Author: kannadanewsnow09

ನವದೆಹಲಿ: ಕದನ ವಿರಾಮಕ್ಕೆ ಒಪ್ಪಿದ ನಂತ್ರವೂ ಪಾಕಿಸ್ತಾನ ಜಮ್ಮು ಸೇರಿದಂತೆ ವಿವಿಧ ಭಾರತದ ಸ್ಥಳಗಳ ಮೇಲೆ ಡ್ರೋನ್, ಕ್ಷಿಪಣಿ ಬಳಸಿ ದಾಳಿ ನಡೆಸಿತ್ತು. ಈ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಈ ನಂತ್ರ ಇಂದು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳು ಮಾತುಕತೆ ನಡೆಸಿದರು. ಈ ಮಾತುಕತೆಯ ವೇಳೆ ಕದನ ವಿರಾಮ ಉಲ್ಲಂಘಿಸಲ್ಲ ಎಂಬುದಾಗಿ ಪಾಕಿಸ್ತಾನ ಸ್ಪಷ್ಟಪಡಿಸಿದೆ. ಆಪರೇಷನ್ ಪಹಲ್ಗಮ್ ನಂತರ ದೇಶಗಳು ಕದನ ವಿರಾಮ ಘೋಷಿಸಿದ ಎರಡು ದಿನಗಳ ನಂತರ, ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಸೋಮವಾರ ಸಂಜೆ ಸಭೆ ನಡೆಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. https://twitter.com/ANI/status/1921903364457021915 ಈ ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇನ್ಮುಂದೆ ಭಾರತದ ಮೇಲೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುವುದಿಲ್ಲ ಎಂಬುದಾಗಿ ಪಾಕಿಸ್ತಾನದ ಡಿಜಿಎಂಒ ಸ್ಪಷ್ಟಪಡಿಸಿರೋದಾಗಿ ತಿಳಿದು ಬಂದಿದೆ. ಕ್ಷಣ ಕ್ಷಣದ ಅಪ್ ಡೇಟ್ ಗಾಗಿ ಕನ್ನಡ ನ್ಯೂಸ್ ನೌ ಗ್ರೂಪ್ ಸೇರಲು…

Read More

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆಯ ನಡುವೆ ತರಾವರಿ ವೀಡಿಯೋಗಳು ಹರಿದಾಡುತ್ತಿದ್ದಾವೆ. ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್ ಗಳನ್ನು ನಂಬಿ ಮೋಸ ಹೋಗಬೇಡಿ ಅಂತ ರಾಜ್ಯ ಸರ್ಕಾರ ಎಚ್ಚರಿಸಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು,  ಸಾಮಾಜಿಕ ಜಾಲತಾಣಗಳಲ್ಲಿ ಯುದ್ಧದ ವಿಡಿಯೋ ಗೇಮ್‌ ದೃಶ್ಯಗಳ ಹಾವಳಿ ಇಂತಹ ಹಲವಾರು ಯುದ್ಧದ ವಿಡಿಯೋ ಗೇಮ್‌ ದೃಶ್ಯಗಳನ್ನು ಭಾರತ-ಪಾಕಿಸ್ತಾನ ಸಂಘರ್ಷದ ನೈಜ ದೃಶ್ಯಗಳೆಂದು ಬಿಂಬಿಸಲಾಗುತ್ತಿದೆ. ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ ಎಂಬುದಾಗಿ ತಿಳಿಸಿದೆ. ಎಚ್ಚರವಾಗಿರಿ! ನೈಜ ಮಾಹಿತಿ ಪಡೆಯಿರಿ! ವೀಡಿಯೋ, ಪೋಟೋಗಳಿಗೆ ಸಂಬಂಧಿಸಿದಂತೆ ಫ್ಯಾಕ್ಟ್ ಚೆಕ್ ಮಾಡೋದಕ್ಕೂ ವಿನಂತಿಸಿದೆ. https://twitter.com/KarnatakaVarthe/status/1921875365427024316 https://kannadanewsnow.com/kannada/state-health-department-nhm-employees-have-not-received-salaries-for-2-months-union-appeals-to-the-government-for-payment/ https://kannadanewsnow.com/kannada/operation-sindoor-pm-modi-to-address-nation-today-at-8-pm/

Read More

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಎನ್ ಹೆಚ್ ಎಂ ಗುತ್ತಿಗೆ ನೌಕರರಾಗಿ ಸಾವಿರಾರು ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಎರಡು ತಿಂಗಳೇ ಕಳೆದರು ವೇತನ ಪಾವತಿಯನ್ನು ಸರ್ಕಾರ ಮಾಡಿಲ್ಲ. ಹೀಗಾಗಿ ಕೂಡಲೇ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘವು ಒತ್ತಾಯಿಸಿದೆ. ಈ ಕುರಿತಂತೆ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಅವರು ಬರೆದಿರುವಂತ ಪತ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ  ಅತ್ಯಂತ ಕಡಿಮೆ ವೇತನ ಇದ್ದು, ಮಾರ್ಚ್, ಎಪ್ರಿಲ್ 2025 ತಿಂಗಳ ವೇತನ ಪಾವತಿ ಆಗದೇ ಕಡಿಮೆ ವೇತನ ಪಡೆಯುತ್ತಿರುವ ಸಿಬ್ಬಂದಿಗಳ ಜೀವನ ನಿರ್ವಹಣೆ ಕಷ್ಟವಾಗಿದೆ.  ಮಕ್ಕಳ ಶಾಲಾ ಫೀಸು ಪಾವತಿ, ಇ.ಎಮ್.ಐ ಹಾಗೂ ಮನೆ ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗಿದೆ. ಕಳೆದ ಎರಡು ತಿಂಗಳುಗಳಿಂದ…

Read More

ಬೆಂಗಳೂರು: ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್‌ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್‌ಸೈಟ್‌ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. https://twitter.com/KarnatakaVarthe/status/1921842055153611189 ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಸೂಚನೆ ನೀಡಿದರು. 2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು…

Read More

ಬೆಂಗಳೂರು: ನಾನು ಈ‌ ಬಗ್ಗೆ ತುಂಬಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಲು‌ ಕಾರಣ, ಇತ್ತೀಚಿನ ದಿನಗಳಲ್ಲಿ ಅಪಘಾತದ ಬಗ್ಗೆ ಭಯ ಮತ್ತು ಸಂವೇದನಾ ಶೀಲತೆ ಇಲ್ಲದಂತಾಗಿರುವುದು. ನೂರು ಅಪಘಾತಗಳಲ್ಲಿ ನನ್ನದೊಂದು ಎಂಬ ಅಸಹನೀಯ ಭಾವನೆ‌ ಚಾಲನಾ ಸಿಬ್ಬಂದಿಗಳಲ್ಲಿ ಇರಬಾರದು ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನಾ ಸಿಬ್ಬಂದಿಗಳಿಗೆ ಎಚ್ಚರಿಸಿದರು. ಇಂದು ನೂತನವಾಗಿ ಆಯ್ಕೆಯಾದಂತ 2,286 ಬಿಎಂಟಿಸಿ ನಿರ್ವಾಹಕರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದಂತ ಅವರು, ಅಪಘಾತಗಳಿಗೆ ಕಾರಣರಾದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದರು. ಕಳೆದ 15 ದಿವಸಗಳ ಹಿಂದೆ ಅಪಘಾತದಲ್ಲಿ ಕಾಲು‌ಕಳೆದುಕೊಂಡ ಚಾಲನಾ ಸಿಬ್ಬಂದಿಯೊಬ್ಬರಿಗೆ ರೂ.25 ಲಕ್ಷ ಪರಿಹಾರ ಹಣವನ್ನು ನಾವು ನೀಡುವಾಗ ನನಗೆ ಅರ್ಥವಾಗಿದ್ದು ಒಂದೇ ವಿಷಯ, ಯಾವುದೇ ಆರ್ಥಿಕ ಸೌಲಭ್ಯವು ಆ ಸಿಬ್ಬಂದಿಗೆ ತನ್ನ ಹಿಂದಿನ ಸಂತೋಷದ ಜೀವನ ತಂದು‌ಕೊಡುವುದಿಲ್ಲ. ಬೇರೆಯವರನ್ನು ನೋಡಿದಾಗ ಅವನಿಗಾಗುವ ಮಾನಸಿಕ‌ ವೇದನೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಬಸ್ಸು ರಸ್ತೆಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಈ ಸಂಬಂಧ 2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದೆ. ಅದರಲ್ಲಿ 2025-26 ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ. 2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,- (1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ. (2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ…

Read More

ಬೆಂಗಳೂರು: ಇಂದು‌ ನೂತನವಾಗಿ ಆಯ್ಕೆಯಾಗಿದ್ದಂತ ಬಿಎಂಟಿಸಿಯ 2,286 ನಿರ್ವಾಹಕರಿಗೆ ನೇಮಕಾತಿ‌‌ ಆದೇಶ ಪತ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಈ ಬಳಿಕ ಮಾತನಾಡಿದಂತ ಅವರು, ನೂತನ 2,286 ಬಿಎಂಟಿಸಿ ನಿರ್ವಾಹಕರಿಗೆ ನೇಮಕಾತಿ ಪತ್ರ ನೀಡಲಾಗುತ್ತಿರುವುದು ಸಂತೋಷದ ಸಂಗತಿ. ಬಸ್ ಅಪಘಾತಗಳಿಗೆ ಕಾರಣರಾದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದರು. 2018 ರಿಂದ ಇಲ್ಲಿಯವರೆಗೂ ಬಿ.ಎಂ.ಟಿ.ಸಿಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂದು ನಾನು ಭಾವಿಸಿದ್ದೇನೆ. ಈಗಾಗಲೇ ನಮ್ಮ ಸರ್ಕಾರ ಬಂದ‌ ಕೂಡಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಚಾಲನೆ‌ ನೀಡಲಾಗಿದೆ ಎಂದರು. ಕಳೆದ ಎರಡು ವರ್ಷದಲ್ಲಿ ಅತ್ಯಂತ ಪಾರದರ್ಶಕವಾಗಿ 4700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಉಳಿದ 4300 ನೇಮಕಾತಿಗಳು‌ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಸರ್ಕಾರಿ/ ಖಾಸಗಿ‌ವಲಯಗಳಲ್ಲಿ‌…

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಕಾರಣದಿಂದ ಷೇರು ಮಾರುಕಟ್ಟೆ ಕುಸಿತಗೊಂಡಿತ್ತು. ಕದನ ವಿರಾಮದ ಬಳಿಕ ಷೇರು ಮಾರುಕಟ್ಟೆ ಮತ್ತೆ ಏರಿಕೆ ಕಂಡಿದೆ. ಇಂದು ಸೆನ್ಸೆಕ್ಸ್ 2000 ಅಂಕಗಳಿಗಿಂತ ಹೆಚ್ಚು ಏರಿಕೆಯಾಗಿ ಹೂಡಿಕೆದಾರರಿಗೆ 15 ಲಕ್ಷ ಕೋಟಿ ರೂ. ಗಳಿಸುವಂತೆ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆಯನ್ನು ಹೂಡಿಕೆದಾರರು ಹರ್ಷೋದ್ಗಾರಗಳಿಂದ ಪ್ರೋತ್ಸಾಹಿಸಲ್ಪಟ್ಟಿದ್ದರಿಂದ, ಎಲ್ಲಾ ವಲಯಗಳಲ್ಲಿ ಘನ ಲಾಭಗಳು ಕಂಡುಬಂದಿದ್ದರಿಂದ ಸೋಮವಾರ ದೇಶೀಯ ಷೇರುಪೇಟೆಗಳು ತೀವ್ರವಾಗಿ ಏರಿದವು. 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಪ್ಯಾಕ್ 2,975 ಪಾಯಿಂಟ್‌ಗಳು ಅಥವಾ ಶೇಕಡಾ 3.74 ರಷ್ಟು ಏರಿಕೆಯಾಗಿ 82,429 ಕ್ಕೆ ಮುಕ್ತಾಯವಾಯಿತು. ಆದರೆ ವಿಶಾಲವಾದ ಎನ್‌ಎಸ್‌ಇ ನಿಫ್ಟಿ ಸೂಚ್ಯಂಕ 917 ಪಾಯಿಂಟ್‌ಗಳು ಅಥವಾ ಶೇಕಡಾ 3.82 ರಷ್ಟು ಏರಿಕೆಯಾಗಿ 24,925 ಕ್ಕೆ ಸ್ಥಿರವಾಯಿತು. ದೇಶೀಯ ಷೇರುಪೇಟೆಗಳಲ್ಲಿ ಇಂತಹ ಏರಿಕೆ ಕಂಡುಬಂದ ಕಾರಣ ಬಿಎಸ್‌ಇ ಮಾರುಕಟ್ಟೆ ಬಂಡವಾಳೀಕರಣ (ಎಂ-ಕ್ಯಾಪ್) ರೂ. 16 ಲಕ್ಷ ಕೋಟಿಗೂ ಹೆಚ್ಚು ಸೃಷ್ಟಿಯಾಯಿತು. ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ…

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಯ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು (ಸೋಮವಾರ) ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಗಳು ಸೇರಿದಂತೆ ಎಲ್ಲಾ ಯುದ್ಧಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ತಿಳುವಳಿಕೆಯನ್ನು ಘೋಷಿಸಿದ ಕೆಲವೇ ದಿನಗಳಲ್ಲಿ ಅವರ ಭಾಷಣ ಬರಲಿದೆ. https://TWITTER.com/ANI/status/1921878214692974773 ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮದ ಬಗ್ಗೆಯೂ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ. ಇಂದು ರಾತ್ರಿ 8 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದು, ಯಾವ ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ. ಏನೆಲ್ಲಾ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಮತ್ತು ಮಿಲಿಟರಿ ದಾಳಿಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾತ್ರಿ 8 ಗಂಟೆಗೆ ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ…

Read More

ನವದೆಹಲಿ: ಭಾರತ-ಪಾಕ್ ಕದನ ವಿರಾಮದ ನಂತರ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಮೇಲೆ ಜನರ ಕುತೂಹಲ ತೀವ್ರಗೊಂಡಿದೆ. https://twitter.com/ANI/status/1921878214692974773 ಭಾರತ ಮತ್ತು ಪಾಕಿಸ್ತಾನ ಕದನ ವಿರಾಮದ ನಡುವೆ, ಪಾಕಿಸ್ತಾನ ಮತ್ತೆ ದಾಳಿ ನಡೆಸಿತ್ತು. ಇದೇ ಸಂದರ್ಭದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಪಾಕಿಸ್ತಾನ ಚೀನಾ ನಿರ್ಮಿತ ಡ್ರೋನ್, ಕ್ಷಿಪಣಿ ಬಳಸಿ ಭಾರತದ ಮೇಲೆ ದಾಳಿ: ಏರ್ ಮಾರ್ಷಲ್ ಎ.ಕೆ. ಭಾರ್ತಿ ನವದೆಹಲಿ: ಪಾಕಿಸ್ತಾನವು ಭಾರತದ ಮೇಲೆ ಚೀನಾ ನಿರ್ಮಿತ ಡ್ರೋನ್, ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಿದೆ. ಈ ದಾಳಿಯನ್ನು ಭಾರತೀಯ ವಾಯುಪಡೆಯು ತಡೆದು ಧ್ವಂಸಗೊಳಿಸಿರುವುದಾಗಿ ಏರ್ ಮಾರ್ಷಲ್ ಎ.ಕೆ ಭಾರ್ತಿ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರು, ಪಾಕಿಸ್ತಾನದ ಭಾರೀ ಶೆಲ್ ದಾಳಿ (ಮೇ 9-10 ರಂದು) ನಮ್ಮ ಬಹು…

Read More