Author: kannadanewsnow09

ಬೆಂಗಳೂರು: ಜನವರಿ.15, 2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ನಡೆಯಲಿದೆ. ಬೇರೆಲ್ಲಿಯೂ ನಡೆಯುತ್ತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ದಿನಪತ್ರಿಕೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದ ಸಚಿವ ಸಂಪುಟ ಸಭೆ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂಬುದಾಗಿ ವರದಿ ಮಾಡಲಾಗಿದೆ. ಆದರೇ ಅದು ಸುಳ್ಳು ಎಂಬುದಾಗಿ ತಿಳಿಸಿದೆ. ದಿನಾಂಕ 15-02-2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/big-relief-for-congress-mp-rahul-gandhi-bail-granted-in-defamation-case/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ ಕುಬೇರನನ್ನು ಅತ್ಯಂತ ಸರಳವಾಗಿ ಪೂಜಿಸುವುದಾಗಲಿ ಅದರೊಂದಿಗೆ ಈ ಮಂತ್ರವನ್ನು ಪಠಿಸಬೇಕು. ಈ ಕುಬೇರ ಪೂಜೆಯನ್ನು ಯಂತ್ರವನ್ನು ಇಟ್ಟುಕೊಂಡು, ಪೆಟ್ಟಿಗೆಯನ್ನು ಇಟ್ಟು, ಮಂತ್ರಗಳನ್ನು ಪಠಿಸುವ ಮೂಲಕ ಬಹಳ ವಿಮರ್ಶಾತ್ಮಕವಾಗಿ ನಡೆಸಲಾಗುತ್ತದೆ. ಅಷ್ಟರ ಮಟ್ಟಿಗೆ ಈ ಪೂಜೆ ಮಾಡಬಹುದೋ ಗೊತ್ತಿಲ್ಲ. ಆದರೆ ಮಂಗಳವಾರ ಮತ್ತು ಶುಕ್ರವಾರ ಸಂಜೆ ನಮ್ಮ ಮನೆಯಲ್ಲಿ ಈ ಪೂಜೆಯನ್ನು ಮಾಡಬಹುದಷ್ಟೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…

Read More

ಪುಣೆ: ಹಿಂದುತ್ವ ಸಿದ್ಧಾಂತಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ. ಕಳೆದ ವರ್ಷ ಲಂಡನ್ನಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ದಿವಂಗತ ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪಗಳಿಂದ ಈ ಪ್ರಕರಣ ಹುಟ್ಟಿಕೊಂಡಿದೆ. ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು 2023 ರ ಮಾರ್ಚ್ನಲ್ಲಿ ಲಂಡನ್ನಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು 2023 ರ ಮಾರ್ಚ್ನಲ್ಲಿ ಲಂಡನ್ನಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ವಿ.ಡಿ.ಸಾವರ್ಕರ್ ಅವರು ತಾವು ಮತ್ತು ಕೆಲವು ಸ್ನೇಹಿತರು ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ ಘಟನೆಯ ಬಗ್ಗೆ…

Read More

ಬೆಂಗಳೂರು: ನಗರದ ಸೌತ್ ಎಂಡ್ ಸರ್ಕಲ್ ಬಳಿಯಲ್ಲಿರುವಂತ ಬಿಬಿಎಂಪಿ ಕಚೇರಿಗೆ ಇಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿಯ ವೇಳೆಯಲ್ಲಿ ಬಹುದೊಡ್ಡ ಕರ್ಮಕಾಂಡವೇ ಬಯಲಾಗಿದೆ. ನಿಯಮ ಉಲ್ಲಂಘಿಸಿ ಅಮ್ಮನ ಬದಲು ಮಗ ಕೆಲಸಕ್ಕೆ ಬಂದಿರುವಂತ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿರುವಂತ ಬಿಬಿಎಂಪಿ ಕಚೇರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿದರು. ಈ ವೇಳೆಯಲ್ಲಿ ಕೇಸ್ ವರ್ಕರ್ ಕವಿತಾ ಬದಲಾಗಿ ಮಗ ನವೀನ್ ಎಂಬಾತ ಕೆಲಸ ಮಾಡುತ್ತಿರೋದು ಗಮನಕ್ಕೆ ಬಂದಿದೆ. ಕಚೇರಿಗೆ ದಿಢೀರ್ ಭೇಟಿಯ ಸಂದರ್ಭದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ನೀನ್ಯಾರು ಅಂತ ನವೀನ್ ಪ್ರಶ್ನಿಸಿದ್ದಾರೆ. ಈ ವೇಳೆಯಲ್ಲಿ ತಾನು ಕೇಸ್ ವರ್ಕರ್ ಕವಿತಾ ಅವರ ಪುತ್ರ ಎಂಬುದಾಗಿ ನವೀನ್ ತಿಳಿಸಿದ್ದಾನೆ. ನಿಮ್ಮ ಅಮ್ಮ ಎಲ್ಲಿ ಅಂದಾಗ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾರೆ ಅಂತ ಉತ್ತರಿಸಿದ್ದಾನೆ. ಕೂಡಲೇ ಸ್ಥಳದಲ್ಲೇ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಬಿಬಿಎಂಪಿ ಕೇಸ್…

Read More

ಬೀದರ್: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಂತ ಗುತ್ತಿಗೆದಾರ ಸಚಿನ್ ಕೇಸನ್ನು ಸಿಐಡಿ ಅಧಿಕಾರಿಗಳ ತಂಡದಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇಂದು ನೋಟಿಸ್ ನೀಡಿದ್ದರ ಹಿನ್ನಲೆಯಲ್ಲಿ ಐವರು ಆರೋಪಿಗಳು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇವರನ್ನು ಬಂಧಿಸಲಾಗಿದೆ. ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್ ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡವಾದಂತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು. ಸಿಐಡಿ ನೋಟಿಸ್ ಹಿನ್ನಲೆಯಲ್ಲಿ ಇಂದು ಬೀದರ್ ನ ರೈಲ್ವೆ ಇಲಾಖೆಯ ಕಚೇರಿಯಲ್ಲಿನ ಸಿಐಡಿ ಅಧಿಕಾರಿಗಳ ಕಚೇರಿಗೆ ಹಾಜರಾಗಿ, ವಿಚಾರಣೆಯನ್ನು ಎದುರಿಸಿದರು. ಆ ಮೂಲಕ ಗೋರಕನಾಥ ಸಜ್ಜನ್, ನಂದಕುಮಾರ್ ನಾಗಬುಜಂಗಿ, ರಾಜು ಕಪನೂರು, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಎಂಬುವರು ವಿಚಾರಣೆ ಎದುರಿಸಿದರು. ಈ ಬಳಿಕ ಐವರು ಆರೋಪಿಗಳನ್ನು ಸಿಐಟಿ ಅಧಿಕಾರಿಗಳು ವಿಚಾರಣೆಯ ಬಳಿಕ ಬಂಧಿಸಿರುವುದಾಗಿ ತಿಳಿದು…

Read More

ಬೆಂಗಳೂರು: ನಗರದ ಬಿಬಿಎಂಪಿ ಕಚೇರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿ, ಆಫೀಸಿನಲ್ಲಿ ಇಲ್ಲದಂತ ಸಿಬ್ಬಂದಿಗಳಿಗೆ ಚಳಿ ಬಿಡಿಸಿದಂತ ಘಟನೆ ಇಂದು ನಡೆದಿದೆ. ಬೆಂಗಳೂರಿನ ಲಾಲ್ ಬಾಗ್ ರಸ್ತೆಯ ಬಿಬಿಎಂಪಿ ಕಚೇರಿಗೆ ದಿಢೀರ್ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಭೇಟಿ ನೀಡಿದರು. ಅವರು ಭೇಟಿ ನೀಡಿದಂತ ಸಂದರ್ಭದಲ್ಲಿ ಕಚೇರಿಯಲ್ಲಿ ಯಾರು ಇರದೇ ಇದ್ದದ್ದು ಕಂಡು ಕೆಂಡಾಮಂಡಲರಾದರು. ಕಚೇರಿಯಲ್ಲೇ ಇದ್ದಂತ ಸಿಬ್ಬಂದಿಯೊಬ್ಬರು ವೈಕುಂಠ ಏಕಾದಶಿ ಪ್ರಯುಕ್ತ ದೇವಸ್ಥಾನಕ್ಕೆ ಅಧಿಕಾರಿ, ಸಿಬ್ಬಂದಿಗಳು ತೆರಳಿರುವಂತ ಮಾಹಿತಿ ನೀಡಿದರು. ಇದರಿಂದ ಕೋಪಗೊಂಡಂತ ಅವರು ಅಧಿಕಾರಿಗಳು ದೇಗುಲಕ್ಕೆ ಹೋದ್ರೆ ಇಲ್ಲಿ ಕೆಲಸ ಮಾಡೋರು ಯಾರು ಅಂತ ಪ್ರಶ್ನಿಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. https://kannadanewsnow.com/kannada/bengaluru-power-outages-in-these-areas-on-january-13/ https://kannadanewsnow.com/kannada/cm-siddaramaiah-agrees-to-hike-honorarium-of-asha-workers-calls-off-strike/

Read More

ಬೆಂಗಳೂರು: ಕಳೆದ ಕೆಲ ದಿನಗಳಿಂದ ತಮ್ಮ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸುತ್ತಿದ್ದಾರೆ. ಇವರ ಬೇಡಿಕೆಯಲ್ಲಿ ಒಂದಾಗಿರುವಂತ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ವಾಪಾಸ್ಸು ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 15,000 ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಘಟನೆಯೊಂದಿಗೆ ಮಾತುಕತೆ ನಡೆಸಿ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಇಂದು ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಿದ್ಧರಾಮಯ್ಯ ನಡೆಸಿದಂತ ಸಂಧಾನ ಯಶಸ್ವಿಯಾಗಿದೆ. ಅವರ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್ ಪಡೆಯಲು ನಿರ್ಧಾರಿಸಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/bengaluru-power-outages-in-these-areas-on-january-13/

Read More

ಬೆಂಗಳೂರು : 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಚ್.ಎಸ್.ಆರ್. ವಿಭಾಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 13.01.2025 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. https://kannadanewsnow.com/kannada/former-cm-bs-yediyurappa-announces-state-tour-with-leaders-next-week/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಬೆಂಗಳೂರು: ಮುಂದಿನ ವಾರ ಮುಖಂಡರ ಜೊತೆ ಸೇರಿ ರಾಜ್ಯ ಪ್ರವಾಸ ಮಾಡುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ವಾರ ಮುಖಂಡರ ಜೊತೆಗೆ ಸೇರಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. 2 ಜಿಲ್ಲೆಯಂತೆ ಪ್ರಮುಖ ಕಾರ್ಯಕರ್ತರ ಜೊತೆಗೆ ಪ್ರವಾಸ ಮಾಡುವುದಾಗಿ ತಿಳಿಸಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆ ಬರುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಮಾಡಲು ನಾನು ನಿರ್ಧರಿಸಿದ್ದೇನೆ. ಮುಂದಿನ ವಾರ ದಿನಾಂಕ ನಿಶ್ಚಯ ಮಾಡಿ ಪ್ರವಾಸ ಮಾಡುತ್ತೇನೆ. ಒಂದು ದಿನಕ್ಕೆ ಎರಡು ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸಿದರು. https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/good-news-for-bagar-hukum-cultivators-in-the-state-5000-people-get-cultivation-cards/

Read More

ಬೆಂಗಳೂರು: ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ)ರಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಐದು ವರ್ಷದ ದೂರದೃಷ್ಟಿ ಯೋಜನೆಯನ್ನು ಗ್ರಾಮ ಯೋಜನಾ ಸಮಿತಿ ಮತ್ತು ಗ್ರಾಮ ಪಂಚಾಯಿತಿ ಯೋಜನಾ ಸಮಿತಿಗಳ ಸಹಕಾರದೊಂದಿಗೆ ಸಿದ್ದಪಡಿಸಿದೆ. ದೂರದೃಷ್ಟಿ ಯೋಜನೆಯಲ್ಲಿ 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು ಅದಕ್ಕೆ ಪೂರಕವಾದ ಎಲ್ಲಾ ಚಟುವಟಿಕೆಗಳನ್ನು ಯೋಜನೆಯಲ್ಲಿ ಗುರುತಿಸಿ 2023-24ನೇ ಸಾಲಿನಿಂದ 2028-29ನೇ ಸಾಲಿನವರೆಗೆ ದೂರದೃಷ್ಟಿ ಯೋಜನೆಯನ್ನು ಸಿದ್ದಪಡಿಸಲಾಗಿದೆ. ಈ ದೂರದೃಷ್ಟಿ ಯೋಜನೆ ಆಧರಿಸಿ ಗ್ರಾಮ ಪಂಚಾಯಿತಿಗಳು ಸಮಗ್ರ ಭಾಗವಹಿಸುವಿಕೆಯನ್ನು ಒಳಗೊಂಡ ವಾರ್ಷಿಕ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು, ಅದಕ್ಕೂ ಮುನ್ನ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವ ಸಲುವಾಗಿ ಸರಣಿ ಚಟುವಟಿಕೆಗಳನ್ನು ಅಭಿಯಾನದ…

Read More