Author: kannadanewsnow09

ಮಗ ಮಾತ್ರ ಮಾತು ಕೇಳುವುದಿಲ್ಲವೇ? ಮಾತು ಕೇಳದ ಹೆಣ್ಣು ಮಕ್ಕಳೂ ಇದ್ದಾರೆ. ಏನ್ ಮಾಡೋದು. ಈಗಿನ ಕಾಲದಲ್ಲಿ ಮಕ್ಕಳಿರುವವರ ವಿರುದ್ಧ ಮಾತನಾಡುವುದು ಫ್ಯಾಶನ್ ಆಗಿಬಿಟ್ಟಿದೆ. ನಿಮ್ಮ ಮನೆಯಲ್ಲಿ ನಿಮ್ಮ ಮಗ ಅಥವಾ ಮಗಳು ಯಾರೇ ಇರಲಿ, ನೀವು ಈ ಪರಿಹಾರವನ್ನು ಮಾಡಬಹುದು. ನೀವು ಈ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ವೇಳೆ ನನ್ನ ಮಗು ದಾರಿ ತಪ್ಪುತ್ತದೆ. ಅಡ್ಮಿಷನ್ ಚೆನ್ನಾಗಿಲ್ಲ, ಅಭ್ಯಾಸ ಚೆನ್ನಾಗಿಲ್ಲ, ಓದುವುದರಲ್ಲಿ ಆಸಕ್ತಿ ಇಲ್ಲ, ಅಪ್ಪ-ಅಮ್ಮ ಹೇಳುವ ಒಳ್ಳೆ ಮಾತು ಕೇಳೋಕೆ ಮನಸ್ಸಿಲ್ಲ, ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಲು ಇಲ್ಲಿದೆ ಸರಳ ಆಧ್ಯಾತ್ಮಿಕ ಉಪಾಸನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಮುಂಬೈ : ರಿಲಯನ್ಸ್ ಜಿಯೋ ತನ್ನ ಜಿಯೋಏರ್ ಫೈಬರ್ ಮತ್ತು ಜಿಯೋ ಫೈಬರ್ ಪೋಸ್ಟ್‌‌ಪೇಯ್ಡ್ ಬಳಕೆದಾರರಿಗೆ ಜನವರಿ 11ರಿಂದ ಅನ್ವಯಿಸುವಂತೆ ಅತ್ಯಾಕರ್ಷಕ ಹೊಸ ಯೋಜನೆಯನ್ನು ಪರಿಚಯಿಸಿದೆ. ಅರ್ಹ ಗ್ರಾಹಕರು ತಮ್ಮ ಯೋಜನೆಯ ಪ್ರಯೋಜನಗಳ ಭಾಗವಾಗಿ 24 ತಿಂಗಳವರೆಗೆ ಯೂಟ್ಯೂಬ್ ಪ್ರೀಮಿಯಂಗೆ ಕಾಂಪ್ಲಿಮೆಂಟರಿ ಚಂದಾದಾರಿಕೆಯನ್ನು ಪಡೆಯುತ್ತಾರೆ . ಇದು ಭಾರತದಾದ್ಯಂತ ಚಂದಾದಾರರಿಗೆ ಡಿಜಿಟಲ್ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ಜಿಯೋ ಮತ್ತು ಯೂಟ್ಯೂಬ್ ನಡುವಿನ ಮಹತ್ವದ ಸಹಯೋಗವನ್ನು ಸೂಚಿಸುತ್ತದೆ. ಯೂಟ್ಯೂಬ್ ಪ್ರೀಮಿಯಂನಲ್ಲಿ ಏನೆಲ್ಲಾ ಸಿಗಲಿದೆ : 1. ಜಾಹೀರಾತು-ಮುಕ್ತ ವೀಕ್ಷಣೆ : ನಿಮ್ಮ ನೆಚ್ಚಿನ ವೀಡಿಯೊಗಳನ್ನು ಅಡೆತಡೆಗಳಿಲ್ಲದೆ ವೀಕ್ಷಿಸಬಹುದು. 2. ಆಫ್ಲೈನ್ ವೀಡಿಯೊಗಳು : ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಯಾವುದೇ ಸಮಯದಲ್ಲಿ ಆನಂದಿಸಲು ವಿಡಿಯೋ ಡೌನ್ಲೋಡ್ ಮಾಡಬಹುದು. 3. ಬ್ಯಾಕ್ ಗ್ರೌಂಡ್ ಪ್ಲೇ : ಇತರ ಅಪ್ಲಿಕೇಶನ್ ಗಳನ್ನು ಬಳಸುವಾಗ ಅಥವಾ ನಿಮ್ಮ ಸ್ಕ್ರೀನ್ ಆಫ್ ಮಾಡುವಾಗ ವೀಡಿಯೊಗಳನ್ನು ನೋಡುವುದನ್ನು ಅಥವಾ ಸಂಗೀತವನ್ನು ಕೇಳುವುದನ್ನು ಮುಂದುವರಿಸಿ. 4. ಯೂಟ್ಯೂಬ್ ಮ್ಯೂಸಿಕ್ ಪ್ರೀಮಿಯಂ : 100 ದಶಲಕ್ಷಕ್ಕೂ…

Read More

ಬೆಂಗಳೂರು: ಇತರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಮಾಡಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರ 25 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದಂತ ಭಾಷಣದ ಹೈಲೈಟ್ಸ್ ಈ ಕೆಳಗಿನಂತಿದೆ. 1.ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರ 25 ನೇ ರಾಷ್ಟ್ರೀಯ ಸಮ್ಮೇಳನಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಗೌರವದ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕದ ಪಾಲಿಗೂ ಇದು ಅತ್ಯಂತ ಹೆಮ್ಮೆಯ ಸಂಗತಿ. 2.ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ. 3.ಸಾರ್ವಜನಿಕ ಸೇವೆಯಲ್ಲಿ ಕರ್ನಾಟಕಕ್ಕೆ ಶ್ರೀಮಂತ ಐತಿಹ್ಯವಿದೆ. ಮೈಸೂರು ಸಿವಿಲ್ ಸರ್ವಿಸ್ ಪರೀಕ್ಷೆಗಳನ್ನು ದಿವಾನ್ ಶ್ರೀ ಕೆ.ಶೇಷಾದ್ರಿ ಅಯ್ಯರ್ ಅವರು 1892 ರಲ್ಲಿಯೇ ಪ್ರಾರಂಭಿಸಿದರು. 4.ಈ ಪ್ರಾರಂಭಿಕ ಹೆಜ್ಜೆಯು ವಿಶಿಷ್ಟ ಆಡಳಿತಗಾರರ ಪಡೆಯನ್ನು ನೇಮಕಾತಿ ಮಾಡಿಕೊಳ್ಳಲು ಭದ್ರಬುನಾದಿಯನ್ನು ಹಾಕಿದ್ದು,…

Read More

ಶೃಂಗೇರಿ : “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ 50 ವರ್ಷಗಳು ಪೂರೈಸಿರುವ ಶುಭ ಸಂವತ್ಸರದ ಸಂದರ್ಭದಲ್ಲಿ ಶೃಂಗೇರಿಯಲ್ಲಿ ಶನಿವಾರ ಏರ್ಪಡಿಸಿದ್ದ “ಸುವರ್ಣ ಭಾರತೀ ಮಹೋತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿದರು. “ನಮ್ಮ ಹಿರಿಯರು, ಮನೆ ಹುಷಾರು, ಮಠ ಹುಷಾರು ಎಂದು ಹೇಳಿದ್ದಾರೆ. ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ನಮ್ಮ ಮಠಗಳನ್ನು ಕಾಪಾಡಿಕೊಳ್ಳಬೇಕು. ಇದು ನಮ್ಮೆಲ್ಲರ ಕರ್ತವ್ಯ. ನೀವು ಇಲ್ಲಿಗೆ ಬಂದು ಹಾಗೇ ಹೋಗಬೇಡಿ. ನೀವು ನೂರು ರೂಪಾಯಿ ಸಂಪಾದನೆ ಮಾಡಿದರೆ, ಒಂದು ರೂಪಾಯಿಯಾದರೂ ಧರ್ಮ ಉಳಿಸುವ ಮಠಕ್ಕೆ ನೀಡಬೇಕು. ಆಗ ಮಾತ್ರ ಮಠ ಉಳಿಯಲು ಸಾಧ್ಯ” ಎಂದು ಕರೆ ನೀಡಿದರು. “ಪ್ರವಚನ ಕೇಳಿ ನೆಮ್ಮದಿ ಪಡೆಯಲು ಬಂದಿದ್ದೇನೆ” “ಇಲ್ಲಿ ಧರ್ಮ ಕಾಪಾಡುವ…

Read More

“ಸ್ವರ್ಣ ಪ್ರಾಶನ” ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಪೋಷಕರು ತಮ್ಮ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಮಾಡುತ್ತಿರುತ್ತಾರೆ, ಭವಿಷ್ಯದಲ್ಲಿ ಉನ್ನತಿ ಹೊಂದಲಿ ಎಂದು ಬಯಸುತ್ತಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಪದೇಪದೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇದಕ್ಕಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುರ್ವೇದದಲ್ಲಿ ತಿಳಿಸಿರುವ ಸ್ವರ್ಣ ಪ್ರಾಶನ ಸಂಸ್ಕಾರ ಉತ್ತಮ ಆಯ್ಕೆಯಾಗಿದೆ. ಸ್ವರ್ಣಪ್ರಾಶನ ಎಂದರೇನು? ಸ್ವರ್ಣಪ್ರಾಶನವು ಆಯುರ್ವೇದದಲ್ಲಿ ವಿವರಿಸಲಾದ 16 ಸಂಸ್ಕಾರಗಳಲ್ಲಿ ಒಂದಾಗಿದೆ. ಅದು ಮಕ್ಕಳ ಸರ್ವತೋಮುಖವಾದ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಶುದ್ಧೀಕರಿಸಿದ ಸ್ವರ್ಣವನ್ನು(ಚಿನ್ನ) ಇತರೆ ಔಷದ ದ್ರವ್ಯಗಳೊಂದಿಗೆ ಸೇವನೆಯೋಗ್ಯವಾದ ರೂಪದಲ್ಲಿ ತಯಾರಿಸಿ, ನಿರ್ದಿಷ್ಟ ದಿನದಂದು (ಪುಷ್ಯ ನಕ್ಷತ್ರ) ಅಥವಾ ನಿತ್ಯವೂ ಸೇವಿಸುವುದರಿಂದ ಮಕ್ಕಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯವನ್ನು ಉತ್ತಮಗೊಳಿಸಬಹುದಾಗಿದೆ. ಸ್ವರ್ಣ ಪ್ರಾಶನದಿಂದ ಆಗುವ ಪ್ರಯೋಜನಗಳು ‌ಮಕ್ಕಳ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ‌ದೇಹದ ರೋಗ ನಿರೋಧಕ ಶಕ್ತಿಯನ್ನು…

Read More

ಉತ್ತರ ಪ್ರದೇಶ: ಕನೌಜ್ ರೈಲ್ವೆ ನಿಲ್ದಾಣದ ನಿರ್ಮಾಣ ಹಂತದ ಮೇಲ್ಛಾವಣಿ ಶನಿವಾರ ಮಧ್ಯಾಹ್ನ ಕುಸಿದ ಪರಿಣಾಮ ಕನಿಷ್ಠ 20 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಗಳು ತಿಳಿಸಿವೆ. ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಉತ್ತರ ಪ್ರದೇಶದ ಕನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಲಿಂಟಲ್ ಕುಸಿದಿದೆ. ಹೀಗಾಗಿ ಅವಶೇಷಗಳ ಅಡಿಯಲ್ಲಿ ಹಲವಾರು ಕಾರ್ಮಿಕರು ಸಿಕ್ಕಿಬಿದ್ದಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1878021876594913720 https://kannadanewsnow.com/kannada/breaking-11-dysp-civil-transfer-orders-issued-by-state-government-dysp-transfer/ https://kannadanewsnow.com/kannada/breaking-bengaluru-in-a-heart-rending-incident-lovers-commit-suicide-after-they-refused-to-fall-in-love/

Read More

ಬೆಂಗಳೂರು: ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಕರ್ನಾಟಕ ಬಡವಾಗುತ್ತಿದೆ, ಜನರು ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿ ಕಾನೂನು ಪ್ರಕೋಷ್ಠದ ವಿಶೇಷ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು ಹೊರಗಡೆಯಿಂದ ಬಂದವರು ಎಂದು ಆಡಳಿತ ಪಕ್ಷದಲ್ಲಿ ಕೆಲವರಿಗೆ ಅನಿಸಿದೆ. ಒಂದು ಬಾರಿ 5 ವರ್ಷ ಕಾಲ ಮುಖ್ಯಮಂತ್ರಿಯಾಗಿದ್ದಾರೆ. ಎರಡನೇ ಬಾರಿಗೆ 2 ವರ್ಷ ಸಿಎಂ ಆಗಿದ್ದು, ಅವರೇ ಅಧಿಕಾರ ಬಿಟ್ಟುಕೊಡಬೇಕೆಂಬ ಚರ್ಚೆ ಈಗ ಕಾಂಗ್ರೆಸ್ಸಿನಲ್ಲಿ ಆರಂಭವಾಗಿದೆ ಎಂದು ವಿವರಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬಹಳ ಮುಕ್ತವಾಗಿ ಮಾತನಾಡಿದ್ದರು. 25 ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಮಂತ್ರಿಮಂಡಲದಲ್ಲಿ ತೆಗೆದುಕೊಂಡಿರಲಿಲ್ಲ. ಆಗ ಅವರ ಗುರುಗಳು ‘ಅಧಿಕಾರ ಸಿಗಲಿಲ್ಲ ಅಂದ್ರೆ ಅಧಿಕಾರವನ್ನು ಒದ್ದು ಕಿತ್ಕೋಬೇಕು’ ಎಂದಿದ್ದರಂತೆ; ಆಗ ಡಿ.ಕೆ.ಶಿವಕುಮಾರ್ ಅವರು ಅಧಿಕಾರವನ್ನು ಒದ್ದು ಕಿತ್ಕೊಳ್ಳುವಲ್ಲಿ…

Read More

ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ‌ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ, ಅದು ಅವರ ಆಂತರಿಕ ವಿಚಾರ. ರಾಜ್ಯ ಇಷ್ಟು ಆರ್ಥಿಕವಾಗಿ ಸಂಕಷ್ಟದಲ್ಲಿ ಇದೆ. ಕಾನೂನು ಸುವ್ಯವಸ್ಥೆ ಹಾಳಾಗಿರುವ ಜೊತೆಗೆ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಶಿಷ್ಯವೇತನ ಸಿಗುತ್ತಿಲ್ಲ. ರೈತರಿಗೆ ಪರಿಹಾರ ಸಿಗುತ್ತಿಲ್ಲ. ಬಾಣಂತಿಯರ ಸರಣಿ ಸಾವು ಆಗುತ್ತಿದೆ. ಅಗಾಧವಾಗಿರುವ ಸಮಸ್ಯೆಗಳು ಇರುವಾಗ. ಇವರು ಎಲ್ಲವನ್ನು ಬಿಟ್ಟು ತಮ್ಮ ರಾಜಕಾರಣವೇ ಮುಖ್ಯವಾಗಿದೆ. ಯಾರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಬಹಳ ಮಹತ್ವವಾಗಿದೆ. ಯಾವ ಉದ್ದೇಶಕ್ಕಾಗಿ ಜನ ಅವರನ್ನು ಆರಿಸಿ ಕಳಿಸಿದ್ದರೋ ಅದನ್ನು ಸಂಪೂರ್ಣ ಮರೆತು ತಮ್ಮ ಖುರ್ಚಿಯ ಭದ್ರತೆಯ ಆಟ ಆಡುತ್ತಿದ್ದಾರೆ ಹೊರತು. ರಾಜ್ಯದ…

Read More

ಶೃಂಗೇರಿ : “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ ಬೇಡ. ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದರು. ಟೆಂಪಲ್ ರನ್ ಎನ್ನುವವರು, ದೇವಾಲಯ ಮುಚ್ಚಿಬಿಡಿ: ನೀವು ದೇವಾಲಯ ಹಾಗೂ ಮಠಗಳ…

Read More

ಶೃಂಗೇರಿ : ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು…

Read More