Author: kannadanewsnow09

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗಿಯ ನ್ಯಾಯಪೀಠವು ಪ್ರಕಟಿಸಲಿದೆ.  ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.…

Read More

ಮಂಡ್ಯ : ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ಗೋವಿಂದ, ಗೋವಿಂದ ಎಂಬ ಜಯಘೋಷಗಳನ್ನು ಮೊಳಗಿಸಿದರು. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವ ದೇವಾಲಯದಿಂದ ಹೊರ ಬರುತ್ತಿದ್ದಂತೆ ಭಕ್ತರು ದರ್ಶನ ಪಡೆದು ಸಂಭ್ರಮಿಸಿದರು. ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ರಾತ್ರಿ 8 ಗಂಟೆಗೆ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ರಾಜ್ಯ ಮಾತ್ರವಲ್ಲದೇ ಪಕ್ಕದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದಿಂದಲೂ ಸಹಸ್ರಾರು ಭಕ್ತಾದಿಗಳು ಆಗಮಿಸಿದ್ದರು. ಮೇಲುಕೋಟೆಯ ವಸತಿ ಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಇದಕ್ಕೂ ಮುನ್ನ, ಜಿಲ್ಲಾ ಖಜಾನೆ ಕಚೇರಿಯಲ್ಲಿದ್ದ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣ ಪೆಟ್ಟಿಗೆಗೆ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಸುರಪುರ ವಿಧಾನಸಭಾ ಉಪ ಚುನಾವಣೆಗೆ ಇಂದು ಟಿಕೆಟ್ ಘೋಷಣೆ ಮಾಡಲಾಗಿದೆ. ದಿವಂಗತ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ಯಾದಗಿರಿ ಜಿಲ್ಲಿಯೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯಲ್ಲಿ ಮೇ.7ರಂದು ನಡೆಸಲಾಗುತ್ತದೆ. ಮೇ.7ರಂದು ನಡೆದಂತ ಮತದಾನದ ಮತಏಣಿಕೆ ಕಾರ್ಯವು ಜೂನ್.4ರಂದು ನಡೆಯಲಿದೆ. ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಎಐಸಿಸಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಅಂದಹಾಗೇ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು ಅದೇ ದಿನ ಸುರಪುರದಲ್ಲೂ ಉಪಚುನಾವಣೆ ನಡೆಯಲಿದೆ. ಹೀಗಾಗಿ ಸುರಪುರ ವಿಧಾನಸಭಾ ಕ್ಷೇತ್ರದ ಜನರು ಲೋಕಸಭೆ ಮತ್ತು ವಿಧಾನಸಭೆಗೆ ಎರಡಕ್ಕೂ ಮತವನ್ನು ಚಲಾಯಿಸಲಿದ್ದಾರೆ. ಅಂದಹಾಗೇ ಇಂದು ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು…

Read More

ನವದಹೆಲಿ: ಇಂದು ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು ಲೋಕಸಭಾ ಚುನಾವಣೆಗೆ ಪ್ರಕಟಿಸಲಾಗಿದೆ. 57 ಲೋಕಸಭಾ ಕ್ಷೇತ್ರಗಳಿಗೆ ಇಂದು ಕಾಂಗ್ರೆಸ್ ಪಕ್ಷದಿಂದ ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ಆಂಧ್ರಪ್ರದೇಶದ, ಗುಜರಾತ್, ಕರ್ನಾಟಕದ 17 ಲೋಕಸಭಾ ಕ್ಷೇತ್ರ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಷ್ಟೇ ಅಲ್ಲದೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ  ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗೆದೆ ಕರ್ನಾಟಕ 17 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬೆಳಗಾವಿ- ಮೃಣಾಳ್ ರವೀಂದ್ರ ಹೆಬ್ಬಾಳ್ಕರ್ ಚಿಕ್ಕೋಡಿ-ಪ್ರಿಯಾಂಕಾ ಜಾರಕಿಹೊಳಿ ಬಾಗಲಕೋಟೆ – ಸಂಯುಕ್ತಾ ಎಸ್ ಪಾಟೀಲ್ ಗುಲಬರ್ಗಾ-ರಾಧಾಕೃಷ್ಣ ರಾಯಚೂರು- ಜಿ ಕುಮಾರ್ ನಾಯಕ್ ಬೀದರ್-ಸಾಗರ್ ಖಂಡ್ರೆ ಕೊಪ್ಪಳ ಕೆ ರಾಜಶೇಖರ್ ಬಸವರಾಜ ಹಿತ್ನಾಳ್ ಧಾರವಾಡ- ವಿನೋದ್ ಆಸೂಟಿ ಉತ್ತರ ಕನ್ನಡ – ಡಾ ಅಂಜಲಿ ನಿಂಬಾಳ್ಕರ್ ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ್ ಉಡುಪಿ ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗ್ಡೆ ದಕ್ಷಿಣ ಕನ್ನಡ – ಬದ್ಮರಾಜ್ ಚಿತ್ರದುರ್ಗ…

Read More

ಶಿವಮೊಗ್ಗ: ಅರ್ಜಿದಾರರಾದ ವಿಜಯಕುಮಾರಿ ಇವರು ಬಾಲಾಜಿ ಬಿಲ್ಡಿಂಗ್ ಕಂಟ್ರಾಕ್ಟರ್ ವಿರುದ್ದ ಸೇವಾನ್ಯೂನ್ಯತೆ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ದಾಖಲಿಸಿದ್ದ ಪ್ರಕರಣದಲ್ಲಿ ಆಯೋಗವು ಎದುರುದಾರರ ಸೇವಾನ್ಯೂನ್ಯತೆಯನ್ನು ಪರಿಗಣಿಸಿ ಅರ್ಜಿದಾರರಿಗೆ ಪರಿಹಾರ ನಿಡುವಂತೆ ಆದೇಶಿಸಿದೆ. ಅರ್ಜಿದಾರರಾದ ವಿಜಯಕುಮಾರಿ ಶಿವಮೊಗ್ಗದ ಪಂಚವಟಿ ಕಾಲೋನಿಯ ವಾಸಿಯಾಗಿದ್ದು ತ್ಯಾವರೆಚಟ್ನಹಳ್ಳಿಯಲ್ಲಿರುವ ತಮ್ಮ 30*40 ಅಡಿ ಖಾಲಿ ನಿವೇಶನದಲ್ಲಿ ಮನೆ ನಿರ್ಮಿಸುವ ಉದ್ದೇಶದಿಂದ ಎದುರುದಾರರೊಂದಿಗೆ ಒಪ್ಪಂದ ಮಾಡಿಕೊಂಡು ರೂ.5,70,000/- ಗಳನ್ನು ಮುಂಗಡವಾಗಿ ಸಂದಾಯ ಮಾಡಿರುತ್ತಾರೆ. ಆದರೆ ಎದುರುದಾರರು ಸೂಕ್ತ ಕಾರಣಗಳನ್ನು ನೀಡದೇ ಮನೆ ನಿರ್ಮಾಣ ಕಾರ್ಯವನ್ನು ಒಪ್ಪಂದದ ಪ್ರಕಾರ ಪೂರ್ತಿಗೊಳಿಸಲು ಸಾಧ್ಯವಿಲ್ಲ, ಬೇರೆ ವ್ಯಕ್ತಿಗಳ ಸಹಾಯದಿಂದ ತಾವು ಬಾಕಿ ಉಳಿದ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ತಿಗೊಳಿಸಿಕೊಳ್ಳಬಹುದು ಮತ್ತು ಹೆಚ್ಚುವರಿಯಾಗಿ ಪಡೆದ ಹಣವನ್ನು ಮರುಪಾವತಿಸುವುದಾಗಿ ತಿಳಿಸಿರುತ್ತಾರೆ. ಅರ್ಜಿದಾರರು ಬೇರೆ ಇಂಜಿನಿಯರ್ ಸಹಾಯದಿಂದ ಖರ್ಚಿನ ಅಂದಾಜು ಪಟ್ಟಿ ತಯಾರಿಸಿ ನೋಡಲಾಗಿ ಎದುರುದಾರರು ರೂ.1,58,550 ಹೆಚ್ಚುವರಿಯಾಗಿ ಪಡೆದಿರುವುದು ಕಂಡು ಬಂದಿದ್ದು ಈ ಹಣವನ್ನು ಮರುಪಾವತಿಸುವಂತೆ ಸಾಕಷ್ಟು ಬಾರಿ ವಿನಂತಿಸಿದಾಗ್ಯೂ ಹಣ ಮರುಪಾವತಿಸುವಲ್ಲಿ…

Read More

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಕರ್ನಾಟಕ ಬಾಕಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೌಮ್ಯಾರೆಡ್ಡಿಗೆ ಟಿಕೆಟ್ ನೀಡಲಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರ ಸಂಯುಕ್ತಾ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗಿದೆ ಕರ್ನಾಟಕ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬೆಳಗಾವಿ- ಮೃಣಾಳ್ ರವೀಂದ್ರ ಹೆಬ್ಬಾಳ್ಕರ್ ಚಿಕ್ಕೋಡಿ-ಪ್ರಿಯಾಂಕಾ ಜಾರಕಿಹೊಳಿ ಬಾಗಲಕೋಟೆ – ಸಂಯುಕ್ತಾ ಎಸ್ ಪಾಟೀಲ್ ಗುಲಬರ್ಗಾ-ರಾಧಾಕೃಷ್ಣ ರಾಯಚೂರು- ಜಿ ಕುಮಾರ್ ನಾಯಕ್ ಬೀದರ್-ಸಾಗರ್ ಖಂಡ್ರೆ ಕೊಪ್ಪಳ ಕೆ ರಾಜಶೇಖರ್ ಬಸವರಾಜ ಹಿತ್ನಾಳ್ ಧಾರವಾಡ- ವಿನೋದ್ ಆಸೂಟಿ ಉತ್ತರ ಕನ್ನಡ – ಡಾ ಅಂಜಲಿ ನಿಂಬಾಳ್ಕರ್ ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ್ ಉಡುಪಿ ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗ್ಡೆ ದಕ್ಷಿಣ ಕನ್ನಡ – ಬದ್ಮರಾಜ್ ಚಿತ್ರದುರ್ಗ – ಬಿಎನ್ ಚಂದ್ರಪ್ಪ ಮೈಸೂರು – ಎಂ ಲಕ್ಷ್ಮಣ್…

Read More

ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಸ್ವಲ್ಪ ಸಮಯದ ನಂತ್ರದ ಅವ್ರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನಲಾಗಿತ್ತು. ಈ ನಡುವೆ ಇಂದು ದೆಹಲಿ ಸಿಎಂ ನಿವಾಸದ ಮೇಲೆ ದಾಳಿ ಮಾಡಿದ್ದಂತ ಇಡಿ ಅಧಿಕಾರಿಗಳು ವಿಚಾರಣೆಯ ಬಳಿಕ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ. ಜಾರಿ ನಿರ್ದೇಶನಾಲಯ (ED) ತಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತಲುಪಿದ್ದರು. ಈ ಪ್ರಕರಣದಲ್ಲಿ ಅವರಿಗೆ ಸಮನ್ಸ್ ನೀಡಲು ತನಿಖಾ ಸಂಸ್ಥೆಯ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದರು. ಳಿಸಿವೆ. ಶೋಧ ವಾರಂಟ್ ಇದೆ ಎಂದು ತಂಡವು ಮುಖ್ಯಮಂತ್ರಿ ನಿವಾಸದ ಸಿಬ್ಬಂದಿಗೆ ಮಾಹಿತಿ ನೀಡಿತ್ತು. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ಈ ಹಿಂದೆ ಈ ಪ್ರಕರಣದಲ್ಲಿ ಏಜೆನ್ಸಿಯ ಅನೇಕ ಸಮನ್ಸ್ಗಳನ್ನು ತಪ್ಪಿಸಿಕೊಂಡಿದ್ದರು. ಇದಕ್ಕೂ ಮುನ್ನ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ಪೀಠವು ಕೇಜ್ರಿವಾಲ್ ಅವರಿಗೆ…

Read More

ಚಿತ್ರದುರ್ಗ: ಕಾಡುಗೊಲ್ಲರ ಪರವಾಗಿ ನಾನಿದ್ದೇನೆ, ಹಿಂದೆಯೂ ಸಹ ನಾನು ಸಂಸದನಾಗಿದ್ದಾಗ ಕಾಡುಗೊಲ್ಲರ ಪರವಾಗಿ ಕೆಲಸ ಮಾಡಿದ್ದೇನೆ ಎಂದು ತುಮಕೂರು ಲೋಕಸಭಾ ಕಾಂಗ್ರೇಸ್ಅಭ್ಯರ್ಥಿ ಮುದ್ದ ಹನುಮೇಗೌಡ ತಿಳಿಸಿದರು. ಈ ಮೂಲಕ ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಡುಗೊಲ್ಲ ಸಮುದಾಯದವರ ಮತಗಳ ಬೇಟೆಗೆ ಇಳಿಸಿದ್ದಾರೆ. ನಗರದ ಕಾಡು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅದ್ಯಕ್ಷರಾದ ಸಿ ಶಿವುಯಾದವ್ ಅವರ ಮನೆಗೆ ಭೇಟಿ ಮಾಡಿ ಮಾತನಾಡಿದರು. 2014ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್ ಟಿ ಗೆ ಸೇರಿಸುವ ಕುರಿತು ಕುಲ ಶಾಸ್ತ್ರ ಅಧ್ಯಯನವನ್ನು ಮಾಡಿಸಿ, ಅಂಗೀಕರಿಸಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತು. ಆ ಕಡತ ಕೇಂದ್ರ ಸರ್ಕಾರದಲ್ಲಿ ಹಾಗೆ ಕುಳಿತಿದೆ ನನ್ನನ್ನು ಆಯ್ಕೆ ಮಾಡಿ ಕಳಿಸಿದರೆ ಕೇಂದ್ರ ಸರ್ಕಾರದಲ್ಲಿ ಒತ್ತಡ ತಂದು ನಿಮ್ಮನ್ನು ಎಸ್ಟಿಗೆ ಸೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ನಿಮ್ಮ ಜೊತೆಗೆ ನಾನಿರುತ್ತೇನೆ ಎಂದು ತಿಳಿಸಿದರು. ಕಾಡುಗೊಲ್ಲ ಸಮುದಾಯಕ್ಕೆ ಸಂಬಂಧಪಟ್ಟಂತೆ ಸಂಸತ್ತನಲ್ಲಿ ಸುದೀರ್ಘವಾಗಿ…

Read More

ನವದೆಹಲಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ಮಹಾರಾಷ್ಟ್ರದ ಸತಾರಾದ ವಾಯ್ನಲ್ಲಿ ಗುರುವಾರ ಅಪಘಾತಕ್ಕೀಡಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಕಂಟೇನರ್ ಹಠಾತ್ ಬ್ರೇಕ್ ತೆಗೆದುಕೊಂಡ ನಂತರ ಅವರ ಕಾರು ಕಂಟೇನರ್ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. https://twitter.com/ANI/status/1770802362979958917 https://kannadanewsnow.com/kannada/shivamogga-rs-2-lakh-cash-seized-from-illegal-lying-near-choorikatte-in-sagar/ https://kannadanewsnow.com/kannada/breaking-ed-ed-raids-delhi-cm-arvind-kejriwals-residence/

Read More

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಯಿಂದ ಸೂಚನೆ ನೀಡಲಾಗಿತ್ತು. ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚಿಸಿದ್ದರಿಂದ ಸಹಾಯಕ ಚುನಾವಣಾಧಿಕಾರಿ ಜಯಲಕ್ಷ್ಮಮ್ಮ ಎಂಬವುರ ನಗರ ಪೊಲೀಸ್ ಠಾಣೆಗೆ ಸಿ.ಟಿ ರವಿ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿಳಿಸಿರುವಂತ ರಾಜ್ಯ ಚುನಾವಣಾ ಆಯೋಗವು, ಸಿ.ಟಿ.ರವಿ ಅವರ ಎಕ್ಸ್ ಪೋಸ್ಟ್ ಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಡಿಇಒ ಅವರು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಎ ಮತ್ತು ಆರ್ ಪಿ ಕಾಯ್ದೆಯ 126 ರ ಅಡಿಯಲ್ಲಿ 20.03.24 ರಂದು ಎಫ್ ಐಆರ್ ದಾಖಲಿಸಿದ್ದಾರೆ ಎಂದಿದ್ದಾರೆ. https://kannadanewsnow.com/kannada/three-teachers-suspended-for-not-attending-election-duty/ https://kannadanewsnow.com/kannada/shivamogga-rs-2-lakh-cash-seized-from-illegal-lying-near-choorikatte-in-sagar/

Read More