Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಚುನಾವಣೆಗೆ ಮುಂಚಿತವಾಗಿ ಉಚಿತ ಕೊಡುಗೆಗಳನ್ನು ಘೋಷಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಈ ಅಭ್ಯಾಸವು ಜನರಿಗೆ ಉಚಿತ ಪಡಿತರ ಮತ್ತು ಹಣವನ್ನು ಪಡೆಯುತ್ತಿರುವುದರಿಂದ ಕೆಲಸ ಮಾಡಲು ಬಯಸಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ನಗರ ಪ್ರದೇಶಗಳಲ್ಲಿ ವಸತಿರಹಿತರ ಆಶ್ರಯ ಹಕ್ಕಿಗೆ ಸಂಬಂಧಿಸಿದ ವಿಷಯದ ವಿಚಾರಣೆಯ ಸಂದರ್ಭದಲ್ಲಿ ಚುನಾವಣೆಗೆ ಮೊದಲು ಉಚಿತ ಕೊಡುಗೆಗಳನ್ನು ನೀಡುವ ಅಭ್ಯಾಸದ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದೆ ಎಂದು ವರದಿ ತಿಳಿಸಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? “ದುರದೃಷ್ಟವಶಾತ್, ಈ ಉಚಿತಗಳಿಂದಾಗಿ … ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಅವರು ಯಾವುದೇ ಕೆಲಸ ಮಾಡದೆ ಹಣವನ್ನು ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು. ಮನೆಯಿಲ್ಲದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ನೀಡಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. “ಅವರ…
ಎಷ್ಟೇ ದುಡಿದರೂ ಕೈಯಲ್ಲಿ ಹಣವಿಲ್ಲ ಎಂಬ ಕೊರಗು ಇರುವವರಿಗೆ ಭರತ ಪೌರ್ಣಮಿಯ ದಿನ ಈ ಮೂರು ವಸ್ತುಗಳನ್ನು ಒಟ್ಟಿಗೆ ಇಟ್ಟರೆ ಧನಸ್ಸು ಸೃಷ್ಟಿಯಾಗುತ್ತದೆ. ಕಷ್ಟಪಟ್ಟು ದುಡಿದ ಹಣವೂ ಕೈ ಹಿಡಿಯಲು ಶುರುವಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…
ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಪ್ರಕಟಿಸಿತ್ತು. ಅದರಂತೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಇಂದು ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ. ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು…
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಂಬಂಧ, ಮೂವರು ಐಎಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ., ಐಎಎಸ್ (ಕೆಎನ್: 1998) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ ಎಂ.ಎನ್ ಅವರನ್ನು ಕೇಂದ್ರ ಸರ್ಕಾರಿ ಸೇವೆಗೆ ಡೆಪ್ಯುಟೇಶನ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಿ ಆದೇಶಿಸಿದೆ. ಮನೋಜ್ ಜೈನ್, ಐಎಎಸ್ (ಕೆಎನ್: 2006), ಸರ್ಕಾರದ ಕಾರ್ಯದರ್ಶಿ,…
ಬೆಂಗಳೂರು: ನಗರದಲ್ಲಿ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಾಡುಬೀಸರಹಳ್ಳಿಯ ಅಪಾರ್ಮೆಂಟ್ ನಲ್ಲಿದ್ದಂತ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಪತ್ನಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಅಂದಹಾಗೇ ಅಭಿನವ್ ಸಿಂಗ್ ಅವರು ಒಡಿಶಾದಲ್ಲಿ ಖ್ಯಾತ ರ್ಯಾಪರ್ ಆಗಿ ಗುರ್ತಿಸಿಕೊಂಡಿದ್ದರು. ಬೆಂಗಳೂರಿನ ಕಾಡುಬೀಸರಹಳ್ಳಿಯಲ್ಲಿ ಅಪಾರ್ಮೆಂಟ್ ನಲ್ಲಿ ವಾಸವಿದ್ದರು. ಇಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/good-news-for-sc-st-community-candidates-in-the-state-apply-for-free-kas-mains-training/ https://kannadanewsnow.com/kannada/2nd-international-airport-to-be-set-up-in-bengaluru-to-be-announced-in-next-two-days-dk-shivakumar/
ಬೆಂಗಳೂರು: ಸಣ್ಣ ಪಟ್ಟಣಗಳು ಹಾಗೂ 2 ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ಯಮ ಕಾರ್ಯಪರಿಸರ ಅಭಿವೃದ್ಧಿಪಡಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಬುಧವಾರ ಹೇಳಿದರು. ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್-25)ದಲ್ಲಿ ‘ನಗರದ ಆಚೆಗೆ’ (ಬಿಯಾಂಡ್ ಅರ್ಬನ್) ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ನಗರಗಳಲ್ಲಿ ಕೈಗಾರಿಕೆ ಆಧಾರಿತ ಕೌಶಲ್ಯಾಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು. ಮೈಸೂರು, ಮಂಗಳೂರು, ಕಲ್ಬುರ್ಗಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಹಲವು ನಗರಗಳಲ್ಲಿ ನವೋದ್ಯಮಗಳಿಗೆ ಪೂರಕ ವಾತಾವರಣ ಸೃಷ್ಟಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡಾಟಾ ಸೈನ್ಸ್ ತಂತ್ರಜ್ಞಾನಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಪರಿಪೋಷಕ (ಇನ್ ಕ್ಯುಬೇಷನ್) ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು. ‘ನೆಕ್ಸ್ಟ್ ವೆಲ್ತ್’ ಸಂಸ್ಥೆ ಸಿಇಒ ಮೈಥಿಲಿ ರಮೇಶ್ , “ಸಣ್ಣ ನಗರಗಳಲ್ಲಿ ತಂತ್ರಜ್ಞಾನ ಆಧಾರಿತ ಉದ್ಯಮ ಮಾಡಲಾಗದು ಎಂಬ ಬಗ್ಗೆ ಹಲವು ತಪ್ಪುಕಲ್ಪನೆಗಳಿವೆ. ಸಣ್ಣ ನಗರಗಳು ಅಂತಾರಾಷ್ಟ್ರೀಯ ಗುಣಮಟ್ಟದ ಸಂಸ್ಥೆಗಳಿಗೆ ಸೂಕ್ತವಲ್ಲ; ಸಣ್ಣ ನಗರಗಳಲ್ಲಿ ಹೆಚ್ಚು ಅರ್ಹತೆಯ ವೃತ್ತಿಪರರು ಕೆಲಸ ಮಾಡುವುದಿಲ್ಲ; ಅಲ್ಲಿ…
ಗದಗ: ಬಡ್ಡಿ ದಂಧೆಯಲ್ಲಿ ತೊಡಗಿದ್ದಂತ ಬೆಟಗೇರಿಯ ಯಲ್ಲಪ್ಪ ಮಿಸ್ಕಿನ್ ಅವರ ಮನೆಯ ಮೇಲೆ ಗದಗ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಪತ್ತೆಯಾದಂತ ಹಣ, ಚಿನ್ನಾಭರಣವನ್ನು ಕಂಡಂತ ಪೊಲೀಸರೇ ಶಾಕ್ ಆಗಿದ್ದಾರೆ. ಬಡ್ಡಿ ದಂಧೆಕೋರ ಯಲ್ಲಪ್ಪ ಮಸ್ಕಿ ಮನೆಯಲ್ಲಿ ಬರೋಬ್ಬರಿ 4.90 ಕೋಟಿ ನಗದು ಪತ್ತೆಯಾಗಿದೆ. ಈ ಕುರಿತಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಸ್ ನೇಮಕಗೌಡ ಅವರು ಮಾಹಿತಿ ನೀಡಿದ್ದು, ಎರಡು ದಿನಗಳಿಂದ ಬಡ್ಡಿ ವ್ಯವಹಾರ ನಡೆಸುತ್ತಿದ್ದಂತ ಯಲ್ಲಪ್ಪ ಮಿಸ್ಕಿನ್ ಮನೆಯ ಮೇಲೆ ದಾಳಿಯನ್ನು ನಡೆಸಲಾಗಿತ್ತು. 13 ಕಡೆಯಲ್ಲಿ ನಡೆಸಿದಂತ ದಾಳಿಯಲ್ಲಿ 4.90 ಕೋಟಿ ನಗದು, 992 ಗ್ರಾಂ ಚಿನ್ನ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ. ಇನ್ನೂ ಯಲ್ಲಪ್ಪ ಮಿಸ್ಕಿನ್ ಮನೆಯಲ್ಲಿ 650 ಬಾಂಡ್, 4 ಎಟಿಎಂ ಕಾರ್ಡ್, 9 ಬ್ಯಾಂಕ್ ಪಾಸ್ ಬುಕ್ ಸಿಕ್ಕಿವೆ. ಜೊತೆಗೆ ಅಕ್ರಮವಾಗಿ ಸಂಗ್ರಹ ಮಾಡಿದ್ದಂತ 65 ಲೀಟರ್ ಮದ್ಯವನ್ನು ಜಪ್ತಿ ಮಾಡಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-sc-st-community-candidates-in-the-state-apply-for-free-kas-mains-training/ https://kannadanewsnow.com/kannada/india-among-100-most-corrupt-countries-in-the-world-heres-the-list-of-other-countries/ https://kannadanewsnow.com/kannada/2nd-international-airport-to-be-set-up-in-bengaluru-to-be-announced-in-next-two-days-dk-shivakumar/
ನವದೆಹಲಿ: ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (ಸಿಪಿಐ) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ದೇಶಗಳಲ್ಲಿ ಒಂದಾಗಿದೆ. ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಸ್ಥಾನದಲ್ಲಿದೆ, 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳನ್ನು ಕಳೆದುಕೊಂಡಿದೆ. ಭಾರತವು ತನ್ನ ಸ್ಥಾನವನ್ನು ಇತರ ಎರಡು ರಾಷ್ಟ್ರಗಳಾದ ಗಾಂಬಿಯಾ ಮತ್ತು ಮಾಲ್ಡೀವ್ಸ್ ನೊಂದಿಗೆ ಹಂಚಿಕೊಂಡಿದೆ. ಸಾರ್ವಜನಿಕ ವಲಯದ ಭ್ರಷ್ಟಾಚಾರದ ಜಾಗತಿಕ ಮಾಪಕವಾಗಿ ಕಾರ್ಯನಿರ್ವಹಿಸುವ ಸಿಪಿಐ, 0 (ಹೆಚ್ಚು ಭ್ರಷ್ಟ) ರಿಂದ 100 (ತುಂಬಾ ಸ್ವಚ್ಛ) ವರೆಗಿನ ಸ್ಕೇಲ್ನಲ್ಲಿ ಅಂಕಗಳನ್ನು ನಿಗದಿಪಡಿಸುತ್ತದೆ. 2024 ರಲ್ಲಿ, ಭಾರತವು ಒಟ್ಟಾರೆ 38 ಅಂಕಗಳನ್ನು ಪಡೆಯಿತು, ಇದು 2023 ರಲ್ಲಿ 39 ಮತ್ತು 2022 ರಲ್ಲಿ 40 ರಷ್ಟಿತ್ತು. ಭಾರತದ ನೆರೆಯ ರಾಷ್ಟ್ರಗಳ ಪೈಕಿ ಪಾಕಿಸ್ತಾನ 135, ಶ್ರೀಲಂಕಾ 121, ಬಾಂಗ್ಲಾದೇಶ 149 ಮತ್ತು ಚೀನಾ 76ನೇ ಸ್ಥಾನದಲ್ಲಿವೆ. ಡೆನ್ಮಾರ್ಕ್ (90) ಅತ್ಯಂತ ಕಡಿಮೆ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ,…
ಬೆಂಗಳೂರು : ಇಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ವಿಜಯಪುರ ಜಿಲ್ಲೆಯು ಯಶಸ್ವಿಯಾಗಿದೆ. ʼನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ. ಇದರಿಂದ ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ವಿಜಯಪುರದಲ್ಲಿ 3000 ಮೆಗಾವಾಟ್ ಸಾಮರ್ಥ್ಯದ ಗಾಳಿ ವಿದ್ಯುತ್ ಉತ್ಪಾದನೆ ಅಭಿವೃದ್ಧಿಪಡಿಸಲು ಮತ್ತು ಅತ್ಯಾಧುನಿಕ ವಿಂಡ್ ಟರ್ಬೈನ್ ಬ್ಲೇಡ್ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್ ಕಂಪನಿಯು ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಉಪಕ್ರಮವು, ಗಾಳಿ ವಿದ್ಯುತ್ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಭಾರತವನ್ನು ಅಭಿವೃದ್ಧಿಪಡಿಸಲು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಸುಸ್ಥಿರತೆ ಸಾಧಿಸಲು ನೆರವಾಗಲಿದೆ. ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್ ಸಾಮರ್ಥ್ಯದ…
ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70 ಭಾಗ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ಸೇರಿಂದತೆ ಇತರೆ ವಿಷಯಗಳನ್ನು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಿಪಡಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಕುರಿತು ನಾನು ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಮಾತನಾಡುತ್ತೇನೆ. ಮಾರ್ಚ್ ಅಂತ್ಯದೊಳಗೆ ಶೇ.95 ರಷ್ಟು ಕೆಲಸ ಆಗಬೇಕು ಎಂದು ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ರೂಪ್ಲಾನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಶೇ.…