Author: kannadanewsnow09

ಬೆಂಗಳೂರು : ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032 ಜಾರಿಗೆ ತರಲು ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಕೌಶಲ್ಯ ನೀತಿಗೆ ಅನುಮೋದನೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಅಭಿವೃದ್ಧಿ ನೀತಿಯಿಂದ ರಾಜ್ಯದ ಪ್ರಗತಿಗೆ ಅತ್ಯಂತ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, 2032 ರ ವೇಳೆಗೆ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಹೊಂದಲಾಗಿದ್ದು, ಇದನ್ನು ಸಾಕಾರಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ಸಚಿವ ಡಾ. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಕೌಶಲ್ಯ ನೀತಿಯ ಪ್ರಮುಖ ಅಂಶಗಳು • ಕಲಿಕೆ ಜೊತೆಗೆ ಕೌಶಲ್ಯ, ನನ್ನ ವೃತ್ತಿ ನನ್ನ…

Read More

ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್ ತಿಂಗಳಲ್ಲಿ ಮೀಟರ್ ರೀಡರ್‌ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್‌ ರೀಡಿಂಗ್‌ಅನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್‌ ಬಿಲ್‌ ವಿತರಣೆಯ ದಿನಾಂಕವನ್ನು ಸೆ.15ನೇ ತಾರಿಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿತ್ತು. ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್‌ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳುಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್‌ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/instructions-to-start-social-and-educational-survey-work-immediately-chief-commissioner-maheshwar-rao/

Read More

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸದಂತೆ ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮೀಕ್ಷೆ ಮಾಡಲು ವಿವಿಧ ಇಲಾಖೆಗಳಿಂದ ನಿಯೋಜಿಸಲ್ಪಟ್ಟ ಗಣತಿದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ತರಬೇತಿ ನೀಡಿ ತ್ವರಿತವಾಗಿ ಸಮೀಕ್ಷಾ ಕಾರ್ಯ ಆರಂಭಿಸಲು ಸೂಚನೆ ನೀಡಿದರು. ನಗರದಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಸಮೀಕ್ಷಾ ಕಾರ್ಯವನ್ನು ನಡೆಸಬೇಕು. ಜೊತೆಗೆ ಆಶಾ ಕಾರ್ಯಕರ್ತೆಯರನ್ನು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಈ ಸಂಬಂಧ ಆಶಾ ಕಾರ್ಯಕರ್ತೆಯರಿಗೆ ನುರಿತ ತರಬೇತಿದಾರರಿಂದ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ನಗರ ಪಾಲಿಕೆಗಳ ಆಯುಕ್ತರು ತರಬೇತಿ ನಡೆಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು…

Read More

ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC…

Read More

ಶಿವಮೊಗ್ಗ: ತ್ರೈಮಾಸಿಕ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್.26, 2025ರ ನಾಳೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಸಾಗರ ಮೆಸ್ಕಾಂ ಇಲಾಖೆಯು ದಿನಾಂಕ: 26.09.2025 ರ ಶುಕ್ರವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ 26.09.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-13 ರಾಮನಗರ ಇಂಡಸ್ಟ್ರಿಯಲ್ ಏರಿಯಾ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ, ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ,…

Read More

ಇತ್ತೀಚಿನ ದಿನಗಳಲ್ಲಿ, ಅನೇಕ ಯುವಕರು ತಮ್ಮ ಅಧ್ಯಯನವನ್ನು ಬದಿಗಿಟ್ಟು ಪ್ರೀತಿಯ ಹೆಸರಿನಲ್ಲಿ ದಾರಿ ತಪ್ಪುತ್ತಿದ್ದಾರೆ. ಕೆಲವರು ಕೆಟ್ಟ ಅಭ್ಯಾಸಗಳಿಗೆ ವ್ಯಸನಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಶಾಲೆಗೆ ಹೋಗುತ್ತೇನೆ ಎಂಬುದಾಗಿ ಹೊರಟು ಹೋದಂತ ಮಗಳನ್ನು ಹಿಂಬಾಲಿಸಿ ತೆರಳಿದಂತ ತಾಯಿಗೆ ಕಂಡದ್ದು ಮಾತ್ರ ಶಾಕಿಂಗ್ ಆಗುವಂತದ್ದು. ಆ ಬಗ್ಗೆ ಮುಂದೆ ಓದಿ. ಇತ್ತೀಚೆಗೆ 18 ವರ್ಷ ತುಂಬದ ಕೆಲವು ಹುಡುಗಿಯರು ಪ್ರೀತಿಯ ಹೆಸರಿನಲ್ಲಿ ಮೋಸ ಹೋಗುವುದನ್ನು ನಾವು ನೋಡಿದ್ದೇವೆ. ಇನ್ನು ಕೆಲವರನ್ನು ಅವರ ಪೋಷಕರು, ಅವರ ಪ್ರೇಮಿಗಳು ಸೇರಿದಂತೆ ರೆಡ್ ಹ್ಯಾಂಡ್ ಆಗಿ ಹಿಡಿಯುತ್ತಿದ್ದಾರೆ. ಇಂತಹ ಘಟನೆಗಳ ವೀಡಿಯೊಗಳನ್ನು ನಾವು ಸಾಮಾಜಿಕ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಇಂತಹ ವೀಡಿಯೊವೊಂದು ಹರಿದಾಡುತ್ತಿದೆ. ಶಾಲೆಗೆ ಹೋಗುತ್ತಿದ್ದ ತನ್ನ ಮಗಳ ಮೇಲೆ ತಾಯಿಗೆ ಅನುಮಾನ ಬಂತು. ಅವಳು ಹಿಂದೆ ಹೋಗಿ ಕೊನೆಗೆ ಏನಾಯಿತು ಎಂದು ನೋಡಿದಳು. ಒಂದು ವಿಡಿಯೋ (ವೈರಲ್ ವಿಡಿಯೋ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶಾಲೆಗೆ ಹೋಗುತ್ತಿದ್ದ ಹುಡುಗಿ ಮನೆಯಿಂದ ಹೊರಟಿದ್ದಳು. ಆದರೆ, ಕೆಲವು…

Read More

ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು ಎಂಬುದಾಗಿ ಮುಂದೆ ಓದಿ. ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಕೂಡ ಕಾರಣ ಏನು ಅಂತ ರಿವೀಲ್ ಮಾಡಿದ್ದಾರೆ. ರೇಷನ್ ಕಾರ್ಡ್ ರದ್ದುಗೊಳ್ಳೋದಕ್ಕೆ ಮುಖ್ಯ ಕಾರಣ ಆ ಕುಟುಂಬದವರಲ್ಲಿ ಒಬ್ಬರು ಆದಾಯ ತೆರಿಗೆ ಪಾವತಿಸಿರೋದಾಗಿದೆ. ರೇಷನ್ ಕಾರ್ಡ್ ರದ್ದು ಮಾಡಿರೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ನೆನಪಿದ್ಯೋ ಇಲ್ಲವೋ ಗೊತ್ತಿಲ್ಲ ಮೊದಲು ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ, ಆ ಬಳಿಕ ಆಧಾರ್ ಗೆ ಪ್ಯಾನ್ ನಂಬರ್ ಕೂಡ ಲಿಂಕ್…

Read More

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026 ರ 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ತಾತ್ಕಾಲಿಕ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗಳು ಫೆಬ್ರವರಿ 17 ರಂದು ಪ್ರಾರಂಭವಾಗಲಿವೆ. 10 ನೇ ತರಗತಿ ಪರೀಕ್ಷೆಗಳು ಮಾರ್ಚ್ 9 ರಂದು ಮತ್ತು 12 ನೇ ತರಗತಿ ಪರೀಕ್ಷೆಗಳು ಏಪ್ರಿಲ್ 9, 2026 ರಂದು ಕೊನೆಗೊಳ್ಳಲಿವೆ. 10 ನೇ ತರಗತಿಯ ಮಾಧ್ಯಮಿಕ ಶಾಲಾ ಪರೀಕ್ಷೆಗಳು ಗಣಿತ ಪ್ರಮಾಣಿತ ಮತ್ತು ಮೂಲ ಪರೀಕ್ಷೆಗಳೊಂದಿಗೆ ಪ್ರಾರಂಭವಾಗಲಿವೆ. ಪರೀಕ್ಷೆಗಳು ಫೆಬ್ರವರಿ 17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ. 10 ನೇ ತರಗತಿಯ ಪರೀಕ್ಷೆಗಳು ಭಾಷೆಗಳು ಮತ್ತು ಸಂಗೀತ ಪರೀಕ್ಷೆಗಳೊಂದಿಗೆ ಕೊನೆಗೊಳ್ಳಲಿವೆ. 12 ನೇ ತರಗತಿ ಅಥವಾ ಹಿರಿಯ ಶಾಲಾ ಪರೀಕ್ಷೆಯು ಫೆಬ್ರವರಿ 17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಜೈವಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಸಂಕ್ಷಿಪ್ತ ರೂಪ (ಇಂಗ್ಲಿಷ್ ಮತ್ತು ಹಿಂದಿ) ಯೊಂದಿಗೆ…

Read More

ರೈಲ್ವೆ ನೇಮಕಾತಿ ಮಂಡಳಿಗಳು (RRBs) ಅಧಿಕೃತವಾಗಿ RRB NTPC 2025 ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದಾದ್ಯಂತ ಒಟ್ಟು 8,875 ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿ ಅಭಿಯಾನವು ಪದವೀಧರ ಮತ್ತು 12 ನೇ ತರಗತಿಯ ಅರ್ಹ ಅಭ್ಯರ್ಥಿಗಳಿಗೆ ಅವಕಾಶಗಳನ್ನು ಒಳಗೊಂಡಿದೆ ಮತ್ತು ವಿವಿಧ ರೈಲ್ವೆ ಇಲಾಖೆಗಳಲ್ಲಿ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಈ ಖಾಲಿ ಹುದ್ದೆಗಳಲ್ಲಿ, 5,817 ಹುದ್ದೆಗಳು ಪದವಿ ಹಂತದ ಅಭ್ಯರ್ಥಿಗಳಿಗೆ, ಆದರೆ 3,058 ಹುದ್ದೆಗಳು 12 ನೇ ತರಗತಿಯ ಉತ್ತೀರ್ಣ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಅರ್ಜಿಗಳನ್ನು ಅಧಿಕೃತ RRB ಪೋರ್ಟಲ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಲಾಗುತ್ತದೆ, ವಿವರವಾದ ಅಧಿಸೂಚನೆಗಳು rrbcdg.gov.in ನಲ್ಲಿ ಲಭ್ಯವಿದೆ. RRB NTPC 2025 ಕ್ಕೆ ಅರ್ಹತಾ ಮಾನದಂಡಗಳು ಪದವಿ ಹುದ್ದೆಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 12 ನೇ ತರಗತಿಯ ಹುದ್ದೆಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.…

Read More

ಶಿವಮೊಗ್ಗ: 2024-25ನೇ ಸಾಲಿನಲ್ಲಿ ಆಪ್ಸ್ ಕೋಸ್ ಗೆ 4.20 ಕೋಟಿ ಲಾಭಾಂಶ ಬಂದಿದೆ. ಅಡಿಕೆ ಬೆಳೆಗಾರರ ಹಿತಕಾಯಲು ಸಂಘವು ಸಿದ್ಧವಿದೆ. ಯಾವುದೇ ಬೆಳೆಗಾರರು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ಅಧ್ಯಕ್ಷ ಬಿ.ಎ ಇಂದೂದರ ಬೇಸೂರು ತಿಳಿಸಿದ್ದಾರೆ. https://youtu.be/HSMZ-CSzGsc ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಭದ್ರಕಾಳಿ ಸಭಾಭವನದಲ್ಲಿ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ, ಹೊಸನಗರ, ಸೊರಬ ತಾಲ್ಲೂಕಿನ ನಮ್ಮ ಸದಸ್ಯರು ಇಂದು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ 4.20 ಕೋಟಿ ಲಾಭ ಗಳಿಸಿದೆ. ಎಲೆಚುಕ್ಕಿ, ಕೊಳೆರೋಗ ಬಂದು ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಅವರೊಂದಿಗೆ ಆಪ್ಸ್ ಕೋಸ್ ಇದೆ ಎಂಬುದಾಗಿ ಧೈರ್ಯ ತುಂಬಿದರು. ಕೃಷಿ ವಲಯದಲ್ಲಿ ರೈತರಿಗೆ ಅನುಕೂಲವಾಗುವಂತ ಎಲ್ಲಾ ವಸ್ತುಗಳನ್ನು ನೀಡಲಾಗುತ್ತಿದೆ. 2.50 ಕೋಟಿ ಮೌಲ್ಯದ ಎಲ್ಲಾ ಕೃಷಿ ಉಪಕರಣಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ನಾವು ರೈತರಿಗಾಗಿ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ. ಅಪಘಾತ ವಿಮೆ ಮಾಡಲಾಗುತ್ತಿದೆ. ಅಡಿಕೆ ಕೊಯ್ಲಿನ…

Read More