅವರು ವಾಣಿಜ್ಯ ಮಳಿಗೆಗಳ ನಿರ್ವಹಣೆ ತಂತ್ರಾಂಶ ಇ-ವಾಣಿಜ್ಯ ಬಿಡುಗಡೆ (Soft Launch) ಮಾಡಿದರು. 1) ಸಾರಿಗೆ ಸುರಕ್ಷಾ ವಿಮಾ ಯೋಜನೆ: o ಸಂಸ್ಥೆಯು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1…

Read More