Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಮಾಹಿತಿಹಕ್ಕು ಅಧಿನಿಯಮದಡಿ ಅರ್ಜಿದಾರರು ಮಾಹಿತಿ ಕೋರಿ ತಮ್ಮ ಕಚೇರಿಗಳಿಗೆ ಸಲ್ಲಿಸುವ ಅರ್ಜಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ನಿಯಮಾನುಸಾರ ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯೋಜಿತ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಕರ್ನಾಟಕ ಮಾಹಿತಿ ಆಯೋಗವು ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರ ಜಾಗೃತಿ ಕಾರ್ಯಕ್ರಮ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ವಿವಿಧ ಇಲಾಖೆಗಳ ಜವಾಬ್ದಾರಿಯುತ ಅಧಿಕಾರಿಗಳು ತಮ್ಮ ಕಚೇರಿಯ ಅಧಿಕಾರಿ ಸಿಬ್ಬಂಧಿಗಳ ವಿವರಗಳನ್ನು 4-1ಎ ಮತ್ತು 4-1ಬಿ ನಮೂನೆಗಳನ್ನು ಭರ್ತಿ ಮಾಡಿ ಪ್ರತಿ ವರ್ಷ ಇಲಾಖೆಯ ಜಾಲತಾಣದಲ್ಲಿ ಉನ್ನತೀಕರಿಸಿ ಸಾರ್ವಜನಿಕ ಮಾಹಿತಿಗೆ ಲಭ್ಯವಿರುವಂತೆ ಗಮನಿಸಬೇಕು. ಇದರಿಂದಾಗಿ ಇಲಾಖೆಗೆ ಮಾಹಿತಿ ಕೋರಿ ಬರುವ ಅರ್ಜಿಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿವೆ ಎಂದ ಅವರು ಅರ್ಜಿದಾರರು…
ಉತ್ತರ ಕನ್ನಡ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದು ಶತಸಿದ್ಧ. ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂಬುದಾಗಿ ದೈವವಾಣಿಯನ್ನು ನುಡಿಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದಲ್ಲಿರುವಂತ ಜಗದೀಶ್ವರಿ ದೇವಾಲಯದ ಸನ್ನಿಧಿಯಲ್ಲಿ 5 ಬೇಡಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಇಟ್ಟಿದ್ದಾರೆ. ಅವರು ಇರಿಸಿರುವಂತ ಐದು ಬೇಡಿಕೆಗಳಿಗೂ ಒಳ್ಳೆಯ ಮುನ್ನೂಚನೆಯನ್ನು ಜಗದೀಶ್ವರಿ ಕೊಟ್ಟಿರುವುದಾಗಿ ಹೇಳಲಾಗುತ್ತಿದೆ. ರಾಜಕೀಯ ವಿಚಾರ ಮೂರು ಬಾರಿ, ಕೌಟುಂಬಿಕ ವಿಚಾರ ಒಂದು ಬಾರಿ, ಆಪ್ತ ಕಾರ್ಯದರ್ಶಿ ಕಾರು ಅಪಘಾತದ ಬಗ್ಗೆ ಒಮ್ಮೆ ಡಿಕೆ ಶಿವಕುಮಾರ್ ಕೇಳಿದ್ದಕ್ಕೆ ದೈವವಾಣಿ ನುಡಿಯಲಾಗಿದೆ. ಕೆಲ ಬೇಡಿಕೆಗಳಿಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಜಗದೀಶ್ವರಿ ತಿಳಿಸಲಾಗಿದೆ ಎನ್ನಲಾಗುತ್ತಿದೆ. ಐದು ಬೇಡಿಕೆ ಪೈಕಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆಯೂ ಡಿ.ಕೆ ಶಿವಕುಮಾರ್ ದೈವ ನುಡಿಯನ್ನು ಕೇಳಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ಒಂದೂವರೆ ತಿಂಗಳಲ್ಲಿ ಶುಭಸುದ್ದಿ ಬರಲಿದೆ ಎಂಬುದಾಗಿ ದೈವವಾಣಿ ನುಡಿಯಲಾಗಿದೆ. ಸಿಎಂ ಆಗುವುದು ಶತಸಿದ್ಧ, ಕೆಲ ದುಷ್ಟ ಶಕ್ತಿಗಳ ಪ್ರಭಾವದಿಂದ ಅಡ್ಡಿ ಆಗ್ತಿದೆ. ದುಷ್ಟ…
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ರೈಲು ಅರ್ಧಗಂಟೆಯಿಂದ ನಿಂತಲ್ಲೇ ನಿಂತಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತೆ ಆಗಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಹಳದಿ ಮಾರ್ಗದಲ್ಲಿ ಇಂದು (20.12.2025) ಸಂಜೆ 16:45ರಿಂದ ಒಂದು ರೈಲಿನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸೇವೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ. ಪ್ರಸ್ತುತ ರೈಲುಗಳು 15 ನಿಮಿಷಗಳ ಬದಲಾಗಿ 19 ನಿಮಿಷಗಳ ಅವಧಿಯಲ್ಲಿ ಸಂಚರಿಸುತ್ತಿವೆ. ಸಾಮಾನ್ಯ ಸೇವೆಯನ್ನು ಶೀಘ್ರದಲ್ಲೇ ಪುನಃ ಆರಂಭಿಸಲು ನಮ್ಮ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/want-your-luck-to-change-place-a-copper-sun-sign-in-this-direction-of-your-house/
ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ ಬಿಸಿನೀರಿನ ಪಾತ್ರೆಗೆ ಬಿದ್ದಿದ್ದಾಳೆ. ತಾಯಿ ಬಿಸಿ ನೀರಿನ ಪಾತ್ರೆಗೆ ಬಿದ್ದ ವೇದಾಳನ್ನು ರಕ್ಷಿಸಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಇದೀಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/ksrtc-kannada-action-committee-celebrates-kannada-rajyotsava-on-a-grand-scale-honors-to-achievers/
ಬೆಂಗಳೂರು: ನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಕನ್ನಡ ಕ್ರಿಯಾ ಸಮಿತಿಯಿಂದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನ ಶಾಂತಿನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಕ್ರಿಯಾ ಸಮಿತಿ, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭರಂಭ ನಡೆಯಿತು. ಕನ್ನಡ ಚಳುವಳಿಗಾರರು, ನಿರ್ಮಾಪಕ ಸಾ.ರಾ.ಗೋವಿಂದುರವರು, ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜೆ.ಅಂತೋನಿ ಜಾರ್ಜ್, ವಿಭಾಗೀಯ ನಿಯಂತ್ರಾಧಿಕಾರಿಗಳಾದ ಬಿ.ಎಸ್.ನಾಗರಾಜ್ ಮೂರ್ತಿ, ಸಾರ್ವಜನಿಕ ಸಂಪರ್ಕಾಧಿಕಾರಿ ಲತಾರವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕನ್ನಡ ಕ್ರಿಯಾ ಸಮಿತಿ ಗೌರವ ಅಧ್ಯಕ್ಷರಾದ ವ.ಚ.ಚನ್ನೇಗೌಡರು, ರಾಜ್ಯಾಧ್ಯಕ್ಷರಾದ ಕೆ.ಎಸ್.ಪ್ರಭುಸ್ವಾಮಿ, ವಲಯ ಅಧ್ಯಕ್ಷರಾದ ಕೆ.ಎಸ್.ಎಂ.ಹುಸೇನ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಖ್ಯಾತ ಸಾಹಿತಿ, ನಿವೃತ್ತ ಐಪಿಎಸ್ ಅಧಿಕಾರಿ ಡಾ||ಡಿ.ವಿ.ಗುರುಪ್ರಸಾದ್, ಕನ್ನಡ ಪರಿಚಾರಕರಾದ ಹೆಚ್.ಎನ್.ರಮೇಶ್ ಬಾಬು, ಸಂಗೀತ ಗಮಕ ವಿದ್ವಾನ್…
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ರೈಲು ಅರ್ಧಗಂಟೆಯಿಂದ ನಿಂತಲ್ಲೇ ನಿಂತಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತೆ ಆಗಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಹಳದಿ ಮಾರ್ಗದಲ್ಲಿ ಇಂದು (20.12.2025) ಸಂಜೆ 16:45ರಿಂದ ಒಂದು ರೈಲಿನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸೇವೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ. ಪ್ರಸ್ತುತ ರೈಲುಗಳು 15 ನಿಮಿಷಗಳ ಬದಲಾಗಿ 19 ನಿಮಿಷಗಳ ಅವಧಿಯಲ್ಲಿ ಸಂಚರಿಸುತ್ತಿವೆ. ಸಾಮಾನ್ಯ ಸೇವೆಯನ್ನು ಶೀಘ್ರದಲ್ಲೇ ಪುನಃ ಆರಂಭಿಸಲು ನಮ್ಮ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/good-news-for-egg-lovers-fssai-says-eggs-do-not-pose-a-risk-of-cancer/
ನವದೆಹಲಿ: ಮೊಟ್ಟೆಗಳಲ್ಲಿ ಕ್ಯಾನ್ಸರ್ ಜನಕ ವಸ್ತುಗಳು ಕಂಡುಬರುವ ಬಗ್ಗೆ ನಡೆಯುತ್ತಿರುವ ಕಳವಳಗಳ ನಡುವೆ, ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಶನಿವಾರ ದೇಶದಲ್ಲಿ ಲಭ್ಯವಿರುವ ಮೊಟ್ಟೆಗಳು ಮಾನವ ಬಳಕೆಗೆ ಸುರಕ್ಷಿತವೆಂದು ಸ್ಪಷ್ಟವಾಗಿ ಹೇಳಿದೆ. ಮಾಲಿನ್ಯದ ಹಕ್ಕುಗಳನ್ನು “ದಾರಿತಪ್ಪಿಸುವ” ಎಂದು ನಿರಾಕರಿಸಿದ ನಿಯಂತ್ರಕ, ಒಂದು ಹೇಳಿಕೆಯಲ್ಲಿ, “ಇವು ವೈಜ್ಞಾನಿಕವಾಗಿ ಬೆಂಬಲಿತವಾಗಿಲ್ಲ ಮತ್ತು ಅನಗತ್ಯ ಸಾರ್ವಜನಿಕ ಎಚ್ಚರಿಕೆಯನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿವೆ” ಎಂದು ಗಮನಿಸಿದರು. ಇತ್ತೀಚಿನ ದಿನಗಳಲ್ಲಿ ಹಲವಾರು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಮೆಟಾಬಾಲೈಟ್ಗಳು (AOZ) – ಕ್ಯಾನ್ಸರ್ ಜನಕ ವಸ್ತುಗಳು – ಇರುವಿಕೆಯನ್ನು ಆರೋಪಿಸಿವೆ. “ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಮಾಲಿನ್ಯಕಾರಕಗಳು, ವಿಷಗಳು ಮತ್ತು ಉಳಿಕೆಗಳು) ನಿಯಮಗಳು, 2011 ರ ಅಡಿಯಲ್ಲಿ ಕೋಳಿ ಮತ್ತು ಮೊಟ್ಟೆಗಳ ಉತ್ಪಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋಫ್ಯೂರಾನ್ಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು FSSAI ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. FSSAI ಪ್ರಕಾರ, ನಿಯಂತ್ರಕ ಜಾರಿ ಉದ್ದೇಶಗಳಿಗಾಗಿ ಮಾತ್ರ ನೈಟ್ರೋಫ್ಯೂರಾನ್ ಮೆಟಾಬಾಲೈಟ್ಗಳಿಗೆ…
ಬೆಂಗಳೂರು: ನಾಲಿಗೆ ಹರಿಬಿಡುವುದರಲ್ಲಿ ಪ್ರಿಯಾಂಕ್ ಖರ್ಗೆಯವರು ಇಡೀ ಕಾಂಗ್ರೆಸ್ಸಿನಲ್ಲಿ ನಂಬರ್ 1 ಇದ್ದಾರೆ ಎಂದು ಟೀಕಿಸಿದರು. ಖರ್ಗೆ ಎಂಬ ಹೆಸರು ಪ್ರಿಯಾಂಕ್ ಪಕ್ಕದಲ್ಲಿ ಇಲ್ಲದೇ ಇರುತ್ತಿದ್ದರೆ ಅವರು ಮಂಡಲ ಪಂಚಾಯತ್ ಸದಸ್ಯರೂ ಆಗುತ್ತಿರಲಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗುಡುಗಿದ್ದಾರೆ. ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ವಂಶಪಾರಂಪರ್ಯದಲ್ಲಿ ಆ ರಾಜಮನೆತನದ ಆಡಳಿತವೇ ಮತ್ತೆ ಬಂದ ಹಾಗೆ ಕಾಣುತ್ತಿದೆ ಎಂದು ಟೀಕಿಸಿದರು. ಪ್ರಿಯಾಂಕ್ ಖರ್ಗೆಯವರು ಸದನದಲ್ಲಿ ಉತ್ತರ ಕೊಡಬೇಕಾದ ವೇಳೆ ಪರಾರಿಯಾಗುತ್ತಾರೆ. ಅವರ ಸಾಧನೆ ಶೂನ್ಯವಾದುದೇ ಇದಕ್ಕೆ ಕಾರಣ ಎಂದು ತಿಳಿಸಿದರು. ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ, ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಅವರು ಭಾಗವಹಿಸಿದ್ದರು.
ಬೆಂಗಳೂರು: ನಿನ್ನೆ ರಾಜ್ಯದ ವಿಧಾನಪರಿಷತ್ತಿನಲ್ಲಿ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳಕಾರಿಯಾಗಿ ಮತ್ತು ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿದ್ದನ್ನು ಖಂಡಿಸುತ್ತೇನೆ. ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚಿಸುವಂತೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಯವರು ಕೂಡಲೇ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದರು. ನಿನ್ನೆ ಕರ್ನಾಟಕ ಸರಕಾರವು ದ್ವೇಷ ಭಾಷಣ ನಿಯಂತ್ರಣ ಕಾನೂನನ್ನು ಎರಡೂ ಸದನಗಳಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ. ಆ ಕಾನೂನಿನಡಿ ಪ್ರಿಯಾಂಕ್ ಖರ್ಗೆ ಮೊದಲನೇ ಅಪರಾಧಿ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಉತ್ತರ ಕರ್ನಾಟಕದ ಬಿಜಾಪುರ, ರಾಯಚೂರು, ಗುಲ್ಬರ್ಗ, ಹೈದರಾಬಾದ್ನಲ್ಲಿ ಒಂದು ನಾಣ್ಣುಡಿ ಇದೆ. ಸಣ್ಣ ಬಾಯೊಳಗೆ ದೊಡ್ಡ ಮಾತು (ಚೋಟಿ ಮುಹ್, ಬಡೀ ಬಾತ್) ಎಂಬರ್ಥವನ್ನು ಇದು ಕೊಡುತ್ತದೆ. ಈ ನಾಣ್ಣುಡಿ ಪ್ರಿಯಾಂಕ್ ಸಲುವಾಗಿಯೇ ಇದ್ದಂತಿದೆ…
ಬೆಂಗಳೂರು: ಜನಪರ ಸಚಿವರಾದ ಕೃಷ್ಣ ಬೈರೇಗೌಡರ ಮೇಲೆ ಏಕೆ ಈ ಸುಳ್ಳು ಆರೋಪ ಎನ್ನುವ ಬಗ್ಗೆ ಮುಂದೆ ಓದಿ.. – ಕಂದಾಯ ಇಲಾಖೆಯಲ್ಲಿ ವರ್ಗಾವಣೆಯಲ್ಲಿ ಪಾರದರ್ಶಕತೆ ತಂದಿದ್ದರು. – ಕೆಲಸ ಮಾಡದ ಎಸಿ-ತಹಶೀಲ್ದಾರ್ ಗಳ ವಿರುದ್ಧ ಕಠಿಣ ಕ್ರಮ ವಹಿಸಿ ಎಲ್ಲಾ ಅಧಿಕಾರಿಗಳಿಂದ ಕೆಲಸ ತೆಗೆಸಿದ್ದರು. – ಇಲಾಖೆಯ ಎಲ್ಲಾ ಕೆಲಸಗಳನ್ನೂ ಡಿಜಿಟಲೀಕರಣಗೊಳಿಸಿ ಇ-ಆಫೀಸ್ ಜಾರಿಗೆ ತಂದು ಭ್ರಾಷ್ಟಾಚಾರಕ್ಕೆ ಇತಿಶ್ರೀ ಹಾಡಿದ್ದರು. – ದಶಕಗಳ ಸಮಸ್ಯೆಯಾಗಿದ್ದ ಪೋಡಿ ದುರಸ್ಥಿಗೆ ಕೆಲಸಕ್ಕೆ ಕೈಹಾಕಿ ರೈತರಿಗೆ ನೆಮ್ಮದಿ ನೀಡಿದರು. – ಬಗರ್ ಹುಕುಂ ಮಂಜೂರಿಯಲ್ಲಿ ಪಾರದರ್ಶಕತೆ ತಂದರು. – ಆದರೂ, ಕೃಷ್ಣ ಬೈರೇಗೌಡರ ವಿರುದ್ಧ ಏಕೆ ಈ ಮಟ್ಟದ ಸುಳ್ಳು ಆರೋಪಗಳ ಷಡ್ಯಂತ್ರವಾಗಿದೆ ಎನ್ನಲಾಗುತ್ತಿದೆ. – ತಾನೂ ತಿನ್ನೋಲ್ಲ ತಿನ್ನೋರಿಗೂ ಬಿಡಲ್ಲ ಎಂಬ ನಿಲುವೇ ಮುಳುವಾಯಿತೇ.?? ಎಂಬುದು ಆಪ್ತ ವಲಯದ ಮಾತು. – ಅಕ್ರಮ ಭೂ ಮಂಜೂರಿಗಾಗಿ ಮನವಿ ಸಲ್ಲಿಸಿದ್ದ ಹಲವು ಪ್ರಭಾವಿಗಳ ಮನವಿಗೆ ಕಿವಿಗೊಡದ ಇದ್ದದ್ದೇ ತಪ್ಪಾಯಿತೇ? ಎಂಬ ಪ್ರಶ್ನೆ ಸಾರ್ವಜನಿಕರದ್ದು. -…














